ಬಿಸಿ ಬಿಸಿ ಸುದ್ದಿ

“ಕಲಬುರಗಿ ಜಿಲ್ಲೆಯಲ್ಲಿ ತೊಗರಿ ಬೆಳೆಗೆ ಕಂಡು ಬಂದಿರುವ ನೆಟೆ ರೋಗ/ಸಿಡಿ ರೋಗ, ಸೊರಗು ರೋಗ”

2022-23 ನೇ ಸಾಲಿನ ಮುಂಗಾರು ಹಂಗಾಮಿನಲ್ಲಿ ಕಲಬುರಗಿ ಜಿಲ್ಲೆಯಲ್ಲಿ 5.09 ಲಕ್ಷ ಹೆಕ್ಟರ ಪ್ರದೇಶದಲ್ಲಿ ತೊಗರಿ ಬೆಳೆಯನ್ನು ಬೆಳೆಯಲಾಗಿದ್ದು, ಈ ವರ್ಷ ಮುಂಗಾರಿನಲ್ಲಿ ಅವ್ಯಾಹತವಾಗಿ ಕಂಡುಬಂದ ಮಳೆಯಿಂದಾಗಿ ಕಾಯಿ ಬಲಿಯುವ ಹಂತದಲ್ಲಿದ್ದ ತೊಗರಿ ಬೆಳೆಗೆ ನೆಟೆ ರೋಗ ಕಂಡು ಬಂದಿರುತ್ತದೆ. ಈ ರೋಗವನ್ನು ಸಿಡಿ ರೋಗ ಅಥವಾ ಸೊರಗು ರೋಗ ಎಂತಲು ಕರೆಯಲಾಗುವುದು.

ಕಲಬುರಗಿ ಜಿಲ್ಲೆಯಲ್ಲಿ ತೊಗರಿ ನೆಟೆ ರೋಗ ಕಂಡುಬಂದ ಹಿನ್ನಲೆಯಲ್ಲಿ ಜಿಲ್ಲಾ ಜಂಟಿ ಕೃಷಿ ನಿರ್ದೇಶಕರು ಕಲಬುರಗಿ, ಉಪ ಕೃಷಿ ನಿರ್ದೇಶಕರು-1 ಕಲಬುರಗಿ, ಹಾಗೂ ಸಹಾಯಕ ಕೃಷಿ ನಿರ್ದೇಶಕರು ಕಲಬುರಗಿ ಇವರುಗಳು ವಲಯ ಕೃಷಿ ಸಂಶೋಧನಾ ಕೇಂದ್ರ ಕೃಷಿ ವಿಜ್ಞಾನಿಗಳ ತಂಡದೊಂದಿಗೆ ವೈಜ್ಞಾನಿಕ ಸಮೀಕ್ಷೆಯನ್ನು ಕೆರೆ ಭೋಸಗಾ,ಭೀಮಳ್ಳಿ,ಲಾಡ ಚಿಂಚೋಳಿ,ಆಳಂದ,ಸಾತನೂರ ಗ್ರಾಮಗಳಿಗೆ ಭೇಟಿ ನೀಡಿ, ತಾಂತ್ರಿಕ ಪರಿಶೀಲನೆ ಮಾಡಿರುವರು.

