ಕಲಬುರಗಿ: ಪ್ರಧಾನಿ ನರೇಂದ್ರ ಮೋದಿ ಕೆಲಸ ಮಾಡಿದ್ದಕ್ಕಿಂತ ಈಗ ಕೂಲಿ ಕೇಳುತ್ತಿರುವುದೇ ಜಾಸ್ತಿ ಎಂದು ಸಮಾಜಕಲ್ಯಾಣ ಸಚಿವ ಸನ್ಮಾನ್ಯ ಪ್ರಿಯಾಂಕ್ ಖರ್ಗೆ ಟೀಕಿಸಿದರು.
ನಗರದ ವಡ್ಡರಗಲ್ಲಿ ಬಡಾವಣೆಯಲ್ಲಿ ಏರ್ಪಡಿಸಲಾದ ಪ್ರಚಾರಸಭೆಯಲ್ಲಿ ಮಾತನಾಡಿ, ರೈತರ ಸಾಲ ಮನ್ನಾ ಮಾಡಲಿಲ್ಲ. ಯುವಕರಿಗೆ ಉದ್ಯೋಗ ಕೊಡಲಿಲ್ಲ, ವಿದೇಶದಿಂದ ಕಪ್ಪುಹಣ ವಾಪಸ್ ತರಲಿಲ್ಲ, 15 ಲಕ್ಷ ಹಣ ಜನರ ಅಕೌಂಟ್ ಗೆ ಹಾಕಲಿಲ್ಲ, ಭಯೋತ್ಪಾದನೆ ನಿರ್ಮೂಲನೆ ಮಾಡಲಿಲ್ಲ ಇಷ್ಟೆಲ್ಲ ಇಲ್ಲಗಳ ನಡುವೆ ಈಗ ಮೋದಿ ಓಟು ಕೇಳುತ್ತಿದ್ದಾರೆ ಅದ್ಹೇಗೆ ಹುಸಿ ಸುಳ್ಳು ಹೇಳುವ ಮೂಲಕ ಎಂದು ಟೀಕಿಸಿದರು. ಆದರೆ, ಅವರು ನಿಷ್ಠೆಯಿಂದ ಮಾಡಿದ್ದೇನೆಂದರೆ ನೀರವ್ ಮೋದಿಯಂತವರು ಸಾವಿರಾರು ಕೋಟಿ ಹಣ ಲೂಟಿ ಮಾಡುವಾಗ ಸುಮ್ಮನೆ ಇದ್ದು ವಿದೇಶಕ್ಕೆ ಪರಾರಿಯಾಗುವಂತೆ ಅನುಕೂಲ ಮಾಡಿಕೊಟ್ಟಿದ್ದು ಎಂದು ವ್ಯಂಗ್ಯವಾಡಿದರು.
ರಾಜ್ಯದ ಸಮ್ಮಿಶ್ರ ಸರಕಾರ ಪರಿಶಿಷ್ಟ ಜಾತಿ ಹಾಗೂ ಪಂಗಡಿದ ಅಭಿವೃದ್ದಿಗಾಗಿ ರೂ 24,000 ಕೋಟಿ ತೆಗೆದಿರಿಸಿದೆ. ಈ ಹಣದಿಂದ ಅಭಿವೃದ್ದಿ ಕಾರ್ಯ ಮಾಡಲು ಬದ್ದವಿರುವುದಾಗಿ ಅವರು ಹೇಳಿದರು. ಉಮೇಶ್ ಜಾಧವ್ ಬಿಜೆಪಿ ಸೇರಿ ಈಗ ಚುನಾವಣೆಗೆ ನಿಂತಿದ್ದಾರೆ. ಸಿಕ್ಕ ಅವಕಾಶವನ್ನು ಸರಿಯಾಗಿ ಬಳಸಿಕೊಳ್ಳದೆ ಚಿಂಚೋಳಿ ಜನರಿಗೆ ಮೋಸ ಮಾಡಿ ಖರ್ಗೆ ಸಾಹೇಬರು ಏನು ಮಾಡಿದ್ದಾರೆ ಎಂದು ಪ್ರಶ್ನಿಸುತ್ತಾರೆ. ಸ್ವತಃ ಅವರು ಕ್ಷೇತ್ರದ ಅಭಿವೃದ್ದಿಗೆ ಏನು ಮಾಡಿದ್ದಾರೆ ಎನ್ನುವುದನ್ನು ಮತ ಕೇಳುವ ಮುನ್ನ ಜನರಿಗೆ ತಿಳಿಸಲಿ ಎಂದು ಸವಾಲೆಸೆದರು.
