ಬೀದರ್: ನ್ಯಾಯಯುತವಾದ ಬೇಡಿಕೆ ಮುಂದಿಟ್ಟು ಕೊಂಡು ಸುಮಾರು 163 ದಿನಗಳಿಂದ ಅಹೋರಾತ್ರಿ ಧರಣಿ ಸತ್ಯಾಗ್ರಹ ನಡೆಸುತ್ತಿರುವ ಕಾರಂಜಾ ಸಂತ್ರಸ್ತರ ಹೋರಾಟಕ್ಕೆ ರಾಜ್ಯ ಸರ್ಕಾರ ತಕ್ಷಣ ಸ್ಪಂದಿಸಲು ಕಲ್ಯಾಣ ಕರ್ನಾಟಕ ಜನಪರ ಸಂಘರ್ಷ ಸಮಿತಿಯ ಸಂಸ್ಥಾಪಕ ಅಧ್ಯಕ್ಷರಾದ ಲಕ್ಷ್ಮಣ ದಸ್ತಿಯವರು ಸರ್ಕಾರಕ್ಕೆ ಒತ್ತಾಯಿಸಿದ್ದಾರೆ.
ಸರ್ಕಾರ ಕಾವೇರಿ ಜಲಾನಯನ ಪ್ರದೇಶದ ಸಂತ್ರಸ್ತರಿಗೆ ನ್ಯಾಯ ನೀಡುವಲ್ಲಿ ಈ ಹಿಂದೆ ವಿಶೇಷ ಆದ್ಯತೆ ನೀಡಿ ಇಚ್ಛಾಶಕ್ತಿ ವ್ಯಕ್ತಪಡಿಸಿದಲ್ಲದೆ ಅಲ್ಲಿಯ ಬಹುತೇಕ ಎಲ್ಲಾ ನೀರಾವರಿ ಯೋಜನೆಗಳು ಪೂರ್ಣಗೊಳಿಸಿ ಕಾವೇರಿ ಕಣಿವೆ ಪ್ರದೇಶದ ರೈತರ ಕನಸು ನನಸು ಮಾಡಿದಂತೆ,ಕೃಷ್ಣಾ ಮತ್ತು ಗೋದಾವರಿ ಜಲಾಶಯದ ಪ್ರದೇಶದ ನೀರಾವರಿ ಯೋಜನೆಗಳು ಇನ್ನು ಪೂರ್ತಿಗೊಳಿಸದೆ ಸಂತ್ರಸ್ತರಿಗೂ ನ್ಯಾಯ ಒದಗಿಸುವಲ್ಲಿ ನಿರ್ಲಕ್ಷತ ಧೋರಣೆ ಅನುಸರಿಸುತ್ತಿವದು ಖಂಡನೀಯ. ಕಳೆದ ನಾಲ್ಕು ದಶಕಗಳಿಂದ ಈ ಅನ್ಯಾಯ ಮಲತಾಯಿ ಧೋರಣೆ ಮುಂದುವರದಿದೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿರವರು ಈ ಬಗ್ಗೆ ಗಂಭೀರವಾಗಿ ಪರಿಗಣಿಸಿ ತಕ್ಷಣ ಸ್ಪಂದಿಸಿ ನ್ಯಾಯ ಒದಗಿಸಲು ಸಮಿತಿ ಅಗ್ರಹಹಿಸುತ್ತದೆ.
ಬೀದರ ಜಿಲ್ಲೆಯ ಸಮಗ್ರ ಅಭಿವೃದ್ಧಿಗೆ ಮತ್ತು ಕಾರಂಜಾ ಸಂತ್ರಸ್ತರಿಗೆ ನ್ಯಾಯಕ್ಕಾಗಿ ಅಗ್ರಹಿಸಿ ನಾಳೆ 12 ರಂದು ಸೋಮವಾರ ಬೀದರ ನಗರದ ಕನ್ನಡ ಸಾಹಿತ್ಯ ಸಂಘದ ಸಭಾಂಗಣದಲ್ಲಿ ಮಧ್ಯಾಹ್ನ 3ಗಂಟೆಗೆ ಕರೆದಿರುವ ಎಲ್ಲಾ ಧರ್ಮ ಗುರುಗಳ ಮಠಾದೀಶರ, ಹಾಲಿ ಮಾಜಿ ಜನಪ್ರತಿನಿಧಿಗಳ,ಸಂಘ ಸಂಸ್ಥೆಗಳ ಸಭೆಗೆ ಜನಪರ ಕನ್ನಡಪರ, ದಲಿತ ಹಿಂದುಳಿದ ಅಲ್ಪಸಂಖ್ಯಾತರ, ರೈತ, ಕಾರ್ಮಿಕ ಯುವ ವಿಧ್ಯಾರ್ಥಿಪರ ಸಂಘಟನೆಗಳು ಭಾಗವಹಿಸಿ ಸಂಘಟಿತ ಹೋರಾಟಕ್ಕೆ ಬೆಂಬಲಿಸಲು ಸಮಿತಿ ಮನವರಿಕೆ ಮಾಡುತ್ತದೆ.
