ದಲಿತ (ಮಾದಿಗ) ಸಮಾಜದ ವಿಜಯಕುಮಾರಗೆ ಕಾಂಗ್ರೆಸ್ ಟಿಕೆಟ್ ನೀಡಲಿ

ಶಹಾಬಾದ : ಕಲಬುರಗಿ ಜಿಲ್ಲೆಯಲ್ಲಿ 2 ರಿಂದ 2.5 ಲಕ್ಷ ಮಾದಿಗ ಜನಸಂಖ್ಯೆಯಿದ್ದು 2023ರ ವಿಧಾನಸಭೆ ಚುನಾವಣೆಯಲ್ಲಿ ಕಲಬುರಗಿ ಗ್ರಾಮೀಣ ಮತಕ್ಷೇತ್ರಕ್ಕೆ ಮಾದಿಗ ಸಮಾಜದ ಮುಖಂಡ ವಿಜಯಕುಮಾರ ರಾಮಕೃಷ್ಣ ಅವರಿಗೆ ಕಾಂಗ್ರೆಸ್ ಪಕ್ಷದಿಂದ ಟಿಕೆಟ್ ನೀಡುವ ಮೂಲಕ ಸಾಮಾಜಿಕ ನ್ಯಾಯ ಪಾಲನೆ ಮಾಡಬೇಕೆಂದು ಕಾಂಗ್ರೆಸ್ ಮುಖಂಡ ಮತ್ತು ಡಿಎಮ್‍ಎಸ್‍ಎಸ್‍ನ ಅಧ್ಯಕ್ಷ ಶಿವರಾಜ ಕೋರೆ , ರವಿ ಬೆಳಮಗಿ ಎಐಸಿಸಿಗೆ ಹಾಗೂ ಕೆಪಿಸಿಸಿಗೆ ಒತ್ತಾಯಿಸಿದರು.

ಅವರು ಪ್ರವಾಸಿ ಮಂದಿರದಲ್ಲಿ ದಲಿತ ಮಾದಿಗ ಸಮನ್ವಯ ಸಮಿತಿ ವತಿಯಿಂದ ಹಮ್ಮಿಕೊಂಡಿದ್ದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡುತ್ತ
ಚಿಂಚೋಳಿ, ಚಿತ್ತಾಪುರ ಹಾಗೂ ಕಲಬುರಗಿ ಗ್ರಾಮೀಣ ಎಸ್‍ಸಿ ಮೀಸಲು ಕ್ಷೇತ್ರಗಳ ಪೈಕಿ, ಕಲಬುರಗಿ ಗ್ರಾಮೀಣ ಮತಕ್ಷೇತ್ರಕ್ಕೆ ಮಾದಿಗ (ಎಡ) ಸಮಾಜದ ಅಭ್ಯರ್ಥಿಗೆ ಕಾಂಗ್ರೆಸ್‍ನಿಂದ ಟಿಕೆಟ್ ಕೊಟ್ಟು ಸಮಾಜದ ಪ್ರಗತಿಗೆ ಸಹಕರಿಸಬೇಕು. 2023ರ ವಿಧಾನಸಭಾ ಚುನಾವಣೆಯಲ್ಲಿ ಬಹು ಸಂಖ್ಯಾತ ಮಾದಿಗರಿಗೆ ಕಾಂಗ್ರೆಸನಿಂದ ಟಿಕೆಟ್ ನೀಡುವಂತೆ ರಾಜ್ಯ ಸಮಿತಿಗೆ ಮನವಿ ಮಾಡಿದರು.

