ಬಿಸಿ ಬಿಸಿ ಸುದ್ದಿ

ನಿಷ್ಠೆ, ಪ್ರಾಮಾಣಿಕತೆಯಿಂದ ಸೇವೆಯ ಸಾರ್ಥಕತೆ ಸಾಧ್ಯ

ಕಲಬುರಗಿ: ಸರ್ಕಾರಿ ನೌಕರಿ ಪಡೆಯುವುದು, ದೀರ್ಘ ಕಾಲ ನೌಕರಿ ಮಾಡುವುದೇ ದೊಡ್ಡ ಸಾಧನೆಯಲ್ಲ. ಬದಲಿಗೆ ದೊರೆತ ಹುದ್ದೆಗೆ ಪ್ರಾಮಾಣಿಕತೆ, ನಿಷ್ಠೆ ಹಾಗೂ ಕರ್ತವ್ಯಬದ್ಧತೆಯಿಂದ ಸೇವೆ ಸಲ್ಲಿಸುವುದು ಮುಖ್ಯ. ಅಂತಹ ಸೇವೆ ನಿಜಕ್ಕೂ ಸಾರ್ಥಕತೆ, ಆತ್ಮತೃಪ್ತಿ ಪಡೆಯಲು ಸಾಧ್ಯವಿದೆ ಎಂದು ನಿವೃತ್ತ ಉಪನ್ಯಾಸಕಿ ಚಂದ್ರಪ್ರಭ ಕಮಲಾಪುರಕರ್ ಅಭಿಪ್ರಾಯಪಟ್ಟರು.

ಜೇವರ್ಗಿ ಪಟ್ಟಣದ ಬಸವೇಶ್ವರ ವೃತ್ತದ ಸಮೀಪವಿರುವ ಸರ್ಕಾರಿ ಪಿಯು ಕಾಲೇಜಿನಲ್ಲಿ ಗುರುವಾರ ತಮಗೆ ಏರ್ಪಡಿಸಲಾಗಿದ್ದ ವಯೋನಿವೃತ್ತ ಬೀಳ್ಕೊಡುಗೆ ಸಮಾರಂಭದಲ್ಲಿ ಸನ್ಮಾನವನ್ನು ಸ್ವೀಕರಿಸಿ ಅವರು ಮಾತನಾಡುತ್ತಿದ್ದರು.

ಶಿಕ್ಷಕ ಮತ್ತು ವೈದ್ಯ ವೃತ್ತಿ ಬಹಳ ಜವಾಬ್ದಾರಿಯುತವಾಗಿದೆ. ವಿದ್ಯಾರ್ಥಿಗಳಲ್ಲಿ ದೇವರನ್ನು ಕಾಣುವ ಪ್ರವೃತ್ತಿ ಶಿಕ್ಷಕರದಾಗಿರಬೇಕು. ವಿದ್ಯಾರ್ಥಿಗಳು ಕಾಟಾಚಾರಕ್ಕೆ ಶಾಲಾ-ಕಾಲೇಜಿಗೆ ಬರದೆ, ನಿರಂತರವಾದ ಅಧ್ಯಯನ ಮಾಡಿ, ಉತ್ತಮ ಫಲಿತಾಂಶ ಪಡೆಯಬೇಕು. ತಂದೆ-ತಾಯಿ, ಗುರು-ಹಿರಿಯರಿಗೆ ಗೌರವ ನೀಡಬೇಕು. ಹುಟ್ಟು-ಸಾವಿನ ಮಧ್ಯದ ಅವಧಿಯನ್ನು ಸುವರ್ಣ ಅಕ್ಷರಗಳಲ್ಲಿ ಬರೆದಿಡುವಂತೆ ಬದುಕಿದ್ದೇ ಆದರೆ, ಅವರು ಜೀವನದ ಫಲಿತಾಂಶದಲ್ಲಿ ಉತ್ತೀರ್ಣರಾದಂತೆ ಎಂದು ಅನೇಕ ವಿಚಾರಗಳನ್ನು ಹೇಳಿದರು.

