ಬಿಸಿಯೂಟ ನೌಕರರ ವೇತನ ಬಿಡುಗಡೆಗೆ ಆಗ್ರಹಿಸಿ ಪ್ರತಿಭಟನೆ

ಸುರಪುರ: ತಾಲೂಕಿನಲ್ಲಿಯ ಎಲ್ಲಾ ಮದ್ಹ್ಯಾನದ ಬಿಸಿಯೂಟದ ನೌಕರರ ಬಾಕಿ ವೇತನ ಬಿಡುಗಡೆಗೆ ಆಗ್ರಹಿಸಿ ಅಕ್ಷರ ದಾಸೋಹ ಬಿಸಿಯೂಟ ತಯಾರಕರ ಫೆಡರೇಷನ್ ವತಿಯಿಂದ ನಗರದ ತಾಲೂಕು ಪಂಚಾಯಿತಿ ಮುಂದೆ ಪ್ರತಿಭಟನೆ ನಡೆಸಲಾಯಿತು.

ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ಅನೇಕ ಮುಖಂಡರು ಮಾತನಾಡಿ,ತಾಲೂಕಿನ ಎಲ್ಲಾ ಶಾಲೆಗಳಲ್ಲಿ ಮದ್ಹ್ಯಾನದ ಬಿಸಿಯೂಟ ತಯಾರಕರಾಗಿ ಕೆಲಸ ಮಾಡುತ್ತಿರುವ ಕಾರ್ಮಿಕರ ಬದುಕು ಇಂದು ಬೀದಿಗೆ ಬೀಳುವ ಸ್ಥಿತಿಗೆ ಬಂದಿದೆ.ನಮ್ಮ ಸಂಘಟನೆಯಿಂದ ಈಗಾಗಲೇ ಜುಲೈ,ಅಗಷ್ಟ್,ಸಪ್ಟೆಂಬರ್ ಮತ್ತು ಅಕ್ಟೋಬರ್ ತಿಂಗಳ ವೇತನ ಬಿಡುಗಡೆಗಾಗಿ ಇದೇ ನವೆಂಬರ್ 4 ರಂದು ಮನವಿ ಸಲ್ಲಿಸಲಾಗಿದೆ,ಮುಖ್ಯ ಅಡುಗಡೆ ಸಹಾಯಕಿಯರು ಮೊಟ್ಟೆ,ಹಾಲು,ಹಣ್ಣು ವಿತರಣೆಗೆ ಹಾಕಿದ ಹಣವನ್ನು ಪಾವತಿಸಿಲ್ಲ ಇದರಿಂದ ಬಿಸಿಯೂಟ ನೌಕರರು ತೀವ್ರ ಸಂಕಷ್ಟಕ್ಕೆ ಸಿಲುಕಿದ್ದು,ಇಂತಹ ಪರಸ್ಥಿತಿಯಲ್ಲೂ ಕಾರ್ಯ ನಿರ್ವಹಿಸುತ್ತಿದ್ದಾರೆ.ಆದ್ದರಿಂದ ಎಲ್ಲರ ವೇತನ ನೀಡಬೇಕು ಮತ್ತು ಬಿಸಿಯೂಟದ ಜಿಲ್ಲಾಧಿಕಾರಿಗಳು ಮುಖ್ಯ ಅಡುಗೆಯವರ ಮೇಲೆ ನಡೆಸುತ್ತಿರುವ ದೌರ್ಜನ್ಯ,ದಬ್ಬಾಳಿಕೆ ನಿಲ್ಲಿಸಬೇಕು ಎಂದು ಆಗ್ರಹಿಸಿದರು.

