ಕಲಬುರಗಿಗೆ ಡಿ. 2 ರಂದು ಎಚ್.ಡಿ ದೇವೇಗೌಡ | 8ಕ್ಕೆ ಕುಮಾರಸ್ವಾಮಿ ಆಗಮನ

ಕಲಬುರಗಿ : ಜಿಲ್ಲಾ ಜಾತ್ಯತೀತ ಜನತಾದಳ ಪಕ್ಷದ ಕಚೇರಿಯಲ್ಲಿ ಹಮ್ಮಿಕೋಂಡ ಪೂರ್ವ ಭಾವಿ ಸಭೆಯಲ್ಲಿ ಮಾಜಿ ಸಚಿವ ಹಾಗೂ ಶಾಸಕ ಬಂಡೆಪ್ಪ ಕಾಶಂಪೂರ ಅವರು ಮಾತನಾಡಿದರು.

ಅವರು ಪಕ್ಷದ ಜಿಲ್ಲಾ ಮುಖಂಡರ ಜೊತೆ ಮಾತನಾಡುತ್ತಾ ಡಿಸೆಂಬರ್. 2 ರಂದು ಮಾಜಿ ಪ್ರಧಾನ ಮಂತ್ರಿಗಳಾದ ಎಚ್ ಡಿ ದೇವೇಗೌಡ ಅವರು ಆಳಂದ ಮತಕ್ಷೇತ್ರಕ್ಕೆ ಪಕ್ಷ ಸಂಘಟಿಸಲು ಆಗಮಿಸಲಿದ್ದಾರೆ. ಹಾಗೂ 8 ರಂದು ಮಾಜಿ ಮುಖ್ಯಮಂತ್ರಿಗಳಾದ ಕುಮಾರಸ್ವಾಮಿ ಅವರು ಅಫಜಲಪೂರ್ ಮತಕ್ಷೇತ್ರಕ್ಕೆ ಪಕ್ಷ ಸಂಘಟಿಸಲು ಆಗಮಿಸಲಿದ್ದಾರೆ. ಆದ ಕಾರಣ ಜಿಲ್ಲಾ ಹಿರಿಯ ಮುಖಂಡರುಗಳು ಹಾಗೂ ಪಕ್ಷದ ಎಲ್ಲಾ ಮತಕ್ಷೇತ್ರದ ಅಭ್ಯರ್ಥಿಗಳು ಆಕಾಂಕ್ಷಿಗಳು ಮಹಾನಗರ ಪಾಲಿಕೆಯ ಹಾಜಿ ಮತ್ತು ಮಾಜಿ ಸದಸ್ಯರುಗಳು ಪಕ್ಷದ ವತಿಯಿಂದ ಎಲ್ಲಾ ಚುನಾವಣೆಯಲ್ಲಿ ಸ್ಪರ್ಧಿಸಿರುವ ಎಲ್ಲಾ ಅಭ್ಯರ್ಥಿಗಳು ಹಾಗೂ ಮಹಿಳಾ ಮುಖಂಡರುಗಳು ಮತ್ತು ಪಕ್ಷದ ಎಲ್ಲಾ ಕಾರ್ಯಕರ್ತರು ಅಪಾರ ಸಂಖ್ಯೆಯಲ್ಲಿ ಬಂದು ಈ ಎರಡು ಕಾರ್ಯಕ್ರಮಗಳನ್ನು ಯಶಸ್ವಿಗೊಳಿಸಬೇಕಾಗಿ ಸಭೆಯಲ್ಲಿ ಹೇಳಿದರು.

2023ರ ವಿಧಾನಸಭೆಯ ಚುನಾವಣೆಯಲ್ಲಿ ಜಿಲ್ಲೆಯಿಂದ ಹೆಚ್ಚಿನ ಸಂಖ್ಯೆಯಲ್ಲಿ ಶಾಸಕರನ್ನು ಆಯ್ಕೆ ಮಾಡಲು ಪಕ್ಷದ ಪದಾಧಿಕಾರಿಗಳು ಹಿರಿಯ ಮುಖಂಡರು, ಕಾರ್ಯಕರ್ತರುಗಳು, ಹೆಚ್ಚಿನ ಶ್ರಮವಹಿಸಿ ಪಕ್ಷವನ್ನು ಗೆಲ್ಲಿಸಬೇಕಾಗಿ ಜಿಲ್ಲಾ ಉಸ್ತುವಾರಿಗಳಾದ ಮಹಾಂತೇಶ್ ಪಾಟೀಲ ಹಾಗೂ ಐಲಿನ್ ಜಾನ್ ರವರು ಪಕ್ಷದ ಕಾರ್ಯಕರ್ತರಿಗೆ ಹುರಿದುಂಬಿಸಿದರು.ಜಿಲ್ಲಾ ಪದಾಧಿಕಾರಿಗಳು ಹಾಗೂ ಜಿಲ್ಲಾ ವಿವಿಧ ಘಟಕಗಳ ಅಧ್ಯಕ್ಷರುಗಳ ಪದಗ್ರಹಣ ಕಾರ್ಯಕ್ರಮವನ್ನು ನೆರವೇರಿಸಲಾಯಿತು.