ಕಾಲೇಜಿನ ಪ್ರಾಚಾರ್ಯ ಮಹಮ್ಮದ್ ಅಲ್ಲಾಉದ್ದೀನ್ ಸಾಗರ, ಸಿಬಿಸಿ ಉಪಾಧ್ಯಕ್ಷ ರವೀಂದ್ರ ವೈ.ಕೋಳಕೂರ್ ಮಾತನಾಡುತ್ತಾ, ಕಮಲಾಪುರಕರ್ ಅವರು ಬಹಳ ಅಮೂಲ್ಯವಾದ ಸೇವೆಯಲ್ಲಿ ಸಲ್ಲಿಸಿದ್ದಾರೆ. ಅವರು ಮಾತೃಹೃದಯಿಯಾಗಿದ್ದರು. ಕರ್ತವ್ಯಬದ್ಧತೆ, ಶಿಸ್ತು, ಪ್ರಾಮಾಣಿಕ ವ್ಯಕ್ತಿ ಇವರಾಗಿದ್ದಾರೆ. ವಿದ್ಯಾರ್ಥಿಗಳ ಮನಮುಟ್ಟುವಂತೆ ಬೋಧನಾ ಕಾರ್ಯ ಮಾಡುತ್ತಿದ್ದರು. ನಾನು ಅನೇಕ ಬೀಳ್ಕೊಡುಗೆ ಸಮಾರಂಭಗಳಲ್ಲಿ ಭಾಗವಹಿಸಿದ್ದೇನೆ. ಆದರೆ ಇದೊಂದು ಅಪರೂಪದ, ಮಾದರಿ ಕಾರ್ಯಕ್ರಮವಾಗಿದೆ. ಸೇವೆಗೆ ಗೌರವ ನೀಡುವುದು ಜವಬ್ದಾರಿಯುತ ಸಮಾಜದ ಆದ್ಯ ಕರ್ತವ್ಯವಾಗಿದೆ ಎಂದರು.

ಉಪನ್ಯಾಸಕರು, ಸ್ಥಳೀಯ ಪ್ರೌಢಶಾಲೆಗಳ ಶಿಕ್ಷಕರು, ವಿದ್ಯಾರ್ಥಿಗಳಿಂದ ಅನಿಸಿಕೆ ಜರುಗಿತು. ಕಾಲೇಜಿನ ಉಪನ್ಯಾಸಕರಾದ ರವೀಂದ್ರಕುಮಾರ ಬಟಗೇರಿ, ಶರಣಮ್ಮ ಭಾವಿಕಟ್ಟಿ, ನಯಿಮಾ ನಾಹಿದ್, ಎಚ್.ಬಿ.ಪಾಟೀಲ, ಶಂಕ್ರೆಪ್ಪ ಹೊಸದೊಡ್ಡಿ, ಪ್ರಕಾಶ ಪಾಟೀಲ, ರೇಣುಕಾ ಚಿಕ್ಕಮೇಟಿ, ಪ್ರ.ದ.ಸ ನೇಸರ ಎಂ.ಬೀಳಗಿಮಠ, ನಿಯೋಜಿತ ಉಪನ್ಯಾಸಕರಾದ ಸಿದ್ದಾರೂಡ ಬಿರಾದಾರ, ದೇವೇಂದ್ರಪ್ಪ ಬಡಿಗೇರ್, ಜಮೀಲ್ ಅಹಮ್ಮದ್, ಅತಿಥಿ ಉಪನ್ಯಾಸಕರಾದ ರಂಜಿತಾ ಠಾಕೂರ್, ಸಮೀನಾ ಬೇಗಂ, ನುಝಹತ್ ಪರ್ವಿನ್ ಬೇಗಂ, ಪ್ರಮುಖರಾದ ಶೋಭಾ ಸಿ.ಹಿರೇಮನಿ, ಕಾರ್ತಿಕ ಕೋಮಟವಾರ್, ಪ್ರೀತಿ ಜೆ.ಯೆರೆಜಿನ್ನಾ, ಶಾಂತಾ ಭೀಮಶೇನರಾವ್, ಸುಜಾತಾ ದೇಶಪಾಂಡೆ, ಮಹೇಶಕುಮಾರ ಚಿಂಚೋಳಿಕರ್, ದೇವೇಂದ್ರಪ್ಪ, ಜಯಶ್ರೀ ಪಾಟೀಲ, ದೇವೀಂದ್ರ, ಸಹಾಯಕರಾದ ಬಾಗಣ್ಣ ಹರನೂರ್, ರೆಹಮಾನ್ ಸೇರಿದಂತೆ ಮುಂತಾದವರು ಭಾಗವಹಿಸಿದ್ದರು.

