ಕಾಯಕ – ದಾಸೋಹ ತತ್ವದ ಆಚರಣೆಗೆ ತಂದರೆ ಜೀವನ ಪರಮಾನಂದ

ಶಹಾಬಾದ: ಶರಣರ ಕಾಯಕ ಮತ್ತು ದಾಸೋಹ ತತ್ವದ ಅರಿವು, ಆಚರಣೆ ಎಲ್ಲ ಜನರಲ್ಲೂ ಬಂದರೆ ಜೀವನದಲ್ಲಿ
ಪರಮಾನಂದವನ್ನು ಅನುಭವಿಸಲು ಸಾಧ್ಯ ರಾವೂರ ಮಠದ ಸಿದ್ಧಲಿಂಗ ದೇವರು ಹೇಳಿದರು.

ಅವರು ಸೋಮವಾರ ಭಂಕೂರಿನ ಬಸವ ಸಮಿತಿಯಲ್ಲಿ ಬುತ್ತಿ ಬಸವಲಿಂಗ ಪ್ರತಿಷ್ಠಾಪನದ ಬೆಳ್ಳಿ ಮಹೋತ್ಸವದ ಪ್ರಯುಕ್ತ ವಚನ ಸಾಹಿತ್ಯದಲ್ಲಿ ಆಧ್ಯಾತ್ಮ ಚಿಂತನ ಕಾರ್ಯಕ್ರಮದ ಸಾನಿಧ್ಯ ವಹಿಸಿ ಮಾತನಾಡಿದರು.

ಮನುಷ್ಯ ಸುಖವನ್ನು ದುಡ್ಡಿನಲ್ಲಿ,ಆಸ್ತಿಯಲ್ಲಿ, ಬಂಗಾರದಲ್ಲಿ, ದೊಡ್ಡ ದೊಡ್ಡ ಬಂಗಲೆಗಳಲ್ಲ್ಲಿ, ವಾಹನಗಳಲ್ಲಿ ಹುಡುಕುತ್ತಿದ್ದಾನೆ.ಆದರೆ ನಿಜವಾದ ಸುಖವೆಂಬುದು ಶರಣರ ಚಿಂತನೆಯಲ್ಲಿದೆ ಎಂಬುದನ್ನು ಅರ್ಥ ಮಾಡಿಕೊಂಡು ಸ್ವಾರ್ಥ, ಸಂಕುಚಿತ ಭಾವನೆ ಮತ್ತು ಅಹಂಕಾರವನ್ನು ತ್ಯಜಿಸಿ ನನ್ನ ದುಡಿಮೆಯ ಆದಾಯ ನನಗೆ ಹೇಗೋ ಹಾಗೇ ಸಮಾಜಕ್ಕೂ ಸಲ್ಲುವಂತಹುದು ಎನ್ನುವ ಸದ್ಭಾವನೆ ಬಂದರೆ ಅದೇ ದಾಸೋಹ. ದಾಸೋಹ ಎಂದರೇನೇ ಅಹಂಕಾರ ನಿರಶನ, ಸ್ವಾರ್ಥ ತ್ಯಾಗ, ವಿಶಾಲ ಮನೋಭಾವ. ಈ ನೆಲೆಯಲ್ಲಿ ಕಾಯಕ ಮತ್ತು ದಾಸೋಹ ತತ್ವಗಳು ಅನುμÁ್ಠನದಲ್ಲಿ ಅಳವಟ್ಟರೆ ಬಾಹ್ಯ ಬದುಕು ಶ್ರೀಮಂತವಾಗುವುದು ಎಂದರು.

ಶಿರಗುಪ್ಪಾದ ಬಸವ ತತ್ವ ಚಿಂತಕ ಬಸವರಾಜ ವೆಂಕಾಟಾಪೂರ ಶರಣರು ಮಾತನಾಡಿ, ಸುಮಾರು 40 ವರ್ಷಗಳಿಂದ ಬಸವಾದಿ ಶರಣರ ತತ್ವವನ್ನು ನಾಡಿನೆಲ್ಲೆಡೆ ಪಸರಿಸುವ ಹಾಗೂ ಶಿಕ್ಷಣ ದಾಸೋಹ ಮಾಡುವ ಮೂಲಕ ಮಕ್ಕಳಿಗೆ ಉತ್ತಮ ಮೌಲ್ಯಗಳನ್ನು ಊಣಬಡಿಸುತ್ತಿರುವ ಸಂಸ್ಥೆಯೆಂದರೆ ಬಸವ ಸಮಿತಿ ಎಂದು ಶ್ಲಾಘಿಸಿದರು.

ಉದ್ಯಮಿಗಳಾದ ಶರಣಬಸಪ್ಪ ನಂದಿ ಹಾಗೂ ಶಿವರಾಜ ಪಾರಾ, ವೀರಶೈವ ಸಮಾಜದ ತಾಲೂಕಾಧ್ಯಕ್ಷ ಸೂರ್ಯಕಾಂತ ಕೋಬಾಳ, ಪತ್ರಕರ್ತ ವಾಸುದೇವ ಚವ್ಹಾಣ ವೇದಿಕೆಯ ಮೇಲಿದ್ದರು. ಪ್ರವಚನಕಾರ ಸಿದ್ಧೇಶ್ವರ ವಸ್ತ್ರದ್, ಬಸವ ಸಮಿತಿ ಅಧ್ಯಕ್ಷ ನೀಲಕಂಠ ಮಾದುಗೋಳಕರ್ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಅಮೃತ ಮಾನಕರ್ ನಿರೂಪಿಸಿದರು, ಅಮರಪ್ಪ ಹೀರಾಳ ಸ್ವಾಗತಿಸಿದರು, ರೇವಣಸಿದ್ದಪ್ಪ ಮುಸ್ತಾರಿ ವಂದಿಸಿದರು.