ಜಿಲ್ಲಾ ಪದಾಧಿಕಾರಿಗಳಿಗೆ ಹಾಗೂ ಜಿಲ್ಲಾ ವಿವಿಧ ಘಟಕಗಳ ಅಧ್ಯಕ್ಷರುಗಳಿಗೆ ನೇಮಕಾತಿ ಆದೇಶ ಪತ್ರವನ್ನು ಜೆ. ಡಿ. ಎಸ್. ಪಕ್ಷದ ರಾಜ್ಯ ಉಪಾಧ್ಯಕ್ಷರು ಹಾಗೂ ಪಕ್ಷದ ಜಿಲ್ಲಾ ಉಸ್ತುವಾರಿಗಳಾದ ಮಹಾಂತೇಶ ಪಾಟೀಲ್, ಐಲಿನ್ ಜಾನ್ ಮಠಪತಿ, ಪಕ್ಷದ ಜಿಲ್ಲಾ ಅಧ್ಯಕ್ಷ ಸುರೇಶ ಮಾಹಾಗಾಂವಕರ, ಪಕ್ಷದ ಹಿರಿಯ ಮುಖಂಡರಾದ ಅಶೋಕ ಗುತ್ತೇದಾರ್, ಬೀದರ್ ಜಿಲ್ಲಾಧ್ಯಕ್ಷ ರಮೇಶ್ ಪಾಟೀಲ, ಇಂಡಿ ಮತಕ್ಷೇತ್ರದ ಬಿಡಿ ಪಾಟೀಲ, ಶಿವಾನಂದ್ ಪಾಟೀಲ್ ಸಿಂದಗಿ, ಸೇಡಂ ವಿಧಾನಸಭಾ ಮತಕ್ಷೇತ್ರದ ಪಕ್ಷದ ಅಭ್ಯರ್ಥಿ ಬಾಲರಾಜ್ ಗುತ್ತೇದಾರ, ಅಫಜಲಪೂರ ಮತಕ್ಷೇತ್ರದ ಅಭ್ಯರ್ಥಿ ಶಿವಕುಮಾರ್ ನಾಟೇಕರ್, ಆಳಂದ ಮತಕ್ಷೇತ್ರದ ಅಭ್ಯರ್ಥಿ ಮಹೇಶ್ವರಿ ವಾಲಿ, ಚಿಂಚೋಳಿ ಮತಕ್ಷೇತ್ರದ ಅಭ್ಯರ್ಥಿ ಸಂಜೀವನ್ ಯಾಕಾಪುರ್, ಕಲಬುರಗಿ ದಕ್ಷಿಣ ಮತಕ್ಷೇತ್ರದ ಆಕಾಂಕ್ಷಿ ಕೃಷ್ಣಾರೆಡ್ಡಿ, ಜೇವರ್ಗಿ ಮತಕ್ಷೇತ್ರದ ಕೇದಾರಲಿಂಗಯ್ಯ ಹಿರೇಮಠ್, ಪಕ್ಷದ ಜಿಲ್ಲಾ ಪದಾಧಿಕಾರಿಗಳಿಗೆ, ಹಾಗೂ ಪಕ್ಷದ ವಿವಿಧ ಘಟಕಗಳ ಅಧಕ್ಷ್ಯರುಗಳಿಗೆ ನೇಮಕಾತಿ ಆದೇಶ ಪತ್ರ ನೀಡಿ ಗೌರವಿಸಲಾಯಿತು.

