ಬಸವೇಶ್ವರ ಪುತ್ಥಳಿ ನಿರ್ಮಾಣಕ್ಕೆ ನಗರಸಭೆಯಲ್ಲಿ ಒಪ್ಪಿಗೆ

ಸುರಪುರ :ಇಲ್ಲಿಯ ನಗರಸಭೆಯಲ್ಲಿ ನಗರದ ರಂಗಂಪೇಟೆಯ ವೀರಶೈವ ಕಲ್ಯಾಣ ಮಂಟಪ ಬಳಿಯ ಮುಖ್ಯ ರಸ್ತೆಯಲ್ಲಿನ ಬಸವೇಶ್ವರ ವೃತ್ತದಲ್ಲಿನ ನೂತನ ಬಸವೇಶ್ವರ ಪುತ್ಥಳಿ ನಿರ್ಮಾಣಕ್ಕೆ ನಗರಸಭೆಯಲ್ಲಿ ಅನುಮೋದನೆಗೊಂಡ ಹಿನ್ನೆಲಯಲ್ಲಿ ವೃತ್ತದಲ್ಲಿನ ನಾಮಫಲಕಕ್ಕೆ ಶಾಸಕ ರಾಜೂಗೌಡ ಗೌಡ ಭೇಟಿ ನೀಡಿ ಪುಷ್ಪ ನಮನ ಸಲ್ಲಿಸಿದರು.

ಈ ಸಂದರ್ಭದಲ್ಲಿ ಮಾತನಾಡಿದ ಅವರು, ರಂಗಂಪೇಟೆ ವೀರಶೈವ ಕಲ್ಯಾಣ ಮಂಟಪ ಹತ್ತಿರದ ಮುಖ್ಯ ರಸ್ತೆಯಲ್ಲಿ ಜಗಜ್ಯೋತಿ ಬಸವೇಶ್ವರರ ಅಶ್ವಾರೂಢ ಪುತ್ಥಳಿ ಪ್ರತಿಷ್ಠಾಪಿಸಲು ವೀರಶೈವ ಲಿಂಗಾಯತ ಸಮಾಜ ನಿರ್ಧರಿಸಿ ಸಮಾಜದ ತಾಲೂಕು ಘಟಕ ಅನುಮೋದನೆಗೆ ಕೋರಿ ನಗರಸಭೆಗೆ ಮನವಿ ಸಲ್ಲಿಸಿತ್ತು. ಬುಧವಾರ ಜರುಗಿದ ನಗರಸಭೆ ಸಾಮಾನ್ಯ ಸಭೆಯಲ್ಲಿ ಪುತ್ಥಳಿ ಪ್ರತಿಷ್ಠಾಪನೆಗೆ ಅನುಮೋದನೆ ದೊರಕಿದೆ ಎಂದು ಹೇಳಿದರು.

ಜಗಜ್ಯೋತಿ ಬಸವೇಶ್ವರರು ನಾಡು ಕಂಡ ಸರ್ವ ಶ್ರೇಷ್ಠ ದಾರ್ಶನಿಕ, ಸಮ ಸಮಾಜದ ಹರಿಕಾರ ಅವರ ಪಂಚಲೋಹದ ಅಶ್ವಾರೂಢ ಪುತ್ಥಳಿ ಪ್ರತಿಷ್ಠಾಪನೆಗೆ ಸಮಾಜ ಮುಂದಾಗಿರುವುದು ಸ್ವಾಗತಾರ್ಹ. ನನ್ನ ಅಧಿಕಾರವಧಿಯಲ್ಲಿ ನಾನು ಎಲ್ಲಾ ಸಮುದಾಯಗಳಿಗೆ ಅನುದಾನ ದೊರಕಿಸಿಕೊಟ್ಟು ನ್ಯಾಯ ಒದಗಿಸಿದ್ದೇನೆ. ಪ್ರತಿಯೊಂದು ಜಾತಿ ಜನಾಂಗಕ್ಕೆ ಸಮುದಾಯ ಭವನ , ಕಲ್ಯಾಣ ಮಂಟಪ, ಶಾದಿಮಹಲ್ ನಿರ್ಮಿಸಿಕೊಟ್ಟಿದ್ದೇನೆ. ವೀರಶೈವ ಲಿಂಗಾ ಯತ ಸಮುದಾಯಕ್ಕೂ ಆದ್ಯತೆ ನೀಡಿರುತ್ತೇನೆ. ಸಮಾಜದ ಅಧ್ಯಕ್ಷ ಡಾ.ಸುರೇಶ ಸಜ್ಜನ್ ಕೋರಿಕೆ ಮೇರೆಗೆ ನೂತನ ಕಲ್ಯಾಣ ಮಂಟಪ ನಿರ್ಮಾಣಕ್ಕೆ ಸೂಕ್ತ ಅನುದಾನ ಒದಗಿಸುವುದಾಗಿ ಭರವಸೆ ನೀಡಿದರು.

