ಕ್ರೀಡೆ ಮನುಷ್ಯನ ನಡುವೆ ಉತ್ತಮ ಬಾಂಧವ್ಯ ಬೆಳೆಸುತ್ತದೆ

ಶಹಾಬಾದ : ಕ್ರೀಡೆ ಎಂಬುದು ಮನುಷ್ಯನ ನಡುವೆ ಉತ್ತಮ ಬಾಂಧವ್ಯ ಬೆಳೆಸುವ ಮೂಲಕ ಉತ್ತಮ ಸಮಾಜದ ನಿರ್ಮಾಣಕ್ಕೆ ಸಹಕಾರಿಯಾಗಲಿ ಎಂದು ಡಿವಾಯ್‍ಎಸ್‍ಪಿ ಉಮೇಶ ಚಿಕ್ಕಮಠ ಹೇಳಿದರು.

ಅವರು ರವಿವಾರ ನಗರದ ಜಿಇ ಕಾರ್ಖಾನೆಯ ಆಟದ ಮೈದಾನದಲ್ಲಿ ಪೊಲೀಸ್ ಇಲಾಖೆಯ ಶಹಾಬಾದ ವಿಭಾಗದ ವತಿಯಿಂದ ಪೊಲೀಸರಿಗೆ ಆಯೋಜಿಸಿದ್ದ ಕ್ರಿಕೆಟ್ ಪಂದ್ಯಾಟವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ತಮ್ಮ ಆರೋಗ್ಯವನ್ನು ಲೆಕ್ಕಿಸದೇ ಜನರ ರಕ್ಷಣೆ ಶಾಂತಿ ಸುವ್ಯವಸ್ಥೆ ಕಾರ್ಯದಲ್ಲಿ ತೊಡಗಿರುವುದರಿಂದ ಅವರಿಗೆ ತಮ್ಮ ಒತ್ತಡದ ಜೀವನದ ಮಧ್ಯೆಯೇ ಪೊಲೀಸರು ಇಂತಹ ಪಂದ್ಯಾವಳಿಯಲ್ಲಿ ಭಾಗವಹಿಸುವುದರಿಂದ ಒತ್ತಡ ನಿವಾರಣೆಯಾಗುತ್ತದೆ. ಅಲ್ಲದೇ ಸಾಮಾಜಿಕ ಜಾಲತಾಣಗಳಲ್ಲಿ ಮುಳುಗಿರುವ ಇಂದಿನ ಬಹುತೇಕ ಯುವಕರು ಮೊಬೈಲ್‍ಗೆ ಹೆಚ್ಚು ಆದ್ಯತೆ ಕೊಡುತ್ತಿರುವುದು ಆತಂಕಕಾರಿ ಸಂಗತಿ. ಕ್ರೀಡೆಯಿಂದ ದೈಹಿಕ ಹಾಗೂ ಮಾನಸಿಕ ಆರೋಗ್ಯ ಸಾಧ್ಯ ಎಂದರು.ಕ್ರೀಡೆಗಳಲ್ಲಿ ಸೋಲು ಗೆಲುವು ಮುಖ್ಯವಲ್ಲ ಭಾಗವಹಿಸುವುದು ಬಹಳ ಮುಖ್ಯ ಎಂದು ತಿಳಿಸಿದರು.