ಈ ಭಾಗದ ಅಭಿವೃದ್ದಿ ಗಾಗಿ ಖರ್ಗೆ ಸಾಹೇಬರು ಮಾಡಿದ ಅಭಿವೃದ್ದಿ ಕೆಲಸವನ್ನು ನೋಡಿ ನೀವು ಮತ ನೀಡಿ ಎಂದು ಮನವಿ ಮಾಡಿದರು. ವೇದಿಕೆಯ ಮೇಲೆ ಅಲ್ಲಮ ಪ್ರಭು ಪಾಟೀಲ್ ಸೇರಿದಂತೆ ಮತ್ತಿತರಿದ್ದರು.
ಕಲಬುರಗಿ : ಸ್ಥಳೀಯ ಕೆಬಿಎನ್ ಆಸ್ಪತ್ರೆಯಲ್ಲಿ ಸ್ತ್ರೀ ರೋಗ ವಿಭಾಗದಿಂದ 'ಸ್ತ್ರೀರೋಗ ಶಾಸ್ತ್ರದ ಆಂಕೊಲಾಜಿಯಲ್ಲಿ ರೋಬೋಟಿಕ್ ಶಸ್ತ್ರಚಿಕಿತ್ಸೆಯ' ಪಾತ್ರ ಎಂಬ…
ಕಲಬುರಗಿ: ಸಮಾಜದಲ್ಲಿ ಪ್ರತಿಯೊಬ್ಬರೂ ಆರೋಗ್ಯವಂತರಾಗಿ ಜೀವನ ಸಾಗಿಸಲು ವೈದ್ಯರ ಸಲಹೆ ಮತ್ತು ಉಪಚಾರ ಪಡೆದುಕೊಳ್ಳುವುದು ಅವಶ್ಯಕವಾಗಿದೆ ಎಂದು ಖ್ಯಾತ ವೈದ್ಯಸಂಶೋಧಕ…
ಕಲಬುರಗಿ: ಜಿಲ್ಲೆಯ ವಿಕಲಚೇತನರು ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯಲ್ಲಿ ವ್ಯಾಪಕ ಅಕ್ರಮಗಳು ನಡೆದಿದ್ದು ಈ ಕುರಿತು ಕೂಡಲೇ ತನಿಖೆ…
ಕಾಳಗಿ: ಬದುಕು ಹೇಗೆ ನಡೆಸಬೇಕೆಂದು ಹೇಳಿಕೊಟ್ಟ ಬಸವಾದಿ ಶರಣರ ವಚನದಲ್ಲಿ ಅಪಾರ ಶಕ್ತಿ ಇದೆ. 12 ನೇ ಶತಮಾನದಲ್ಲಿ ಮೊದಲ…
ಕಲಬುರಗಿ; ಅಖಿಲ ಭಾರತ ಮಾಧ್ವ ಮಹಾಮಂಡಲ,ಶ್ರೀ ಜಯತೀರ್ಥ ವಿದ್ಯಾರ್ಥಿ ನಿಲಯ, ಶ್ರೀ ಕೃಷ್ಣ ಮಂದಿರ ಹಾಗು ಹನುಮ ಭೀಮ ಮಧ್ವರ…
ಕಲಬುರಗಿ: ಚಿಂಚೋಳಿ ತಾಲೂಕಾ ಸಾರ್ವಜನಿಕ ಆಸ್ಪತ್ರೆಯಲ್ಲಿ ವೈದ್ಯಕೀಯ ದ್ರವ ಆಮ್ಲಜನಕ ಟ್ಯಾಂಕ್ ಸ್ಪೋಟವಾಗಿದೆ ಎಂದು ಸುಳ್ಳು ಸುದ್ದಿ ಬಿತ್ತರವಾಗುತ್ತಿದ್ದು, ಇದಕ್ಕೆ…