ಕಲಬುರಗಿ : ಕರ್ನಾಟಕ ಸಾಂಸ್ಕೃತಿಕ ಪರಿಷತ್ ವತಿಯಿಂದ ನವೆಂಬರ್ ೨೭ ರಂದು ಬೆಂಗಳೂರಿನಲ್ಲಿರುವ ಗುರುಕುಲ ಶ್ರೀ ಶಿವುಕುಮಾರಸ್ವಾಮಿ ಬಡಾವಣೆಯಲ್ಲಿರುವ ಕನ್ನಡ ಸಾಹಿತ್ಯ ಪರಿಷತ್ನ, ಕರ್ನಾಟಕ ಸಾಂಸ್ಕೃತಿಕ ವಿಶ್ವ ವಿದ್ಯಾಲಯದಲ್ಲಿ ಹಮ್ಮಿಕೊಂಡ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪ್ರದಾನ ಕಾರ್ಯಕ್ರಮದಲ್ಲಿ ಚಿತ್ತಾಪೂರ ತಾಲೂಕಿನ ನಾಲವಾರ ಗ್ರಾಮದ ವೀರಶೈವ ಸಮಾಜದ ಮುಖಂಡ ಸೋಮಶೇಖರ ಎಸ್. ಲಾಡ್ಲಾಪೂರ ನಾಲವಾರ ಅವರಿಗೆ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ನೀಡಿ ಗೌರವಿಸಲಾಗುವುದು ಎಂದು ಕರ್ನಾಟಕ ಸಾಂಸ್ಕೃತಿಕ ಪರಿಷತ್ ನವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.