ಭಾಲ್ಕಿ: ಶರಣ ದರ್ಶನ ಪ್ರವಚನ ಉದ್ಘಾಟನೆ

ಭಾಲ್ಕಿ: ಶ್ರೀ ಚನ್ನಬಸವಾಶ್ರಮದಲ್ಲಿ ಪೂಜ್ಯ ಶ್ರೀ ಡಾ.ಚನ್ನಬಸವ ಪಟ್ಟದ್ದೇವರ 133ನೆಯ ಜಯಂತ್ಯುತ್ಸವದ ನಿಮಿತ್ಯವಾಗಿ ಹಮ್ಮಿಕೊಂಡಿರುವ ಶರಣದರ್ಶನ ಪ್ರವಚನದ ಉದ್ಘಾಟನೆಯನ್ನು ನೆರವೇರಿತು.

ಸಮಾರಂಭದ ಸಾನಿಧ್ಯವಹಿಸಿದ ಪೂಜ್ಯ ಶ್ರೀ ಗುರುಬಸವ ಪಟ್ಟದ್ದೇವರು ಪೂಜ್ಯ ಡಾ.ಚನ್ನಬಸವ ಪಟ್ಟದ್ದೇವರು ಈ ಭಾಗದ ಸರ್ವಾಂಗೀಣ ಅಭಿವೃದ್ಧಿಗಾಗಿ ಸ್ವಾತಂತ್ರ್ಯ ಪೂರ್ವದಲ್ಲಿಯೇ ಶಾಂತಿವರ್ಧಕ ಶಿಕ್ಷಣ ಸಂಸ್ಥೆ ಸ್ಥಾಪಿಸಿದರು. ಶಾಲಾ ಕಾಲೇಜುಗಳಿಗೆ ಶರಣರ ಹೆಸರುಗಳನ್ನು ಇಡುವ ಮೂಲಕ ಬಸವತತ್ವ ಪ್ರಸಾರಕ್ಕೆ ನಾಂದಿ ಹಾಡಿದರು. ಬಸವಕಲ್ಯಾಣದಲ್ಲಿ ನೂತನ ಅನುಭವಮಂಟಪ ಸ್ಥಾಪಿಸುವ ಮೂಲಕ ಶರಣ ಸಂಸ್ಕøತಿಯ ಪುನತ್ಥಾನಗೈದರು. ಅಂತಹ ಪೂಜ್ಯರ ಜಯಂತ್ಯುತ್ಸವದ ನಿಮಿತ್ಯವಾಗಿ ನಾವೆಲ್ಲರೂ ಶರಣರ ದರ್ಶನ ಪ್ರವಚನ ಆಲಿಸುವ ಮೂಲಕ ನಮ್ಮ ಜೀವನ ಬಸವಮಾರ್ಗದಲ್ಲಿ ಮುನ್ನಡೆಸಬೇಕೆಂದು ಆಶೀರ್ವಚನ ನೀಡಿದರು.

ಪ್ರವಚನಕಾರರಾದ ಮಾತೋಶ್ರೀ ಶ್ರೀದೇವಿತಾಯಿಯವರು ತಮ್ಮ ನುಡಿಯಲ್ಲಿ ಶರಣ ದರ್ಶನ ಪ್ರವಚನದ ಉದ್ದೇಶ ತಿಳಿಸಿದರು. ಶರಣರು ನಮಗೆ ಸುಖ-ಶಾಂತಿ-ನೆಮ್ಮದಿಯ ಮಾರ್ಗವನ್ನು ತೋರಿಸಿದ್ದಾರೆ. ಅವರ ವಚನಗಳನ್ನು ದಿನನಿತ್ಯ ಮೆಲಕು ಹಾಕುವ ಮೂಲಕ ನಾವು ನಮ್ಮ ಜೀವನ ಆನಂದಗೊಳಿಸಬೇಕು. ಅದಕ್ಕಾಗಿಯೇ ಪೂಜ್ಯರು ಪ್ರತಿವರ್ಷ ಇಂತಹ ಪ್ರವಚನಗಳ ಕಾರ್ಯಕ್ರಮವನ್ನು ಏರ್ಪಡಿಸುತ್ತಿರುವುದು ಅತ್ಯಂತ ಅಭಿಮಾನದ ಸಂಗತಿಯಾಗಿದೆ ಎಂದು ನುಡಿದರು.

ಸಮಾರಂಭದ ಉದ್ಘಾಟನೆಯನ್ನು ನಾಗಭೂಷಣ ಮಾಮಡಿ ಮಾಡಿದರು. ಸಿದ್ರಾಮಪ್ಪ ವಂಕೆ ಅಧ್ಯಕ್ಷತೆ ವಹಿಸಿದರು. ಸಿದ್ರಾಮಪ್ಪ ಅಣದೂರೆ ಬಸವಗುರುಪೂಜೆ ನೆರವೇರಿಸಿದರು. ಶೇಖರ ವಂಕೆ, ಶಂಭುಲಿಂಗ ಕಾಮಣ್ಣ, ವಸಂತ ಹುಣಸನಾಳೆ, ಮಲ್ಲಮ್ಮ ಆರ್.ಪಾಟೀಲ ಮುಂತಾದವರು ಉಪಸ್ಥಿತರಿದ್ದರು. ದೀಪಕ ಥಮಕೆ ನಿರೂಪಿಸಿದರು. ವೀರಣ್ಣ ಕುಂಬಾರ ಸ್ವಾಗತಿಸಿರು.

