ಸುರಪುರ: ಕೃಷ್ಣಾ ನದಿಗೆ ಅಪಾರ ಪ್ರಮಾಣದಲ್ಲಿ ನೀರು ಹರಿಬಿಡಲಾಗಿದ್ದರಿಂದ ತಾಲ್ಲೂಕಿನ ಅನೇಕ ಗ್ರಾಮಗಳಲ್ಲಿ ನೆರೆ ಹಾವಳಿಯಿಂದಾಗಿ ಅನೇಕ ಕುಟುಂಬಗಳನ್ನು ಗಂಜಿ ಕೇಂದ್ರಗಳಿಗೆ ಸೇರಿಸಲಾಗಿದೆ.ಅದರಂತೆ ತಾಲ್ಲೂಕಿನ ಶೆಳ್ಳಿಗಿ ಗ್ರಾಮದ ನದಿ ದಂಡೆಯಲ್ಲಿದ್ದ ಅನೇಕ ಕುಟುಂಬಗಳು ನೆರೆಯಿಂದಾಗಿ ಸಂತ್ರಸ್ತಗೊಂಡ ಕುಟುಂಬಗಳನ್ನು ನಗರದ ಎಪಿಎಂಸಿ ಗಂಜಿನಲ್ಲಿ ತೆರೆಯಲಾದ ಗಂಜಿ ಕೇಂದ್ರದಲ್ಲಿ ಆಶ್ರಯ ನೀಡಲಾಗಿದೆ.
ಗಂಜಿ ಕೇಂದ್ರದಲ್ಲಿ ಆಶ್ರಯ ಪಡೆದ ಕುಟುಂಬಗಳ ಮಕ್ಕಳು ಶಿಕ್ಷಣ ಕಲಿಕೆಯಿಂದ ವಂಚಿತರಾಗಬಾರದೆಂದು ತಹಸೀಲ್ದಾರ ಸುರೇಶ ಅಂಕಲಗಿ ಕಾಳಜಿವಹಿಸಿ ಮಕ್ಕಳಿಗೆ ಗಂಜಿ ಕೇಂದ್ರದಲ್ಲಿಯೆ ಕಲಿಕೆಗೆ ವ್ಯವಸ್ಥೆ ಕಲ್ಪಿಸುವ ಮೂಲಕ ಜವಬ್ದಾರಿ ಮೆರೆದಿದ್ದಾರೆ.
ಗಂಜಿ ಕೇಂದ್ರದಲ್ಲಿ ನೆಲೆಸಿರುವ ಶೆಳ್ಳಿಗಿ ಗ್ರಾಮದ ಸುಮಾಅರ ಹದಿನೈದು ಮಕ್ಕಳಿಗೆ ಕುಂಬಾರಪೇಟೆ ಶಾಲೆಯ ದೇವಿಂದ್ರಪ್ಪ ನಾಯಕ ಮತ್ತು ರೇವಣಸಿದ್ದಪ್ಪ ಎಂಬ ಶಿಕ್ಷಕರನ್ನು ನಿಯೋಜಿಸಿ ಮಕ್ಕಳಿಗೆ ಪಾಠ ಕಲಿಯಲು ಅನುಕೂಲ ಕಲ್ಪಿಸಿದ್ದು,ಮಕ್ಕಳ ಪೋಷಕರು ತಹಸೀಲ್ದಾರರ ಕಾರ್ಯಕ್ಕೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.
ಸ್ವತ ತಹಸೀಲ್ದಾರ ಸುರೇಶ ಅಂಕಲಗಿಯವರೆ ಗಂಜಿ ಕೇಂದ್ರದಲ್ಲಿದ್ದು ಮಕ್ಕಳ ಕಲಿಕೆಯನ್ನು ಗಮನಿಸಿದರು.ಈ ಸಂದರ್ಭದಲ್ಲಿ ವಿಎ ಪ್ರದೀಪ ನಾಲ್ವಡೆ ತಹಸೀಲ್ ಸಿಬ್ಬಂದಿಗಳಾದ ರವಿ ನಾಯಕ,ಶಿವಕುಮಾರ,ಭೀಮು ಯಾದವ,ಶ್ರೀನಿವಾಸ ಕುಲಕರ್ಣಿ ಇತರರಿದ್ದರು.
ಕಲಬುರಗಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಧ್ವನಿ ಸಂಘ ಜಿಲ್ಲಾಮಟ್ಟದ ಪತ್ರಕರ್ತರ ಸಮಾವೇಶ ಸೆಪ್ಟೆಂಬರ್ 16ರಂದು ಅಫಜಲಪೂರ ಪಟ್ಟಣದಲ್ಲಿ ನಡೆದ ಸಂದರ್ಭದಲ್ಲಿ…
ಕಲಬುರಗಿ; ಕನ್ನಡ ಸಾಹಿತ್ಯ ಕ್ಷೇತ್ರದಲ್ಲಿ ವಿಶಿಷ್ಟ ಖ್ಯಾತಿ ಪಡೆದ ಜಿಲ್ಲೆಯ ಸೇಡಂನ ಮಾತೋಶ್ರೀ ಮಹಾದೇವಮ್ಮ ನಾಗಪ್ಪ ಮುನ್ನೂರ್ ಪ್ರತಿಷ್ಠಾನದ ವತಿಯಿಂದ…
ಚಿಂಚೋಳಿ : ಪ್ರವಾದಿ ಮಹ್ಮದ ಪೈಗಂಬರ್ ಅವರನ್ನು ಅವಮಾನಿಸಿದ ನರಸಿಂಹಾನಂದ ಸರಸ್ವತಿ ಸ್ವಾಮಿಗಳ ವಿರುದ್ಧ ಪ್ರಕರಣ ದಾಖಲಿಸಬೇಕು ಎಂದು ಆಗ್ರಹಿಸಿ…
ಕಲಬುರಗಿ: ಕಲ್ಯಾಣ ಕರ್ನಾಟಕದ ಶೈಕ್ಷಣಿಕ ಗುಣಮಟ್ಟ ಸುಧಾರಣೆಗಾಗಿ ಕೆ.ಕೆ.ಆರ್.ಡಿ.ಬಿ ಯು ಸಮಿತಿಯೊಂದನ್ನು ರಚಿಸಿ, ಗುರುರಾಜ ಕರ್ಜಗಿ ಅವರನ್ನು ಅಧ್ಯಕ್ಷರನ್ನಾಗಿ ಮಾಡಿರುವ…
ಕಲಬುರಗಿ; ಕನಾ೯ಟಕ ರಾಜ್ಯ ತಳವಾರ ಮಹಾಸಭಾ ಕಲಬುರಗಿ ಜಿಲ್ಲಾಧ್ಯಕ್ಷರಾದ ಚಂದ್ರಕಾಂತ ದಶರಥ ತಳವಾರ ಅವರ ಅಧ್ಯಕ್ಷತೆಯಲ್ಲಿ ಇಂದು ಆನಂದ ನಿಲಯ…
ಕಲಬುರಗಿ; ಜಿಲ್ಲಾಧಿಕಾರಿ ಬಿ. ಫೌಜಿಯಾ ತರನ್ನುಮ್ ಅವರು ಶನಿವಾರ ಶಹಾಬಾದ ರಸ್ತೆಯಲ್ಲಿರುವ ನಂದೂರ-ಕೆಸರಟಗಿ ಮತ್ತು ಹುಮನಾಬಾದ ರಸ್ತೆಯಲ್ಲಿರುವ ಕಪನೂರ ಕೈಗಾರಿಕಾ…