ಸುರಪುರ: ಕೃಷ್ಣಾ ನದಿ ಪ್ರವಾಹದಿಂದ ನದಿ ಪಾತ್ರದ ಅನೇಕ ಗ್ರಾಮಗಳ ಕುಟುಂಬಗಳಿಗೆ ಆಶ್ರಯ ಕಲ್ಪಿಸಿ ನಗರದ ಎಪಿಎಂಸಿ ಗಂಜ್ನಲ್ಲಿ ತೆರೆಯಲಾದ ಗಂಜಿ ಕೇಂದ್ರಕ್ಕೆ ಮಾಜಿ ಸಚಿವ ರಾಜಾ ಮದನಗೋಪಾಲ ನಾಯಕ ಭೇಟಿ ನೀಡಿದರು.
ಈ ಸಂದರ್ಭದಲ್ಲಿ ಮಾತನಾಡಿದ ಮಾಜಿ ಸಚಿವರು,ಗಂಜಿ ಕೇಂದ್ರದಲ್ಲಿ ಆಶ್ರಯ ಪಡೆದ ನಿರಾಶ್ರಿತರಿಗೆ ಸರಿಯಾದ ವ್ಯವಸ್ಥೆ ಕಲ್ಪಿಸಿ,ಯಾವುದೆ ರೀತಿಯ ಕೊರತೆಯಾಗದೆಂತೆ ನೋಡಿಕೊಳ್ಳಿ.ಅಲ್ಲದೆ ಸಂತ್ರಸ್ತರ ಮಕ್ಕಳಿಗೆ ಕಲಿಕಾ ವ್ಯವಸ್ಥೆಯನ್ನು ಕಲ್ಪಿಸಿ,ಯಾವುದೆ ರೀತಿಯ ತೊಂದರೆ ಕಂಡು ಬಂದಲ್ಲಿ ಅದನ್ನು ಸಹಿಸಲಾಗದು ಎಂದು ಎಚ್ಚರಿಸಿದರು.
ಮಾಜಿ ಸಚಿವರ ಜೊತೆಯಲ್ಲಿದ್ದ ಕರ್ನಾಟಕ ರಾಜ್ಯ ರೈತ ಸಂಘದ ರಾಜ್ಯ ವಿಭಾಗಿಯ ಕಾರ್ಯದರ್ಶಿ ಮಲ್ಲಿಕಾರ್ಜುನ ಸತ್ಯಂಪೇಟೆ ಮಾತನಾಡಿ,ಸರಕಾರ ನೆರೆಯಲ್ಲಿ ಸಂಕಷ್ಟಕ್ಕೆ ಸಿಲುಕಿದ ರೈತ ಕುಟುಂಬಗಳಿಗೆ ಸರಿಯಾದ ವ್ಯವಸ್ಥೆ ಕಲ್ಪಿಸುತ್ತಿಲ್ಲ.ಮುಖ್ಯಮಂತ್ರಿಗಳು ಕೂಡಲೆ ರೈತರಿಗೆ ಪರಿಹಾರ ಮತ್ತು ಜಾನುವಾರುಗಳಿಗೆ ಮೇವಿನ ವ್ಯವಸ್ಥೆ ಮಾಡಬೇಕು.
ನೆರೆಯಿಂದ ಹಾನಿಗೀಡಾದ ಜಮೀನುಗಳಿಗೆ ತಕ್ಷಣ ಪರಿಹಾರ ಘೋಷಣೆ ಮಾಡುವಂತೆ ಒತ್ತಾಯಿಸಿದರು.ನಂತರ ಗಂಜಿ ಕೇಂದ್ರದಲ್ಲಿನ ನಿರಾಶ್ರಿತರೊಂದಿಗೆ ಎಲ್ಲರು ಭೋಜನ ಸವಿದು ನಿರಾಶ್ರಿತರಿಗೆ ಧೈರ್ಯ ತುಂಬಿದರು.ಈ ಸಂದರ್ಭದಲ್ಲಿ ತಹಸೀಲ್ದಾರ ಸುರೇಶ ಅಂಕಲಗಿ,ಅಶೋಕ ಸುರಪುರಕರ್ ಇತರರಿದ್ದರು.
ಕಲಬುರಗಿ: ಕಳೆದ ಅಕ್ಟೋಬರ್ 2 ರಂದು ನಗರದ ಹೊರವಲಯದ ನಂದೂರ ಕೈಗಾರಿಕಾ ಪ್ರದೇಶದ ದಾಲ್ ಮಿಲ್ ವೊಂದರಲ್ಲಿ ಅಕ್ರಮ ಅಕ್ಕಿ…
ಸುರಪುರ: ತಾಲೂಕಿನ ರುಕ್ಮಾಪುರ ಗ್ರಾಮದ ಬಣಗಾರ ಮನೆಯಲ್ಲಿ ಬನ್ನಿಮಹಾಂಕಾಳಿ ನವರಾತ್ರಿ ಉತ್ಸವದ ಅಂಗವಾಗಿ ೪೪ನೇ ವರ್ಷದ ಶ್ರೀ ದೇವಿ ಪಾರಾಯಣ…
ಕಲಬುರಗಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಧ್ವನಿ ಸಂಘ ಜಿಲ್ಲಾಮಟ್ಟದ ಪತ್ರಕರ್ತರ ಸಮಾವೇಶ ಸೆಪ್ಟೆಂಬರ್ 16ರಂದು ಅಫಜಲಪೂರ ಪಟ್ಟಣದಲ್ಲಿ ನಡೆದ ಸಂದರ್ಭದಲ್ಲಿ…
ಕಲಬುರಗಿ; ಕನ್ನಡ ಸಾಹಿತ್ಯ ಕ್ಷೇತ್ರದಲ್ಲಿ ವಿಶಿಷ್ಟ ಖ್ಯಾತಿ ಪಡೆದ ಜಿಲ್ಲೆಯ ಸೇಡಂನ ಮಾತೋಶ್ರೀ ಮಹಾದೇವಮ್ಮ ನಾಗಪ್ಪ ಮುನ್ನೂರ್ ಪ್ರತಿಷ್ಠಾನದ ವತಿಯಿಂದ…
ಚಿಂಚೋಳಿ : ಪ್ರವಾದಿ ಮಹ್ಮದ ಪೈಗಂಬರ್ ಅವರನ್ನು ಅವಮಾನಿಸಿದ ನರಸಿಂಹಾನಂದ ಸರಸ್ವತಿ ಸ್ವಾಮಿಗಳ ವಿರುದ್ಧ ಪ್ರಕರಣ ದಾಖಲಿಸಬೇಕು ಎಂದು ಆಗ್ರಹಿಸಿ…
ಕಲಬುರಗಿ: ಕಲ್ಯಾಣ ಕರ್ನಾಟಕದ ಶೈಕ್ಷಣಿಕ ಗುಣಮಟ್ಟ ಸುಧಾರಣೆಗಾಗಿ ಕೆ.ಕೆ.ಆರ್.ಡಿ.ಬಿ ಯು ಸಮಿತಿಯೊಂದನ್ನು ರಚಿಸಿ, ಗುರುರಾಜ ಕರ್ಜಗಿ ಅವರನ್ನು ಅಧ್ಯಕ್ಷರನ್ನಾಗಿ ಮಾಡಿರುವ…