ಚಿಂಚೋಳಿ: ಕೇಂದ್ರ ಸರ್ಕಾರವು 1ರಿಂದ 8ನೇ ತರಗತಿವರೆಗಿನ ಎಸ್ಸಿ, ಎಸ್ಟಿ, ಅಲ್ಪಸಂಖ್ಯಾತರ ಮತ್ತು ಹಿಂದುಳಿದ ವರ್ಗಗಳಿಗೆ ಸೇರಿದ ಮೆಟ್ರಿಕ್ಪೂರ್ವ ವಿದ್ಯಾರ್ಥಿ ಗಳ ವಿದ್ಯಾರ್ಥಿ ವೇತನ ರದ್ದುಗೊಳಿಸಿರುವ ಆದೇಶವನ್ನು ವಾಪಸ್ ಪಡೆಯಬೇಕೆಂದು ಸಮಾಜಿಕ ಕಾರ್ಯಕರ್ತ ಸಂತೋಷ ಜಾಬೀನ್ ಆಗ್ರಹಿಸಿದ್ದಾರೆ.
ಈ ರೀತಿ ಆದೇಶ ಹೊರಡಿಸಿರುವುದು ಸಂವಿಧಾನ ದ್ರೋಹಿ ಕೃತ್ಯವಾಗಿದೆ ಏಕಾಏಕಿ ವಿದ್ಯಾರ್ಥಿವೇತನ ನಿಲ್ಲಿಸುವುದರಿಂದ ಶಾಲೆಗಳ ದಾಖಲಾತಿ ಪ್ರಮಾಣ ಕಡಿಮೆಯಾಗಲಿದೆ ಪರಿಷಿಷ್ಠ ಜಾತಿ ಮತ್ತು ಪಂಗಡದ, ಹಿಂದುಳಿದ, ಅಲ್ಪಸಂಖ್ಯಾತರ ವಿದ್ಯಾರ್ಥಿಗಳನ್ನು ಶಿಕ್ಷಣ ವಂಚಿತರಾಗಿಸಲ್ಲು ಮಕ್ಕಳು ಪೋಷಕರ ಮೇಲೆ ಅವಲಂಬಿತರಾಗಿ ಶೈಕ್ಷಣಿಕ ಸಾಮಗ್ರಿಗಳನ್ನು ಖರೀದಿಸುವ ಅನಿವಾರ್ಯ ಸೃಷ್ಟಿಯಾಗಿದೆ ಎಂದು ಕಳವಳ ವ್ಯಕ್ತಪಡಿಸಿದ್ದಾರೆ.
ಲಕ್ಷಾಂತರ ಮಕ್ಕಳಿಗೆ ಅನ್ಯಾಯವಾಗುತ್ತೀದೆ ಆದರಿಂದ ಸರ್ಕಾರವು ಗಂಭೀರವಾಗಿ ಪರಿಗಣಿಸಿ ವೇತನ ರದ್ದು ಹಿಂತೆಗೆದುಕೋಳಬೇಕೆಂದು ಒತ್ತಾಯಿಸಿದ್ದಾರೆ.