ಬಿಸಿ ಬಿಸಿ ಸುದ್ದಿ

ಸಮಯ ಗತಿಸಿದರೆ ಮರಳಿ ಬರುವದಿಲ್ಲ: ಡಾ.ಲಿಂಗರಾಜ ಶಾಸ್ತ್ರಿ

ಕಲಬುರಗಿ: ಕಳೆದು ಹೋದ ಸಮಯ ಪುನ: ಮರಳಿ ಬರುವದಿಲ್ಲ. ಅದು ಹಿಡಿದಿಟ್ಟುಕೊಳ್ಳಲು ಸಾಧ್ಯವಿಲ್ಲ. ವಿದ್ಯಾರ್ಥಿಗಳು ಸಮಯಕ್ಕೆ ನಿರ್ಲಕ್ಷ್ಯ ಮಾಡದೇ. ವಿದ್ಯಾರ್ಥಿ ಜೀವನದಲ್ಲಿ ಸಮಯವನ್ನು ಸಮರ್ಥವಾಗಿ ಬಳಸಿಕೊಂಡು ಸಮಾಜಕ್ಕೆ ಮಾದರಿಯಾಗಬೇಕು ಎಂದು ಶರಣಬಸವ ವಿವಿಯ ಮೌಲ್ಯಮಾಪನ ಕುಲಸಚಿವ ಡಾ. ಲಿಂಗರಾಜ ಶಾಸ್ತ್ರಿ ಹೇಳಿದರು.

ನಗರದ ಶರಣಬಸವ ವಿವಿ ಶತಮಾನೋತ್ಸವ ಸಭಾಂಗಣದಲ್ಲ್ಲಿ ಬುಧವಾರ ಆಯೋಜಿಸಿದ್ದ ಇಂಡಕ್ಷನ್ (ದೀಕ್ಷಾರಂಭ-೨೦೧೯) ಕಾರ್ಯಕ್ರಮದಲ್ಲಿ ಸಮಯದ ಮಹತ್ವದ ಬಗ್ಗೆ ಉಪನ್ಯಾಸ ನೀಡಿದರು. ವಿದ್ಯಾರ್ಥಿಗಳು ಅಧ್ಯಯನ ಮಾಡುವ ಸಮಯದಲ್ಲಿ ಸಮಯಕ್ಕೆ ನಿರ್ಲಕ್ಷ್ಯ ಮಾಡಿದರೇ ಅವರ ಭವಿಷ್ಯವೇ ಅತಂತ್ರವಾಗುತ್ತದೆ. ಆದರೆ ಯಾರು ಜಾಣ್ಮೆಯಿಂದ ಸಮಯಕ್ಕೆ ಬೆಲೆಕೊಟ್ಟು, ಕಠಿಣ ಪರಿಶ್ರಮದಿಂದ ಅಧ್ಯಯನ ಮಾಡುತ್ತಾರೋ, ಅಂತಹ ವಿದ್ಯಾರ್ಥಿಗಳು ಉನ್ನತ ಸ್ಥಾನ ಮತ್ತು ಯಶಸ್ವಿ ಜೀವನ ನಡೆಸುವುದಕ್ಕೆ ಸಾಧ್ಯ ಎಂದು ವಿದ್ಯಾರ್ಥಿಗಳಿಗೆ ಸಮಯದ ಬಗ್ಗೆ ಅರಿವು ಮೂಡಿಸಿದರು.

ವಿದ್ಯಾರ್ಥಿಗಳಲ್ಲಿ ದೃಢ ನಿರ್ಧಾರ, ಆತ್ಮ ವಿಶ್ವಾಸ ಸತತ ಪ್ರಯತ್ನ ಕರಗತ ಮಾಡಿಕೊಂಡಾಗ ಮಾತ್ರ ಜ್ಞಾನ ತಮ್ಮದಾಗಿಸಿಕೊಳ್ಳಬಹುದಾಗಿದೆ. ಆದರೆ ಇಂದಿನ ವಿದ್ಯಾರ್ಥಿಗಳು ಕೇವಲ ದೊಡ್ಡ, ದೊಡ್ಡ ಕನಸು ಕಾಣುತ್ತಾರೇ ವಿನಹ: ಅದರ ತಕ್ಕಂತೆ ಕಠಿಣ ಪರಿಶ್ರಮದ ಅಧ್ಯಯನ ಮಾಡುವದಿಲ್ಲ. ಎಂದು ಡಾ.ಲಿಂಗರಾಜ ಶಾಸ್ತ್ರಿ ಬೇಸರ ವ್ಯಕ್ತಪಡಿಸಿದರು.

