ಬಿಸಿ ಬಿಸಿ ಸುದ್ದಿ

ಒಬ್ಬ ಸಾಧಕನಿಗೆ ಸಹೋದರ ದಯಾನಂದ ಮಾದರಿಯಾಗಿದ್ದಾರೆ

ಸುರಪುರ:ನಗರದ ನರಸಿಂಗಪೇಟದಲ್ಲಿ ದ್ರಿಷಿಕಾ ಬಿ ಮುಧೋಳ ಅವರ ಜನ್ಮ ದಿನಾಚರಣೆ ಅಂಗವಾಗಿ ದೇವಾಪುರದ ಶಿವಮೂರ್ತಿ ಶಿವಾಚಾರ್ಯ ಸ್ವಾಮೀಜಿ,ಗುಳಬಾಳದ ಮರಿಹುಚ್ಚೇಶ್ವರ ಸ್ವಾಮೀಜಿ ಹಾಗೂ ಕರಡಕಲ್‍ನ ಶಾಂತ ರುದ್ರಮುನಿ ಸ್ವಾಮೀಜಿಗಳ ಸಾನಿಧ್ಯದಲ್ಲಿ ವಿವಿಧ ಸಾಧಕರಿಗೆ ಸನ್ಮಾನ ಸಮಾರಂಭ ನಡೆಸಲಾಯಿತು.

ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಕರ್ನಾಟಕ ನಗರ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ ಹಾಗೂ ಶಾಸಕ ನರಸಿಂಹ ನಾಯಕ (ರಾಜುಗೌಡ) ಭಾಗವಹಿಸಿ ಮಾತನಾಡಿ,ಇಂದು ಅನೇಕರು ತಮ್ಮ ಜನುಮ ದಿನವನ್ನು ಆಡಂಭರದಿಂದ ಆಚರಿಸುವವರು ಇದ್ದಾರೆ,ಆದರೆ ಜನ್ಮ ದಿನಾಚರಣೆ ಎನ್ನುವುದು ಕೇವಲ ನೆಪವಾಗಿಸಿಕೊಂಡು ವಿವಿಧ ರಂಗಗಳಲ್ಲಿನ ಸಾಧಕರಿಗೆ ಗೌರವಿಸುವ ಮೂಲಕ ಅರ್ಥಪೂರ್ಣವಾಗಿ ಇಂದು ಮುಧೋಳ ಪರಿವಾರ ಜನ್ಮ ದಿನಾಚರಣೆ ಮಾಡುತ್ತಿರುವುದು ಸಂತೋಷದ ಸಂಗತಿಯಾಗಿದೆ ಎಂದರು.

ಇಂದು ಬೆಂಗಳೂರಂತ ನಗರದಲ್ಲಿ ಕೇವಲ ಕೆಲಸ ಅರಸಿ ಹೋಗಿ ಇಂದು ಸುಮಾರ 18 ಸಾವಿರ ಮನೆಗಳನ್ನು ನಿರ್ಮಿಸುವ ಮೂಲಕ ಮದ್ಯಮ ವರ್ಗದ ಜನರಿಗೆ ಮನೆಯ ಕನಸನ್ನು ನನಸು ಮಾಡುವ ಮೂಲಕ ಇಂದು ಎಲ್ಲರಿಗೂ ಸಹೋದರ ಡಿಎಸ್ ಮ್ಯಾಕ್ಸ್‍ನ ನಿರ್ದೇಶಕರಾದ ಸಹೋದ ಎಸ್.ಪಿ ದಯಾನಂದ ಇಂದಿನ ಎಲ್ಲ ಸಾಧಕರಿಗೆ ಮಾದರಿಯಾಗಿದ್ದಾರೆ ಎಂದರು.ಕೋವಿಡ್ ಸಂದರ್ಭದಲ್ಲಿ ಎಲ್ಲರು ತಮ್ಮ ಸಂಸ್ಥೆಗಳಲ್ಲಿ ಕೆಲಸ ಮಾಡುವವರಿಗೆ ಕೈಬಿಟ್ಟರೆ ದಯಾನಂದ ಅವರು ಸುಮಾರು 30 ಸಾವಿರ ಜನರಿಗೆ ಕೋವಿಡ್ ಸಂದರ್ಭದಲ್ಲಿ ನೆವಾಗುವ ಮೂಲಕ ನಾಡು,ದೇಶ ಮಾತ್ರವಲ್ಲದೆ ಜಗತ್ತಿಗೆ ಮಾದಿಯಾಗಿದ್ದಾರೆ ಎಂದರು.

