ಪಕ್ಷ ಅಧಿಕಾರಕ್ಕೆ ತನ್ನಿ ಯಾರಿಗೆ ಸಿಎಂ, ಯಾರನ್ನೂ ಮಂತ್ರಿ ಮಾಡಬೇಕು ಹೈಕಮಾಂಡ್ ತಿರ್ಮಾನಿಸಲಿದೆ: ಖರ್ಗೆ

0
106
  • ಇದೊಂದು ಅಭೂತಪೂರ್ವ ಕಾರ್ಯಕ್ರಮ- ಎಐಸಿಸಿ ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆ ಹೇಳಿಕೆ

ಕಲಬುರಗಿ: ಎಐಸಿಸಿ ಅಧ್ಯಕ್ಷನಾಗಿ ಮೊದಲಬಾರಿಗೆ ನಗರಕ್ಕೆ ಬಂದಾಗ ಸುಮಾರು 5 ಕಿಮಿ ಉದ್ದ ಭವ್ಯ ಮೆರವಣಿಗೆ ಮೂಲಕ ನನಗೆ ಬರಮಾಡಿಕೊಂಡಿದ್ದೀರಿ ಇದೊಂದು ಅಭೂತಪೂರ್ವ ಕಾರ್ಯಕ್ರಮವಾಗಿದೆ ಎಂದು ಎಐಸಿಸಿ ಅಧ್ಯಕ್ಷರಾದ ಮಲ್ಲಕಾರ್ಜುನ ಖರ್ಗೆ ಅಭಿಮಾನದಿಂದ ಸ್ಮರಿಸಿದರು.

ಕಲಬುರಗಿ ಯಲ್ಲಿ ನಡೆದ ಕಲ್ಯಾಣ ಕ್ರಾಂತಿ ಸಮಾರಂಭದಲ್ಲಿ ಸನ್ಮಾನ ಸ್ವೀಕರಿಸಿ ಮಾತನಾಡುತ್ತಿದ್ದ ಅವರು ನಾನು ಯಾವುದನ್ನು ಬಯಸಲಿಲ್ಲ. ಎಲ್ಲವೂ ನನಗೆ ಹುಡುಕಿಕೊಂಡು ಬಂದಿವೆ. ನಾನು ಚುನಾವಣೆಗೆ ನಿಲ್ಲುವ ಮನಸಿರಲಿಲ್ಲ. ಆಗ ಸೋನಿಯಾಗಾಂಧಿ ಅವರು ಒತ್ತಾಯ ಮಾಡಿದರು. ಅಂದು ಗುಲಬರ್ಗಾದಲ್ಕಿ ನಡೆದ ಸಭೆಯಲ್ಲಿ ನಾನು ಆರಿಸಿ ಬಂದರೆ ಈಭಾಗಕ್ಕೆ article 371(J) ಜಾರಿಗೆ ತರುವ ಭಾಷೆ ನೀಡಿದರೆ ನಾನುಚುನಾವಣೆ ನಿಲ್ಲುತ್ತೇನೆ ಎಂದೆ. ಎಲ್ಲ ಬಗೆಯ ವಿಚಾರ ಚರ್ಚೆ ಮಾಡಿದ ನಂತರ ಭಾಷೆ ನೀಡಿದರು. ಅದರಂತೆ ನಾನು ಮೊದಲ ಬಾರಿಗೆ ಸಂಸತ್ತಿಗೆ ಸ್ಪರ್ಧೆ ಮಾಡಿದೆ. ಆ ನಂತರ ಎಲ್ಲ ಸಂಸದರನ್ನು ವೈಯಕ್ತಿಕ ಭೇಟಿ ಮಾಡಿ ನಮಗೆ ಬೆಂಬಲ ನೀಡುವಂತೆ ಕೋರಿದೆ. ಇದಕ್ಕೆ ಸೋನಿಯಾ ಗಾಂಧಿ ಅವರು ಸಲಹೆ ಸಹಕಾರ ಮಾರ್ಗದರ್ಶನ ನೀಡಿದರು ಎಂದು ನೆನೆದು ಅಂದು ರಾಜ್ಯದಲ್ಲಿದ್ದ ನಮ್ಮ ಸಿದ್ದರಾಮಯ್ಯ ನವರ ಸರ್ಕಾರ ಜಾರಿಗೆ ತರಲು ಸಮಿತಿ ರಚನೆ ಮಾಡಿದರು.