ಸಮಾಜದ ಅಧ್ಯಕ್ಷ ಡಾ.ಸುರೇಶ ಸಜ್ಜನ್ ಮಾತನಾಡಿ, ಪುತ್ಥಳಿ ನಿರ್ಮಾಣ ಕಾರ್ಯ ಪ್ರಗತಿಯಲ್ಲಿದೆ. ಫೆಬ್ರವರಿಯಲ್ಲಿ ಪ್ರತಿಷ್ಠಾಪಿಸುವ ಉದ್ದೇಶವಿದೆ. ಸಮಾರಂಭವನ್ನು ಸ್ಮರಣೀಯವಾಗಿಸಲು ಶೀಘ್ರವೇ ಸಮಾಜದ ಮುಖಂಡರ ಸಭೆ ಕರೆದು ನಿರ್ಧರಿಸಲಾಗುವುದು. ಉಚಿತ ಪ್ರಸಾದ ನಿಲಯದ ಹಿಂದುಗಡೆಯ ನಿವೇಶನದಲ್ಲಿ ಹವಾ ನಿಯಂತ್ರಿತ ನೂತನ ಕಲ್ಯಾಣಮಂಟಪ ನಿರ್ಮಿಸುವ ಉದ್ದೇಶ ಹೊಂದಲಾಗಿದೆ ಪುತ್ಥಳಿ ಸ್ಥಾಪಸಿಲು ಅನುಮೋದನೆಗೆ ಸಹಕರಿಸಿದ ಶಾಸಕರಿಗೆ, ನಗರಸಭೆ ಅಧ್ಯಕ್ಷ-ಉಪಾಧ್ಯಕ್ಷರಿಗೂ, ಸರ್ವ ಸದಸ್ಯರಿಗೆ ಮತ್ತು ನಗರಸಭೆ ಅಧಿಕಾ ರಿಗಳಿಗೆ ಕೃತಜ್ಞತೆ ಸಲ್ಲಿಸುವುದಾಗಿ ತಿಳಿಸಿದರು.

ನಿಷ್ಠಿ ಕಡ್ಲೆಪ್ಪ ಮಠದ ಪ್ರಭುಲಿಂಗ ಸ್ವಾಮೀಜಿ, ಶ್ರೀಗಿರಿಮಠದ ಡಾ. ಚನ್ನಮಲ್ಲಿಕಾರ್ಜುನ ಶಿವಾ ಚಾರ್ಯ, ನಗರಸಭೆ ಉಪಾಧ್ಯಕ್ಷ ಮಹೇಶ ಪಾಟೀಲ್, ನಯೋಪ್ರಾ. ಅಧ್ಯಕ್ಷ ಪ್ರಕಾಶ ಸಜ್ಜನ್, ಪ್ರಮುಖರಾದ ರಾಜಾ ಹಣಮಪ್ಪ ನಾಯಕ, ಜಿ.ಎಸ್. ಪಾಟೀಲ್, ವಿರೇಶ ಚಿಂಚೋಳಿ, ಡಾ.ಬಿ.ಎಂ ಹಳ್ಳಿಕೋಟಿ, ವಿರೇಶ ನಿಷ್ಠಿ ದೇಶಮುಖ, ಮಂಜುನಾಥ ಜಾಲಹಳ್ಳಿ, ಶಂಕರ ನಾಯಕ, ರಾಜಾ ರಂಗಪ್ಪ ನಾಯಕ, ಮಲ್ಲು ದಂಡಿನ್, ರಂಗನಗೌಡ ಪಾಟೀಲ್ ದೇವಿಕೇರಿ, ಜಗದೀಶ್ ಪಾಟೀಲ್ ಸೂಗೂರು, ಈಶ್ವರ ನಾಯಕ, ಶರಣು ನಾಯಕ ಬೈರಿಮಡ್ಡಿ, ಸೂಗೂ ಮೋದಿ, ಮಲ್ಲು ಬಾದ್ಯಾಪುರ, ಚಂದ್ರು ಮಡಿವಾಳರ ಲಿಂಗರಾಜ್ ಶಾಬಾದಿ ಇತರರಿದ್ದರು.

emedialine

Recent Posts

ಸ್ಲಂ ಜನರಿಗೆ ಹಕ್ಕು ಪತ್ರ ನೀಡುವಂತೆ ರೇಣುಕಾ ಸರಡಗಿ ಸಿಎಂಗೆ ಮನವಿ

ಕಲಬುರಗಿ: ಕಲ್ಯಾಣ ಕರ್ನಾಟಕ ಭಾಗದ ಕಲಬುರಗಿ. ಯಾದಗಿರಿ. ಬೀದರ್. ಕೊಪ್ಪಳ. ಬಳ್ಳಾರಿ, ರಾಯಚೂರು ಜಿಲ್ಲೆಗಳಲ್ಲಿ ಸ್ಲಂ ನಿವಾಸಿಗಳ ಕುಟುಂಬ 1ಲಕ್ಷ…

