ಕಲಬುರಗಿ: ಯಾರು ಇತಿಹಾಸ ಅರಿಯಲಾರರು, ಇತಿಹಾಸ ಸೃಷ್ಟಿಸಲಾರರು ಎನ್ನುವ ಡಾ. ಬಿ.ಆರ್. ಅಂಬೇಡ್ಕರರವರ ಉಪದೇಶ ನಿಜಕ್ಕೂ ಅವರ ನೈಜ ಬದುಕಿಗೆ ಹಿಡಿದ ಕೈಗನ್ನಡಿ. ಈ ನಿಟ್ಟಿನಲ್ಲಿ ಇಂದಿನ ಯುವ ಪೀಳಿಗೆ ಮಹಾನ್ ಪುರುಷರ ತತ್ವಾದರ್ಶ ಮೈಗೂಡಿಸಿಕೊಂಡು ಉಜ್ವಲ ಭವಿಷ್ಯ ರೂಪಿಸಿಕೊಳ್ಳಬೇಕು ಎಂದು ಇತಿಹಾಸ ಉಪನ್ಯಾಸಕ ಡಿ.ಪಿ. ಸಜ್ಜನ ಹೇಳಿದರು.
ಇಲ್ಲಿನ ಹೊಸ ಜೇವರ್ಗಿ ರಸ್ತೆಯ ಎಂ. ಎನ್. ದೇಸಾಯಿ ಕಲಾ ಮತ್ತು ವಾಣಿಜ್ಯ ಪದವಿ ಕಾಲೇಜಿನಲ್ಲಿ ಶನಿವಾರ ನಡೆದ ಸಂವಿಧಾನ ಸಮರ್ಪಣಾ ದಿನಾಚರಣೆಯಲ್ಲಿ ಅವರು ವಿಶೇಷ ಉಪನ್ಯಾಸ ನೀಡಿದರು.
ಭಾರತ ಸಂವಿಧಾನವು ವಿವಿಧತೆಯಲ್ಲಿ ಏಕತೆ, ಸಮಾನತೆ, ಸಮಾಜವಾದಿ, ಭ್ರಾತೃತ್ವ ತತ್ವ ಮತ್ತು ಸಾಮಾಜಿಕ ನ್ಯಾಯದ ತತ್ವವನೊಳಗೊಂಡಿದೆ ಎಂದು ಪ್ರತಿಪಾದಿಸಿದರು.
ಪತ್ರಕರ್ತ ಭೀಮಾಶಂಕರ ಫಿರೋಜಾಬಾದ್ ಮಾತನಾಡಿ, ಇಡೀ ಜಗತ್ತಿನಲ್ಲಿ ಭಾರತದ ಸಂವಿಧಾನ ಬೃಹತ್, ಮಾದರಿ ಸಂವಿಧಾನವಾಗಿದೆ. ಪ್ರಜಾಪ್ರಭುತ್ವ ಮಾದರಿಯ ಸರ್ಕಾರಕ್ಕೆ ಆಧಾರಸ್ತಂಭವಾಗಿದೆ ಎಂದು ಹೇಳಿದರು.
ಹಿರಿಯ ಉಪನ್ಯಾಸಕ ವೀರಯ್ಯ ಬಿ. ಹಿರೇಮಠ ಪ್ರತಿಯೊಬ್ಬರು ಮೂಲಭೂತ ಹಕ್ಕುಗಳಷ್ಟೇ ಮೂಲಭೂತ ಕರ್ತವ್ಯಗಳು ಸಹ ಚಾಚೂ ತಪ್ಪದೆ ಪಾಲಿಸಬೇಕು. ಅಂದಾಗ ಮಾತ್ರ ಭವ್ಯ ಭಾರತ ಕಟ್ಟಲು ಸಾಧ್ಯ ಎಂದರು.
ಕಾಲೇಜಿನ ಅಧ್ಯಕ್ಷ ಸಂದೀಪ ದೇಸಾಯಿ ವೇದಿಕೆ ಮೇಲಿದ್ದರು. ಉಪನ್ಯಾಸಕರಾದ ಆನಂದತೀರ್ಥ ಜೋಶಿ ಸ್ವಾಗತಿಸಿ, ಪ್ರಾಸ್ತಾವಿಕವಾಗಿ, ನಿರೂಪಿಸಿದರು. ಉಪನ್ಯಾಸಕ ನಾಗರಾಜ ಪಟ್ಟಣಕರ ವಂದಿಸಿದರು.
ಕಲಬುರಗಿ: ಕಳೆದ ಅಕ್ಟೋಬರ್ 2 ರಂದು ನಗರದ ಹೊರವಲಯದ ನಂದೂರ ಕೈಗಾರಿಕಾ ಪ್ರದೇಶದ ದಾಲ್ ಮಿಲ್ ವೊಂದರಲ್ಲಿ ಅಕ್ರಮ ಅಕ್ಕಿ…
ಸುರಪುರ: ತಾಲೂಕಿನ ರುಕ್ಮಾಪುರ ಗ್ರಾಮದ ಬಣಗಾರ ಮನೆಯಲ್ಲಿ ಬನ್ನಿಮಹಾಂಕಾಳಿ ನವರಾತ್ರಿ ಉತ್ಸವದ ಅಂಗವಾಗಿ ೪೪ನೇ ವರ್ಷದ ಶ್ರೀ ದೇವಿ ಪಾರಾಯಣ…
ಕಲಬುರಗಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಧ್ವನಿ ಸಂಘ ಜಿಲ್ಲಾಮಟ್ಟದ ಪತ್ರಕರ್ತರ ಸಮಾವೇಶ ಸೆಪ್ಟೆಂಬರ್ 16ರಂದು ಅಫಜಲಪೂರ ಪಟ್ಟಣದಲ್ಲಿ ನಡೆದ ಸಂದರ್ಭದಲ್ಲಿ…
ಕಲಬುರಗಿ; ಕನ್ನಡ ಸಾಹಿತ್ಯ ಕ್ಷೇತ್ರದಲ್ಲಿ ವಿಶಿಷ್ಟ ಖ್ಯಾತಿ ಪಡೆದ ಜಿಲ್ಲೆಯ ಸೇಡಂನ ಮಾತೋಶ್ರೀ ಮಹಾದೇವಮ್ಮ ನಾಗಪ್ಪ ಮುನ್ನೂರ್ ಪ್ರತಿಷ್ಠಾನದ ವತಿಯಿಂದ…
ಚಿಂಚೋಳಿ : ಪ್ರವಾದಿ ಮಹ್ಮದ ಪೈಗಂಬರ್ ಅವರನ್ನು ಅವಮಾನಿಸಿದ ನರಸಿಂಹಾನಂದ ಸರಸ್ವತಿ ಸ್ವಾಮಿಗಳ ವಿರುದ್ಧ ಪ್ರಕರಣ ದಾಖಲಿಸಬೇಕು ಎಂದು ಆಗ್ರಹಿಸಿ…
ಕಲಬುರಗಿ: ಕಲ್ಯಾಣ ಕರ್ನಾಟಕದ ಶೈಕ್ಷಣಿಕ ಗುಣಮಟ್ಟ ಸುಧಾರಣೆಗಾಗಿ ಕೆ.ಕೆ.ಆರ್.ಡಿ.ಬಿ ಯು ಸಮಿತಿಯೊಂದನ್ನು ರಚಿಸಿ, ಗುರುರಾಜ ಕರ್ಜಗಿ ಅವರನ್ನು ಅಧ್ಯಕ್ಷರನ್ನಾಗಿ ಮಾಡಿರುವ…