emedialine

Recent Posts

ಚಿಂಚೋಳಿ: ಪ್ರವಾದಿ ಅವಹೇಳನ ಖಂಡಿಸಿ ಪ್ರತಿಭಟನೆ

ಚಿಂಚೋಳಿ : ಪ್ರವಾದಿ ಮಹ್ಮದ ಪೈಗಂಬರ್ ಅವರನ್ನು ಅವಮಾನಿಸಿದ ನರಸಿಂಹಾನಂದ ಸರಸ್ವತಿ ಸ್ವಾಮಿಗಳ ವಿರುದ್ಧ ಪ್ರಕರಣ ದಾಖಲಿಸಬೇಕು ಎಂದು ಆಗ್ರಹಿಸಿ…

47 mins ago

ಗುರುರಾಜ ಕರ್ಜಗಿಯನ್ನು ಶೈಕ್ಷಣಿಕ ಗುಣಮಟ್ಟ ಸುಧಾರಣಾ ಸಮಿತಿಯಿಂದ ಕೈಬಿಡಲು ಎಸ್ಎಫ್ಐ ಆಗ್ರಹ

ಕಲಬುರಗಿ: ಕಲ್ಯಾಣ ಕರ್ನಾಟಕದ ಶೈಕ್ಷಣಿಕ ಗುಣಮಟ್ಟ ಸುಧಾರಣೆಗಾಗಿ ಕೆ.ಕೆ.ಆರ್.ಡಿ.ಬಿ ಯು ಸಮಿತಿಯೊಂದನ್ನು ರಚಿಸಿ, ಗುರುರಾಜ ಕರ್ಜಗಿ ಅವರನ್ನು ಅಧ್ಯಕ್ಷರನ್ನಾಗಿ ಮಾಡಿರುವ…

12 hours ago

ಕಲಬುರಗಿ; ರಾಜ್ಯ ತಳವಾರ ಮಹಾಸಭಾ ಜಿಲ್ಲಾ ಘಟಕದ ನೂತನ ಪದಾಧಿಕಾರಿಗಳ ಆಯ್ಕೆ

ಕಲಬುರಗಿ; ಕನಾ೯ಟಕ ರಾಜ್ಯ ತಳವಾರ ಮಹಾಸಭಾ ಕಲಬುರಗಿ ಜಿಲ್ಲಾಧ್ಯಕ್ಷರಾದ ಚಂದ್ರಕಾಂತ ದಶರಥ ತಳವಾರ ಅವರ ಅಧ್ಯಕ್ಷತೆಯಲ್ಲಿ ಇಂದು ಆನಂದ ನಿಲಯ…

14 hours ago

ಕೈಗಾರಿಕೆ ಪ್ರದೇಶಗಳಿಗೆ ಭೇಟಿ ನೀಡಿ ಉದ್ಯಮಿಗಳ ಅಹವಾಲು ಆಲಿಸಿದ ಬಿ.ಫೌಜಿಯಾ ತರನ್ನುಮ್

ಕಲಬುರಗಿ; ಜಿಲ್ಲಾಧಿಕಾರಿ ಬಿ. ಫೌಜಿಯಾ ತರನ್ನುಮ್ ಅವರು ಶನಿವಾರ ಶಹಾಬಾದ ರಸ್ತೆಯಲ್ಲಿರುವ ನಂದೂರ-ಕೆಸರಟಗಿ ಮತ್ತು ಹುಮನಾಬಾದ ರಸ್ತೆಯಲ್ಲಿರುವ ಕಪನೂರ ಕೈಗಾರಿಕಾ…

14 hours ago

ಸಿಎಂ ರಾಜೀನಾಮೆ ಕೇಳುತ್ತಿರುವ ಬಿಜೆಪಿ -ಜೆಡಿಎಸ್‍ಗೆ ಯಾವುದೇ ನೈತಿಕತೆಯಿಲ್ಲ

ಶಹಾಬಾದ: ಕರ್ನಾಟಕದ ಬಹುಮತ ಸರಕಾರವನ್ನು ಬೀಳಿಸಲು ಇಲ್ಲಸಲ್ಲದ ಆರೋಪ ಮಾಡುವ ಮೂಲಕ ಸಿಎಂ ರಾಜೀನಾಮೆಗೆ ಒತ್ತಾಯ ಮಡುತ್ತಿರುವ ಬಿಜೆಪಿ ಹಾಗೂ…

14 hours ago

ಜೆಜೆಎಂ ಕಾಮಗಾರಿ ಗುಣಮಟ್ಟದಿಂದ ಕೂಡಿರಲಿ

ಶಹಾಬಾದ:ಪ್ರತಿ ಮನೆಗೂ ನೀರು ದೊರಿಸಿಕೊಡುವ ಉದ್ದೇಶದಿಂದ ನಡೆಯುವ ಜೆಜೆಎಂ ಕಾಮಗಾರಿ ಗುಣಮಟ್ಟದಿಂದ ಕೂಡಿರಬೇಕೆಂದು ಕಾಂಗ್ರೆಸ್ ಮುಖಂಡ ಮೃತ್ಯುಂಜಯ್ ಹಿರೇಮಠ ಹೇಳಿದರು.…

15 hours ago

Notice: ob_end_flush(): Failed to send buffer of zlib output compression (0) in /home3/emedixap/public_html/wp-includes/functions.php on line 5420