ಕಲಬುರಗಿ; ಕೆಲಸದ ಸ್ಥಳದಲ್ಲಿ ಲೈಂಗಿಕ ಕಿರುಕುಳ ವೃತ್ತಿನಿರತ ಮಹಿಳೆಯರಿಗೆ ಬೆದರಿಕೆಯಾಗಿ ಮುಂದುವರಿದಿದೆ, ಮಹಿಳೆಯರ ವಿರುದ್ಧ ನಡೆದ ಅಪರಾಧವನ್ನು ಕಠಿಣ ಶಿಕ್ಷೆಯ ನಿಬಂಧನೆಗಳೊಂದಿಗೆ ಶಿಕ್ಷಿಸಲು ಬಲವಾದ ಕಾಯಿದೆ ಅಸ್ತಿತ್ವದಲ್ಲಿದೆ ಎಂದು ಸಾಮಾಜಿಕ ಕಾರ್ಯಕರ್ತೆ ಮತ್ತು ವೃತ್ತಿಯಲ್ಲಿ ವಕೀಲರಾದ ಶ್ರೀಮತಿ ಆರತಿ ತಿವಾರಿ ಹೇಳಿದರು.
ನಗರದ ಶರಣಬಸವ ವಿಶ್ವವಿದ್ಯಾಲಯದ ದೊಡ್ಡಪ್ಪ ಅಪ್ಪ ಸಭಾಂಗಣದಲ್ಲಿ ಬುಧವಾರದಂದು ಅಂತಾರಾಷ್ಟ್ರೀಯ ಮಹಿಳಾ ದೌರ್ಜನ್ಯ ನಿರ್ಮೂಲನಾ ದಿನಾಚರಣೆ-2022ರ ಅಂಗವಾಗಿ ಆಂತರಿಕ ದೂರು ಸಮಿತಿ (ಐಸಿಸಿ) ಆಯೋಜಿಸಿದ್ದ ವಿಚಾರ ಸಂಕಿರಣದಲ್ಲಿ ಲಿಂಗ ಸಂವೇದನೆ ಮತ್ತು ಲೈಂಗಿಕ ಕಿರುಕುಳ ತಡೆ ಕುರಿತು ಮಾತನಾಡಿದರು. ಕಲಬುರಗಿ ಮಹಾನಗರ ಪಾಲಿಕೆಯಲ್ಲಿ ಎರಡು ಬಾರಿ ಕಾಪೆರ್Çರೇಟರ್ ಆಗಿದ್ದ ತಿವಾರಿ ಅವರು ಮಾತುಗಳನ್ನು ಮುಂದುವರೆಸಿ ದೂರು ಸಮಿತಿಗಳು ಮತ್ತು ಸ್ಥಳೀಯ ದೂರು ಸಮಿತಿಗಳು ಇದ್ದಾಗಲೂ ನ್ಯಾಯಾಲಯಗಳು ಮತ್ತು ಆಂತರಿಕ ಕಠಿಣ ಕ್ರಮಗಳು ಮತ್ತು ಕಠಿಣ ಶಿಕ್ಷೆಗಳ ಹೊರತಾಗಿಯೂ ಮಹಿಳೆಯರಿಗೆ ಕೆಲಸದ ಸ್ಥಳದಲ್ಲಿ ಲೈಂಗಿಕ ಕಿರುಕುಳದ ಹಾವಳಿ ಮುಂದುವರೆದಿದೆ ಎಂದು ಹೇಳಿದರು.
ಶರಣಬಸವ ವಿಶ್ವವಿದ್ಯಾಲಯದ ಡೀನ್ ಡಾ.ಲಕ್ಷ್ಮೀ ಪಾಟೀಲ್ ಮಾಕಾ, ಐಸಿಸಿ ಅಧ್ಯಕ್ಷೆ ಡಾ. ಸುಜಾತಾ ಮಲ್ಲಾಪುರ, ಪೆÇ್ರ. ಜಗದೇವ್ ಪಾಟೀಲ್ ಸೇರಿದಂತೆ ಹಲವರು ಉಪಸ್ಥಿತರಿದ್ದರು.
