ಕಲಬುರಗಿ: ಜಿಲ್ಲೆಯ ಕಾಳಗಿ ತಾಲೂಕಿನ ಕನ್ನಡಪರ ಸಂಘಟನೆಗಳ ಒಕ್ಕೂಟ ಮತ್ತು ದಕ್ಷಿಣ ಕಾಶಿ ಸಾಹಿತ್ಯ ಮತ್ತು ಸಾಂಸ್ಕೃತಿಕ ವೇದಿಕೆ ವತಿಯಿಂದ 67ನೇ ಕರ್ನಾಟಕ ರಾಜ್ಯೋತ್ಸವ ಆಚರಣೆ ಮಾಡಲಾಯಿತು.
ಈ ಸಂದರ್ಭದಲ್ಲಿ ತಾಯಿ ಭುವನೇಶ್ವರಿ ಭಾವಚಿತ್ರ ಹಾಗೂ ಕಾಳಗಿಯ ಐತಿಹಾಸಿಕ ಸ್ಥಳಗಳ ಭೀತಿಚಿತ್ರಗಳನ್ನು ಪಟ್ಟಣದ ಪ್ರಮುಖ ಬೀದಿಗಳಲ್ಲಿ ಮೆರವಣಿಗೆ ಮಾಡಲಾಯಿತು.7 ಮೀಟರ್ ಕನ್ನಡ ಬಾವುಟ ಶೋಭಾ ಯಾತ್ರೆ ಮಾಡಲಾಯಿತು, ಹಾಗೆ ವಿಶೇಷ ಸಾಧಕರಿಗೆ ತಾಲೂಕ ರಾಜ್ಯೋತ್ಸವ ಪ್ರಶಸ್ತಿ ಪ್ರಧಾನ, ಕನ್ನಡದಲ್ಲಿ ಅತಿ ಹೆಚ್ಚು ಅಂಕ ಪಡೆದ ಕಾಳಗಿ ಪಟ್ಟಣದ ವಿದ್ಯಾರ್ಥಿಗಳಿಗೆ ವಿಶೇಷ ಸನ್ಮಾನ ಮಾಡಲಾಯಿತು.
ಈ ಕಾರ್ಯಕ್ರಮಕ್ಕೆ ದಿವ್ಯ ಸಾನಿಧ್ಯ ಪೂಜ್ಯಶ್ರೀ ನೀಲಕಂಠ ಮರಿ ದೇವರು ವಹಿಸಿಕೊಂಡರು. ಈ ಕಾರ್ಯಕ್ರಮವನ್ನು ಉದ್ದೇಶಿಸಿ ಶಾಸನ ಸಂಶೋಧಕರು ಧಾರವಾಡ ಶ್ರೀಮತಿ ಹನುಮಾಕ್ಷಿ ಗೋಗಿ ಮಾತನಾಡಿದರು. ಹಾಗೆ ಕಾಂಗ್ರೆಸ್ ಮುಖಂಡರು ಚಿಂಚೋಳಿ ಸುಭಾಷ್ ರಾಥೋಡ ಮಾತನಾಡಿದರು.
ಈ ಸಂದರ್ಭದಲ್ಲಿ ಈ ಕಾರ್ಯಕ್ರಮ ಆಯೋಜಕರಾದ ದತ್ತು ಎಸ್ ಗುತ್ತೇದಾರ, ಬಾಬು ನಾಟಿಕರ, ಪರಮೇಶ್ವರ ಕಟ್ಟಿಮನಿ, ಶಿವಕುಮಾರ ಶಾಸ್ತ್ರಿ, ಸಂತೋಷ್ ಪತಂಗೆ, ಹಾಗೂ ಗಣ್ಯ ವ್ಯಕ್ತಿಗಳಾದ ಮಲ್ಲಿನಾಥ ಪಾಟೀಲ,ವೆಂಕಟೇಶ ತೆಲಾಂಗ್, ರಾಘವೇಂದ್ರ ಗುತ್ತೇದಾರ,ಶಿವಶರಣಪ್ಪ ಕಮಲಾಪುರ, ಪ್ರಶಾಂತ್ ಕದಂ, ಹನುಮಂತಪ್ಪ ಕಾಂತಿ, ಇನ್ನು ಅನೇಕರು ಉಪಸ್ಥಿತರಿದ್ದರು.
ಕಲಬುರಗಿ: ಕಳೆದ ಅಕ್ಟೋಬರ್ 2 ರಂದು ನಗರದ ಹೊರವಲಯದ ನಂದೂರ ಕೈಗಾರಿಕಾ ಪ್ರದೇಶದ ದಾಲ್ ಮಿಲ್ ವೊಂದರಲ್ಲಿ ಅಕ್ರಮ ಅಕ್ಕಿ…
ಸುರಪುರ: ತಾಲೂಕಿನ ರುಕ್ಮಾಪುರ ಗ್ರಾಮದ ಬಣಗಾರ ಮನೆಯಲ್ಲಿ ಬನ್ನಿಮಹಾಂಕಾಳಿ ನವರಾತ್ರಿ ಉತ್ಸವದ ಅಂಗವಾಗಿ ೪೪ನೇ ವರ್ಷದ ಶ್ರೀ ದೇವಿ ಪಾರಾಯಣ…
ಕಲಬುರಗಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಧ್ವನಿ ಸಂಘ ಜಿಲ್ಲಾಮಟ್ಟದ ಪತ್ರಕರ್ತರ ಸಮಾವೇಶ ಸೆಪ್ಟೆಂಬರ್ 16ರಂದು ಅಫಜಲಪೂರ ಪಟ್ಟಣದಲ್ಲಿ ನಡೆದ ಸಂದರ್ಭದಲ್ಲಿ…
ಕಲಬುರಗಿ; ಕನ್ನಡ ಸಾಹಿತ್ಯ ಕ್ಷೇತ್ರದಲ್ಲಿ ವಿಶಿಷ್ಟ ಖ್ಯಾತಿ ಪಡೆದ ಜಿಲ್ಲೆಯ ಸೇಡಂನ ಮಾತೋಶ್ರೀ ಮಹಾದೇವಮ್ಮ ನಾಗಪ್ಪ ಮುನ್ನೂರ್ ಪ್ರತಿಷ್ಠಾನದ ವತಿಯಿಂದ…
ಚಿಂಚೋಳಿ : ಪ್ರವಾದಿ ಮಹ್ಮದ ಪೈಗಂಬರ್ ಅವರನ್ನು ಅವಮಾನಿಸಿದ ನರಸಿಂಹಾನಂದ ಸರಸ್ವತಿ ಸ್ವಾಮಿಗಳ ವಿರುದ್ಧ ಪ್ರಕರಣ ದಾಖಲಿಸಬೇಕು ಎಂದು ಆಗ್ರಹಿಸಿ…
ಕಲಬುರಗಿ: ಕಲ್ಯಾಣ ಕರ್ನಾಟಕದ ಶೈಕ್ಷಣಿಕ ಗುಣಮಟ್ಟ ಸುಧಾರಣೆಗಾಗಿ ಕೆ.ಕೆ.ಆರ್.ಡಿ.ಬಿ ಯು ಸಮಿತಿಯೊಂದನ್ನು ರಚಿಸಿ, ಗುರುರಾಜ ಕರ್ಜಗಿ ಅವರನ್ನು ಅಧ್ಯಕ್ಷರನ್ನಾಗಿ ಮಾಡಿರುವ…