ಸೇಡಂನಲ್ಲಿ 26 ರಂದು `ಅಮ್ಮ ಪ್ರಶಸ್ತಿ’ ಪ್ರದಾನ

0
49

ಸೇಡಂ: ನಗರದ ಐತಿಹಾಸಿಕ ಚಾಳುಕ್ಯರ ಕಾಲದ ಶ್ರೀ ಪಂಚಲಿಂಗೇಶ್ವರ ದೇವಾಲಯದ ಶಾಂಭವಿ ರಂಗಮಂಟಪದಲ್ಲಿ ನ. 26 ರಂದು ಸಂಜೆ 5.30 ಕ್ಕೆ 22 ನೇ ವರ್ಷದ `ಅಮ್ಮ ಪ್ರಶಸ್ತಿ’ ಪ್ರದಾನ ಸಮಾರಂಭ ನಡೆಯಲಿದೆ ಎಂದು ಸಂಸ್ಥಾಪಕ ಸಂಚಾಲಕ ಮಹಿಪಾಲರೆಡ್ಡಿ ಮುನ್ನೂರ್ ತಿಳಿಸಿದ್ದಾರೆ.

ಮಾತೋಶ್ರೀ ಮಹಾದೇವಮ್ಮ ನಾಗಪ್ಪ ಮುನ್ನೂರ್ ಪ್ರತಿಷ್ಠಾನ ಕೊಡಮಾಡುವ ಪ್ರತಿಷ್ಠಿತ `ಅಮ್ಮ ಪ್ರಶಸ್ತಿ’ಗೆ ಈ ಬಾರಿ ಆರು ಜನ ಸಾಹಿತಿಗಳು ಭಾಜನರಾಗಿದ್ದು, ನಾಲವಾರದ ಕೋರಿಸಿದ್ದೇಶ್ವರ ಸಂಸ್ಥಾನ ಮಠದ ಪೂಜ್ಯ ಡಾ.ಸಿದ್ದತೋಟೇಂದ್ರ ಶಿವಾಚಾರ್ಯ ಮಹಾಸ್ವಾಮಿಗಳು ಸಮಾರಂಭದ ಸಾನಿಧ್ಯ ವಹಿಸುವರು. ಸೇಡಂನ ಶ್ರೀ ಕೊತ್ತಲ ಬಸವೇಶ್ವರ ದೇವಾಲಯದ ಪೂಜ್ಯ ಶ್ರೀ ಸದಾಶಿವ ಮಹಾಸ್ವಾಮಿಗಳು ಸಮ್ಮುಖ ವಹಿಸುವರು.

Contact Your\'s Advertisement; 9902492681

ಮಾಜಿ ಸಚಿವರಾದ ಶ್ರೀಮತಿ ಲೀಲಾದೇವಿ ಆರ್.ಪ್ರಸಾದ ಅವರು ಪ್ರಶಸ್ತಿ ಪ್ರದಾನ ಮಾಡುವರು. ಶಾಸಕರು ಮತ್ತು ಕೆಕೆಆರ್‍ಟಿಸಿ ಅಧ್ಯಕ್ಷರಾದ ರಾಜಕುಮಾರ ಪಾಟೀಲ ತೆಲ್ಕೂರ ಅಧ್ಯಕ್ಷತೆ ವಹಿಸುವರು.

ಮಾಜಿ ಸಚಿವ ಡಾ.ಶರಣಪ್ರಕಾಶ ಪಾಟೀಲ ಹಾಗೂ ಮಾಜಿ ಉಪಸಭಾತಿ ಚಂದ್ರಶೇಖರರೆಡ್ಡಿ ದೇಶಮುಖ ಮದನಾ ಅವರು ಮುಖ್ಯ ಅತಿಥಿಗಳಾಗಿರುವರು. ವಿಶ್ರಾಂತ ಪ್ರಾಂಶುಪಾಲರಾದ ಪ್ರೊ.ಮನ್ನೆ ಹಾಶರೆಡ್ಡಿ ಉಪಸ್ಥಿತರಿರುವರು. ಅಮ್ಮನ ಕುರಿತು ಯುವ ಗಾಯಕ ವೀರೇಂದ್ರ ಭಂಟನಳ್ಳಿ ಹಾಡುಗಳನ್ನು ಹಾಡಲಿದ್ದಾರೆ. ಇದೇ ಸಂದರ್ಭದಲ್ಲಿ ನಿವೃತ್ತ ಮೇಷ್ಟ್ರು ನಾಗಪ್ಪ ಮುನ್ನೂರ ಅವರ ಸ್ಮರಣಾರ್ಥ ಇಬ್ಬರು ಹೆಣ್ಣುಮಕ್ಕಳಿಗೆ ಸ್ವಾವಲಂಬಿ ಬದುಕಿಗಾಗಿ ಹೊಲಿಗೆ ಮಷಿನ್ ಗಳನ್ನು ವಿತರಿಸಲಾಗುವುದು ಎಂದು ಸಂಸ್ಥಾಪಕ ಸಂಚಾಲಕ ಮಹಿಪಾಲರೆಡ್ಡಿ ಮುನ್ನೂರ್ ತಿಳಿಸಿದ್ದಾರೆ.

ಅಮ್ಮ ಪ್ರಶಸ್ತಿ ಪುರಸ್ಕøತರು : ಮಧುರಾಣಿ ಎಚ್ ಎಸ್ (ನೀಲಿ ಚುಕ್ಕಿಯ ನೆರಳು-ಕವನ ಸಂಕಲನ), ಎಸ್.ಗಂಗಾಧರಯ್ಯ (ಮಣ್ಣಿಮ ಮುಚ್ಚಳ-ಕಥಾ ಸಂಕಲನ), ಆಶಾ ರಘು (ಮಾಯೆ-ಕಾದಂಬರಿ), ಸಬಿತಾ ಬನ್ನಾಡಿ (ಇದಿರು ನೋಟ- ಅಂಕಣ ಸಂಕಲನ), ಡಾ.ಅಪ್ಪಗೆರೆ ಸೋಮಶೇಖರ (ಬೆವರ ಬವಣೆ-ಲೇಖನಗಳ ಸಂಕಲನ) ಹಾಗೂ ಡಾ.ಎಂ ಬಿ ಕಟ್ಟಿ (ಆರೂಢ ಪಂಥ-ಲೇಖನಗಳ ಸಂಕಲನ) ಇವರುಗಳು ಈ ಬಾರಿಯ ಅಮ್ಮ ಪ್ರಶಸ್ತಿಗೆ ಭಾಜನರಾಗಿದ್ದಾರೆ. ತಲಾ ಐದು ಸಾವಿರ ನಗದು ಪುರಸ್ಕಾರ, ಸತ್ಕಾರ, ಪ್ರಮಾಣ ಪತ್ರ, ಮೊಮೆಂಟೋ ಸೇರಿದಂತೆ ನೆಲದ ಸಿರಿಧಾನ್ಯ ತೊಗರಿ ಬೇಳೆ ಜತೆಗೆ ಉಡಿ ತುಂಬುವ ಮೂಲಕ ಪ್ರಶಸ್ತಿ ನೀಡಿ ಗೌರವಿಸಲಾಗುವುದು ಎಂದು ಅವರು ತಿಳಿಸಿದ್ದಾರೆ.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here