ರೋಗಕ್ಕೆ ತುತ್ತಾದ ತಾಕುಗಳಲ್ಲಿ ಗಿಡದ ಎಲೆಗಳು ಹಳದಿಯಾಗಿ, ಬಾಡಿ ಜೊತು ಬಿದ್ದು, ಒಣಗಿ ಕೆಳಗೆ ಉದರದೆ ಗಿಡಕ್ಕೆ ಅಂಟಿಕೊಂಡಿರುತ್ತವೆ. ಗಿಡದ ಬೇರುಗಳು ಪೂರ್ತಿಯಾಗಿ ಬಾಡಿರುತ್ತವೆ. ಆದರೆ ಕಾಂಡವನ್ನು ಸೀಳಿ ನೋಡಿದಾಗ ನೀರು ಸಾಗಾಣಿಕೆಯ ಅಂಗಾಂಶವು ಕಪ್ಪಾಗಿರುವುದು ನಿಖರವಾಗಿ ಕಂಡು ಬರುತ್ತದೆ. ತಂಪಾದ ವಾತಾವರಣದಲ್ಲಿ ಒಣಗಿದ ಗಿಡದ ಕಾಂಡದ ಮೇಲೆ ಗುಲಾಬಿ ಬಣ್ಣದ ಶೀಲಿಂದ್ರದ ಬೆಳವಣಿಗೆ ಕಾಣಿಸುವುದು. ಅರ್ದ ಸಿಡಿಯಾದ ಗಿಡದ ಕಾಂಡದ ಮೇಲೆ ಕಂದು ಅಥವಾ ಕಡು ನೇರಳೆ ಬಣ್ಣದ ಪಟ್ಟಿಗಳು ಭೂಮಿಯ ಮಟ್ಟದಿಂದ ಮೇಲಕ್ಕೆ ಹಬ್ಬಿರುವುದು ಕಂಡುಬರುವುದು.

ಟ್ರೈಕೋಡರ್ಮಾ ಪುಡಿ (5 ಗ್ರಾಂ ಪ್ರತಿ ಲೀಟರಗೆ ನೀರಿಗೆ) ಬೇರಿಸಿ ಸಿಂಪರಣೆಯನ್ನು ಕಾಂಡದ ಬುಡಕ್ಕೆ ಹಸಿಯಾಗುವವರೆಗೆ ಸುರಿಯುವುದು. ಅಥವಾ ಸಾಫ್ (5 ಗ್ರಾಂ ಪ್ರತಿ ಲೀಟರಗೆ ನೀರಿಗೆ) ಬೇರಿಸಿ ಸಿಂಪರಣೆಯನ್ನು ಕಾಂಡದ ಬುಡಕ್ಕೆ ಹಸಿಯಾಗುವವರೆಗೆ ಸುರಿಯುವುದು ಅಥವಾ ಸಾಧ್ಯವಾದರೆ ನೀರಾವರಿ ಸೌಲಭ್ಯವಿರುವ ಕಡೆ ಬೆಳೆಗಳಿಗೆ ನೀರು ಹರಿಸುವುದು. ರೋಗ ಪೀಡಿತ ಗಿಡಗಳನ್ನು ಕಿತ್ತು ನಾಶ ಮಾಡಬೇಕು. ಜೋಳ ಅಥವಾ ಮುಸುಕಿನ ಜೋಳ ಮತ್ತು ತೊಗರಿ ಮಿಶ್ರ/ಅಂತರ ಬೆಳೆಯಲ್ಲಿ ಸೊರಗು ರೋಗದ ಭಾದೆ ಕಡಿಮೆ ಇರುತ್ತದೆ.

emedialine

Recent Posts

ಕಲಬುರಗಿ: ಬಿಜೆಪಿ ಹಿರಿಯ ಮುಖಂಡ ಧರ್ಮಣ್ಣ ದೊಡ್ಡಮನಿ ನಿಧನ

ಕಲಬುರಗಿ: ಬಿಜೆಪಿ ಹಿರಿಯ ಮುಖಂಡ ಧರ್ಮಣ್ಣ ಇಂದು ಬೆಳಗ್ಗೆ ವಾಕಿಂಗ್ ಹೋದಾಗ ತೀವ್ರ ಹೃದಯಾಘಾತದಿಂದ ನಿಧನರಾಗಿದ್ದಾರೆ. ಕಲಬುರಗಿ ನಗರದ ಜೇವರ್ಗಿ…