ಅಲ್ಲದೆ ತಾಲೂಕಿನ ಬಿಸಿಯೂಟದ ಸಹಾಯಕ ನಿರ್ದೇಶಕರು ಉತ್ತಮವಾಗಿ ಕಾರ್ಯನಿರ್ವಹಿಸುತ್ತಿದ್ದಾರೆ.ಕೆಲವರು ವಿನಾಃಕಾರಣ ಅವರ ವಿರುದ್ಧ ಆರೋಪ ಮಾಡುತ್ತಿರುವುದು ಖಂಡನೀಯವಾಗಿದೆ.ಸಣ್ಣ ಪುಟ್ಟ ದೋಷಗಳಿದ್ದರು ಅವುಗಳಿಗೆ ಸೂಕ್ತ ಸಲಹೆ ನೀಡಿ ಸರಿಪಡಿಸುತ್ತಾರೆ.ಅಂತಹ ದಕ್ಷ ಅಧಿಕಾರಿಯ ವಿರುಧ್ಧ ದೇವಾಪುರ ಹರಿಜನ್ ವಾರ್ಡ್ ಶಾಲೆಯ ಘಟನೆಯ ಕುರಿತು ಅವರನ್ನು ಅಮಾನತ್ತುಗೊಳಿಸಬೇಕೆಂದು ಕೆಲವರು ಉದ್ದೇಶಪೂರ್ವಕವಾಗಿ ಅವರ ವಿರುದ್ಧ ಆರೋಪ ಮಾಡುತ್ತಿರುವುದನ್ನು ನಮ್ಮ ಸಂಘಟನೆ ಖಂಡಿಸುತ್ತದೆ ಎಂದರು.

ನಂತರ ತಾಲೂಕು ಪಂಚಾಯಿತಿ ಕಾರ್ಯನಿವಾಹಕ ಅಧಿಕಾರಿ ಚಂದ್ರಶೇಖರ ಪವರ್ ಅವರಿಗೆ ಮನವಿ ಸಲ್ಲಿಸಿದರು.ಈ ಸಂದರ್ಭದಲ್ಲಿ ಸಂಘದ ಜಿಲ್ಲಾ ಗೌರವಾಧ್ಯಕ್ಷ ದೇವಿಂದ್ರಪ್ಪ ಪತ್ತಾರ,ಜಿಲ್ಲಾಧ್ಯಕ್ಷ ಕಲ್ಪನಾ ಗುರಸುಣಗಿ,ತಾಲೂಕು ಅಧ್ಯಕ್ಷ ಶ್ರೀದೇವಿ ಕೂಡಲಗಿ,ಪ್ರಧಾನ ಕಾರ್ಯದರ್ಶಿ ಯಮುನಾ ಕಕ್ಕೇರಾ,ಬಸಮ್ಮ ತಡಬಿಡಿ,ಸುಧಾ ಯಕ್ತಾಪುರ,ನೀಲಮ್ಮ ವಜ್ಜಲ್,ಮಲ್ಲಯ್ಯ ವಗ್ಗಾ,ತಿಮ್ಮಯ್ಯ ತಳವಾರ,ರಾಮಲಿಂಗಮ್ಮ ದೇವಿಕೇರಾ ಸೇರಿದಂತೆ ಅನೇಕರಿದ್ದರು.

emedialine

Recent Posts

ಗುರುರಾಜ ಕರ್ಜಗಿಯನ್ನು ಶೈಕ್ಷಣಿಕ ಗುಣಮಟ್ಟ ಸುಧಾರಣಾ ಸಮಿತಿಯಿಂದ ಕೈಬಿಡಲು ಎಸ್ಎಫ್ಐ ಆಗ್ರಹ

ಕಲಬುರಗಿ: ಕಲ್ಯಾಣ ಕರ್ನಾಟಕದ ಶೈಕ್ಷಣಿಕ ಗುಣಮಟ್ಟ ಸುಧಾರಣೆಗಾಗಿ ಕೆ.ಕೆ.ಆರ್.ಡಿ.ಬಿ ಯು ಸಮಿತಿಯೊಂದನ್ನು ರಚಿಸಿ, ಗುರುರಾಜ ಕರ್ಜಗಿ ಅವರನ್ನು ಅಧ್ಯಕ್ಷರನ್ನಾಗಿ ಮಾಡಿರುವ…