ನಗರ ಪೊಲೀಸ್ ಠಾಣೆಯ ಪಿಐ ರಾಘವೇಂದ್ರ.ಎಸ್.ಹೆಚ್ ಮಾತನಾಡಿ, ಕ್ರೀಡೆಗಳಲ್ಲಿ ಭಾಗವಹಿಸುವುದರಿಂದ ದೈಹಿಕ, ಮಾನಸಿಕ ಆರೋಗ್ಯದ ಜೊತೆಗೆ ನಾಯಕತ್ವ ಗುಣ ರೂಪುಗೊಳ್ಳುತ್ತದೆ. ಇತ್ತೀಚಿನ ದಿನಗಳಲ್ಲಿ ಕ್ರೀಡೆಗಿಂತ ತಂತ್ರಜ್ಞಾನದೊಂದಿಗೆ ಹೆಚ್ಚು ತೊಡಗಿಸಿಕೊಂಡಿದ್ದಾರೆ ಮೊಬೈಲ್, ಕಂಪ್ಯೂಟರ್ ಮೂಲಕ ವಿವಿಧ ರೀತಿಯ ಆಟಗಳನ್ನು ಆಡುತ್ತಿದ್ದಾರೆ. ಆದರೆ ಇದು ದೈಹಿಕ ಹಾಗೂ ಮಾನಸಿಕ ಆರೋಗ್ಯಕ್ಕೆ ಇದು ಪೂರಕವಾಗಲ್ಲ. ಇದನ್ನು ಮೊದಲು ಬಿಡಬೇಕು. ತಮ್ಮ ಆರೋಗ್ಯವನ್ನು ಕಾಪಾಡಿಕೊಳ್ಳುವ ನಿಟ್ಟಿನಲ್ಲಿ ಕ್ರೀಡೆಗಳಲ್ಲಿ ಹೆಚ್ಚು ಭಾಗವಹಿಸಬೇಕು ಎಂದು ಹೇಳಿದರು.

ವಾಡಿ ಪಿಎಸ್‍ಐ ಮಹಾಂತೇಶ ಪಾಟೀಲ ಮಾತನಾಡಿ, ಕ್ರೀಡೆಗಳಲ್ಲಿ ಸೋಲು ಗೆಲುವು ಸಾಮಾನ್ಯವಾಗಿರುತ್ತವೆ ಎಲ್ಲಾ ಕ್ರೀಡಾ ಪಟುಗಳು ಸ್ಪೂರ್ತಿಯಿಂದ ಆಟಗಳನ್ನು ಆಡಬೇಕು ಎಂದರು.ಚಿತ್ತಾಪೂರ ಸಿಪಿಐ ಪ್ರಕಾಶ ಯಾತನೂರ, ಕಾಳಗಿ ಸಿಪಿಐ ವಿನಾಯಕ, ಮಾಡಬೂಳ ಪಿಎಸ್‍ಐ ವಿಜಯಕುಮಾರ, ಚಿತ್ತಾಪೂರ ಪಿಎಸ್‍ಐ ಚೇತನ, ಹರೀಶ ಕರಣಿಕ್ ಇತರರು ಇದ್ದರು.

ಶಹಾಬಾದ ,ವಾಡಿ, ಚಿತ್ತಾಪೂರ, ಮಾಡಬೂಳ ಹಾಗೂ ಕಾಳಗಿ ಪೊಲೀಸ್ ಠಾಣೆ ವ್ಯಾಪ್ತಿಯ ಐದು ಕ್ರಿಕೇಟ್ ತಂಡಗಳು ಪಂದ್ಯಾಟದಲ್ಲಿ ಭಾಗವಹಿಸಿದ್ದವು. ಫೈನಲ್ ಪಂದ್ಯಾಟದಲ್ಲಿ ಶಹಾಬಾದ ಪೊಲೀಸ್ ಠಾಣೆಯ ತಂಡ ವಾಡಿ ಪೊಲೀಸ್ ತಂಡವನ್ನು ಸೋಲಿಸಿ, ಭರ್ಜರಿ ಗೆಲುವು ಸಾಧಿಸಿದೆ. ಈ ಸಂದರ್ಭದಲ್ಲಿ ಮಧುಮೋಹನ ಬಿರಾದಾರ ಪಂದ್ಯಶ್ರೇಷ್ಠ ಪ್ರಶಸ್ತಿಯನ್ನು ಪಡೆದುಕೊಂಡರು.

emedialine

Recent Posts

ಮಾಜಿ ಸಚಿವ ಎಸ್.ಕೆ ಕಾಂತ ಅವರ ಆರೋಗ್ಯ ವಿಚಾರಿಸಿದ ಸಿಎಂ

ಕಲಬುರಗಿ: 19ನೇ ಸಚಿವ ಸಂಪುಟದ ಹಿನ್ನೆಲೆಯಲ್ಲಿ ಕಲಬುರಗಿಗೆ ಆಗಮಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸೋಮವಾರ ಇಲ್ಲಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ…