ಲೈಂಗಿಕ ಕಿರುಕುಳ ತಡೆಗಟ್ಟುವಿಕೆ ಕಾಯ್ದೆ 2013 ರ ನಿಬಂಧನೆಗಳ ಬಗ್ಗೆ ಮತ್ತು ಕೆಲಸದ ಸ್ಥಳದಲ್ಲಿ ಲೈಂಗಿಕ ಕಿರುಕುಳದ ವಿರುದ್ಧದ ಅಪರಾಧಗಳಿಗೆ ಶಿಕ್ಷೆಯ ಕಟ್ಟುನಿಟ್ಟಾದ ನಿಬಂಧನೆಗಳ ಬಗ್ಗೆ ಪುರುಷರಿಗೆ, ವಿಶೇಷವಾಗಿ ಯುವ ಪೀಳಿಗೆಗೆ ಜಾಗೃತಿ ಮೂಡಿಸುವ ಅಗತ್ಯವಿದೆ, ಇದು ಕೆಲಸದ ಸ್ಥಳದಲ್ಲಿ ಮಹಿಳೆಯರ ವಿರುದ್ಧ ಅಪರಾಧಗಳನ್ನು ಮಾಡುವುದನ್ನು ತಡೆಯುತ್ತದೆ ಎಂದು ತಿವಾರಿ ತಿಳಿಸಿದರು.
ಕಲಬುರಗಿ: ಕೇಂದ್ರ ಸರಕಾರ ಜಾರಿಗೊಳ್ಳಿಸುತ್ತಿರುವ ವಕ್ಫ್ ಬಚಾವ್ ಆಂದೋಲನದ ನಿಮಿತ್ತ ಇಂದು ಹಫ್ತ್ ಗುಂಬಜ್ ದರ್ಗಾ ರಸ್ತೆಯ ನ್ಯಾಷನಲ್ ಕಾಲೇಜು…
ಕಲಬುರಗಿ: ಅಪಘಾತದಲ್ಲಿ ತೀವ್ರ ಗಾಯಗೊಂಡಿದ್ದ ಯುವಕನೊಬ್ಬನಿಗೆ ಸುಮಾರು 45 ದಿನಗಳ ಕಾಲ ಐಸಿಯುನಲ್ಲಿ ಚಿಕಿತ್ಸೆ ನೀಡುವುದರ ಜೊತೆಗೆ ಅಗತ್ಯವಿದ್ದ ಕ್ಲಿಷ್ಟಕರ…
ಕಲಬುರಗಿ; ಕ್ರೀಡ ಚಟುವಟಿಕೆ ಹಮ್ಮಿಕೊಳ್ಳುವ ಮೂಲಕ ಮಕ್ಕಳ ಸರ್ವೋತೊಅಭಿವೃದ್ದಿಗೆ ಮುಂದಾಗಿರುವುದು ಸಂತೋಷದಾಯಕ ಜೊತೆಗೆ ಮಕ್ಕಳಿಗೆ ಈ ಸ್ಪರ್ಧೆಗಳಲ್ಲಿ ಭಾಗವಹಿಸಲು ಪ್ರೋತ್ಸಹ…
ಕಲಬುರಗಿ: ನಗರದಲ್ಲಿರುವ ಅಬ್ದುಲ್ ನಜೀರ್ ಸಾಬ್ ರಾಜ್ಯ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಂಸ್ಥೆ ಪ್ರಾದೇಶಿಕ ಕೇಂದ್ರ ಕಲಬುರಗಿಯಲ್ಲಿ, ಅಬ್ದುಲ್…
ಕಲಬುರಗಿ: ಬಿದ್ದಾಪುರ ಕಾಲೋನಿಯಲ್ಲಿ ಶ್ರೀ ವಿನಾಯಕ ಮಿತ್ರ ಮಂಡಳಿ ವತಿಯಿಂದ ಗಣೇಶ್ ವಿಸರ್ಜನೆ ಕಾರ್ಯಕ್ರಮವನ್ನು ನೆರವೇರಿತು. ವಿನಾಯಕ ಪುರಾಣಿಕ್, ಅನಿಲ್…
ಕಲಬುರಗಿ: ನಾಗನಹಳ್ಳಿ ಕ್ರಾಸ್ನಲ್ಲಿರುವ ಗುರುಸ್ವಾಮಿಗಳಾದ ಅಶೋಕ ಹೊನ್ನಳ್ಳಿ ಸನ್ನಿಧಾನದಲ್ಲಿ ಅಯ್ಯಪ್ಪ ಸ್ವಾಮಿ ಮಹಾ ಪೂಜಾ ಕಾರ್ಯಕ್ರಮದಲ್ಲಿ ಮುಗುಳನಾಗಾವ ಅಭಿನವ ಶ್ರೀ…