ಸಮಾಜದ ಏಳಿಗೆಗಾಗಿ ಹೋರಾಟ ನಡೆಸಿದ ಮುತ್ಸದ್ಧಿ ವಿಠ್ಠಲ್ ಹೇರೂರ್

ಶಹಾಬಾದ:ದಿ. ವಿಠ್ಠಲ್ ಹೇರೂರ ಅವರು ಕೋಲಿ ಸಮಾಜ ಸೇರಿದಂತೆ ಶೋಷಿತ ಸಮುದಾಯಗಳ ಏಳ್ಗೆ ಬಗ್ಗೆ ಅಪಾರ ಕಾಳಜಿ ಹೊಂದಿದ್ದರು ಎಂದು ಶಹಾಬಾದ ನಗರ ಹಾಗೂ ಗ್ರಾಮೀಣ ತಳವಾರ ಹೋರಾಟ ಸಮಿತಿ ಅಧ್ಯಕ್ಷ ಬೆಳೆಪ್ಪ ಖಣದಾಳ ಹೇಳಿದರು.
ಅವರು ಶನಿವಾರ ನಗರ ಹಾಗೂ ಗ್ರಾಮೀಣ ತಳವಾರ ಹೋರಾಟ ಸಮಿತಿ ವತಿಯಿಂದ ದಿ. ವಿಠ್ಠಲ ಹೇರೂರ ಅವರ ಪುಣ್ಯಸ್ಮರಣಾ ದಿನದ ನಿಮಿತ್ತ ನಗರದ ಸಮುದಾಯ ಆರೋಗ್ಯ ಕೇಂದ್ರದಲ್ಲಿ ರೋಗಿಗಳಿಗೆ ಹಣ್ಣು- ಹಂಪಲು ವಿತರಿಸಿ ಮಾತನಾಡಿದರು.

ಹಿಂದುಳಿದ ಕೋಲಿ ಸಮಾಜದ ಜನರಲ್ಲಿ ಜಾಗೃತಿ ಹಾಗೂ ಶಿಕ್ಷಣ ಅರಿವು ಮೂಡಿಸುವ ಮೂಲಕ ಹೋರಾಟ ಮಾಡಿದ ಧೀಮಂತ ನಾಯಕ ದಿ.ವಿಠ್ಠಲ ಹೇರೂರರ ತತ್ತ್ವಾದರ್ಶಗಳು ಸಮಾಜಕ್ಕೆ ನೀಡಿರುವ ಕೊಡುಗೆಯಾಗಿದೆ. ವೈಚಾರಿಕತೆ ಬೆಳೆಸಲು, ಜನರಲ್ಲಿ ಜಾಗೃತಿ ಮೂಡಿಸಲು ತಮ್ಮ ಬದುಕನ್ನೆ ಮುಡುಪಾಗಿಟ್ಟು ಸಮಾಜದ ಏಳಿಗೆಗಾಗಿ ಹೋರಾಟ ನಡೆಸಿದ ಮುತ್ಸದ್ಧಿ ವಿಠ್ಠಲ್ ಹೇರೂರು ಎಂದು ಹೇಳಿದರು.

ರಾಯಣ್ಣ ಬ್ರಿಗೇಡ್ ಜಿಲ್ಲಾಧ್ಯಕ್ಷ ಬಸವರಾಜ ಮದ್ರಿಕಿ ಮಾತನಾಡಿ, ಕೋಲಿ ಸಮಾಜದ ದಿಮಂತ ನಾಯಕರಾಗಿದ್ದ ದಿ. ವಿಠ್ಠಲ ಹೇರೂರರವರು ಕೋಲಿ ಸಮಾಜದ ಜನತೆಯನ್ನು ಒಂದುಗೂಡಿಸಲು ಅವರು ಮಾಡಿರುವ ಪ್ರಯತ್ನ ಹಾಗೂ ಸಮಾಜದ ಜನರನ್ನು ಜಾಗೃತಿಗೊಳಿಸಿದ ಏಕೈಕ ನಾಯಕ ಎಂದು ಹೇಳಿದರು.

ಜಯಂತ .ಎಸ್.ಬಳಗಾನೂರ,ಮಲ್ಲಿಕಾರ್ಜುನ ನಾಟೇಕಾರ,ಮಂಜುನಾಥ ಇಟಗಿ, ಸಿದ್ದು.ಡಿ.ತಳವಾರ,ಚಂದು.ಸಿ.ನಾಟೇಕಾರ, ಚಿದಾನಂದ ತಳವಾರ, ಶಿವರುದ್ರ ಹುಗ್ಗಿ, ಬಾಬುರಾವ ಹಾಗರಗುಂಡಿಗಿ ಇತರರು ಇದ್ದರು.