ಕಲಬುರಗಿ ಗ್ರಾಮೀಣ ಕ್ಷೇತ್ರದಲ್ಲಿ ಸರಿ ಸುಮಾರು ತಲಾ 28 ರಿಂದ 30 ಸಾವಿರಕ್ಕಿಂತ ಹೆಚ್ಚು ಮಾದಿಗ ಸಮಾಜದ ಮತದಾರರಿದ್ದು, ಕಳೆದ 2018 ರ ಚುನಾವಣೆಯಲ್ಲಿ ಮಾದಿಗ ಸಮಾಜದ ಕಾಂಗ್ರೆಸ ಪಕ್ಷದ ಅಭ್ಯರ್ಥಿ ವಿಜಯಕುಮಾರ ಜಿ. ರಾಮಕೃಷ್ಣ ರವರು ಅಲ್ಪ ಮತಗಳಿಂದ ಸೋಲು ಅನುಭವಿಸಿದ್ದಾರೆ. ಲೋಕ ಸಭೆ ಮತ್ತು ವಿಧಾನಸಭಾ ಚುನಾವಣೆಗಳಲ್ಲಿ ರಾಜಕೀಯ ಪ್ರಾಶಸ್ತ್ಯ ಪಡೆಯುವಲ್ಲಿ ಮಾದಿಗ ಸಮಾಜ ವಂಚಿತರಾಗುತ್ತಿದ್ದಾರೆ. ನಗರಸಭೆ, ಪುರಸಭೆ, ಗ್ರಾ.ಪಂ ಚುನಾವಣೆಗಳಲ್ಲಿಯೂ ಸಹ ಪರಿಗಣಿಸದೇ ಸಮಾಜವನ್ನು ನಿರ್ಲಕ್ಷ್ಯ ಮಾಡಿದ್ದಾರೆ.

ರಾಜಕೀಯ ಸ್ಥಾನಮಾನ ಸೇರಿದಂತೆ ಸಾಮಾಜಿಕ ಮತ್ತು ಆರ್ಥಿಕವಾಗಿ ಸಮಾಜ ಹಿಂದುಳಿದಿದ್ದು ಬಹುಸಂಖ್ಯಾತರಿರುವ ಮಾದಿಗ ಸಮಾಜವನ್ನು ಗಂಭೀರವಾಗಿ ಪರಿಗಣಿಸಬೇಕಿದೆ. ಹೆಚ್ಚಿನ ಸಂಖ್ಯೆಯಲ್ಲಿ ಮಾದಿಗ ಸಮಾಜದವರು ಕಾಂಗ್ರೆಸ್ ಪರ ಮತದಾರರಿದ್ದಾರೆ. ಈ ಸಮಾಜಕ್ಕೆ ಸೂಕ್ತ ಪ್ರಾಶಸ್ತ್ಯ ನೀಡಬೇಕಿದ್ದು, ಕಾಂಗ್ರೆಸ್‍ನಿಂದ ವಿಜಯಕುಮಾರ ರಾಮಕೃಷ್ಣ ಅವರಿಗೆ ಟಿಕೆಟ್ ಕಲ್ಪಿಸಿದರೆ ಗೆಲ್ಲಿಸಿ ಕೊಡುವ ಖಚಿತ ಭರವಸೆ ವ್ಯಕ್ತಪಡಿಸಿದರು.

ಈ ಬಗ್ಗೆ ಶೀಘ್ರ ನಿಯೋಗ ತೆರಳಿ ಕಾಂಗ್ರೆಸನ ಎಐಸಿಸಿ ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆ, ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್, ಮಾಜಿ ಸಿಎಂ ಸಿದ್ದರಾಮಯ್ಯ ಇತರೆ ಮುಖಂಡರನ್ನು ಭೇಟಿ ಮಾಡಿ ಮನವಿ ಸಲ್ಲಿಸುವುದಾಗಿ ತಿಳಿಸಿದರು. ಪತ್ರಿಕಾ ಗೋಷ್ಠಿಯಲ್ಲಿ ನಾಗಪ್ಪ ರಾಯಚೂರಕರ ಇದ್ದರು.

emedialine

Recent Posts

ಅತಿವೃಷ್ಟಿ ಬೆಳೆ ಹಾನಿ ಪರಿಹಾರ ಕೊಡಿ: ಮುಖ್ಯಮಂತ್ರಿಗಳಿಗೆ ಪ್ರಾಂತ ರೈತ ಸಂಘದ ಆಗ್ರಹ

ಕಲಬುರಗಿ: ಅತಿವೃಷ್ಟಿ ಮಳೆಯಿಂದ ಹಾನಿಯಾದ ಉದ್ದು, ಹೆಸರು, ತೊಗರಿ ಬೆಳೆ ನಷ್ಟವಾಗಿದ್ದು, ಉತ್ಪಾದನೆ ಆಧಾರದಲ್ಲಿ ಪರಿಹಾರ ಕೊಡುವಂತೆ ಹಾಗೂ ಕಬ್ಬಿನ ಬಾಕಿ…

