ಸದಸ್ಯರು ಬೇಟೆ ಪಾಲದಂತೆ ಅನುದಾನ ಹಂಚಿಕೊಳ್ಳುವ ಬದಲು ಅಭಿವೃಧ್ಧಿಗೆ ದೊಡ್ಡತನ ತೋರಿ

ಸುರಪುರ: ಎಲ್ಲಾ ಸದಸ್ಯರು ಬರುವ ಅನುದಾನವನ್ನು ನನಗಿಷ್ಟು ಎಂದು ಬೇಟೆ ಪಾಲದಂತೆ ಹಂಚಿಕೊಳ್ಳುವ ಬದಲು ಎಲ್ಲಿ ಸಮಸ್ಯೆ ಇದೆ ಅದರ ನಿವಾರಣೆಗೆ ಅನುದಾನವನ್ನು ಬಿಟ್ಟು ಕೊಡುವುದರ ಮೂಲಕ ಅಭಿವೃಧ್ಧಿಗೆ ಸಹಕರಿಸುವಂತೆ ಶಾಸಕರು ಹಾಗೂ ಕರ್ನಾಟಕ ನಗರ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ ಅಧ್ಯಕ್ಷ ನರಸಿಂಹ ನಾಯಕ (ರಾಜುಗೌಡ) ತಿಳಿಸಿದರು.

ನಗರಸಭೆಯಲ್ಲಿ ನಡೆದ ಸಾಮಾನ್ಯ ಸಭೆಯಲ್ಲಿ ಭಾಗವಹಿಸಿ ಮಾತನಾಡಿದರು.

ಈ ಸಂದರ್ಭದಲ್ಲಿ ನಗರಸಭೆ ವಿರೋಧ ಪಕ್ಷದ ನಾಯಕ ರಾಜಾ ಪಿಡ್ಡನಾಯಕ (ತಾತಾ) ನಗರದಲ್ಲಿ ಕುಡಿಯುವ ನೀರಿನ ಸಮಸ್ಯೆ ತುಂಬಾ ಆಗುತ್ತಿದೆ ಎಂದಾಗ ಶೀಘ್ರದಲ್ಲಿ ನೂತನವಾಗಿ ನಿರ್ಮಿಸಿರುವ ಕುಡಿಯುವ ನೀರಿನ ಕಾಮಗಾರಿ ಮುಗಿದಿದ್ದು ಇನ್ನೆರಡು ವಾರಗಳಲ್ಲಿ ಎಲ್ಲಾ ಮನೆಗಳಿಗೆ ಕುಡಿಯುವ ನೀರು ಸರಬರಾಜು ಆರಂಭವಾಗಲಿದೆ,ಉನ್ನತ ತಂತ್ರಜ್ಞಾನ ಅಳವಡಿಸಿರುವ ಹಗಲಿರಳು ಶುದ್ಧ ಕುಡಿಯುವ ನೀರು ಸರಬರಾಜು ಮಾಡಲಾಗುತ್ತಿದೆ,ದೇಶದಲ್ಲಿಯೇ ಕಾಮಗಾರಿ ಆರಂಭಗೊಳಿಸಿದ ಅತ್ಯಂತ ಕಡಿಮೆ ಅವಧಿಯಲ್ಲಿ ಕಾಮಗಾರಿ ಮುಗಿಸಿದ ಕೀರ್ತಿ ನಮ್ಮ ಸುರಪುರಕ್ಕಿದೆ,ಕಾಮಗಾರಿಯನ್ನು ವೀಕ್ಷಿಸಲು ಬೇರೆ ರಾಜ್ಯದವರು ನಮ್ಮಲ್ಲಿಗೆ ಬರಲಿದ್ದಾರೆ ಎಂದರು.

ಅಲ್ಲದೆ ಕುಡಿಯುವ ನೀರಿನ ಕಾಮಗಾರಿ ಸಂದರ್ಭದಲ್ಲಿ ಜನರ ಓಡಾಟಕ್ಕೆ ಎಷ್ಟೇ ಸಮಸ್ಯೆಯಾದರೂ ತಾವೆಕ್ಕ ಸದಸ್ಯರು ಮತ್ತು ಜನರು ಒಂದು ದಿನವೂ ವಿರೋಧ ವ್ಯಕ್ತಪಡಿಸಿಲ್ಲ ಅದಕ್ಕಾಗಿ ಎಲ್ಲರಿಗೂ ಕರತಜ್ಞತೆ ಅರ್ಪಿಸುವುದಾಗಿ ತಿಳಿಸಿದರು.ಅಲ್ಲದೆ ಮೊದಲು ಪ್ರತಿ ಮನೆಗಳಿಗೆ ನೀರು ಸರಬರಾಜು ಆರಂಭಿಸಿ ನಂತರ ಯಾವುದೇ ಸಮಸ್ಯೆ ಇಲ್ಲ ಎಂದಾದ 15 ದಿನದ ನಂತರ ಉದ್ಘಾಟನೆ ಮಾಡುವುದಾಗಿ ತಿಳಿಸಿದರು.

