ಕಲಬುರಗಿ: ಜಿಲ್ಲೆಯ ವಿದ್ಯಾನಗರ ಶ್ರೀ ಕೃಷ್ಣ ಮಂದಿರದಲ್ಲಿ ಗೀತಾ ಜಯಂತಿ ಪ್ರಯುಕ್ತ ಪಂಡಿತ ಶ್ರೀ ಗುರುಮಧ್ವಾಚಾರ್ಯ ನವಲಿ ಅವರಿಂದ ಪ್ರವಚನ ಹಾಗೂ ಭಜನಾ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.
ಈ ಸಂದರ್ಭದಲ್ಲಿ ಆಡಳಿತ ಮಂಡಳಿ ಸದಸ್ಯರು, ಜಯತೀರ್ಥ ವಿದ್ಯಾರ್ಥಿ ನಿಲಯದ ವಿದ್ಯಾರ್ಥಿಗಳು ಹಾಗೂ ಬಡಾವಣೆಯ ನಿವಾಸಿಗಳು ಉಪಸ್ಥಿತರಿದ್ದರು.