emedialine

Recent Posts

ಕಲಬುರಗಿ: ನಕಲಿ ವೈದ್ಯರ ಹಾವಳಿ ತಡೆಯಲು ಆರೋಗ್ಯಧಿಕಾರಿಗೆ‌ ಮನವಿ

ಕಲಬುರಗಿ: ಕಲಬುರಗಿ ಜಿಲ್ಲೆಯಲ್ಲಿ ನಕಲಿ ವೈದ್ಯರ ವಹಾವಳಿ ತಡೆಯಬೇಕೆಂದು ಜಿಲ್ಲಾ ಆರೋಗ್ಯ ಅಧಿಕಾರಿಗಳಿಗೆ ಯುವ ಕರ್ನಾಟಕ ವೇದಿಕೆ ಚಿಂಚೋಳಿ ಮತ್ತು…

6 mins ago

ವೀ.ಲಿಂ.ಸಂಘಟನಾ ವೇದಿಕೆ ವಿದ್ಯಾರ್ಥಿ ಘಟಕದ ಅಧ್ಯಕ್ಷ ಬಸವರಾಜ ಶೆಳ್ಳಗಿ

ಸುರಪುರ: ವೀರಶೈವ ಲಿಂಗಾಯತ ಸಂಘಟನಾ ವೇದಿಕೆ ಸುರಪುರ ತಾಲೂಕ ವಿದ್ಯಾರ್ಥಿ ಘಟಕದ ಅಧ್ಯಕ್ಷರನ್ನಾಗಿ ಬಸವರಾಜ ಎಸ್.ಶೆಳ್ಳಗಿ ಅವರನ್ನು ನೇಮಕಗೊಳಿಸಲಾಗಿದೆ. ಈ…

46 mins ago

ವೀರಪ್ಪ ನಿಷ್ಠಿ ತಾಂತ್ರಿಕ ಮಹಾವಿದ್ಯಾಲಯ ವಿಶ್ವ ಓಜೋನ್ ದಿನ

ಸುರಪುರು: ವೀರಪ್ಪ ನಿಷ್ಠಿ ತಾಂತ್ರಿಕ ಮಹಾವಿದ್ಯಾಲಯದಲ್ಲಿ ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ಯಾದಗಿರಿಯವರ ಸಂಯೋಗದಲ್ಲಿ “ವಿಶ್ವ ಓಜೋನ್ ದಿನ”…

48 mins ago

ನಕಲಿ ವೈದ್ಯನ ಕ್ಲಿನಿಕ್ ಮೇಲೆ ಆರೋಗ್ಯಾಧಿಕಾರಿಗಳ ದಾಳಿ

ಸುರಪುರ: ತಾಲೂಕಿನ ಆಲ್ದಾಳ ಗ್ರಾಮದಲ್ಲಿ ನಕಲಿ ವೈದ್ಯನ ಕ್ಲಿನಿಕ್ ಮೇಲೆ ತಾಲೂಕ ಆರೋಗ್ಯಾಧಿಕಾರಿ ಡಾ.ಆರ್.ವಿ.ನಾಯಕ ಮತ್ತು ಅವರ ತಂಡ ದಾಳಿ…

50 mins ago

ಹೊರಗುತ್ತಿಗೆ ನೌಕರರಿಗೆ ಸೇವಾ ಭದ್ರತೆ ನೀಡಿ

ಕಲಬುರಗಿ: ಬಾಕಿ ವೇತನ ಪಾವತಿಸಲು ಸಿಬ್ಬಂದಿ ಕಡಿತ ಮಾಡಿದ ಆದೇಶವನ್ನು ವಾಪಸ್ ಪಡೆಯಬೇಕು. ಹೊರಗುತ್ತಿಗೆ ನೌಕರರಿಗೆ ಸೇವಾ ಭದ್ರತೆ ಒದಗಿಸುವುದು…

52 mins ago

ಶಿಸ್ತು ಮತ್ತು ದಕ್ಷತೆಯಿಂದ ಉತ್ತಮ ಭವಿಷ್ಯ

ಕಲಬುರಗಿ: ಬದುಕಿನಲ್ಲಿ ಮುಂದೆ ಬರಬೇಕಾದರೆ ಒಳ್ಳೆ ಭವಿಷ್ಯ ಕಾಣಬೇಕಾಗಿದ್ದರೆ ನೀವು ನಿಷ್ಠೆ, ಪರಿಶ್ರಮ ಮತ್ತು ಸಂಕಲ್ಪ ಹೊಂದಿರಬೇಕು. ಕೇವಲ ಪದವಿಗಾಗಿ ಓದುವುದನ್ನು…

53 mins ago

Notice: ob_end_flush(): Failed to send buffer of zlib output compression (0) in /home3/emedixap/public_html/wp-includes/functions.php on line 5420