ಬಿಸಿ ಬಿಸಿ ಸುದ್ದಿ

ಸಿಮೇನ್ಸ್ ಗೇಮಸ್ಸಾ ಕಂಪನಿಯ ವಿರುದ್ಧ ಕನ್ನಡಿಗರ ಆಕ್ರೋಶ

ಆಳಂದ: ಸಿಮೇನ್ಸ್ ಗೇಮಸ್ಸಾ ಕಂಪನಿಯಿಂದ ರೈತರೊಂದಿಗೆ ಅವ್ಯವಹಾರ ನಡೆದಿದೆ ಎಂದು ಆರೋಪಿಸಿ ಹಾಗೂ ಈ ಕಂಪನಿಯಲ್ಲಿ ಕನ್ನಡಿಗರಿಗೆ ನೇಮಕಾತಿಗೆ ಒತ್ತಾಯಿಸಿ ಕರವೇ ತಾಲೂಕು ಅಧ್ಯಕ್ಷ ಮಹಾಂತೇಶ ಸಣ್ಣಮನಿ ನೇತೃತ್ವದಲ್ಲಿ ಮುಖಂಡರು ಸರ್ಕಾರಕ್ಕೆ ಒತ್ತಾಯಿಸಿದರು.

ಈ ಕುರಿತು ಪಟ್ಟಣದಲ್ಲಿ ಪ್ರತಿಭಟನೆ ನಡೆಸಿದ ಮುಖಂಡರು, ತಹಸೀಲ್ದಾರ ಬಸವರಾಜ ಎಂ. ಬೆಣ್ಣೆಶಿರೂರ ಅವರ ಮೂಲಕ ಸರ್ಕಾರಕ್ಕೆ ಬೇಡಿಕೆಯ ಮನವಿ ಸಲ್ಲಿಸಿ ಆಗ್ರಹಿಸಿದರು.

ತಾಲೂಕಿನ ಝಳಕಿ ಸೈಟ್‌ನಲ್ಲಿ ಈ ಕಂಪನಿಯಿಂದ ಪವನ ಶಕ್ತಿ ವಿದ್ಯುತ್ ಉತ್ಪಾದನೆಗಾಗಿ ಸರ್ಕಾರ ನಿಗದಿ ಪಡಿಸಿದ ದರದಲ್ಲಿ ರೈತರ ಜಮೀನು ಖರೀದಿಸದೆ ಹಾಗೂ ಜಮೀನು ಕಳೆದಕೊಂಡ ರೈತರ ಕುಟುಂಬದ ಸದಸ್ಯರಿಗೆ ಕೆಲಸಕ್ಕೆ ತೆಗೆದುಕೊಂಡಿಲ್ಲ. ಕಂಪನಿಗೆ ಜಮೀನು ಕೊಟ್ಟ ರೈತರು ಕೆಲಸ ಕೇಳಿದರೆ, ನಿಮಗೆ ಲಿಖಿತರೂಪದಲ್ಲಿ ಕೆಲಸ ಕೊಡುವ ಭರವಸೆ ನೀಡಿಲ್ಲ ಎಂದು ಉಡಾಪೆಯ ಮಾತುಗಳು ಹೇಳುತ್ತಿದ್ದಾರೆ ಎಂದು ಆಕ್ರೋಶವ್ಯಕ್ತಪಡಿಸಿದರು.

ಇದೇ ಕಂಪನಿಯವರು ನೇರವಾಗಿ ರೈತರ ಬಳಿಗೆ ಬಂದು ಜಮೀನು ಖರೀದಿಸಿರುವುದುಲ್ಲ. ಏಜ್ಂಟರ ಮೂಲಕ ಖರೀದಿ ಮಾಡಿದ್ದು, ಅಲ್ಲದೆ, ಜಮೀನು ಖರೀದಿಸಿದ ಬೆಲೆಯಲ್ಲಿ ತಾರತಮ್ಯ ಕೈಗೊಳ್ಳಲಾಗಿದೆ. ಆದರೆ ತಾಲೂಕಿನ ರೈತರ ಜಮೀನು ಬೆಲೆ ಒಂದೆ ಆಗಿದ್ದರಿಂದ ಎಲ್ಲರಿಗೂ ಒಂದೆ ರೀತಿಯ ದರವನ್ನು ಒದಗಿಸಲು ಕ್ರಮಕೈಗೊಳ್ಳಬೇಕು ಎಂದು ಆಗ್ರಹಿಸಿದರು.