ಡಾ.ಶಿವರಾಜ ಶಾಸ್ತ್ರಿ ಮಾತನಾಡಿ, ವಿದ್ಯಾರ್ಥಿಗಳು ಗುರುಹಿರಿಯರನ್ನು ಮೊದಲು ಗೌರವಿಸುವುದನ್ನು ಕಲಿಯಬೇಕು. ತಂದೆ ತಾಯಿಯನ್ನು ಪೂಜಿಸಿಬೇಕು. ಸರಸ್ವತಿಯನ್ನು ಆರಾಧಿಸಿ, ಸರಿಯಾದ ಸಮಯಕ್ಕೆ ವಿದ್ಯಾಮಂದಿರದೊಳಗೆ ಬಂದು ಸಂಸ್ಥೆಯ ಮತ್ತು ನಾಡಿನ, ದೇಶದ ರಾಷ್ಟ್ರಗೀತೆ ಹಾಡುವ ಮೂಲಕ ಶಾಲೆಯಲ್ಲಿ ಆಟ, ಮನರಂಜನೆಯ ಜೊತಗೆ ಅಧ್ಯಯನ ಮಾಡಬೇಕು. ಅಂದಾಗ ಮಾತ್ರ ವಿದ್ಯೆ ಅಭ್ಯಾಸಿಗನ ಕೈವಶವಾಗುತ್ತದೆ ಎಂದು ವಿದ್ಯಾರ್ಥಿಗಳಲ್ಲಿ ಮಾನವೀಯ ಮೌಲ್ಯಗಳು ಬಿತ್ತಿದರು.

ಮುಕ್ತಾಂಬಿಕ ಕಾಲೇಜು ಪ್ರಾಚಾರ್ಯ ಎಮ್.ಆರ್ ಹುಗ್ಗಿ ಮಾತನಾಡಿ, ಮಕ್ಕಳಿಗೆ ಶಿಕ್ಷಣ ನೀಡುವ ಜತೆಗೆ ಮಾನವೀಯ ಮೌಲ್ಯಗಳು ಕಲಿಸಬೇಕು. ದೈಹಿಕ ವ್ಯಾಯಾಮ, ಯೋಗ, ಆಧ್ಯಾ೦೯ತ್ಮಿಕ ಶಿಕ್ಷಣ ನೀಡುವದರಿಂದ ಮಕ್ಕಳ ಬುದ್ದಿಮಟ್ಟ ಬೆಳವಣಿಗೆಯಾಗುವುದಕ್ಕೆ ಪ್ರೇರಣೆ ನೀಡುತ್ತದೆ ಎಂದರು.
ವಿವಿಯ ಸಮ ಕುಲಪತಿ ವಿಡಿ ಮೈತ್ರಿ, ವಿವಿ ಕುಲಸಚಿವ ಡಾ. ಅನೀಲ ಕುಮಾರ ಬಿಡವೆ, ಮೌಲ್ಯಮಾಪನ ಕುಲಸಚಿವ ಡಾ. ಲಿಂಗರಾಜ ಶಾಸ್ತ್ರಿ, ಡೀನ್ ಡಾ.ಲಕ್ಷ್ಮಿ ಮಾಕಾ ಇದ್ದರು.

emedialine

Recent Posts

ಕಲಬುರಗಿ; ರಾಜ್ಯ ತಳವಾರ ಮಹಾಸಭಾ ಜಿಲ್ಲಾ ಘಟಕದ ನೂತನ ಪದಾಧಿಕಾರಿಗಳ ಆಯ್ಕೆ

ಕಲಬುರಗಿ; ಕನಾ೯ಟಕ ರಾಜ್ಯ ತಳವಾರ ಮಹಾಸಭಾ ಕಲಬುರಗಿ ಜಿಲ್ಲಾಧ್ಯಕ್ಷರಾದ ಚಂದ್ರಕಾಂತ ದಶರಥ ತಳವಾರ ಅವರ ಅಧ್ಯಕ್ಷತೆಯಲ್ಲಿ ಇಂದು ಆನಂದ ನಿಲಯ…

