ಕನ್ನಡ ಜ್ಯೋತಿ ರಥ ಯಾತ್ರೆ ಅದ್ಧೂರಿಯಾಗಿ ಸ್ವಾಗತಿಸೋಣ

ಸುರಪುರ : ಕನ್ನಡ ಸಾಹಿತ್ಯ ಪರಿಷತ್ ವತಿಯಿಂದ ನಡೆಸಲಾಗುತ್ತಿರುವ ಕನ್ನಡ ಜ್ಯೋತಿ ರಥ ಯಾತ್ರೆ ಸುರಪುರ ನಗರಕ್ಕೆ ಆಗಮಿಸುತ್ತಿರುವ ಹಿನ್ನೆಲೆಯಲ್ಲಿ ಮಂಗಳವಾರ ನಗರದ ತಹಸೀಲ್ದಾರ್ ಕಚೇರಿಯಲ್ಲಿ ಪೂರ್ವಭಾವಿ ಸಭೆ ನಡೆಸಲಾಯಿತು.

ಸಭೆಯ ಅಧ್ಯಕ್ಷತೆ ವಹಿಸಿದ್ದ ತಹಸೀಲ್ದಾರ್ ಸುಬ್ಬಣ್ಣ ಜಮಖಂಡಿಯವರು ಮಾತನಾಡಿ, ನಾಳೆ(ಬುಧವಾರ) ಬೆಳಗ್ಗೆ 11.30 ಗಂಟೆಗೆ ಕನ್ನಡ ಜ್ಯೋತಿ ಹೊತ್ತ ಕನ್ನಡ ರಥ ಜಾಥಾ ಆಗಮಿಸಲಿದ್ದು ಸಮೀಪದ ಹಸನಾಪುರ ನಿಷ್ಠಿ ಎಂಜನಿಯರಿಂಗ್ ಕಾಲೇಜಿನಲ್ಲಿ ಜಾಥಾವನ್ನು ಬರಮಾಡಿಕೊಳ್ಳಲಾಗುವುದು ನಂತರ ಆದಿತಿ ಹೊಟೇಲ್ ವರೆಗೆ ಮೆರವಣಿಗೆಯಲ್ಲಿ ಜಾಥಾವನ್ನು ತೆಗೆದುಕೊಂಡು ಹೋಗಿ ಬೀಳ್ಕೊಡಲಾಗುವುದು ಎಂದು ಹೇಳಿದರು.

ಕನ್ನಡ ಜ್ಯೋತಿ ರಥ ಜಾಥಾಕ್ಕೆ ಶಾಲಾ ಮಕ್ಕಳು ಲೇಜಿಮ್ ಮತ್ತು ಡ್ರಮ್ ಮೂಲಕ ಮೆರವಣಿಗೆಯಲ್ಲಿ ಕೊಂಡೊಯುವರು. ನಗರಸಭೆ ಅಧ್ಯಕ್ಷ-ಉಪಾಧ್ಯಕ್ಷರು, ಸದಸ್ಯರು, ಸಾಹಿತಿಗಳು, ಕನ್ನಡಪರ, ರೈತಪರ, ಪ್ರಗತಿಪರ ಸಂಘಟನೆಗಳ ಮುಖಂಡರು, ನಿಷ್ಠಿ ಕಾಲೇಜಿನ ವಿದ್ಯಾರ್ಥಿಗಳು ಮತ್ತು ಇತರೆ ಶಾಲೆಗಳ ವಿದ್ಯಾರ್ಥಿಗಳು ಭಾಗವಹಿಸಲಿದ್ದಾರೆ ಎಂದರು.