7 hours ago

ಯುವಜನ ಒಕ್ಕೂಟದಿಂದ 76 ನೇ ಕಲ್ಯಾಣ ಕರ್ನಾಟಕ ಸ್ವಾತಂತ್ರೋತ್ಸವ ಆಚರಣೆ

ಕಲಬುರಗಿ: ಸರದಾರ ವಲ್ಲಭಭಾಯಿ ಪಟೇಲ ರ ಮೂರ್ತಿಗೆ ಮಾಲಾರ್ಪಣೆ ಮತ್ತು ರಾಷ್ಟ್ರೀಯ ಗೀತೆ ವಾಚಿಸುವ ಮೂಲಕ ನೈಜ ಕ. ಕ.…

7 hours ago

ಸೆ.19 ರಂದು ತಾಲೂಕು ಮಟ್ಟದ ದಸರಾ ಕ್ರೀಡಾಕೂಟ

ಚಿತ್ತಾಪುರ: ಪಟ್ಟಣದ ಕ್ರೀಡಾಂಗಣದಲ್ಲಿ 2024-25 ನೇ ಸಾಲಿನ ಚಿತ್ತಾಪುರ ತಾಲೂಕು ಮಟ್ಟದ ದಸರಾ ಕ್ರೀಡಾಕೂಟ ಸೆ.19 ರಂದು ಆಯೋಜಿಸಲಾಗಿದೆ ಎಂದು…

7 hours ago

ಕೆಎಎಸ್‌ಎಸ್‌ಐಎಗೆ ನಿಜಾಮೋದ್ದಿನ್ ಚಿಸ್ತಿ ನಾಮನಿರ್ದೇಶನ

ಚಿತ್ತಾಪುರ: ಕರ್ನಾಟಕ ರಾಜ್ಯ ಸಣ್ಣ ಕೈಗಾರಿಕೆಗಳ ಸಂಘಕ್ಕೆ 2024-25 ನೇ ಸಾಲಿಗಾಗಿ ಆಡಳಿತ ಮಂಡಳಿಗೆ ವಿಶೇಷ ಆಹ್ವಾನಿತರಾಗಿ ಸೈಯದ್ ನಿಜಾಮೋದ್ದಿನ್…

7 hours ago

ಕಲಬುರಗಿಯಲ್ಲಿ ಸಚಿವ ಸಂಪುಟ ಸಭೆ ಸಮಾಧಾನವಿದೆ, ತೃಪ್ತಿಯಿಲ್ಲ: ಬಿಆರ್ ಪಾಟೀಲ

ಕಲಬುರಗಿ: ಕಲ್ಯಾಣ ಕರ್ನಾಟಕದಲ್ಲಿ ರಾಜ್ಯ ಸಚಿವ ಸಂಪುಟ ಸಭೆ ನಡೆಸಿದ ಸಮಾಧಾನ ಇದೆ. ಆದರೆ, ಅದರಲ್ಲಿ ತೆಗೆದುಕೊಂಡ ನಿರ್ಣಯಗಳು ತೃಪ್ತಿಯಿಲ್ಲ…

8 hours ago

ವಕ್ಫ್ ಬೋರ್ಡ್ ಆಸ್ತಿ ಒತ್ತುವರಿ ನಿಯಂತ್ರಣಕ್ಕೆ ಕಂಪೌಂಡ್ ನಿರ್ಮಾಣ; ಬಿ.ಜೆಡ್.ಜಮೀರ್ ಅಹ್ಮದ್ ಖಾನ್

ಕಲಬುರಗಿಯಲ್ಲಿ ವಕ್ಫ್ ಅದಾಲತ್ ಕಲಬುರಗಿ; ರಾಜ್ಯದಲ್ಲಿರುವ ವಕ್ಫ್ ಆಸ್ತಿ ಸಂರಕ್ಷಣೆಗೆ ಮಂಡಳಿ ಮುಂದಾಗಿದ್ದು, ಪ್ರತಿ ಆಸ್ತಿ ಸುತ್ತ ರಾಜ್ಯ ವಕ್ಫ್…

8 hours ago

Notice: ob_end_flush(): Failed to send buffer of zlib output compression (0) in /home3/emedixap/public_html/wp-includes/functions.php on line 5420