ಬಿಸಿ ಬಿಸಿ ಸುದ್ದಿ

ಕಲಬುರಗಿ: ಕೇಂದ್ರ ವಿಶ್ವವಿದ್ಯಾಲಯ ವಿರುದ್ಧ ವಿದ್ಯಾರ್ಥಿಗಳಿಂದ ಪ್ರತಿಭಟನೆ

ಕಲಬುರಗಿ: ಎಮ್ ಎಚ್ ಆರ್ ಡಿ ಸುತ್ತೋಲೆಯ ವಿರುದ್ಧವಾಗಿ ಕೇಂದ್ರ ವಿಶ್ವವಿದ್ಯಾಲಯವು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಜನರಲ್ ಫೀಸ್ ಅನ್ನು ಕಟ್ಟುವಂತೆ ಒತ್ತಾಯ ಮಾಡುತ್ತಿರುವುದನ್ನು ವಿರೋಧಿಸಿ ಇಲ್ಲಿನ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ವಿದ್ಯಾರ್ಥಿ ಒಕ್ಕೂಟ ಕೇಂದ್ರೀಯ ವಿಶ್ವವಿದ್ಯಾಲಯ ಆವರಣದಲ್ಲಿ ಪ್ರತಿಭಟನೆಯನ್ನು ನಡೆಸಿದರು.

ಕೇಂದ್ರ ವಿಶ್ವವಿದ್ಯಾಲಯದಲ್ಲಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ಹಾಗೂ ಇತರೆ ವಿದ್ಯಾರ್ಥಿಗಳು ಬಡತನ ರೇಖೆಯ ಕೆಳಗೆನಿಂದ ಬಂದ ವಿದ್ಯಾರ್ಥಿಗಳಾಗಿದ್ದು, ಸಿಕ್ಕ ಅವಕಾಶಕ್ಕಾಗಿ ಕೇಂದ್ರೀಯ ವಿಶ್ವವಿದ್ಯಾಲಯದಲ್ಲಿ ಉನ್ನತ ವಿದ್ಯಾಭ್ಯಾಸ ಮಾಡುತ್ತಿದ್ದಾರೆ. ಎಸ್ ಸಿ ಎಸ್ ಟಿ ಸೌಲಭ್ಯದ ಅಡಿಯಲ್ಲಿ ತಮ್ಮ ಉನ್ನತ ಶೈಕ್ಷಣಿಕ ಸೌಲಭ್ಯಗಳನ್ನು ಪಡೆದುಕೊಂಡು ಜೀವನಮಟ್ಟ ಸುಧಾರಿಸುವ ನಿಟ್ಟಿನಲ್ಲಿ ಕೇಂದ್ರ ವಿಶ್ವವಿದ್ಯಾಲಯದಲ್ಲಿ ವಿದ್ಯಾಭ್ಯಾಸ ಮಾಡುತ್ತಿ ಕೇಂದ್ರ ವಿಶ್ವವಿದ್ಯಾಲಯವು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಜನರಲ್ ಫೀಸ್ ಅನ್ನು ಕಟ್ಟುವಂತೆ ಒತ್ತಾಯ ಮಾಡುತ್ತಿದ್ದು ಇದು ಎಮ್ ಎಚ್ ಆರ್ ಡಿ ಸುತ್ತೋಲೆಯ ವಿರುದ್ಧವಾಗಿದೆ ಎಂದು ಹೋರಾಟ ನಿರತ ವಿದ್ಯಾರ್ಥಿಗಳು ಆಕ್ರೋಶ ವ್ಯಕ್ತಪಡಿಸಿದರು.

ಎಂಟು ಲಕ್ಷಕಿಂತ ಕಡಿಮೆ ಆದಾಯ ಇರುವ ಯಾವುದೆ ಜಾತಿ ಧರ್ಮದ ಭೇದವಿಲ್ಲದೆ ಎಲ್ಲ ಮಹಿಳೆಯರಿಗು ಉಚಿತ ಶಿಕ್ಷಣ ನೀಡಬೇಕೆಂದು ನಿಯಮವಿದ್ದರೂ ಅವರಿಗು ಫೀಸ್ ಕಟ್ಟಿಸಿಕೊಳ್ಳಲಾಗುತ್ತಿದೆ. ಕೇಂದ್ರ ವಿಶ್ವವಿದ್ಯಾಲಯದಿಂದ ಪ್ರಕಟವಾದ ಜಾಹೀರಾತಿನ ಪ್ರಕಾರ ಮೆಸ್ಸಿನ ಮತ್ತು ಪ್ರವೇಶಾತಿ ಶುಲ್ಕವು ವಿನಾಯತಿ ಇರುವುದೆಂದು ತಿಳಿಸುತ್ತಾರೆ ಆದರೆ ಇಲ್ಲಿ ಇಲ್ಲಿಯವರೆಗೂ ಯಾವುದೇ ವಿನಾಯತಿಯನ್ನು ನೀಡದೆ ರಿಸರ್ವೇಶನ್ ಪಾಲಿಸಿಯನ್ನು ಉಲ್ಲಂಘನೆ ಮಾಡಿರುತ್ತಾರೆ ಎಂದು ಆರೋಪಿಸಿದ್ದಾರೆ.