1 hour ago

ಜೇವರ್ಗಿ: ಲಂಚಾಪಡೆಯುತ್ತಿದ್ದಾಗ ಮಹಿಳಾ ಸಿಬ್ಬಂದಿ ಲೋಕಾಯುಕ್ತರ ಬಲೆಗೆ

ಕಲಬುರಗಿ: ನೀರಿನ ಕನೆಕ್ಷನಗಾಗಿ ಹತ್ತು ಸಾವಿರ ಲಂಚಾಪಡೆಯುತ್ತಿದ್ದಾಗ ಜೇವರ್ಗಿ ಪುರಸಭೆಯ ಮಹಿಳಾ ಸಿಬ್ಬಂದಿ ಲಣೊಕಾಯುಕ್ತರ ಬಲೆಗೆ ಬಿದ್ದ ಘಟನೆ ಬುಧವಾರ…

13 hours ago

371 ಜೆ ಅಡಿ ಉದ್ಯೋಗ ನೇಮಕಾತಿ ಸಂಬಂಧದ ಗೊಂದಲ ನಿವಾರಿಸಿ ಮಾರ್ಗಸೂಚಿ ಸಿದ್ಧಪಡಿಸಲು ಸಚಿವರ ಸೂಚನೆ

ಬೆಂಗಳೂರು: ಕಲ್ಯಾಣ ಕರ್ನಾಟಕ ಪ್ರದೇಶದಲ್ಲಿ 371 ಜೆ ಅಡಿ ಉದ್ಯೋಗ ನೇಮಕಾತಿ ಹಾಗೂ ಬಡ್ತಿ ಸಂಬಂಧದಲ್ಲಿ ಆಗಿರುವ ಗೊಂದಲಗಳನ್ನು ನಿವಾರಿಸಿ…

15 hours ago

ಶ್ಯಾಮರಾವ ನಾಟಿಕಾರಗೆ ಅಧ್ಯಕ್ಷರನ್ನಾಗಿ ನೇಮಕಕ್ಕೆ ಡಾ. ಮಲ್ಲಿಕಾರ್ಜುನ ಖರ್ಗೆಗೆ ಮನವಿ

ಕಲಬುರಗಿ: ಆದಿಜಾಂಬವ ಸರ್ಕಾರಿ ಅರೆ ಸರ್ಕಾರಿ ನೌಕರರ ಪತ್ತಿನ ಸಹಕಾರ ಸಂಘದ ನಿಯೋಗ ನವದೆಹಲಿಯಲ್ಲಿ ಎಐಸಿಸಿ ಅಧ್ಯಕ್ಷರಾದ ಡಾ.ಮಲ್ಲಿಕಾರ್ಜುನ ಖರ್ಗೆ…

15 hours ago

ಚಿರಂಜೀವಿ ವೆಂಕಯ್ಯ ಕುಶಾಲ್ ಗುತ್ತೇದಾರ್ ಗೆ ಸನ್ಮಾನ

ಕಲಬುರಗಿ: ಮಾಜಿ ಸಚಿವರಾದ ಮಾಲಿಕೆಯ್ಯಾ ಗುತ್ತೇದಾರ್ ಅವರ ಅಪ್ಪಟ ಅಭಿಮಾನಿ ಹಾಗೂ ತಾಲೂಕ ಕನ್ನಡ ಸಾಹಿತ್ಯ ಪರಿಷತ್ತಿನ ನಿಕಟ ಪೂರ್ವ…

16 hours ago

ಮಹಿಳಾ ಘಟಕದ ನೂತನ ಪದಾಧಿಕಾರಿಗಳ ನೇಮಕ

ಕಲಬುರಗಿ: ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಜಿಲ್ಲಾಧ್ಯಕ್ಷರಾದ ಪ್ರಶಾಂತ್ ಗೌಡ ಮಾಲಿಪಾಟೀಲ್ ಅವರ ನೇತೃತ್ವದಲ್ಲಿ ಜಿಲ್ಲಾ…

16 hours ago