ಡಿಎಸ್ ಮ್ಯಾಕ್ಸ್ ನಿರ್ದೇಶಕ ಎಸ್.ಪಿ ದಯಾನಂದ ಅವರು ಮಾತನಾಡಿ,ನನ್ನ ಸಹೋದರ ಬಸವರಾಜ ತನ್ನ ಸುಪುತ್ರಿಯ ಜನ್ಮ ದಿನವನ್ನು ಸರಳವಾಗಿ ಆಚರಣೆ ಮಾಡುತ್ತಾನೆ ಎಂದು ಭಾವಿಸಿದ್ದೆ,ಆದರೆ ಇಂದು ವಿವಿಧ ರಂಗದಲ್ಲಿ ಸಾಧನೆ ಮಾಡಿದವರಿಗೆ ಸನ್ಮಾನಿಸಿ ಗೌರವಿಸುವ ಮೂಲಕ ಇತರರಿಗೆ ಮಾದರಿಯಾಗಿದ್ದಾನೆ ಎಂದರು.ಅಲ್ಲದೆ ಇಂದು ನಾವು ಏನು ಸಾಧನೆ ಮಾಡಿಲ್ಲ ಸೇವೆ ಎಂದು ಭಾವಿಸಿ ಸಾಧ್ಯವಾದ ಮಟ್ಟಿಗೆ ನೆರವಾಗುತ್ತಿದ್ದೆವೆ,ಮುಂದೆಯೂ ನಮ್ಮ ಭಾಗದ ಜನರ ಅಭಿವೃಧ್ಧಿಗಾಗಿ ಅನೇಕ ಕಾರ್ಯಗಳನ್ನು ಮಾಡುವ ಯೋಜನೆ ಹೊಂದಲಾಗಿದೆ.ಅದಕ್ಕೆ ನಮ್ಮ ಭಾಗದ ಜನರು ಸದಾ ನೆರವಾಗುವಂತೆ ಮನವಿ ಮಾಡಿದರು.

ಇದೇ ಸಂದರ್ಭದಲ್ಲಿ ರಾಜನಕೊಳೂರಿನ ಮೊರಾರ್ಜಿದೇಸಾಯಿ ವಸತಿ ಶಾಲೆ ಮಕ್ಕಳು ಕಬಡ್ಡಿ ಕ್ರೀಡೆಯಲ್ಲಿ ರಾಜ್ಯ ಮಟ್ಟದಲ್ಲಿ ತೃತಿಯ ಸ್ಥಾನ ಪಡೆದಿದ್ದರಿಂದ ಸನ್ಮಾನಿಸಲಾಯಿತು.ಅದರಂತೆ ಹತ್ತನೆ ತರಗತಿಯಲ್ಲಿ ಉತ್ತಮ ಅಂಕ ಪಡೆದ ವಿದ್ಯಾರ್ಥಿಗಳಿಗೆ,ಭಾರತೀಯ ಸೇನೆಯ ಯೋಧ ರಂಗಪ್ಪ ಕವಲಿಗೆ,ಪತ್ರಕರ್ತರಿಗೆ ಸನ್ಮಾನಿಸಿ ಗೌರವಿಸಲಾಯಿತು.ಅಲ್ಲದೆ ಜ್ಞಾನೋದಯ ಹಾಗೂ ನರಸಿಂಗಪೇಟ ಶಾಲೆಯ ಮಕ್ಕಳಿಗೆ ಬ್ಯಾಗ್ ಸೇರಿದಂತೆ ವಿವಿಧ ಕಲಿಕಾ ಸಾಮಗ್ರಿಗಳನ್ನು ವಿತರಿಸಲಾಯಿತು.

ಕಾರ್ಯಕ್ರಮದ ವೇದಿಕೆ ಮೇಲೆ ಮಾಜಿ ಜಿ.ಪಂ ಅಧ್ಯಕ್ಷ ರಾಜಾ ಹನುಮಪ್ಪ ನಾಯಕ (ತಾತಾ),ಡಿವೈಎಸ್ಪಿ ಡಾ:ಮಂಜುನಾಥ ಟಿ,ಟಿಹೆಚ್‍ಓ ಡಾ:ಆರ್.ವಿ ನಾಯಕ,ನಮ್ಮ ಕರ್ನಾಟಕ ಸೇನೆ ರಾಜ್ಯಾಧ್ಯಕ್ಷ ಬಸವರಾಜ ಪಡಕೋಟೆ,ಮಲ್ಲಿಕಾರ್ಜುನ ಸಾಹು ಮುಧೋಳ,ಬಸವರಾಜ ಮುಧೋಳ,ಸೇರಿದಂತೆ ಅನೇಕ ಮುಖಂಡರು ವೇದಿಕೆ ಮೇಲಿದ್ದರು.ಅಮರಯ್ಯಸ್ವಾಮಿ ಜಾಲಿಬೆಂಚಿ ಕಾರ್ಯಕ್ರಮವನ್ನು ನಿರೂಪಿಸಿ ವಂದಿಸಿದರು.