ಕೇಳಲು ಪ್ರಶ್ನಿಸಿದ ವಿದ್ಯಾರ್ಥಿಗಳು ಪ್ರತಿಭಟನೆಗೆ ಕುಳಿತಿದ್ದನ್ನು ನೋಡದೆ ತುಳಿದುಕೊಂಡು ಹೋಗಿ ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಅಪಮಾನಿದಲಾಗಿದೆ. ಮೊದಲೇ ಎಲ್ಲಾ ವಿಷಯಗಳನ್ನು ಕುಲಸಚಿವರ ಗಮನಕ್ಕೆ ತರಲಾಗಿದ್ದು ಯಾವುದೇ ರೀತಿಯ ಕ್ರಮ ಕೈಗೊಳ್ಳದ ಕಾರಣ ಇಂದು ಪ್ರತಿಭಟನೆಯ ಮೂಲಕ ನಮ್ಮ ಬೇಡಿಕೆಗಳನ್ನು ಈಡೇರಿಸುವಂತೆ ಮಾನ್ಯ ಕುಲ ಸಚಿವರಿಗೆ ಮನವಿ ಸಲ್ಲಿಸಲಾಯಿತು.

ಪ್ರತಿಭಟನೆಯಲ್ಲಿ ಪಿ ನಂದಕುಮಾರ ,ಮಂಜುನಾಥ, ಹರಿಕೃಷ್ಣ, ರಮೇಶ, ದೀಪಿಕಾ, ವಿಜಯಲಕ್ಷ್ಮಿ ಮುಂತಾದವರು ಇದ್ದರು.

emedialine

Recent Posts

ನ್ಯಾಯವಾದಿ ವಿನೋದ ಕುಮಾರ ಎಸ್. ಜೇ. ನಾಮಪತ್ರ ಸಲ್ಲಿಕೆ

ಕಲಬುರಗಿ: ವೀರಶೈವ ಮಹಾಸಭಾದ ಜಿಲ್ಲಾ ಘಟಕದ ಚುನಾವಣೆಯ ನಾಮಪತ್ರ ಸಲ್ಲಿಕೆಗೆ ಕೊನೆ ದಿನವಾಗರುವ ಇಂದು 2024-2029 ಸಾಲಿನ, ಜಿಲ್ಲಾ ಘಟಕಕ್ಕೆ…

7 hours ago

13 ಫಲಾನುಭವಿ ಆಧಾರಿತ ಯೋಜನೆಗಳಡಿ ಸೌಲಭ್ಯ ಪಡೆಯಲು ಆನ್‍ಲೈನ್ ಮೂಲಕ ಅರ್ಜಿ ಆಹ್ವಾನ

ಕಲಬುರಗಿ: ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ವತಿಯಿಂದ 2024-25ನೇ ಸಾಲಿಗೆ ಈ ಕೆಳಕಂಡ 13 ಫಲಾನುಭವಿ ಆಧಾರಿತ…

8 hours ago

ಕಾರ್ಮಿಕರ ಸಚಿವರ ಕಲಬುರಗಿ ಪ್ರವಾಸ ರದ್ದು

ಕಲಬುರಗಿ: ರಾಜ್ಯದ ಕಾರ್ಮಿಕ ಸಚಿವರಾದ ಸಂತೋಷ ಎಸ್. ಲಾಡ್ ಅವರು ಜುಲೈ 5 ರಂದು ಶುಕ್ರವಾರ ಕೈಗೊಳ್ಳಬೇಕಿದ್ದ ಕಲಬುರಗಿ ಜಿಲ್ಲಾ…

8 hours ago

ರಾಜ್ಯ-ಕೇಂದ್ರ ಸರ್ಕಾರದ ಸಹಭಾಗಿತ್ವದಲ್ಲಿ ಕಾಶಿ ಮಾದರಿಯಲ್ಲಿ ದತ್ತನ‌ ಕ್ಷೇತ್ರ ಅಭಿವೃದ್ಧಿ

ಕರ್ನಾಟಕ‌ ವಿಧಾನಸಭೆ ಅರ್ಜಿಗಳ ಸಮಿತಿಯಿಂದ ಗಾಣಗಾಪುರ ದೇವಸ್ಥಾನ ಅಭಿವೃದ್ಧಿ ಕುರಿತು ಚರ್ಚೆ ಕೇಂದ್ರಕ್ಕೆ ಸಮಿತಿ ನಿಯೋಗ ತೆರಳಲು ನಿರ್ಧಾರ ಕಲಬುರಗಿ;…

8 hours ago

ಚಿಂಚೋಳಿ: ಶರಣು ಪಾಟೀಲ್ ಮೋತಕಪಲ್ಲಿ ನಾಮಪತ್ರ ಸಲ್ಲಿಕೆ

ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾ ಚುನಾವಣೆ ಚಿಂಚೋಳಿ: ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭೆಗೆ ಇದೆ 21 ರಂದು…

9 hours ago

ಹೊರಗುತ್ತಿಗೆ ನೇಮಕಾತಿ ಮೀಸಲಾತಿ ಅಳವಡಿಸುವಲ್ಲಿ ತಿದ್ದು ಪಡಿಗೆ ಆಗ್ರಹಿಸಿ ಪ್ರತಿಭಟನೆ

ಕಲಬುರಗಿ: ಹೊರಗುತ್ತಿಗೆ ನೇಮಕಾತಿ ಮೀಸಲಾತಿ ಅಳವಡಿಸುವಲ್ಲಿ ಈ ಕೆಳಕಂಡತೆ ತಿದ್ದು ಪಡಿ ಮಾಡಿ ಅನುಷ್ಠಾನಗೊಳಿಸುವಂತೆ ಆಗ್ರಹಿಸಿ ದಲಿತ ಹಕ್ಕುಗಳ ಸಮಿತಿ,…

10 hours ago