86ನೇ ಅಖಿಲ ಭಾರತ ಸಾಹಿತ್ಯ ಸಮ್ಮೇಳನವು ಜನವರಿ 6,7,8 ರಂದು ಹಾವೇರಿಯಲ್ಲಿ ವಿಶಿಷ್ಟವಾಗಿ ಆಚರಿಸಲು ಕನ್ನಡ ಜ್ಯೋತಿಯನ್ನು ಹೊತ್ತ ಕನ್ನಡ ರಥ ಜಾಥಾ ಕಾರ್ಯಕ್ರಮವನ್ನು ರಾಜ್ಯಾದ್ಯಂತ ಏರ್ಪಡಿಸಲಾಗಿರುತ್ತದೆ. ರಥ ಜಾಥಾವು ಉತ್ತರ ಕನ್ನಡ ಜಿಲ್ಲೆಯ ಸಿದ್ದಾಪುರ ತಾಲೂಕಿನ ಭುವಗಿರಿಯಿಂದ ಮೊದಲ್ಗೊಂಡು ತದನಂತರ ನಾಡಿನಾದ್ಯಂತ ಎಲ್ಲ ಜಿಲ್ಲೆಗಳಲ್ಲಿ ಸಂಚರಿಸಿ ಸಮ್ಮೇಳನದ ಉದ್ಘಾಟನೆ ವೇಳೆಗೆ ಹಾವೇರಿ ತಲುಪಲು ಈ ಕಾರ್ಯಕ್ರಮ ಆಯೋಜಿಸಲಾಗಿದೆ. ಕಾರಣ ಜಾಥಾದಲ್ಲಿ ಪ್ರತಿಯೊಬ್ಬರು ಪಾಲ್ಗೊಂಡು ಯಶಸ್ವಿಗೊಳಿಸಬೇಕು ಎಂದು ಕೋರಿದರು.

ಕನ್ನಡ ಸಾಹಿತ್ಯ ಪರಿಷತ್ ತಾಲೂಕು ಘಟಕದ ಅಧ್ಯಕ್ಷ ಶರಣಬಸವ ಯಾಳವಾರ ಮಾತನಾಡಿದರು. ಹಿರಿಯ ಸಾಹಿತಿ ಶ್ರೀನಿವಾಸ ಜಾಲವಾದಿ, ನಿವೃತ್ತ ಎಸ್‍ಪಿ ಚಂದ್ರಕಾಂತ ಭಂಡಾರೆ, ಯುವ ಸಾಹಿತಿ ರಾಘವೇಂದ್ರ ಭಕ್ರಿ, ತಾಪಂ ಇಒ ಚಂದ್ರಶೇಖರ ಪವಾರ್, ಕ್ಷೇತ್ರ ಶಿಕ್ಷಣಾಧಿಕಾರಿ ಮಹೇಶ್ ಪೂಜಾರ್, ಟಿಹೆಚ್‍ಒ ಡಾ.ಆರ್.ವಿ.ನಾಯಕ, ಸಬ್ ರೆಜಿಸ್ಟ್ರಾರ್ ಗುರುರಾಜ್ ಸಜ್ಜನ್, ಸಿಡಿಪಿಒ ಅನಿಲಕುಮಾರ, ಅಕ್ಷರ ದಾಸೋಹ ಎಡಿ ಅಮರೇಶ ಕಂಬಾರ್, ಸಮಾಜ ಕಲ್ಯಾಣಾಧಿಕಾರಿ ಸತ್ಯನಾರಾಯಣ ದರಬಾರಿ, ಎಸ್‍ಟಿ ಇಲಾಖೆ ಎಡಿ ಎಂ.ಸಲೀಂ, ಬಿಸಿಎಂ ಅಧಿಕಾರಿ ತಿಪ್ಪಾರೆಡ್ಡಿ, ಅಬಕಾರಿ ಇನ್ಸ್‍ಪೆಕ್ಟರ್ ಜಾಫರ್ ಪಟೇಲ್, ನಗರಸಭೆಯ ಗುರುಸ್ವಾಮಿ ಇದ್ದರು.

emedialine

Recent Posts

ಶ್ರೀಮತಿ ವಿ. ಜಿ  ಕಾಲೇಜಿನ ವಿದ್ಯಾರ್ಥಿನಿಯರಿಂದ ದಾಂಡಿಯಾ ನೃತ್ಯ

ಕಲಬುರಗಿ: ಹೈದ್ರಾಬಾದ ಕರ್ನಾಟಕ ಶಿಕ್ಷಣ ಸಂಸ್ಥೆಯ ಶ್ರೀಮತಿ ವೀರಮ್ಮ ಗಂಗಸಿರಿ ಪದವಿ ಪೂರ್ವ ಮಹಿಳಾ ಮಹಾವಿದ್ಯಾಲಯ ಕಲಬುರಗಿಯಲ್ಲಿ ಪ್ರತಿ ವರ್ಷದಂತೆ…

