ಕಲಬುರಗಿ: ಪೂರ್ವ ಪ್ರಾಥಮಿಕ ಶಿಕ್ಷಣದಲ್ಲಿ ಡಿಪ್ಲೋಮೋ (DPSE English Medium) ತರಬೇತಿ ಪಡೆದಿರುವ ಆಭ್ಯರ್ಥಿಗಳಿಗೆ ಉದ್ಯೋಗಾವಕಾಶ ನೀಡಲು ಸರಕಾರಕ್ಕೆ ಸಿಫಾರಸು ಮಾಡಬೇಕೆಂದು ಒತ್ತಾಯಿಸಿ ಮಾಜಿ ಮುಖ್ಯಮಂತ್ರಿ ಎಚ್.ಡಿ ಕುಮಾರ್ ಸ್ವಾಮಿಗೆ ವಿದ್ಯಾರ್ಥಿಗಳು ಮತ್ತು ಪೊಷಕರ ಗುರುವಾರ ನೇತೃತ್ವದಲ್ಲಿ ಮನವಿ ಸಲ್ಲಿಸಿದರು.
ಇಲ್ಲಿನ ಕಲಬುರಗಿ ವಿಮಾನ ನಿಲ್ದಾಣಕ್ಕೆ ಆಗಮಿಸಿದ ವೇಳೆ ಭೇಟಿ ನೀಡಿದ ವಿದ್ಯಾರ್ಥಿಗಳು ಮತ್ತು ಪೊಷಕರು 2018-19 ನೇ ಸಾಲಿನ ಆಯ ವ್ಯಯ ಘೋಷಣೆಯಂತೆ ಪ್ರಸ್ತುತ ರಾಜ್ಯವ್ಯಾಪಿ 1000ಕ್ಕೂ ಅಧಿಕ ಸರ್ಕಾರಿ ಪ್ರಾಥಮಿಕ ಶಾಲೆಗಳಲ್ಲಿ ಆಂಗ್ಲ ಮಾಧ್ಯಮದಲ್ಲಿ ತರಗತಿಗಳು ನಡೆಯುತ್ತಿದೆ ಹಾಗೂ 276 ಕರ್ನಾಟಕ ಪಬ್ಲಿಕ್ ಶಾಲೆಗಳು ಕಾರ್ಯ ನಿರ್ವಹಿಸುತ್ತಿದ್ದು, ಸದರಿ ಶಾಲೆಗಳಲ್ಲಿ ಆಂಗ್ಲ ಮಾಧ್ಯಮದಲ್ಲಿ ಹಾಗೂ 1 ಮತ್ತು 2ನೇ ತರಗತಿಗಳನ್ನು ಪ್ರಾರಂಭಿಸಲಾಗಿದ್ದು, ಮುಂದುವರೆದು, ಸದರಿ ಶಾಲೆಗಳಲ್ಲಿ ಆ ತರಗತಿಗಳಿಗೆ ಬೋಧಿಸಲು ನಿಗದಿತ ವಿದ್ಯಾರ್ಹತೆ ಹೊಂದಿದ ಹಾಗೂ ತರಬೇತಿ ಪಡೆದ ಶಿಕ್ಷಕರು ಲಭ್ಯವಿರುವುದಿಲ್ಲ. ಇದರಿಂದಾಗಿ ಮಕ್ಕಳ ಕಲಿಕೆಯ ಮೇಲೆ ಪ್ರತಿಕೂಲ ಪರಿಣಾಮ ಉಂಟಾಗಿದೆ ಎಂದು ಕಳವಳ ವ್ಯಕ್ತಪಡಿಸಿದ್ದರು.
ವಿದ್ಯಾರ್ಥಿಗಳು 2019-20 ನೇ ಸಾಲಿನಿಂದ ಸರ್ಕಾರಿ ಶಿಕ್ಷಕರ ತರಬೇತಿ ಸಂಸ್ಥೆ ಹೊಸದುರ್ಗ ಹಾಗೂ ಕಲಬುರ್ಗಿಗಳಲ್ಲಿ ಆಂಗ್ಲ ಮಾಧ್ಯಮದಲ್ಲಿಪೂರ್ವ ಪ್ರಾಥಮಿಕ ಶಿಕ್ಷಣದಲ್ಲಿ ಡಿಪ್ಲೋಮೋ (ಆPSಇ) ಕೋರ್ಸನ್ನು ಆರಂಭಿಸಿರುವುದು ಸರಿಯೆಷ್ಟೇ. ಕಳೆದ 03 ಶೈಕ್ಷಣಿಕ ವರ್ಷಗಳಿಂದ ಸದರಿ ಸಂಸ್ಥೆಗಳಿಂದ 200 ಕ್ಕೂ ಹೆಚ್ಚು ವಿದ್ಯಾರ್ಥಿಗಳು ಇಕೋರ್ಸ್ ತೇರ್ಗಡೆ ಹೊಂದಿ ಪೂರ್ವ ಪ್ರಾಥಮಿಕ ಶಾಲಾ ಶಿಕ್ಷಕ/ಶಿಕ್ಷಕಿಯರಾಗಲು ಅರ್ಹತೆ ಹೊಂದಿರುತ್ತಾರೆ ಎಂದು ತಿಳಿಸಿದರು.
ಇಕೋರ್ಸ್ ತೇರ್ಗಡೆಯಾದ ಆಭ್ಯರ್ಥಿಗಳನ್ನು ಆಂಗ್ಲ ಮಾಧ್ಯಮದ ಸರ್ಕಾರಿ ಪ್ರಾಥಮಿಕ ಶಾಲೆ ಹಾಗೂ ಕೆ ಪಿ ಎಸ್ ಶಾಲೆಗಳಲ್ಲಿ ನೇಮಕ ಮಾಡಿಕೊಳ್ಳಲು ಅಗತ್ಯವಿರುವ ವೃಂದ ಮತ್ತು ನೇಮಕಾತಿ ನಿಯಮಗಳನ್ನು ರಚನೆ ಮಾಡಿ ನೇಮಕಾತಿ ಮಾಡಿಕೊಳ್ಳಲು ಸರಕಾರದ ಮೇಲೆ ಒತ್ತಡ ಹಾಕಬೇಕೆಂದು ಆಭ್ಯರ್ಥಿಗಳು ಮತ್ತು ಪೋಷಕರು ಮನವಿ ಪತ್ರದಲ್ಲಿ ಒತ್ತಾಯಿಸಿದ್ದಾರೆ.
ಈ ಸಂದರ್ಭದಲ್ಲಿ ಅಭ್ಯರ್ಥಿಗಳಾದ ಮೊಹಮ್ಮದ್ ಗೌಸ್ ವಿಖಾರ್, ಶಹೇಬಾಜ್, ನೇಹಾ ಫಾತೀಮಾ, ನೇಹಾ ಮಹೇರುನ್ನಿಸಾ, ಆಶಾ, ಪೂಜಾ, ಮಾಣಿಕೇಶ್ವರಿ. ಅಹ್ಮದ್, ನಿಸಾರ್ ಸೇರಿದಂತೆ ಹಲವರು ಇದ್ದರು.