ಬಿಸಿ ಬಿಸಿ ಸುದ್ದಿ

ಜೀವನದಲ್ಲಿ ಶಿಸ್ತನ್ನು ಕಾಪಾಡಿಕೊಳ್ಳಬೇಕು: ಪ್ರಸಾದರಾವ

ಕಲಬುರಗಿ: ವೈಯಕ್ತಿಕ ಜೀವನ ಮತ್ತು ವೃತ್ತಿ ಜೀವನದ ಅಂಶಗಳನ್ನು ಪ್ರತಿದಿನ ಬರೆಯುವ ಅಭ್ಯಾಸ ಬೆಳೆಸಿಕೊಳ್ಳಬೇಕು. ಪ್ರತಿಯೊಬ್ಬರು ದಿನಚರಿಯ ಬರೆಯುವ ಹವ್ಯಾಸ ವೃದ್ಧಿಸಿಕೊಳ್ಳುವುದರ ಮೂಲಕ ತಮ್ಮ ಜೀವನದಲ್ಲಿ ಶಿಸ್ತನ್ನು ಕಾಪಾಡಿಕೊಳ್ಳಬೇಕು ಎಂದು ಕಾರ್ಪೊರೇಟ್ ಟ್ರೇನರ್ ಪ್ರಸಾದರಾವ ತಿಳಿಸಿದರು.

ನಗರದ ಶತಮಾನೋತ್ಸವ ಸಭಾಂಗಣದಲ್ಲಿ ಗುರುವಾರ ಹಮ್ಮಿಕೊಂಡಿದ್ದ ಇಂಡಕ್ಷನ್ (ದೀಕ್ಷಾರಂಭ-೨೦೧೯) ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಪ್ರತಿಯೊಬ್ಬರು ತಮ್ಮ ತಮ್ಮ ಜವಾಬ್ದಾರಿಯನ್ನು ಅರಿಯಬೇಕು. ವೈಯಕ್ತಿಕ ಜೀವನದಲ್ಲಿ ತಾಯಿಯಾಗಿ, ತಂದೆಯಾಗಿ, ಅಣ್ಣನಾಗಿ, ಅಕ್ಕನಾಗಿ, ವೃತ್ತಿ ಜೀವನದಲ್ಲಿ ಶಿಕ್ಷಕರಾಗಿ, ತರಬೇತುದಾರರಾಗಿ ಮುಂತಾದ ಪಾತ್ರಗಳನ್ನು ಸರಿಯಾಗಿ ನಿಭಾಯಿಸಿದಾಗ ಮಾತ್ರ ಒಬ್ಬ ವ್ಯಕ್ತಿ ಪರಿಪೂರ್ಣ ವ್ಯಕ್ತಿಯಾಗುತ್ತಾನೆ ಎಂದು ಹೇಳಿದರು.

ಭಗವದ್ಗೀತೆ, ಖುರಾನ್, ಬೈಬಲ್ ಯಾವದೇ ಗ್ರಂಥ ಆಗಲಿ, ಹಿಂದೂ, ಮುಸ್ಲಿಂ, ಬೌಧ್ಧ, ಕ್ರೈಸ್ತ ಯಾವದೇ ಧರ್ಮದವರಾಗಲಿ ಎಲ್ಲರೂ ಎಲ್ಲ ಮಾಹಾನ್ ಗ್ರಂಥಗಳನ್ನು ಓದಬೇಕು. ಎಲ್ಲ ಧರ್ಮದ ಸಾರ ಒಂದೇ ಆಗಿರುತ್ತದೆ. ಮಾನವ ಪರಿಪೂರ್ಣತೆಯನ್ನು ಸಾಧಿಸುವ ಉದ್ದೇಶ ಹೊಂದಿರುತ್ತದೆ ಎಂದು ವಿವರಿಸಿದರು.

ತಾಯಿ ಜನ್ಮ ಕೋಡುತ್ತಾಳೆ, ಶಿಕ್ಷಕಿ ಭವಿಷ್ಯ ರೂಪಿಸುತ್ತಾಳೆ. ಹೀಗೆ ಸ್ತ್ರೀ ದೇವತಾ ಸ್ವರೂಪಿಯಾಗಿದ್ದಾಳೆ. ನಮ್ಮನೆಲ್ಲ ಹೆತ್ತ ತಾಯಿ, ಹೊತ್ತ ಭೂಮಿ, ನಮ್ಮ ದೇಶದಲ್ಲಿನ ಪ್ರತಿ ನದಿಯನ್ನು ಹೆಣ್ಣಿನ ಹೆಸರಿನಿಂದ ಗುರುತಿಸಲಾಗಿದೆ. ನಮ್ಮ ದೇಶದ ಮಹಿಳೆಯರು ಎಷ್ಟು ಗೌರವ ಗಂಭೀರದಿಂದ ಬದಕುತ್ತಿದ್ದಾರೆ ಎಂಬುವುದಕ್ಕೆ ವಿದೇಶಾಂಗ ಮಾಜಿ ಸಚೀವೆ ಸುಷ್ಮಾ ಸ್ವರಾಜ್ ಅವರ ವ್ಯಕ್ತಿತ್ವದಿಂದ ಅರಿತುಕೊಳ್ಳಬಹಾಗಿದೆ ಎಂದರು.

ವಿವಿ ಸಮ ಕುಲಪತಿ ಡಾ. ವಿ.ಡಿ.ಮೈತ್ರಿ, ವಿವಿ ಕುಲಸಚಿವ ಡಾ. ಅನೀಲಕುಮಾರ ಬಿಡವೆ ಇತರರು ಉಪಸ್ಥಿತರಿದ್ದರು.