ಕಂಪನಿಯಲ್ಲಿ ತಾಲೂಕಿನವರನ್ನು ಸೇವೆಗೆ ಪರಿಗಣಿಸಿದೆ ಹೊರ ರಾಜ್ಯಗಳಿಂದ ಬಂದವರನ್ನು ನೇಮಿಸಿಕೊಂಡಿದ್ದಾರೆ. ಇವರ ಭಾಷೆಗಳು ತಾಲೂಕಿನವರಿಗೆ ಅರ್ಥವೆ ಆಗುತ್ತಿಲ್ಲ. ಈ ತಾಲೂಕಿನಲ್ಲಿ ಕನ್ನಡ ಭಾಷೆ ಬಲ್ಲವರಾಗಿದ್ದರಿಂದ ಸ್ಥಳೀಯರನ್ನೇ ನೇಮಿಸಿಕೊಳ್ಳಬೇಕು. ವಿದ್ಯಾವಂತ ನಿರುದ್ಯೋಗಿಗಳನ್ನು ಕೆಲಸಕ್ಕೆ ನೇಮಿಸಿಕೊಳ್ಳಬೇಕು. ಇಲ್ಲದೆ ಹೋದಲ್ಲಿ ಮತ್ತಷ್ಟು ಉಗ್ರವಾದ ಹೋರಾಟ ಕೈಗೊಳ್ಳಲಾಗುವುದು ಎಂದು ಬರೆದ ಮನವಿಯಲ್ಲಿ ಎಚ್ಚರಿಸಿದರು.

ಸಂಘಟನೆಯ ಅಧ್ಯಕ್ಷ ಮಹಾಂತೇಶ ಸಣ್ಣಮನಿ, ಭೂಸನೂರ ಗ್ರಾಮದ ಘಟಕದ ಅಧ್ಯಕ್ಷ ಕಲ್ಯಾಣಿ ಭೂಸನೂರ, ರೈತ ಮುಖಂಡ ಸೋಮಣ್ಣಾ ಕೋಳಿ, ಎಪಿಎಂಸಿ ಮಾಜಿ ನಿರ್ದೇಶಕ ಕಲ್ಯಾಣಿ ಜಮಾದಾರ, ಗುರುಶಾಂತಪ್ಪ ಜಮಾದಾರ, ಬರಹಗಾರ ಎಂ.ಕೆ. ಜಮಾದಾರ ಮತ್ತಿತರರು ಭಾಗವಹಿಸಿದ್ದರು.

ಮನವಿ ಸ್ವೀಕರಿಸಿದ ತಹಸೀಲ್ದಾರರು ಈ ಕುರಿತು ಬೇಡಿಕೆಯ ಮನವಿ ಪತ್ರವನ್ನು ಜಿಲ್ಲಾಧಿಕಾರಿಗಳಿಗೆ ಕಳುಹಿಸಿಕೊಟ್ಟು ಬೇಡಿಕೆಗೆ ಸ್ಪಂದಿಸುವಂತೆ ಶ್ರಮಿಸಲಾಗುವುದು ಎಂದು ಭರವಸೆ ನೀಡಿದರು.

emedialine

Recent Posts

ಮಣಿಕಂಠ ರಾಠೋಡ ಆರೋಪ ಸತ್ಯಕ್ಕೆ ದೂರ | ಅಕ್ರಮ‌ವಾಗಿ ಅಕ್ಕಿ ಸಾಗಾಟವಾಗಿಲ್ಲ: ಆಹಾರ ಇಲಾಖೆ ಸ್ಪಷ್ಟನೆ

ಕಲಬುರಗಿ: ಕಳೆದ‌ ಅಕ್ಟೋಬರ್ 2 ರಂದು‌ ನಗರದ ಹೊರವಲಯದ ನಂದೂರ ಕೈಗಾರಿಕಾ ಪ್ರದೇಶದ ದಾಲ್ ಮಿಲ್ ವೊಂದರಲ್ಲಿ ಅಕ್ರಮ ಅಕ್ಕಿ…