Contact Your\'s Advertisement; 9902492681

ಆರ್ಟಿಕಲ್ 371(J) ಜಾರಿಯಾದ ನಂತರ ಮೊದಲ ಬಾರಿಗೆ ವಾರ್ಷಿಕ ರೂ1500 ಕೋಟಿ ಅನುದಾನ ಬಿಡುಗಡೆ ಮಾಡುವುದಾಗಿ ಭರವಸೆ ನೀಡಿ ಅದರಂತೆ ಅನುದಾನ ನೀಡಿದೆವು ಆದರೆ ಮುಂದೆ ಬಂದ ಸರ್ಕಾರ ಅದರಂತೆ ನಡೆದುಕೊಳ್ಳಲಿಲ್ಲ ಎಂದರು.

ಕಕ ಭಾಗದಲ್ಲಿ 50000 ಹುದ್ದೆಗಳುಖಾಲಿಇವೆ. ಸರ್ಕಾರ ಈ ಹುದ್ದೆಗಳನ್ನು ಯಾಕೆ ತುಂಬುತ್ತಿಲ್ಲ? ನಮ್ಮ ಸರ್ಕಾರ ಅಧಿಕಾರಕ್ಕೆ ಬರುತ್ತದೆ. ಆಗ ಕೇವಲ ಕಕಭಾಗ ಮಾತ್ರವಲ್ಲದೇ ಇಡೀ ರಾಜ್ಯದ ಖಾಲಿಹುದ್ದೇಗಳನ್ನು ತುಂಬುತ್ತೇವೆ ಎಂದು ಭರವಸೆ ನೀಡಿದರು.

ನಾನು ಗುಜರಾತ್ ಗೆ ಹೋದಾಗ ಮೋದಿ 71000 ಸರ್ಕಾರದ ಹುದ್ದೆ ತುಂಬಿದ ಆದೇಶದ ಪ್ರತಿಯನ್ನು ಕೊಟ್ಟ ಸುದ್ದಿ ಟಿವಿಯಲ್ಲಿ ನೋಡಿದೆ. ಸರ್ಕಾರದ ಅಧಿಕಾರಿಗಳು ಮಾಡುವ ಕೆಲಸವನ್ನು ಪ್ರಧಾನಿ ಮಾಡಿ ಪ್ರಚಾರ ತೆಗೆದುಕೊಂಡರು. ಆದರೆ ದೇಶದಲ್ಲಿ 30 ಲಕ್ಷ ಹುದ್ದೆಗಳು ಖಾಲಿ ಇವೆ. ಅವುಗಳನ್ನು ತುಂಬುತ್ತಿಲ್ಲ. ಈ ಹುದ್ದೆ ಭರ್ತಿಯಾದರೆ ಎಷ್ಟು ಕುಟುಂಬಗಳಿಗೆ ಅನುಕೂಲವಾಗಲಿದೆ. ಅಂದಾಜು ಎರಡು ಕೋಟಿ ಜನರಿಗೆ ಅನ್ನ ಸಿಗಲಿದೆ. ಆ ಕೆಲಸ ಮಾಡುವ ಬದಲು ಬರೀ ಮಾತುಗಳೇ ಹೇಳುತ್ತಿದ್ದಾರೆ. ಪ್ರತಿ ವರ್ಷ 2 ಕೋಟಿಹುದ್ದೆ ಗಳು ಎಲ್ಲಿ ಹೋದವು. ಬರೀ ಸುಳ್ಳುಗಳನ್ನೇ ಹೇಳುತ್ತಿದ್ದಾರೆ ಎಂದು ಟೀಕಿಸಿದರು.

