ಕಲಬುರಗಿ; ಸಂವಿಧಾನ ಶಿಲ್ಪಿ, ಬಾಬಾಸಾಹೇಬ್ ಡಾ.ಬಿ ಆರ್ ಅಂಬೇಡ್ಕರ ರವರ 66 ನೇ ಮಹಾಪರಿನಿರ್ವಾಣ ದಿನ ಅಂಗವಾಗಿ ನಂದಿಕೂರ ಗ್ರಾಮ ಪಂಚಾಯತ್ ಕಾರ್ಯಲಯದಲ್ಲಿ ಅಧ್ಯಕ್ಷೆ ಶ್ವೇತಾ ದಿನೇಶ ದೊಡ್ಡಮನಿ ಅವರು ಬಾಬಾಸಾಹೇಬರ ಭಾವಚಿತ್ರಕ್ಕೆ ಗೌರವ ನಮನಗಳು ಸಲ್ಲಿಸಿದರು.
ನಂತರ ಮಾತನಾಡಿದ ಅವರು ಬಾಬಾಸಾಹೇಬರು ಒಂದು ವೇಳೆ ಈ ದೇಶದಲ್ಲಿ ಜನಿಸದಿದ್ದರೆ ,ಸಂವಿಧಾನ ಬರೆಯದಿದ್ದರೆ ನಾವೂ ಮಹಿಳೆಯರು ಇಂದು ಮುಖ್ಯವಾಹಿನಿಗೆ ಬರಲು ಸಾಧ್ಯವಾಗ್ತಾಯಿರಲಿಲ್ಲ, ಅವರ ಕೊಡುಗೆ ದೇಶಕ್ಕೆ ಮತ್ತು ದೇಶದ ಪ್ರತಿಯೊಬ್ಬ ನಾಗರಿಕನಿಗೂ ಒಳಗೊಂಡಂತೆ ಮಹಿಳಾ ವಿಮೋಚಕರಾಗಿದ್ದಾರೆ, ಇವತ್ತು ಈಡಿ ನಾಡು, ಅವರನ್ನು ಸ್ಮರಿಸುತ್ತಿದೆ, ಅವರ ಋಣದಲ್ಲಿ ಪ್ರತಿಯೊಬ್ಬ ಮಹಿಳೆಯು ಫಲಾನುಭವಿಗಳಾಗಿದ್ದಾರೆ ಹಾಗಾಗಿ ಇಂದು ನಾವೂ ಅವರಿಗೆ ಶತಕೋಟಿ ನಮನಗಳನ್ನು ಸಲ್ಲಿಸಿದರೂ ಕಡಿಮೆನೇ ಎಂದು ಹೇಳಿದರು.
ಈ ಸಂದರ್ಭದಲ್ಲಿ ಪಿಡಿಓ ರಾಮಚಂದ್ರ ಮಸರಕಲ್, ಕಾರ್ಯದರ್ಶಿ ಮಹಾನಂದಾ ಸಿಂಗೆ, ಸದಸ್ಯರಾದ ಚಂದ್ರಕಲಾ ಸೂರ್ಯಕಾಂತ, ಶಿವಲೀಲಾ ರಾಚಯ್ಯ, ಲಕ್ಷ್ಮಿಬಾಯಿ ಕುಪೇಂದ್ರ, ಭಾರತಿಬಾಯಿ ಶಿವಶರಣಪ್ಪ, ಶಶಿಕಲಾ ಶರಣು ಪವಾರ, ಚಂದ್ರಕಾಂತ ಸಿರಸಗಿ, ಮುಖಂಡರಾದ ಶಾಂತಕುಮಾರ ಉದನೂರ ಹಾಗೂ ಅಧಿಕಾರಿಗಳು, ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.
ಸುರಪುರ; ಜೀವನದ ಮೌಲ್ಯಗಳನ್ನು ಎತ್ತಿ ಹಿಡಿಯುವ ಶಕ್ತಿ ಜಾನಪದ ಸಾಹಿತ್ಯ, ಕಲೆಗೆ ಇದ್ದು, ಜಾನಪದ ಸಾರ್ವಕಾಲಿಕ ಸತ್ಯವಾಗಿದೆ ಎಂದು ಲಕ್ಷ್ಮೀಪುರ…
ಸುರಪುರ: ತಿಮ್ಮಾಪುರದ ಮುಖ್ಯ ರಸ್ತೆಯಲ್ಲಿ ನಿರ್ಮಾಣವಾದ ನೂತನ ಮರಗಮ್ಮ ದೇವಿಯ ದೇವಸ್ಥಾನ ಲೋಕಾರ್ಪಣೆ , ಮರಗಮ್ಮ ದೇವಿಯ ರಜತ ಮೂರ್ತಿಯ…
ಕಲಬುರಗಿ: ನಗರದ ಪ್ರತಿಷ್ಠಿತ ಸುಬೇದಾರ ಕೇರ್ ಹಾಸ್ಪಿಟಲ್ ವತಿಯಿಂದ ಕಾಳಗಿ ಪಟ್ಟಣದ ಬಸ್ ನಿಲ್ದಾಣದ ಆವರಣದಲ್ಲಿ ಜುಲೈ 8 ರಂದು…
ವಾಡಿ: ಪಟ್ಟಣದ ಬಸ್ ನಿಲ್ದಾಣದ ಹತ್ತಿರದ ಹನುಮಾನ ಮಂದಿರದ ಮುಂಭಾಗದಲ್ಲಿ ಬಿಜೆಪಿ ಮುಖಂಡರು ಸಾರ್ವಜನಿಕರಿಗೆ ಸಸಿಗಳನ್ನು ವಿತರಿಸುವ ಮೂಲಕ"ತಾಯಿ ಹೆಸರಲ್ಲಿ…
ವಾಡಿ: ಪಟ್ಟಣದ ಬಿಜೆಪಿ ಕಛೇರಿಯಲ್ಲಿ ಭಾರತೀಯ ಜನಸಂಘದ ಸಂಸ್ಥಾಪಕರು, ಭಾರತದ ಅಖಂಡತೆ ಹಾಗೂ ಏಕತೆಗಳಿಗಾಗಿ ಶ್ರಮಿಸಿದ ಡಾ. ಶ್ಯಾಮ ಪ್ರಸಾದ್…
ವಾಡಿ: ಸಂಚಲನ ಸಾಹಿತ್ಯ ಮತ್ತು ಸಾಂಸ್ಕøತಿಕ ವೇದಿಕೆ ವತಿಯಿಂದ ಜುಲೈ ಇಂದು ಬೆಳಿಗ್ಗೆ 10:00 ಗಂಟೆಗೆ ಪಟ್ಟಣದ ಡಾ. ಅಂಬೇಡ್ಕರ್…