2 hours ago

ರುಕ್ಮಾಪುರ: ಶ್ರೀ ದೇವಿ ಪಾರಾಯಣ ನಾಳೆಯಿಂದ

ಸುರಪುರ: ತಾಲೂಕಿನ ರುಕ್ಮಾಪುರ ಗ್ರಾಮದ ಬಣಗಾರ ಮನೆಯಲ್ಲಿ ಬನ್ನಿಮಹಾಂಕಾಳಿ ನವರಾತ್ರಿ ಉತ್ಸವದ ಅಂಗವಾಗಿ ೪೪ನೇ ವರ್ಷದ ಶ್ರೀ ದೇವಿ ಪಾರಾಯಣ…

5 hours ago

ಶಿಕ್ಷಣ ಕ್ಷೇತ್ರದಲ್ಲಿ ಸಾಧನೆಗೈದ ರಾಜಶೇಖರ್ ತಲಾರಿಗೆ ಮಾಧ್ಯಮ ರತ್ನ ಪ್ರಶಸ್ತಿ

ಕಲಬುರಗಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಧ್ವನಿ ಸಂಘ ಜಿಲ್ಲಾಮಟ್ಟದ ಪತ್ರಕರ್ತರ ಸಮಾವೇಶ ಸೆಪ್ಟೆಂಬರ್ 16ರಂದು ಅಫಜಲಪೂರ ಪಟ್ಟಣದಲ್ಲಿ ನಡೆದ ಸಂದರ್ಭದಲ್ಲಿ…

9 hours ago

24 ನೇ ವರ್ಷದ `ಅಮ್ಮ ಪ್ರಶಸ್ತಿ’ಗೆ ಕೃತಿಗಳ ಆಹ್ವಾನ

ಕಲಬುರಗಿ; ಕನ್ನಡ ಸಾಹಿತ್ಯ ಕ್ಷೇತ್ರದಲ್ಲಿ ವಿಶಿಷ್ಟ ಖ್ಯಾತಿ ಪಡೆದ ಜಿಲ್ಲೆಯ ಸೇಡಂನ ಮಾತೋಶ್ರೀ ಮಹಾದೇವಮ್ಮ ನಾಗಪ್ಪ ಮುನ್ನೂರ್ ಪ್ರತಿಷ್ಠಾನದ ವತಿಯಿಂದ…

10 hours ago

ಚಿಂಚೋಳಿ: ಪ್ರವಾದಿ ಅವಹೇಳನ ಖಂಡಿಸಿ ಪ್ರತಿಭಟನೆ

ಚಿಂಚೋಳಿ : ಪ್ರವಾದಿ ಮಹ್ಮದ ಪೈಗಂಬರ್ ಅವರನ್ನು ಅವಮಾನಿಸಿದ ನರಸಿಂಹಾನಂದ ಸರಸ್ವತಿ ಸ್ವಾಮಿಗಳ ವಿರುದ್ಧ ಪ್ರಕರಣ ದಾಖಲಿಸಬೇಕು ಎಂದು ಆಗ್ರಹಿಸಿ…

12 hours ago

ಗುರುರಾಜ ಕರ್ಜಗಿಯನ್ನು ಶೈಕ್ಷಣಿಕ ಗುಣಮಟ್ಟ ಸುಧಾರಣಾ ಸಮಿತಿಯಿಂದ ಕೈಬಿಡಲು ಎಸ್ಎಫ್ಐ ಆಗ್ರಹ

ಕಲಬುರಗಿ: ಕಲ್ಯಾಣ ಕರ್ನಾಟಕದ ಶೈಕ್ಷಣಿಕ ಗುಣಮಟ್ಟ ಸುಧಾರಣೆಗಾಗಿ ಕೆ.ಕೆ.ಆರ್.ಡಿ.ಬಿ ಯು ಸಮಿತಿಯೊಂದನ್ನು ರಚಿಸಿ, ಗುರುರಾಜ ಕರ್ಜಗಿ ಅವರನ್ನು ಅಧ್ಯಕ್ಷರನ್ನಾಗಿ ಮಾಡಿರುವ…

23 hours ago

Notice: ob_end_flush(): Failed to send buffer of zlib output compression (0) in /home3/emedixap/public_html/wp-includes/functions.php on line 5420