31 mins ago

ಕೈಗಾರಿಕೆ ಪ್ರದೇಶಗಳಿಗೆ ಭೇಟಿ ನೀಡಿ ಉದ್ಯಮಿಗಳ ಅಹವಾಲು ಆಲಿಸಿದ ಬಿ.ಫೌಜಿಯಾ ತರನ್ನುಮ್

ಕಲಬುರಗಿ; ಜಿಲ್ಲಾಧಿಕಾರಿ ಬಿ. ಫೌಜಿಯಾ ತರನ್ನುಮ್ ಅವರು ಶನಿವಾರ ಶಹಾಬಾದ ರಸ್ತೆಯಲ್ಲಿರುವ ನಂದೂರ-ಕೆಸರಟಗಿ ಮತ್ತು ಹುಮನಾಬಾದ ರಸ್ತೆಯಲ್ಲಿರುವ ಕಪನೂರ ಕೈಗಾರಿಕಾ…

41 mins ago

ಸಿಎಂ ರಾಜೀನಾಮೆ ಕೇಳುತ್ತಿರುವ ಬಿಜೆಪಿ -ಜೆಡಿಎಸ್‍ಗೆ ಯಾವುದೇ ನೈತಿಕತೆಯಿಲ್ಲ

ಶಹಾಬಾದ: ಕರ್ನಾಟಕದ ಬಹುಮತ ಸರಕಾರವನ್ನು ಬೀಳಿಸಲು ಇಲ್ಲಸಲ್ಲದ ಆರೋಪ ಮಾಡುವ ಮೂಲಕ ಸಿಎಂ ರಾಜೀನಾಮೆಗೆ ಒತ್ತಾಯ ಮಡುತ್ತಿರುವ ಬಿಜೆಪಿ ಹಾಗೂ…

43 mins ago

ಜೆಜೆಎಂ ಕಾಮಗಾರಿ ಗುಣಮಟ್ಟದಿಂದ ಕೂಡಿರಲಿ

ಶಹಾಬಾದ:ಪ್ರತಿ ಮನೆಗೂ ನೀರು ದೊರಿಸಿಕೊಡುವ ಉದ್ದೇಶದಿಂದ ನಡೆಯುವ ಜೆಜೆಎಂ ಕಾಮಗಾರಿ ಗುಣಮಟ್ಟದಿಂದ ಕೂಡಿರಬೇಕೆಂದು ಕಾಂಗ್ರೆಸ್ ಮುಖಂಡ ಮೃತ್ಯುಂಜಯ್ ಹಿರೇಮಠ ಹೇಳಿದರು.…

49 mins ago

ಅ.13, 14 ರಂದು ಧಮ್ಮ ಕ್ರಾಂತಿ ಉತ್ಸವ : ಪೂರ್ವಭಾವಿ ಸಭೆ

ಶಹಾಬಾದ :ನಗರದ ಬೌದ್ಧ ವಿಹಾರದಲ್ಲಿ ರವಿವಾರ ಹಮ್ಮಿಕೊಂಡ 68ನೇ ಧಮ್ಮಚಕ್ರ ಪ್ರವರ್ತನಾ ದಿನದ ಅಂಗವಾಗಿ ಕಲಬುರ್ಗಿಯಲ್ಲಿ ಅ.13 ಮತ್ತು 14…

51 mins ago

ನಮೋಶಿ ನೇತೃತ್ವದಲ್ಲಿ, ಕಲ್ಯಾಣ ಕರ್ನಾಟಕ ವಿಭಾಗದ ಪ್ರೌಢಶಾಲಾ ಶಿಕ್ಷಕರ ಸಭೆ

ಕಲಬುರಗಿ: ಈಶಾನ ಶಿಕ್ಷಕರ ಕ್ಷೇತ್ರದ ವಿಧಾನ ಪರಿಷತ್ ಸದಸ್ಯರಾದ ಶಶಿಲ್ ನಮೋಶಿ ರವರ ನೇತೃತ್ವದಲ್ಲಿ ಹಾಗೂ ಶಾಲಾ ಶಿಕ್ಷಣ ಇಲಾಖೆಯ…

55 mins ago

Notice: ob_end_flush(): Failed to send buffer of zlib output compression (0) in /home3/emedixap/public_html/wp-includes/functions.php on line 5420