ಬೀದರ ಜಿಲ್ಲೆಯ ಜನಪ್ರತಿನಿಧಿಗಳು ಪಕ್ಷಬೇದ ಮರೆತು ಸಂಘಟಿತವಾಗಿ ರಾಜಕೀಯ ಇಚ್ಛಾಶಕ್ತಿ ಪ್ರದರ್ಶಿಸುವದು ಅತಿ ಅವಶ್ಯವಾಗಿದೆ. ನಾಳೆಯ ಬೀದರ ಸಭೆಗೆ ಕಲ್ಯಾಣ ಕರ್ನಾಟಕದ ಎಲ್ಲಾ ಹೋರಾಟಗಾರರು ಬೆಂಬಲಿಸಲು ಸಮಿತಿ ಅಗ್ರಹಹಿಸುತ್ತದೆ.
ಪೂಜ್ಯ ಮಠಾದೀಶರು ಇಂತಹ ರಚನಾತ್ಮಕ ಕಾರ್ಯಕ್ಕೆ ತಮ್ಮ ಆಶೀರ್ವಾದ ನೀಡಿ ಬೆಂಬಲಿಸಿ ಸರ್ಕಾರದ ಕಣ್ಣು ತೆರೆಸಲು ಸಮಿತಿ ವಿನಂತಿಸಿಕೊಳ್ಳುತ್ತದೆ ಅದರಂತೆ ಈ ಮಹತ್ವದ ಸಭೆಯಲ್ಲಿ ಕೈಗೊಳ್ಳವ ನಿರ್ಣಯಗಳಿಗೆ ತಮ್ಮ ಸಮಿತಿ ಬದ್ಧತೆಯಿಂದ ಬೆಂಬಲಿಸುವದಾಗಿ ದಸ್ತಿಯವರು ಪ್ರಕಟಣೆ ಮೂಲಕ ತಿಳಿಸಿರುತ್ತಾರೆ.
ಕಾಳಗಿ: ಈ ಹಿಂದೆ ಕೇಳಿ ಬಂದ ಕೋರ್ ಕಮಿಟಿ ಸಭೆಯಲ್ಲಿ ಬಿಜೆಪಿ ಗ್ರಾಮೀಣ ಜಿಲ್ಲಾಧ್ಯಕ್ಷ ಬದಲಾವಣೆ ಮಾಡಲು ಪಕ್ಷ ಕೈಗೊಂಡ…
ಕಲಬುರಗಿ: ಜೀವನದಲ್ಲಿ ಎದುರಾಗುವ ಅರಿಷಡ್ ವೈರಿಗಳನ್ನು ಗೆದ್ದು ಉತ್ತಮ ಬದುಕು ಕಟ್ಟಿದರೆ ಅಭಿವೃದ್ಧಿ ಹೊಂದಲು ಸಾಧ್ಯ ಎಂದು ಮಾಜಿ ಲೋಕಸಭಾ…
ಸುರಪುರ: ಕನ್ನಡ ಸಾಹಿತ್ಯ ಸಂಘ ಸುರಪುರ ಹಾಗೂ ಪಬ್ಲಿಕ್ ರಿಕ್ರಿಯೇಷನ್ ಕ್ಲಬ್ ವತಿಯಿಂದ 38ನೇ ನಾಡಹಬ್ಬ ಉತ್ಸವಾಚರಣೆ ಅಂಗವಾಗಿ ನಗರದ…
ಸುರಪುರ: ನಗರದ ಶ್ರೀ. ವೀರಪ್ಪ ನಿಷ್ಠಿ ತಾಂತ್ರಿಕ ಮಹಾವಿದ್ಯಾಲಯದ ಆವರಣದಲ್ಲಿ ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಸಮೂಹ ಸಂಸ್ಥೆಗಳ ಅಡಿಯಲ್ಲಿ ನಡೆದ…
ಸುರಪುರ: ಕೊಡೇಕಲ್ ಗ್ರಾಮದಲ್ಲಿ ಲೈಂಗಿಕ ದೌರ್ಜನ್ಯ ನಡೆಸಿರುವ ಆರೋಪಿಗಳನ್ನು ಬಂಧಿಸುವಂತೆ ಆಗ್ರಹಿಸಿ ಇದೇ ಅಕ್ಟೋಬರ್ 8 ರಂದು ಸುರಪುರ ಬಂದ್…
ಕಲಬುರಗಿ: ಜಯ ಕರ್ನಾಟಕ ರಕ್ಷಣಾ ಸೇನೆ ಜಿಲ್ಲಾಧ್ಯಕ್ಷರಾದ ಮಲ್ಲಿಕಾರ್ಜುನ್ ಎಸ್ ಕಿಳ್ಳಿ ರವರ ಜನ್ಮ ದಿನದ ಆಂಗವಾಗಿ ಶ್ರೀನಿವಾಸ ಸರಡಗಿ…