ಪ್ರತಿ ಕುಟುಂಬಕ್ಕೆ 56 ರೂಪಾಯಿಯಲ್ಲಿ 8 ಸಾವಿರ ಲೀಟರ್ ನೀರು ದೊರೆಯಲಿದೆ,ಇದರ ನಂತರದ ಪ್ರತಿ ಸಾವಿರ ಲೀಟರ್‍ಗೆ 8 ರೂ ದಲ್ಲಿ ದೊರೆಯಲಿದೆ ಎಂದರು.ನಂತರ ಕೆಲ ಸದಸ್ಯರು ಕಾಮಗಾರಿಗಾಗಿ ರಸ್ತೆ ಅಗೆದಿದ್ದು ಓಡಾಟಕ್ಕೆ ತೊಂದರೆಯಾಗಲಿದೆ ಎಂದಾಗ ಶೀಘ್ರದಲ್ಲಿ ಸಿಮೆಂಟ್ ರಸ್ತೆ ಮಾಡಿಸುವುದಾಗಿ ಭರವಸೆ ನೀಡಿದರು.

emedialine

Recent Posts

ಗುರುರಾಜ ಕರ್ಜಗಿಯನ್ನು ಶೈಕ್ಷಣಿಕ ಗುಣಮಟ್ಟ ಸುಧಾರಣಾ ಸಮಿತಿಯಿಂದ ಕೈಬಿಡಲು ಎಸ್ಎಫ್ಐ ಆಗ್ರಹ

ಕಲಬುರಗಿ: ಕಲ್ಯಾಣ ಕರ್ನಾಟಕದ ಶೈಕ್ಷಣಿಕ ಗುಣಮಟ್ಟ ಸುಧಾರಣೆಗಾಗಿ ಕೆ.ಕೆ.ಆರ್.ಡಿ.ಬಿ ಯು ಸಮಿತಿಯೊಂದನ್ನು ರಚಿಸಿ, ಗುರುರಾಜ ಕರ್ಜಗಿ ಅವರನ್ನು ಅಧ್ಯಕ್ಷರನ್ನಾಗಿ ಮಾಡಿರುವ…

6 hours ago

ಕಲಬುರಗಿ; ರಾಜ್ಯ ತಳವಾರ ಮಹಾಸಭಾ ಜಿಲ್ಲಾ ಘಟಕದ ನೂತನ ಪದಾಧಿಕಾರಿಗಳ ಆಯ್ಕೆ

ಕಲಬುರಗಿ; ಕನಾ೯ಟಕ ರಾಜ್ಯ ತಳವಾರ ಮಹಾಸಭಾ ಕಲಬುರಗಿ ಜಿಲ್ಲಾಧ್ಯಕ್ಷರಾದ ಚಂದ್ರಕಾಂತ ದಶರಥ ತಳವಾರ ಅವರ ಅಧ್ಯಕ್ಷತೆಯಲ್ಲಿ ಇಂದು ಆನಂದ ನಿಲಯ…

9 hours ago

ಕೈಗಾರಿಕೆ ಪ್ರದೇಶಗಳಿಗೆ ಭೇಟಿ ನೀಡಿ ಉದ್ಯಮಿಗಳ ಅಹವಾಲು ಆಲಿಸಿದ ಬಿ.ಫೌಜಿಯಾ ತರನ್ನುಮ್

ಕಲಬುರಗಿ; ಜಿಲ್ಲಾಧಿಕಾರಿ ಬಿ. ಫೌಜಿಯಾ ತರನ್ನುಮ್ ಅವರು ಶನಿವಾರ ಶಹಾಬಾದ ರಸ್ತೆಯಲ್ಲಿರುವ ನಂದೂರ-ಕೆಸರಟಗಿ ಮತ್ತು ಹುಮನಾಬಾದ ರಸ್ತೆಯಲ್ಲಿರುವ ಕಪನೂರ ಕೈಗಾರಿಕಾ…

9 hours ago

ಸಿಎಂ ರಾಜೀನಾಮೆ ಕೇಳುತ್ತಿರುವ ಬಿಜೆಪಿ -ಜೆಡಿಎಸ್‍ಗೆ ಯಾವುದೇ ನೈತಿಕತೆಯಿಲ್ಲ

ಶಹಾಬಾದ: ಕರ್ನಾಟಕದ ಬಹುಮತ ಸರಕಾರವನ್ನು ಬೀಳಿಸಲು ಇಲ್ಲಸಲ್ಲದ ಆರೋಪ ಮಾಡುವ ಮೂಲಕ ಸಿಎಂ ರಾಜೀನಾಮೆಗೆ ಒತ್ತಾಯ ಮಡುತ್ತಿರುವ ಬಿಜೆಪಿ ಹಾಗೂ…

9 hours ago

ಜೆಜೆಎಂ ಕಾಮಗಾರಿ ಗುಣಮಟ್ಟದಿಂದ ಕೂಡಿರಲಿ

ಶಹಾಬಾದ:ಪ್ರತಿ ಮನೆಗೂ ನೀರು ದೊರಿಸಿಕೊಡುವ ಉದ್ದೇಶದಿಂದ ನಡೆಯುವ ಜೆಜೆಎಂ ಕಾಮಗಾರಿ ಗುಣಮಟ್ಟದಿಂದ ಕೂಡಿರಬೇಕೆಂದು ಕಾಂಗ್ರೆಸ್ ಮುಖಂಡ ಮೃತ್ಯುಂಜಯ್ ಹಿರೇಮಠ ಹೇಳಿದರು.…

9 hours ago

ಅ.13, 14 ರಂದು ಧಮ್ಮ ಕ್ರಾಂತಿ ಉತ್ಸವ : ಪೂರ್ವಭಾವಿ ಸಭೆ

ಶಹಾಬಾದ :ನಗರದ ಬೌದ್ಧ ವಿಹಾರದಲ್ಲಿ ರವಿವಾರ ಹಮ್ಮಿಕೊಂಡ 68ನೇ ಧಮ್ಮಚಕ್ರ ಪ್ರವರ್ತನಾ ದಿನದ ಅಂಗವಾಗಿ ಕಲಬುರ್ಗಿಯಲ್ಲಿ ಅ.13 ಮತ್ತು 14…

9 hours ago

Notice: ob_end_flush(): Failed to send buffer of zlib output compression (0) in /home3/emedixap/public_html/wp-includes/functions.php on line 5420