8 hours ago

ಕಲಬುರಗಿ; ರಾಜ್ಯ ತಳವಾರ ಮಹಾಸಭಾ ಜಿಲ್ಲಾ ಘಟಕದ ನೂತನ ಪದಾಧಿಕಾರಿಗಳ ಆಯ್ಕೆ

ಕಲಬುರಗಿ; ಕನಾ೯ಟಕ ರಾಜ್ಯ ತಳವಾರ ಮಹಾಸಭಾ ಕಲಬುರಗಿ ಜಿಲ್ಲಾಧ್ಯಕ್ಷರಾದ ಚಂದ್ರಕಾಂತ ದಶರಥ ತಳವಾರ ಅವರ ಅಧ್ಯಕ್ಷತೆಯಲ್ಲಿ ಇಂದು ಆನಂದ ನಿಲಯ…

10 hours ago

ಕೈಗಾರಿಕೆ ಪ್ರದೇಶಗಳಿಗೆ ಭೇಟಿ ನೀಡಿ ಉದ್ಯಮಿಗಳ ಅಹವಾಲು ಆಲಿಸಿದ ಬಿ.ಫೌಜಿಯಾ ತರನ್ನುಮ್

ಕಲಬುರಗಿ; ಜಿಲ್ಲಾಧಿಕಾರಿ ಬಿ. ಫೌಜಿಯಾ ತರನ್ನುಮ್ ಅವರು ಶನಿವಾರ ಶಹಾಬಾದ ರಸ್ತೆಯಲ್ಲಿರುವ ನಂದೂರ-ಕೆಸರಟಗಿ ಮತ್ತು ಹುಮನಾಬಾದ ರಸ್ತೆಯಲ್ಲಿರುವ ಕಪನೂರ ಕೈಗಾರಿಕಾ…

10 hours ago

ಸಿಎಂ ರಾಜೀನಾಮೆ ಕೇಳುತ್ತಿರುವ ಬಿಜೆಪಿ -ಜೆಡಿಎಸ್‍ಗೆ ಯಾವುದೇ ನೈತಿಕತೆಯಿಲ್ಲ

ಶಹಾಬಾದ: ಕರ್ನಾಟಕದ ಬಹುಮತ ಸರಕಾರವನ್ನು ಬೀಳಿಸಲು ಇಲ್ಲಸಲ್ಲದ ಆರೋಪ ಮಾಡುವ ಮೂಲಕ ಸಿಎಂ ರಾಜೀನಾಮೆಗೆ ಒತ್ತಾಯ ಮಡುತ್ತಿರುವ ಬಿಜೆಪಿ ಹಾಗೂ…

10 hours ago

ಜೆಜೆಎಂ ಕಾಮಗಾರಿ ಗುಣಮಟ್ಟದಿಂದ ಕೂಡಿರಲಿ

ಶಹಾಬಾದ:ಪ್ರತಿ ಮನೆಗೂ ನೀರು ದೊರಿಸಿಕೊಡುವ ಉದ್ದೇಶದಿಂದ ನಡೆಯುವ ಜೆಜೆಎಂ ಕಾಮಗಾರಿ ಗುಣಮಟ್ಟದಿಂದ ಕೂಡಿರಬೇಕೆಂದು ಕಾಂಗ್ರೆಸ್ ಮುಖಂಡ ಮೃತ್ಯುಂಜಯ್ ಹಿರೇಮಠ ಹೇಳಿದರು.…

10 hours ago

ಅ.13, 14 ರಂದು ಧಮ್ಮ ಕ್ರಾಂತಿ ಉತ್ಸವ : ಪೂರ್ವಭಾವಿ ಸಭೆ

ಶಹಾಬಾದ :ನಗರದ ಬೌದ್ಧ ವಿಹಾರದಲ್ಲಿ ರವಿವಾರ ಹಮ್ಮಿಕೊಂಡ 68ನೇ ಧಮ್ಮಚಕ್ರ ಪ್ರವರ್ತನಾ ದಿನದ ಅಂಗವಾಗಿ ಕಲಬುರ್ಗಿಯಲ್ಲಿ ಅ.13 ಮತ್ತು 14…

10 hours ago

Notice: ob_end_flush(): Failed to send buffer of zlib output compression (0) in /home3/emedixap/public_html/wp-includes/functions.php on line 5420