ಡಾ. ಅಂಬೇಡ್ಕರ್ ಮತ್ತು ಸಂವಿಧಾನದ ಓದು ಇಂದಿನ ಅಗತ್ಯ

0
28

ಕಲಬುರಗಿ: ಓದು ಅನ್ನುವುದು ವಿಶಿಷ್ಟ ಪ್ರಪಂಚ. ಓದು ಎಂದರೆ ಕೇವಲ ಬರಹವನ್ನು ಓದುವುದಲ್ಲ. ಅದರಲ್ಲಿರುವ ವಿಷಯವನ್ನು ಅರ್ಥ ಮಾಡಿಕೊಳ್ಳುವುದು. ಆ ಹಿನ್ನೆಲೆಯಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ಅವರನ್ನು ಓದಬೇಕು ಎಂದು ಪತ್ರಕರ್ತ-ಲೇಖಕ ಡಾ. ಶಿವರಂಜನ ಸತ್ಯಂಪೇಟೆ ತಿಳಿಸಿದರು.

ಕನ್ನಡ ಮತ್ತು ಸಂಸ್ಕøತಿ ಇಲಾಖೆ ಹಾಗೂ ಆರಾಧನಾ ಕಲಾ ಮತ್ತು ವಾಣಿಜ್ಯ ಪದವಿಪೂರ್ವ ಮಹಾವಿದ್ಯಾಲಯದ ಎನ್.ಎಸ್.ಎಸ್. ಘಟಕದ ಆಶ್ರಯದಲ್ಲಿ ಗುರುವಾರ ಜರುಗಿದ ಭಾರತ ರತ್ನ ಡಾ.ಬಿ.ಆರ್. ಅಂಬೇಡ್ಕರ್ ಓದು ಅಭಿಯಾನ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, ದೇಶ ಇಂದು ಹತ್ತು ಹಲವು ಸಮಸ್ಯೆ ಸವಾಲುಗಳನ್ನು ಎದುರಿಸುತ್ತಿದ್ದು, ಸಂವಿಧಾನದ ಹಕ್ಕುಗಳನ್ನು ಬಳಸಿಕೊಂಡು ಸಂವಿಧಾನದ ವಿರೋಧಿ ನಿಲುವುಗಳನ್ನು ಅನುಷ್ಠಾನಗೊಳಿಸುವ ಪ್ರಯತ್ನ ನಡೆದಿದೆ. ಹೀಗಾಗಿ ಡಾ. ಬಿ.ಆರ್. ಅಂಬೇಡ್ಕರ್ ಅವರ ಸಂವಿಧಾನದ ಓದು ಅಗತ್ಯವಾಗಿದೆ ಎಂದು ತಿಳಿಸಿದರು.

Contact Your\'s Advertisement; 9902492681

ಅಂಬೇಡ್ಕರ್ ಇಲ್ಲದ ಭಾರತವನ್ನು ಊಹಿಸುವುದೂ ಕಷ್ಟ. ಈ ದೇಶದ ಮೂಲಸಮಸ್ಯೆಗಳಿಗೆ ನಮ್ಮೆಲ್ಲರಲ್ಲಿರುವ ಅಜ್ಞಾನವೇ ಮೂಲ ಕಾರಣವಾಗಿದೆ. ಸಂವಿಧನ ಉಳಿದರೆ ನಮ್ಮ ಉಳಿವು ಎಂÀ್ಬುದನ್ನು ಅರಿತು ಅಂಬೇಡ್ಕರ್ ಅವರ ಆಶಯಗಳನ್ನು ಅನುಷ್ಠಾನಗೊಳಿಸಬೇಕು ಎಂದು ವಿವರಿಸಿದರು.

ಕನ್ನಡ ಅಭಿವೃದ್ಧಿ ಪ್ರಾಧಿಕರದ ಮಾಜಿ ಸದಸ್ಯ ಸುರೇಶ ಬಡಿಗೇರ ಅತಿಥಿ ಉಪನ್ಯಾಸ ನೀಡಿ, ಜಾತಿಯ ಅರ್ಬುದ ದೇಶಕ್ಕೆ ಅಂಟಿದ ಮಹಾರೋಗವಾಗಿದ್ದು, ಅಸ್ಪøಶ್ಯತೆ, ಸಮಾನತೆಯ ವಿರುದ್ಧ ಹೋರಾಡಿದ ಡಾ. ಬಾಬಾಸಾಹೇಬ ಅಂಬೇಡ್ಕರ್ ಅವರ ಬದುಕಉ ಹಾಗೂ ಅವರ ವಿಚಾರಗಳನ್ನು ಜೀವನದಲ್ಲಿ ಅಳವಡಿಸಿಕೊಳ್ಳಬೆಕು ಎಂದು ಹೇಳಿದರು.

ಸಂಸ್ಥೆಯ ಅಧ್ಯಕ್ಷ ಹಾಗೂ ಪ್ರ್ರಾಚಾರ್ಯ ಚೇತನಕುಮಾರ ಗಾಂಗಜಿ ಅಧ್ಯಕ್ಷತೆ ವಹಿಸಿದ್ದರು. ಇದೇವೇಳೆಯಲ್ಲಿ ಡಾ.ಬಿ.ಆರ್. ಅಂಬೇಡ್ಕರ್ ಓದು ಅಭಿಯಾನ ನಿಮಿತ್ತ ಕೈಗೊಂಡಿದ್ದ ಆಶುಭಾಷಣ, ರಸಪ್ರಶ್ನೆ, ಪ್ರಬಂಧ ಹಾಗೂ ಕವನ ವಾಚನ ಸ್ಪರ್ಧೆಯಲ್ಲಿ ವಿಜೇತರಾದ ವಿದ್ಯಾರ್ಥಿಗಳಿಗೆ ಪುಸ್ತಕ ಬಹುಮಾನ ವಿತರಿಸಲಾಯಿತು.

ಉಪನ್ಯಾಸಕ ಅಂಬಾರಾಯ ಹಾಗರಗಿ, ಆಡಳಿತಾಧಿಕಾರಿ ಭೀಮರಾವ ಪಾಟೀಲ ವೇದಿಕೆಯಲ್ಲಿದ್ದರು. ಕನ್ನಡ ಮತ್ತು ಸಂಸ್ಕøತಿ ಇಲಾಖೆಯ ಉಪನಿರ್ದೇಶಕ ದತ್ತಪ್ಪ ಸಾಗನೂರ ಪ್ರಾಸ್ತಾವಿಕ ಮಾತನಡಿದರು. ಪ್ರಿಯಾಂಕಾ ಪ್ರಾರ್ಥನೆಗೀತೆ ಹಾಡಿದರು. ಸುಭಾಷ ವಗ್ಗನ್ ಸ್ವಾಗತಿಸಿದರು. ಕಾಶಿನಾಥ ಪಾಟೀಲ ವಂದಿಸಿದರು.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here