emedialine

Recent Posts

ಸ್ಲಂ ಜನರಿಗೆ ಹಕ್ಕು ಪತ್ರ ನೀಡುವಂತೆ ರೇಣುಕಾ ಸರಡಗಿ ಸಿಎಂಗೆ ಮನವಿ

ಕಲಬುರಗಿ: ಕಲ್ಯಾಣ ಕರ್ನಾಟಕ ಭಾಗದ ಕಲಬುರಗಿ. ಯಾದಗಿರಿ. ಬೀದರ್. ಕೊಪ್ಪಳ. ಬಳ್ಳಾರಿ, ರಾಯಚೂರು ಜಿಲ್ಲೆಗಳಲ್ಲಿ ಸ್ಲಂ ನಿವಾಸಿಗಳ ಕುಟುಂಬ 1ಲಕ್ಷ…

2 hours ago

ಶರಣಬಸವ ವಿಶ್ವವಿದ್ಯಾಲಯದಲ್ಲಿ ಕಲ್ಯಾಣ ಕರ್ನಾಟಕ ಉತ್ಸವ

ಕಲಬುರಗಿ: ಶರಣಬಸವ ವಿಶ್ವವಿದ್ಯಾಲಯದಲ್ಲಿ ಮಂಗಳವಾರದಂದು, ಕಲ್ಯಾಣ ಕರ್ನಾಟಕ ಉತ್ಸವದ ಅಂಗವಾಗಿ ವಿವಿಯ ಧ್ವಜಸ್ಥಂಭದಲ್ಲಿ ಉಪಕುಲಪತಿ ಪ್ರೊ. ಅನಿಲಕುಮಾರ ಬಿಡವೆ ಧ್ವಜಾರೋಹಣ…

2 hours ago

ವಕ್ಫ್ ಬೋರ್ಡ್ ನಿಂದ 15 ಜಿಲ್ಲೆಗಳಲ್ಲಿ ಮಹಿಳಾ ಪದವಿ ಕಾಲೇಜು ಸ್ಥಾಪನೆಗೆ ಸಂಪುಟ ಅಸ್ತು: ಸಚಿವ ಜಮೀರ್ ಅಹಮದ್ ಖಾನ್

ಕಲಬುರಗಿ : ಐತಿಹಾಸಿಕ ವಿಶೇಷ ಸಂಪುಟ ಸಭೆ ಯಲ್ಲಿ ಕರ್ನಾಟಕ ವಖ್ಫ್ ಬೋರ್ಡ್ ವತಿಯಿಂದ ರಾಜ್ಯದ ಹದಿನೈದು ಜಿಲ್ಲೆಗಳಲ್ಲಿ ಮಹಿಳಾ…

4 hours ago

ಸೆ.22 ರಂದು ತುಂಗಭದ್ರೆಗೆ ಬಾಗಿನ ಅರ್ಪಣೆ: ಡಿ.ಕೆ ಶಿವಕುಮಾರ್

ಕಲಬುರಗಿ: ಬರುವ ಸೆಪ್ಟೆಂಬರ್ 22 ರಂದು ಮುಖ್ಯಮಂತ್ರಿ ಸಿದ್ಧರಾಮಯ್ಯ ಹಾಗೂ ಸಚಿವ ಸಂಪುಟದ ಸಹೊದ್ಯೋಗಿಗಳೊಂದಿಗೆ ತುಂಗಭದ್ರಾ ಜಲಾಶಯಕ್ಕೆ ಬಾಗಿನ ಅರ್ಪಿಸಲಾಗುವುದು…

4 hours ago

ಅಮೇರಿಕಾದಲ್ಲಿ ಯಾರನ್ನೂ ಭೇಟಿಯಾಗಿಲ್ಲ: ಡಿಕೆ ಶಿವುಕುಮಾರ್

ಕಲಬುರಗಿ: ಅಮೇರಿಕಾದ ಪ್ರವಾಸದಲ್ಲಿ ತಾವು ಯಾರನ್ನೂ ಭೇಟಿಯಾಗಿಲ್ಲ ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ ಹೇಳಿದರು. ಸಚಿವ ಸಂಪುಟದ ಸಭೆಯಲ್ಲಿ ಪಾಲ್ಗೊಳ್ಳಲು…

4 hours ago

ನಾಗಮಂಗಲ ಘಟನೆ: ತನಿಖೆ ನಂತರ ಇನ್ನಷ್ಟು ಕ್ರಮ: ಗೃಹ ಸಚಿವ ಪರಮೇಶ್ವರ

ಕಲಬುರಗಿ: ನಾಗಮಂಗಲದ ಅಹಿತರ ಘಟನೆ ಎಲ್ಲ ಆಯಾಮಗಳಿಂದ ತನಿಖೆ ನಡೆಸಲಾಗುತ್ತಿದ್ದು, ತನಿಖಾ ವರದಿ ನಂತರ ಮುಂದಿನ ಹೆಚ್ಚಿನ ಕ್ರಮ ಕೈಗೊಳ್ಳಲಾಗುವುದು…

4 hours ago

Notice: ob_end_flush(): Failed to send buffer of zlib output compression (0) in /home3/emedixap/public_html/wp-includes/functions.php on line 5420