ಪುನರ್ವಸತಿ ಕಾರ್ಯಕರ್ತರ ಆಮರಣ ಉಪವಾಸ : ಇಬ್ಬರು ಅಸ್ವಸ್ಥ

0
18

ಕಲಬುರಗಿ: ಕಳೆದ 14 ವರ್ಷಗಳಿಂದ ರಾಜ್ಯದಲ್ಲಿ ಕಾರ್ಯನಿರ್ವಹಿಸುತ್ತಿರುವ ವಿವಿಧೋದ್ದೇಶ ಮನರ್ವಸತಿ, ಗ್ರಾಮೀಣ ಹಾಗೂ ನಗರ ಪುನರ್ವಸತಿ ಕಾರ್ಯಕರ್ತರ ಸೇವೆಯನ್ನು ಕಾಯಂಗೊಳಿಸಬೇಕೆಂದು ಒತ್ತಾಯಿಸಿ ನವ ಕರ್ನಾಟಕ ಎಂ ಆರ್ ಡಬ್ಲ್ಯು, ವಿಆರ್ ಡಬ್ಲ್ಯು ಮತ್ತು ಯು ಆರ್ ಡಬ್ಲ್ಯು ಗೌರವ ಧನ ಕಾರ್ಯಕರ್ತರು ಜಿಲ್ಲಾಧಿಕಾರಿಗಳ ಕಚೇರಿ ಎದುರು ಬುಧವಾರದಿಂದ ಆರಂಭಿಸಿದ ಆಮರಣ ಉಪವಾಸ ಸತ್ಯಾಗ್ರಹ ಗುರುವಾರ ಎರಡನೆಯ ದಿನಕ್ಕೆ ಕಾಲಿಟ್ಟಿದ್ದು ಸತ್ಯಾಗಹ ನಿರತರಲ್ಲಿ ಇಬ್ಬರು ಅಸ್ವಸ್ಥಗೊಂಡಿದ್ದು ಅವರಿಗೆ ಆಸ್ಪತ್ರೆಯಲ್ಲಿ ಚಿಕಿತ್ಸೆನೀಡಲಾಗುತ್ತಿದೆ.

ಸಂಘದ ರಾಜ್ಯಾಧ್ಯಕ್ಷ ಅಂಬಾಜಿ ಮೇಟಿ ನೇತೃತ್ವದಲ್ಲಿ ಆಮರಣ ಉಪವಾಸ ಸತ್ಯಾಗ್ರಹ ನಡೆಸಲಾಗುತ್ತಿದ್ದು ಸಂಘದ ರಾಜ್ಯ ಗೌರವಾಧ್ಯಕ್ಷ ದತ್ತಾತ್ರೇಯ ಆರ್. ಕುಡಕಿ ಹಾಗೂ ಶಿವಲೀಲಾ ಕಾಂಬಳೆ ಸೇರಿದಂತೆ ಅನೇಕರು ಸತ್ಯಾಗ್ರಹದಲ್ಲಿ ಪಾಲ್ಗೊಂಡರು.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here