ಅಪರಿಚಿತ ವಾಹನ ಡಿಕ್ಕಿ: ಬೈಕ್ ಸವಾರ ಸ್ಥಳದಲ್ಲಿ ಸಾವು

0
43

ಸುರಪುರ: ತಾಲೂಕಿನ ದೇವಾಪುರ ಗ್ರಾಮದ ಹಳ್ಳದ ಸೇತುವೆ ಬಳಿ ಅಪರಿಚಿತ ವಾಹನ ಒಂದು ಡಿಕ್ಕಿ ಹೊಡೆದ ಪರಿಣಾಮ ದೇವಾಪುರ ಗ್ರಾಮದ ಅಂಬರೀಶ ಪೈದೊಡ್ಡಿ ಎನ್ನುವ 40 ವರ್ಷದ ವ್ಯಕ್ತಿ ಸ್ಥಳದಲ್ಲಿ ಸಾವನ್ನಪ್ಪಿರುವ ಘಟನೆ ಗುರುವಾರ ಮದ್ಹ್ಯಾನ ನಡೆದಿದೆ.

ದೇವಾಪುರ ಕಡೆಗೆ ಹೊರಟಿದ್ದ ಅಂಬರೀಶಗೆ ಅಪರಿಚಿತ ಲಾರಿ ಡಿಕ್ಕಿ ಹೊಡೆದಿದೆ ಎಂದು ರಸ್ತೆಯಲ್ಲಿ ಹೋಗುತ್ತಿರುವ ಜನರು ಹೇಳುವ ಮಾತಾಗಿದೆ.ಯುವ ಮುಖಂಡ ಧರ್ಮರಾಜ ಮಂಗಿಹಾಳ ಎನ್ನುವವರು ಅಪಘಾತ ಕಂಡು ತಕ್ಷಣಕ್ಕೆ 112 ನಂಬರಿಗೆ ಕರೆ ಮಾಡಿ ವಿಷಯ ತಿಳಿಸಿದ್ದರಿಂದ ತಕ್ಷಣಕ್ಕೆ ಮಿಂಚಿನ ಕಾರ್ಯಾಚರಣೆ ನಡೆಸಿದ ಸುರಪುರ ಪೊಲೀಸರು ಕುಂಬಾರಪೇಟೆ ಎಪಿಎಮ್‍ಸಿ ಬಳಿಯಲ್ಲಿ ಮಹಾರಾಷ್ಟ್ರ ಮೂಲಕ ಲಾರಿಯೊಂದನ್ನು ಅಪಘಾತ ಮಾಡಿದ ಅನುಮಾನದ ಮೇಲೆ ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ.

Contact Your\'s Advertisement; 9902492681

ಸುದ್ದಿ ತಿಳಿದು ಸ್ಥಳಕ್ಕೆ ಶಾಸಕ ರಾಜುಗೌಡ ಭೇಟಿ ನೀಡಿ ಘಟನೆಗೆ ಬೇಸರ ವ್ಯಕ್ತಪಡಿಸಿ ಕುಟುಂಬಸ್ಥರಿಗೆ ಸಾಂತ್ವಾನ ಹೇಳಿದ್ದಾರೆ.ಅಲ್ಲದೆ ಘಟನಾ ಸ್ಥಳಕ್ಕೆ ಡಿವೈಎಸ್ಪಿ ಡಾ. ಮಂಜುನಾಥ ಟಿ.ಭೇಟಿ ನೀಡಿ ಪರಿಶೀಲಿಸಿದರು. ನಂತರ ಚಿದ್ರವಾಗಿದ್ದ ಮೃತ ದೇಹವನ್ನು ತಾಲೂಕು ಆಸ್ಪತ್ರೆಗೆ ಸಾಗಿಸಲಾಗಿತ್ತು,ಕುಟುಂಬಸ್ಥರ ಆಕ್ರಂದನ ಮುಗಿಲು ಮಟ್ಟಿತ್ತು.ಈ ಕುರಿತು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here