emedialine

Recent Posts

ಬಸವರಾಜ್ ಎಸ್ ಜಿಲಿಗೆ ಸನ್ಮಾನ ನಾಳೆ

ಕಲಬುರಗಿ; ಬಸವರಾಜ್ ಎಸ್ ಜಿಲಿ ಅಭಿಮಾನಿ ಬಳಗದ ವತಿಯಿಂದ ಡೆಪ್ಟಿ ಇನ್ಸ್ಪೆಕ್ಟರ್ ಜನರಲ್ ಆಫ್ ಪೊಲೀಸ್ ಕೆ ಎಸ್ ಆರ್…

26 mins ago

ಐಆರ್‌ಎಸ್‌ಒ ಕರ್ನಾಟಕ ರಾಜ್ಯ ಕಾರ್ಯಕರ್ತರ ಸಭೆ

ರಾಯಚೂರು; ಮಾರ್ಕ್ಸ್ ಭವನದಲ್ಲಿ ಎಐಆರ್‌ಎಸ್‌ಒ ಕರ್ನಾಟಕ ರಾಜ್ಯ ಮಟ್ಟದ ಕಾರ್ಯಕರ್ತರ ಸಭೆಯನ್ನು ಯಶಸ್ವಿಯಾಗಿ ನಡೆಸಲಾಯಿತು. ಕಾರ್ಯಕರ್ತರ ಸಭೆಯಲ್ಲಿ, ಕೇಂದ್ರ ಸಂಘಟನಾ…

47 mins ago

ಶೈಲಜಾ ಶರಣಗೌಡಗೆ ಪಿಎಚ್. ಡಿ. ಡಾಕ್ಟರೇಟ್ ಪದವಿ

ಕಲಬುರಗಿ: ಗುಲಬರ್ಗಾ ವಿಶ್ವವಿದ್ಯಾಲಯದ ಕನ್ನಡ ಅಧ್ಯಯನ ಸಂಶೋಧನಾ ವಿಭಾಗದ ವಿದ್ಯಾರ್ಥಿನಿ, ಶೈಲಜಾ ಶರಣಗೌಡ ಇವರು ಡಾ. ಶಾರದಾ ದೇವಿ ಎಸ್.…

49 mins ago

ಜನಪದ ಕಲಾವಿದರು ಸಮಾಜದ ಆಸ್ತಿ

ಕಲಬುರಗಿ; ಗ್ರಾಮೀಣ ಭಾಗದಲ್ಲಿ ಅನೇಕ ಜನ ಕಲಾವಿದರು ಹಗಲಿರುಳು ಸೇವೆಗೈದು ಜನಪದ ಉಳಿಸುವುದರೊಂದಿಗೆ ಸಮಾಜದ ಆಸ್ತಿಯಾಗಿದ್ದಾರೆ ಎಂದು ನ್ಯಾಯವಾದಿ ಹಣಮಂತರಾಯ…

54 mins ago

ಕಲಬುರಗಿ: ಸಿಸಿ ರಸ್ತೆ ಕಾಮಗಾರಿಗೆ ಚಾಲನೆ

ಕಲಬುರಗಿ: ಮಹಾನಗರ ಪಾಲಿಕೆ ವಾರ್ಡ್ ಸಂಖ್ಯೆ 15ರ ಫಿರದೋಸ್ ಕಾಲೋನಿ ಬಡಾವಣೆಯಲ್ಲಿ ಸಿಸಿ ರಸ್ತೆ ಕಾಮಗಾರಿಗೆ ಸೈಯದ್ ಮಿರಾಜೊದ್ದೀನ್ ಕಾಶೀಪ್…

3 hours ago

ಸಿಯುಕೆಯಲ್ಲಿ ರಾಷ್ಟ್ರೀಯ ಅಪ್ರೆಂಟಿಸ್‍ಶಿಪ್ ತರಬೇತಿ ಯೋಜನೆ ಕುರಿತು ಜಾಗೃತಿ

ಕಲಬುರಗಿ: "ನ್ಯಾಷನಲ್ ಅಪ್ರೆಂಟಿಸ್‍ಶಿಪ್ ಟ್ರೈನಿಂಗ್ ಸ್ಕೀಮ್ (ಓಂಖಿS) ಐಟಿಐ, ಪಿಯುಸಿ, ಡಿಪೆÇ್ಲೀಮಾ ಮತ್ತು ಪದವೀಧರರು ಸೇರಿದಂತೆ ತಾಂತ್ರಿಕ ಮತ್ತು ತಾಂತ್ರಿಕೇತರ…

4 hours ago