ಈ ಭಾಗದ ಅಭಿವೃದ್ದಿಗೆ ಪ್ರತಿವರ್ಷ ೫೦೦೦ ಕೋಟಿ ಅನುದಾನ ನೀಡುವುದರ ಜೊತೆಗೆ ಹೊಸ ಕೈಗಾರಿಕ ನೀತಿ ಜಾರಿಗೆ ತರುವ ಮೂಲಕ ಒಂದು ಲಕ್ಷ ಹುದ್ದೆ ಸೃಷ್ಟಿಸುತ್ತೇವೆ. ಗೋದಾವರಿ ಹಾಗೂ ಕೃಷ್ಣ ನದಿ ನೀರು ಬಳಕೆಗೆ ಸಂಬಂಧಿಸಿದಂತೆ ಅನುದಾನ ಬಿಡುಗಡೆ ಮಾಡುತ್ತೇವೆ. ಈ ಭಾಗಕ್ಕೆ ಎಜುಕೇಷನ್ ಜೋನ್ ಮಾಡಿ ಬಾಲಕಿಯರಿಗೆ ಪ್ರತ್ಯೇಕ ಡಿಗ್ರಿ ಕಾಲೇಜು ಸ್ಥಾಪನೆ ಪ್ರತಿ ಜಿಲ್ಲೆ ಮಾಡಲಿದ್ದೇವೆ. ಐದು ವರ್ಷದಲ್ಲಿ ಈಭಾಗದ ಜನರಿಗೆ ಮನೆ ಕಟ್ಟಿಕೊಡಲಿದ್ದೇವೆ. ನಾವು ಭರವಸೆ ನೀಡಿದಂತೆ ಯೋಜನೆಗಳನ್ನು ಅನುಷ್ಠಾನ ಕ್ಕೆ ತರುತ್ತೇವೆ ಇದು ನಮ್ಮ ಬದ್ಧತೆ. ನಾವು ನಮ್ಮನ್ನು ಅಧಿಕಾರಕ್ಕೆ ತರಬೇಕು ಎಂದು ಮನವಿ ಮಾಡಿದರು.

ಈ ಸಂದರ್ಭದಲ್ಲಿ ಪ್ರಧಾನ ಕಾರ್ಯದರ್ಶಿ ರಣದೀಪ್ ಸಿಂಗ್ ಸುರ್ಜೆವಾಲ, ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್, ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ, ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕ ಬಿ ಕೆ ಹರಿಪ್ರಸಾದ್, ಕೆಪಿಸಿಸಿ ಕಾರ್ಯಾಧ್ಯಕ್ಷರಾದ ಈಶ್ವರ್ ಖಂಡ್ರೆ, ಧ್ರುವನಾರಾಯಣ್, ಕೇಂದ್ರದ ಮಾಜಿ ಸಚಿವ ಕೆ ಎಚ್ ಮುನಿಯಪ್ಪ, ಮಾಜಿ ಡಿಸಿಎಂ ಡಾ. ಜಿ ಪರಮೇಶ್ವರ, ಶಾಸಕ ಪ್ರಿಯಾಂಕ್ ಖರ್ಗೆ, ಶಾಸಕಿ ಕನೀಜ್ ಫಾತೀಮಾ, ಡಾ. ಅಜಯಸಿಂಗ್, ರಹೀಮ್ ಖಾನ್, ಮಾಜಿ ಸಚಿವ ರೇವೂನಾಯಕ ಬೆಳಮಗಿ ಸೇರಿದಂತೆ ಮಾಜಿ ಶಾಸಕ ವಿಧಾನ ಪರಿಷತ್ ಸದಸ್ಯರು, ಪಕ್ಷದ ವಿವಿಧ ಮೋರ್ಚಾ ಮತ್ತು ಘಟಕಗಳ ಅಧ್ಯಕ್ಷರು ಮತ್ತು ಸದಸ್ಯರು ಸೇರಿದಂತೆ ಕಾರ್ಯಕರ್ತರು ಇದ್ದರು.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here