emedialine

Recent Posts

ನಾಡಹಬ್ಬ ಆಚರಣೆ ಅಂಗವಾಗಿ ನಾಡ ದೇವತೆ ಸ್ತಬ್ಧ ಚಿತ್ರಗಳ ಮೆರವಣಿಗೆ

ಸುರಪುರ: ಕನ್ನಡ ಸಾಹಿತ್ಯ ಸಂಘ ಸುರಪುರ ಹಾಗೂ ಪಬ್ಲಿಕ್ ರಿಕ್ರಿಯೇಷನ್ ಕ್ಲಬ್ ವತಿಯಿಂದ 38ನೇ ನಾಡಹಬ್ಬ ಉತ್ಸವಾಚರಣೆ ಅಂಗವಾಗಿ ನಗರದ…

13 hours ago

ವೀರಪ್ಪ ನಿಷ್ಠಿ ಕಾಲೇಜ್ ಮಹಾತ್ಮ ಗಾಂಧಿಜಿ ಲಾಲ್ ಬಹದ್ದೂರ ಶಾಸ್ತ್ರಿ ಜಯಂತಿ

ಸುರಪುರ: ನಗರದ ಶ್ರೀ. ವೀರಪ್ಪ ನಿಷ್ಠಿ ತಾಂತ್ರಿಕ ಮಹಾವಿದ್ಯಾಲಯದ ಆವರಣದಲ್ಲಿ ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಸಮೂಹ ಸಂಸ್ಥೆಗಳ ಅಡಿಯಲ್ಲಿ ನಡೆದ…

13 hours ago

ಲೈಂಗಿಕ ದೌರ್ಜನ್ಯ ಆರೋಪಿಗಳ ಬಂಧನಕ್ಕೆ ಒತ್ತಾಯಿಸಿ 8ಕ್ಕೆ ಸುರಪುರ ಬಂದ್

ಸುರಪುರ: ಕೊಡೇಕಲ್ ಗ್ರಾಮದಲ್ಲಿ ಲೈಂಗಿಕ ದೌರ್ಜನ್ಯ ನಡೆಸಿರುವ ಆರೋಪಿಗಳನ್ನು ಬಂಧಿಸುವಂತೆ ಆಗ್ರಹಿಸಿ ಇದೇ ಅಕ್ಟೋಬರ್ 8 ರಂದು ಸುರಪುರ ಬಂದ್…

13 hours ago

ಗರ್ಭಿಣಿ ಮಹಿಳೆಯರಿಗೆ ಹಣ್ಣು ಹಂಪಲು ವಿತರಣೆ

ಕಲಬುರಗಿ:  ಜಯ ಕರ್ನಾಟಕ ರಕ್ಷಣಾ ಸೇನೆ ಜಿಲ್ಲಾಧ್ಯಕ್ಷರಾದ ಮಲ್ಲಿಕಾರ್ಜುನ್ ಎಸ್ ಕಿಳ್ಳಿ ರವರ ಜನ್ಮ ದಿನದ ಆಂಗವಾಗಿ ಶ್ರೀನಿವಾಸ ಸರಡಗಿ…

13 hours ago

ಮಹಾತ್ಮ ಗಾಂಧೀಜಿಯವರ ತತ್ವಗಳನ್ನು ಪ್ರತಿಯೊಬ್ಬರು ಅಳವಡಿಸಿಕೊಳ್ಳಬೇಕು

ಕಲಬುರಗಿ: ಗುಲ್ಬರ್ಗ ವಿಶ್ವವಿದ್ಯಾಲಯ ಕಲಬುರ್ಗಿ ಮತ್ತು ಸರಕಾರಿ ಮಹಾವಿದ್ಯಾಲಯ ಸ್ವಾಯತ್ತ ಕಲಬುರ್ಗಿಯ ಎನ್.ಎಸ್. ಎಸ್ ಘಟಕದ ಸಹಯೋಗದಲ್ಲಿ ಹಮ್ಮಿಕೊಳ್ಳಲಾಗಿದ್ದ ಮಹಾತ್ಮ…

13 hours ago

ಜುಡೋಪಟುಗಳು ರಾಷ್ಟ್ರಮಟ್ಟಕ್ಕೆ ಆಯ್ಕೆ

ಕಲಬುರಗಿ: ಶಾಲಾ ಶಿಕ್ಷಣ ಇಲಾಖೆ ಕರ್ನಾಟಕ ರಾಜ್ಯಮಟ್ಟದ ಶಾಲಾ ಮಕ್ಕಳ ಆಟೊಗಳ ಸ್ಪರ್ಧೆ 2024 25 ಈಚೆಗೆ ಬೆಂಗಳೂರಿನಲ್ಲಿ ನಡೆದ…

13 hours ago

Notice: ob_end_flush(): Failed to send buffer of zlib output compression (0) in /home3/emedixap/public_html/wp-includes/functions.php on line 5420