ಪ್ರೊ. ಚಂದ್ರಶೇಖರ ನಿರೂಪಿಸಿದರು. ಪ್ರೊ. ಶರಣಮ್ಮ ಪಾಟೀಲ ಸ್ವಾಗತಿಸಿದರು. ಪ್ರೋ. ಪ್ರದೀಪ ಕುಮಾರ ಅತಿಥಿಯನ್ನು ಪರಿಚಯಿಸಿದರು.

emedialine

Recent Posts

ಮಣಿಕಂಠ ರಾಠೋಡ ಆರೋಪ ಸತ್ಯಕ್ಕೆ ದೂರ | ಅಕ್ರಮ‌ವಾಗಿ ಅಕ್ಕಿ ಸಾಗಾಟವಾಗಿಲ್ಲ: ಆಹಾರ ಇಲಾಖೆ ಸ್ಪಷ್ಟನೆ

ಕಲಬುರಗಿ: ಕಳೆದ‌ ಅಕ್ಟೋಬರ್ 2 ರಂದು‌ ನಗರದ ಹೊರವಲಯದ ನಂದೂರ ಕೈಗಾರಿಕಾ ಪ್ರದೇಶದ ದಾಲ್ ಮಿಲ್ ವೊಂದರಲ್ಲಿ ಅಕ್ರಮ ಅಕ್ಕಿ…

6 hours ago

ರುಕ್ಮಾಪುರ: ಶ್ರೀ ದೇವಿ ಪಾರಾಯಣ ನಾಳೆಯಿಂದ

ಸುರಪುರ: ತಾಲೂಕಿನ ರುಕ್ಮಾಪುರ ಗ್ರಾಮದ ಬಣಗಾರ ಮನೆಯಲ್ಲಿ ಬನ್ನಿಮಹಾಂಕಾಳಿ ನವರಾತ್ರಿ ಉತ್ಸವದ ಅಂಗವಾಗಿ ೪೪ನೇ ವರ್ಷದ ಶ್ರೀ ದೇವಿ ಪಾರಾಯಣ…

9 hours ago

ಶಿಕ್ಷಣ ಕ್ಷೇತ್ರದಲ್ಲಿ ಸಾಧನೆಗೈದ ರಾಜಶೇಖರ್ ತಲಾರಿಗೆ ಮಾಧ್ಯಮ ರತ್ನ ಪ್ರಶಸ್ತಿ

ಕಲಬುರಗಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಧ್ವನಿ ಸಂಘ ಜಿಲ್ಲಾಮಟ್ಟದ ಪತ್ರಕರ್ತರ ಸಮಾವೇಶ ಸೆಪ್ಟೆಂಬರ್ 16ರಂದು ಅಫಜಲಪೂರ ಪಟ್ಟಣದಲ್ಲಿ ನಡೆದ ಸಂದರ್ಭದಲ್ಲಿ…

13 hours ago

24 ನೇ ವರ್ಷದ `ಅಮ್ಮ ಪ್ರಶಸ್ತಿ’ಗೆ ಕೃತಿಗಳ ಆಹ್ವಾನ

ಕಲಬುರಗಿ; ಕನ್ನಡ ಸಾಹಿತ್ಯ ಕ್ಷೇತ್ರದಲ್ಲಿ ವಿಶಿಷ್ಟ ಖ್ಯಾತಿ ಪಡೆದ ಜಿಲ್ಲೆಯ ಸೇಡಂನ ಮಾತೋಶ್ರೀ ಮಹಾದೇವಮ್ಮ ನಾಗಪ್ಪ ಮುನ್ನೂರ್ ಪ್ರತಿಷ್ಠಾನದ ವತಿಯಿಂದ…

14 hours ago

ಚಿಂಚೋಳಿ: ಪ್ರವಾದಿ ಅವಹೇಳನ ಖಂಡಿಸಿ ಪ್ರತಿಭಟನೆ

ಚಿಂಚೋಳಿ : ಪ್ರವಾದಿ ಮಹ್ಮದ ಪೈಗಂಬರ್ ಅವರನ್ನು ಅವಮಾನಿಸಿದ ನರಸಿಂಹಾನಂದ ಸರಸ್ವತಿ ಸ್ವಾಮಿಗಳ ವಿರುದ್ಧ ಪ್ರಕರಣ ದಾಖಲಿಸಬೇಕು ಎಂದು ಆಗ್ರಹಿಸಿ…

16 hours ago

ಗುರುರಾಜ ಕರ್ಜಗಿಯನ್ನು ಶೈಕ್ಷಣಿಕ ಗುಣಮಟ್ಟ ಸುಧಾರಣಾ ಸಮಿತಿಯಿಂದ ಕೈಬಿಡಲು ಎಸ್ಎಫ್ಐ ಆಗ್ರಹ

ಕಲಬುರಗಿ: ಕಲ್ಯಾಣ ಕರ್ನಾಟಕದ ಶೈಕ್ಷಣಿಕ ಗುಣಮಟ್ಟ ಸುಧಾರಣೆಗಾಗಿ ಕೆ.ಕೆ.ಆರ್.ಡಿ.ಬಿ ಯು ಸಮಿತಿಯೊಂದನ್ನು ರಚಿಸಿ, ಗುರುರಾಜ ಕರ್ಜಗಿ ಅವರನ್ನು ಅಧ್ಯಕ್ಷರನ್ನಾಗಿ ಮಾಡಿರುವ…

1 day ago

Notice: ob_end_flush(): Failed to send buffer of zlib output compression (0) in /home3/emedixap/public_html/wp-includes/functions.php on line 5420