ಸುರಪುರ: ಈ ದೇಶ ಕಂಡ ಧೀಮಂತ ನಾಯಕಿ ಹಾಗು ವಿದೇಶಾಂಗ ಸಚಿವೆಯಾಗಿ ಹಲವಾರು ಮಹತ್ವಪೂರ್ಣ ಯೋಜನೆಗಳ ಜಾರಿಗೊಳಿಸಿದ ದಿಟ್ಟ ರಾಜಕಾರಣಿಯಾಗಿದ್ದ ಸುಷ್ಮಾ ಸ್ವರಾಜ್ ಅವರ ನಿಧನ ಈ ದೇಶಕ್ಕೆ ತುಂಬಲಾರದ ನಷ್ಟವಾಗಿದೆ ಎಂದು ಮಾಜಿ ಜಿಲ್ಲಾ ಪಂಚಾಯತಿ ಅಧ್ಯಕ್ಷ ರಾಜಾ ಹನುಮಪ್ಪ ನಾಯಕ (ತಾತಾ) ಮಾತನಾಡಿದರು.
ನಗರದ ಬಿಜೆಪಿ ಕಚೇರಿಯಲ್ಲಿ ಹಮ್ಮಿಕೊಂಡಿದ್ದ ಮಾಜಿ ಕೇಂದ್ರ ಸಚಿವೆ ಸುಷ್ಮಾ ಸ್ವರಾಜ್ ಅವರ ನಿಧನಕ್ಕೆ ನಡೆಸಿದ ಶ್ರದ್ದಾಂಜಲಿ ಸಭೆಯಲ್ಲಿ ಭಾಗವಹಿಸಿ ಮಾತನಾಡಿ,ಸುಷ್ಮಾಜಿಯವರ ಅಗಲಿಕೆಯಿಂದ ಬಿಜೆಪಿ ಪಕ್ಷಕ್ಕೆ ದೊಡ್ಡ ಹೊಡೆತ ಬಿದ್ದಂತಾಗಿದೆ.ಅವರು ಇನ್ನೂ ಹಲವಾರು ಕಾಲ ಪಕ್ಷದ ಬೆಳೆವಣಿಗೆಗೆ ಸೇವೆಯ ಅವಶ್ಯಕತೆಯಿತ್ತು.ಅವರು ಈ ದೇಶದ ಎಲ್ಲಾ ಮಹಿಳಾ ರಾಜಕಾರಣಿಗಳಿಗೆ ಮಾದರಿಯಾಗಿದ್ದರು.ಅವರ ಅಗಲಿಕೆಯಿಂದ ದೇಶ ಒಬ್ಬ ಮಹಾನ್ ಚೇತನರನ್ನು ಕಳೆದುಕೊಂಡಂತಾಗಿದೆ ಅವರ ಆತ್ಮಕ್ಕೆ ಚಿರಶಾಂತಿ ಲಭಿಸಲೆಂದು ಪ್ರಾರ್ಥಿಸಿದರು.
ಸಭೆಯಲ್ಲಿ ನಗರಸಭೆ ಸದಸ್ಯರಾದ ವೇಣುಮಾಧವ ನಾಯಕ,ನರಸಿಂಹಕಾಂತ ಪಂಚಮಗಿರಿ,ಶಿವಕುಮಾರ ಕಟ್ಟಿಮನಿ, ಮೌಲಾನಸಾಬ್ ಹಾಗು ಮುಖಂಡರಾದ ಶರಣು ನಾಯಕ ಬೈರಿಮರಡಿ,ಸಣ್ಣ ದೇಸಾಯಿ ದೇವರಗೋನಾಲ, ಭೀಮಾಶಂಕರ ಬಿಲ್ಲವ,ರವಿಕುಮಾರ ನಾಯಕ ಬೈರಿಮರಡಿ,ಶರಣು ನಾಯಕ,ದೇವು ನಾಯಕ ಸೇರಿದಂತೆ ಅನೇಕರಿದ್ದರು.
ಕಲಬುರಗಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಧ್ವನಿ ಸಂಘ ಜಿಲ್ಲಾಮಟ್ಟದ ಪತ್ರಕರ್ತರ ಸಮಾವೇಶ ಸೆಪ್ಟೆಂಬರ್ 16ರಂದು ಅಫಜಲಪೂರ ಪಟ್ಟಣದಲ್ಲಿ ನಡೆದ ಸಂದರ್ಭದಲ್ಲಿ…
ಕಲಬುರಗಿ; ಕನ್ನಡ ಸಾಹಿತ್ಯ ಕ್ಷೇತ್ರದಲ್ಲಿ ವಿಶಿಷ್ಟ ಖ್ಯಾತಿ ಪಡೆದ ಜಿಲ್ಲೆಯ ಸೇಡಂನ ಮಾತೋಶ್ರೀ ಮಹಾದೇವಮ್ಮ ನಾಗಪ್ಪ ಮುನ್ನೂರ್ ಪ್ರತಿಷ್ಠಾನದ ವತಿಯಿಂದ…
ಚಿಂಚೋಳಿ : ಪ್ರವಾದಿ ಮಹ್ಮದ ಪೈಗಂಬರ್ ಅವರನ್ನು ಅವಮಾನಿಸಿದ ನರಸಿಂಹಾನಂದ ಸರಸ್ವತಿ ಸ್ವಾಮಿಗಳ ವಿರುದ್ಧ ಪ್ರಕರಣ ದಾಖಲಿಸಬೇಕು ಎಂದು ಆಗ್ರಹಿಸಿ…
ಕಲಬುರಗಿ: ಕಲ್ಯಾಣ ಕರ್ನಾಟಕದ ಶೈಕ್ಷಣಿಕ ಗುಣಮಟ್ಟ ಸುಧಾರಣೆಗಾಗಿ ಕೆ.ಕೆ.ಆರ್.ಡಿ.ಬಿ ಯು ಸಮಿತಿಯೊಂದನ್ನು ರಚಿಸಿ, ಗುರುರಾಜ ಕರ್ಜಗಿ ಅವರನ್ನು ಅಧ್ಯಕ್ಷರನ್ನಾಗಿ ಮಾಡಿರುವ…
ಕಲಬುರಗಿ; ಕನಾ೯ಟಕ ರಾಜ್ಯ ತಳವಾರ ಮಹಾಸಭಾ ಕಲಬುರಗಿ ಜಿಲ್ಲಾಧ್ಯಕ್ಷರಾದ ಚಂದ್ರಕಾಂತ ದಶರಥ ತಳವಾರ ಅವರ ಅಧ್ಯಕ್ಷತೆಯಲ್ಲಿ ಇಂದು ಆನಂದ ನಿಲಯ…
ಕಲಬುರಗಿ; ಜಿಲ್ಲಾಧಿಕಾರಿ ಬಿ. ಫೌಜಿಯಾ ತರನ್ನುಮ್ ಅವರು ಶನಿವಾರ ಶಹಾಬಾದ ರಸ್ತೆಯಲ್ಲಿರುವ ನಂದೂರ-ಕೆಸರಟಗಿ ಮತ್ತು ಹುಮನಾಬಾದ ರಸ್ತೆಯಲ್ಲಿರುವ ಕಪನೂರ ಕೈಗಾರಿಕಾ…