13 mins ago

ಶಹಾಬಾದ ತಾಲ್ಲೂಕಿನದ್ಯಂತ ಸೆ. 17ಕ್ಕೆ ಕಲ್ಯಾಣ ಕರ್ನಾಟಕ ಉತ್ಸವ ಆಚರಿಸಿ

ಶಹಾಬಾದ: ಸಪ್ಟೆಂಬರ್ 17ರಂದು ತಾಲೂಕಿನ ಎಲ್ಲಾ ಸರ್ಕಾರಿ,ಅರೆ ಸರ್ಕಾರಿ ಹಾಗೂ ಶಾಲಾ-ಕಾಲೇಜುಗಳಲ್ಲಿ ಕಲ್ಯಾಣ ಕರ್ನಾಟಕ ಉತ್ಸವ ದಿನ ಹಾಗೂ ವಿಶ್ವಕರ್ಮ…

16 mins ago

ಶಹಾಬಾದ ಕಾರ್ಖಾನೆಗಳನ್ನು ಪ್ರಾರಂಭಿಸಲು ಹಿರೇಮಠ ಒತ್ತಾಯ

ಶಹಾಬಾದ: ತಾಲೂಕಿನ ಜೆಪಿ ಕಾರ್ಖಾನೆ ಮತ್ತು ಜಿಇ ಕಾರ್ಖಾನೆ ಕಾರ್ಖಾನೆಗಳನ್ನು ಪುನಃ ಪ್ರಾರಂಭ ಮಾಡಲು ಮಂಗಳವಾರ ಕಲಬುರಗಿಯಲ್ಲಿ ನಡೆಯುವ ಸಚಿವ…

45 mins ago

MRW/VRW/URW ಕಾರ್ಯಕರ್ತರ ಅನಿರ್ಧಿಷ್ಟಾವಧಿ ಧರಣಿ ದಲಿತ ಸೇನೆ ಬೆಂಬಲ

ಕಲಬುರಗಿ: ನವ ಕರ್ನಾಟಕ MRW/VRW/URW ಗೌರವ ಧನ ಕಾರ್ಯಕರ್ತರ ಖಾಯಮಾತಿಗಾಗಿ ನಡೆಸುತ್ತಿರುವ ಅನಿರ್ಧಿಷ್ಟಾವಧಿ ಧರಣಿಗೆ ಅಖಿಲ ಕರ್ನಾಟಕ ದಲಿತ ಸೇನೆ…

50 mins ago

ಸಚಿವ ಸಂಪುಟದಲ್ಲಿ ಸಭೆಯಲ್ಲಿ ಒಳಮೀಸಲಾತಿ ಅನುಷ್ಠಾನಕ್ಕೆ ಆಗ್ರಹಿಸಿ ಪ್ರತಿಭಟನೆ

ಕಲಬುರಗಿ: ಸುಪ್ರೀಂಕೋರ್ಟ್ ತೀರ್ಪಿನಂತೆ ಒಳಮೀಸಲಾತಿಯನ್ನು ರಾಜ್ಯ ಸರಕಾರ ಕಲಬುರಗಿಯಲ್ಲಿ ನಡೆಯುವ ಸಚಿವ ಸಂಪುಟದಲ್ಲಿ ಅನುಷ್ಠಾನಗೊಳಿಸಬೇಕೆಂದು ಒತ್ತಾಯಿಸಿ ಮಾದಿಗ ಸಂಘಟನೆಗಳ ಒಕ್ಕೂಟ…

52 mins ago

20 ಕೋಟಿಗೂ ಮೀರಿ ಹಣ ದುರುಪಯೋಗ ಬ್ರಷ್ಟಾಚಾರದ ಬಗ್ಗೆ ಶೀಘ್ರದಲ್ಲಿ ಕ್ರಮ ವಹಿಸಬೇಕು

ಕಲಬುರಗಿ: ಪ್ರೀಯಾಂಕ ಖರ್ಗೆ ಚಿತ್ತಾಪೂರ ಮತಕ್ಷೇತ್ರ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರು ಇವರ ಕ್ಷೇತ್ರದ ಬಿ.ಇ.ಓ ಕವೇರಿಯಲ್ಲಿ 20 ಕೋಟಿ…

54 mins ago

Notice: ob_end_flush(): Failed to send buffer of zlib output compression (0) in /home3/emedixap/public_html/wp-includes/functions.php on line 5420