2 hours ago

ಶರಣಬಸವ ವಿಶ್ವವಿದ್ಯಾಲಯದಲ್ಲಿ ಕಲ್ಯಾಣ ಕರ್ನಾಟಕ ಉತ್ಸವ

ಕಲಬುರಗಿ: ಶರಣಬಸವ ವಿಶ್ವವಿದ್ಯಾಲಯದಲ್ಲಿ ಮಂಗಳವಾರದಂದು, ಕಲ್ಯಾಣ ಕರ್ನಾಟಕ ಉತ್ಸವದ ಅಂಗವಾಗಿ ವಿವಿಯ ಧ್ವಜಸ್ಥಂಭದಲ್ಲಿ ಉಪಕುಲಪತಿ ಪ್ರೊ. ಅನಿಲಕುಮಾರ ಬಿಡವೆ ಧ್ವಜಾರೋಹಣ…

2 hours ago

ವಕ್ಫ್ ಬೋರ್ಡ್ ನಿಂದ 15 ಜಿಲ್ಲೆಗಳಲ್ಲಿ ಮಹಿಳಾ ಪದವಿ ಕಾಲೇಜು ಸ್ಥಾಪನೆಗೆ ಸಂಪುಟ ಅಸ್ತು: ಸಚಿವ ಜಮೀರ್ ಅಹಮದ್ ಖಾನ್

ಕಲಬುರಗಿ : ಐತಿಹಾಸಿಕ ವಿಶೇಷ ಸಂಪುಟ ಸಭೆ ಯಲ್ಲಿ ಕರ್ನಾಟಕ ವಖ್ಫ್ ಬೋರ್ಡ್ ವತಿಯಿಂದ ರಾಜ್ಯದ ಹದಿನೈದು ಜಿಲ್ಲೆಗಳಲ್ಲಿ ಮಹಿಳಾ…

4 hours ago

ಸೆ.22 ರಂದು ತುಂಗಭದ್ರೆಗೆ ಬಾಗಿನ ಅರ್ಪಣೆ: ಡಿ.ಕೆ ಶಿವಕುಮಾರ್

ಕಲಬುರಗಿ: ಬರುವ ಸೆಪ್ಟೆಂಬರ್ 22 ರಂದು ಮುಖ್ಯಮಂತ್ರಿ ಸಿದ್ಧರಾಮಯ್ಯ ಹಾಗೂ ಸಚಿವ ಸಂಪುಟದ ಸಹೊದ್ಯೋಗಿಗಳೊಂದಿಗೆ ತುಂಗಭದ್ರಾ ಜಲಾಶಯಕ್ಕೆ ಬಾಗಿನ ಅರ್ಪಿಸಲಾಗುವುದು…

4 hours ago

ಅಮೇರಿಕಾದಲ್ಲಿ ಯಾರನ್ನೂ ಭೇಟಿಯಾಗಿಲ್ಲ: ಡಿಕೆ ಶಿವುಕುಮಾರ್

ಕಲಬುರಗಿ: ಅಮೇರಿಕಾದ ಪ್ರವಾಸದಲ್ಲಿ ತಾವು ಯಾರನ್ನೂ ಭೇಟಿಯಾಗಿಲ್ಲ ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ ಹೇಳಿದರು. ಸಚಿವ ಸಂಪುಟದ ಸಭೆಯಲ್ಲಿ ಪಾಲ್ಗೊಳ್ಳಲು…

4 hours ago

ನಾಗಮಂಗಲ ಘಟನೆ: ತನಿಖೆ ನಂತರ ಇನ್ನಷ್ಟು ಕ್ರಮ: ಗೃಹ ಸಚಿವ ಪರಮೇಶ್ವರ

ಕಲಬುರಗಿ: ನಾಗಮಂಗಲದ ಅಹಿತರ ಘಟನೆ ಎಲ್ಲ ಆಯಾಮಗಳಿಂದ ತನಿಖೆ ನಡೆಸಲಾಗುತ್ತಿದ್ದು, ತನಿಖಾ ವರದಿ ನಂತರ ಮುಂದಿನ ಹೆಚ್ಚಿನ ಕ್ರಮ ಕೈಗೊಳ್ಳಲಾಗುವುದು…

4 hours ago

Notice: ob_end_flush(): Failed to send buffer of zlib output compression (0) in /home3/emedixap/public_html/wp-includes/functions.php on line 5420