ಕಲಬುರಗಿ : ಬೆಳಗಾವಿ ವಿವಾದವನ್ನು ಕೆಣಕಿ ಮಹಾರಾಷ್ಟ್ರದ ಕನ್ನಡಿಗರ ಮೇಲೆ ದಬ್ಬಾಳಿಕೆ ನಡೆಸುತ್ತಿರುವ ಗೂಂಡಾಗಳ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಕರ್ನಾಟಕ ರಕ್ಷಣಾ ವೇದಿಕೆಯಿಂದ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿ ಜಿಲ್ಲಾಧಿಕಾರಿ ಮುಖಾಂತರ ಮುಖ್ಯಮಂತ್ರಿಗೆ ಮನವಿ ಸಲ್ಲಿಸಲಾಯಿತು.
ಪ್ರತಿಭಟನೆಯಲ್ಲಿ ಜಿಲ್ಲಾಧ್ಯಕ್ಷ ಮಹೇಶ ಕಾಶಿ, ಸಿದ್ದಣ್ಣಗೌಡ ಮಾಲಿಪಾಟೀಲ, ಆನಂದ ದೊಡ್ಡಮನಿ, ಸುರೇಶ ಹೊಸಮನಿ ಸೇರಿದಂತೆ ಇತರರು ಇದ್ದರು.