3 hours ago

ತೂಕದಲ್ಲಿ ಆಗುವ ವ್ಯತ್ಯಾಸ ಸರಿಪಡಿಸಿ: ಪ್ರತಿ ಟನ್ ಕಬ್ಬಿಗೆ 3500 ಬೆಲೆ ನಿಗದಿ ಪಡಿಸಿ

ಅಫಜಲಪುರ: 2024-25ನೇ ಸಾಲಿನಲ್ಲಿ ಅಫಜಲಪುರ ತಾಲೂಕಿನಲ್ಲಿರುವ ಸಕ್ಕರೆ ಕಾರ್ಖಾನೆಗಳು ರೈತರಿಗೆ ಕನಿಷ್ಠ 3500 ರೂ.ಬೆಲೆ ನಿಗದಿ ಪಡಿಸಿ ಘೋಷಣೆ ಮಾಡಬೇಕು,ಅಲ್ಲದೇ…

9 hours ago

ಕಲಬುರಗಿ: ಯತಿ ನರಸಿಂಹಾನಂದ್ ಬಂಧನಕ್ಕೆ ಆಗ್ರಹಿಸಿ ದಿಢೀರ್ ಪ್ರತಿಭಟನೆ

ಕಲಬುರಗಿ: ಕಾರ್ಯಕ್ರಮ ಒಂದರಲ್ಲಿ ಪ್ರವಾದಿ ಮುಹಮ್ಮದ್ (ಸ.ಅ) ಅವರ ವಿರುದ್ಧ ಅಕ್ರಮಣಕಾರಿ ಮತ್ತು ಪ್ರಚೋದನಕಾರಿ ಹೇಳಿಕೆ ನೀಡಿರುವ ಗಾಜಿಯಾಬಾದ್‌ನ ದಾಸ್ನಾ…

19 hours ago

ದುಶ್ಚಟ ಮುಕ್ತ ಸಮಾಜ ನಿರ್ಮಾಣ ಹಕ್ಕೊತ್ತಾಯ ಪತ್ರ ಜಿಲ್ಲಾಧಿಕಾರಿಗಳಿಗೆ ಮಂಡನೆ

ಕಲಬುರಗಿ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಬಿ.ಸಿ ಟ್ರಸ್ಟ್ ಮತ್ತು ಜಿಲ್ಲಾ ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಸಮಿತಿಯಿಂದ…

21 hours ago

ನೀರಿನ ಬಿಲ್ ಬಡ್ಡಿ ಮನ್ನಾ ಮಾಡಲು ಡಾ.ರಶೀದ್ ಜಿಲ್ಲಾಧಿಕಾರಿಗಳಿಗೆ ಮನವಿ

ಶಹಾಬಾದ: ನಗರಸಭೆ ವ್ಯಾಪ್ತಿಯ ಸಾರ್ವಜನಿಕರ ಕುಡಿಯುವ ನೀರಿನ ಬಿಲ್ ಬಡ್ಡಿ ಮನ್ನಾ ಮಾಡಿ ಅಸಲು ಮಾತ್ರ ಪಾವತಿಸಲು ಅನುಕೂಲ ಮಾಡಿಕೊಡಬೇಕೆಂದು…

21 hours ago

ಕೃಷಿ ಪತ್ತಿನ ಸಹಕಾರ ಸಂಘಗಳು ರೈತರ ಜೀವನಾಡಿ; ಮತ್ತಿಮಡು

ಶಹಾಬಾದ: ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಗಳು ರೈತರ ಜೀವನಾಡಿಯಾಗಿದ್ದು, ಇವುಗಳ ಪ್ರಗತಿಗೆ ಆದ್ಯತೆ ನೀಡುವುದು ಪ್ರತಿಯೊಬ್ಬರ ಜವಾಬ್ದಾರಿ ಎಂದು…

21 hours ago

Notice: ob_end_flush(): Failed to send buffer of zlib output compression (0) in /home3/emedixap/public_html/wp-includes/functions.php on line 5420