emedialine

Recent Posts

371 (ಜೆ) ವಿಧಿಯ ನಿಬಂಧನೆಗಳ ಪರಿಣಾಮಕಾರಿ ಅನುμÁ್ಠನಕ್ಕೆ ಒತ್ತಾಯ

ಕಲಬುರಗಿ: ಹೈದ್ರಾಬಾದ್ ಕರ್ನಾಟಕ ಹೋರಾಟ ಸಮಿತಿಯು, ಬೆಂಗಳೂರಿನಲ್ಲಿ ಕಲ್ಯಾಣ ಕರ್ನಾಟಕ ಭಾಗದ ಚುನಾಯಿತ ಪ್ರತಿನಿಧಿಗಳು ಮತ್ತು ಸಚಿವರ ಸಭೆ ನಡೆಸಿ,…

4 mins ago

ಮರಗಮ್ಮ ದೇವಿ ಮೂರ್ತಿ ಗಂಗಾಸ್ನಾನ | ಎಂಟು ಗಂಟೆಗಳ ಕಾಲ ಮೆರವಣಿಗೆ

ಸುರಪುರ: ಇಲ್ಲಿಯ ರಂಗಂಪೇಟೆ-ತಿಮ್ಮಾಪುರದ ಆರಾಧ್ಯ ದೇವತೆ ಮರಗಮ್ಮ ದೇವಿಯ ನೂತನ ಮೂರ್ತಿ ಪ್ರತಿಷ್ಠಾಪನೆ ಅಂಗವಾಗಿ ದೇವಿಯ ಬೆಳ್ಳಿಯ ಮೂರ್ತಿ ಗಂಗಾಸ್ನಾನ…

9 mins ago

ಒತ್ತಡ ನಿಭಾಯಿಸಲು ಪರಿಹಾರ ಒದಗಿಸುವುದು ಯುವ ಸ್ಪಂದನೆ ಉದ್ದೇಶ

ಸುರಪುರ: ಯುವ ಸಬಲೀಕರಣ, ಅರೋಗ್ಯ ಜೀವನಶೈಲಿ,ಲೈಂಗಿಕತೆ ಮತ್ತು ಪ್ರಸ್ತುತ ದಿನಗಳಲ್ಲಿ ವಿದ್ಯಾರ್ಥಿಗಳು ನಿಭಾಯಿಸುತ್ತಿರುವ ಸವಾಲುಗಳು, ಭಾವನಾತ್ಮಕ ಸಮಸ್ಯೆಗಳು ಭಾವನೆಗಳ ನಿಭಾಯಿಸುವಿಕೆ,ನೆನಪಿನ…

13 mins ago

ಶಹಾಬಾದ: ಸಂಪೂರ್ಣತಾ ಅಭಿಯಾನ ಉತ್ಸವಕ್ಕೆ ಚಾಲನೆ

ಶಹಾಬಾದ: ನೀತಿ ಆಯೋಗವು ಮಾನವ ಅಭಿವೃದ್ಧಿ ಸೂಚಕಗಳಲ್ಲಿ ಹಿಂದುಳಿದ ತಾಲೂಕಗಳಿಗೆ ಆರೋಗ್ಯ, ಪೆÇೀಷಣೆ, ಕೃಷಿ ಮೇಲೆ ಕೇಂದ್ರೀಕರಿಸಿದ ಸಂಪೂರ್ಣತಾ ಅಭಿಯಾನ…

17 mins ago

ಗಿಡ-ಮರಗಳ ಸಂರಕ್ಷಣೆ ಮಾಡದಿದ್ದರೇ ಪ್ರಕೃತಿಗೆ ಗಂಡಾಂತರ ತಪ್ಪಿದ್ದಲ್ಲ

ಶಹಾಬಾದ: ಕೇವಲ ಒಂದು ದಿನ ವನಮಹೋತ್ಸವ ಪರಿಸರ ದಿನಾಚರಣೆಯಂತಹ ಕಾರ್ಯಕ್ರಮ ಮಾಡಿದರೆ ಸಾಲದು, ಬದಲಾಗಿ ಗಿಡ-ಮರಗಳ ಸಂರಕ್ಷಣೆ ಮಾಡುವುದು ಅವಶ್ಯವಾಗಿದೆ.…

20 mins ago

ಬಡವರ ಪರವಾಗಿ ಕೆಲಸ ಮಾಡಿದ ದೀಮಂತ ನಾಯಕ ಬಾಬು ಜಗಜೀವನರಾಮ

ಶಹಾಬಾದ: ತುಳಿತಕ್ಕೆ ಒಳಗಾದವರ ಹಾಗೂ ಬಡವರ ಪರವಾಗಿ ಕೆಲಸ ಮಾಡಿದ ದೀಮಂತ ನಾಯಕ ಬಾಬು ಜಗಜೀವನರಾಮರಾಗಿದ್ದರು ಎಂದು ಕಾರ್ಮಿಕ ಪ್ರಧಾನ…

28 mins ago