ಬಿಸಿ ಬಿಸಿ ಸುದ್ದಿ

ಕೃಷ್ಣೆಯ ಪ್ರವಾಹದಿಂದ ರೈತರಿಗೆ ಅಪಾರ ಹಾನಿಯಾಗಿದೆ: ಸುಮತಿಶ್ರೀ ನವಲಿ

ಸುರಪುರ: ನೆರೆಯ ಮಹಾರಾಷ್ಟ್ರದಲ್ಲಿ ಸುರಿಯುತ್ತಿರುವ ನಿರಂತರ ಮಳೆಯಿಂದ ಅಪಾರ ಪ್ರಮಾಣದಲ್ಲಿ ತುಂಬಿ ಹರಿಯುತ್ತಿರುವ ಕೃಷ್ಣಾ ನದಿ ಪ್ರವಾಹ ಸ್ಥಳಕ್ಕೆ ಕರ್ನಾಟಕ ರಾಜ್ಯ ರೈತ ಸಂಘದ ಮಹಿಳಾ ವಿಭಾಗದ ರಾಜ್ಯಾಧ್ಯಕ್ಷೆ ಸುಮತಿಶ್ರೀ ನವಲಿ ಮತ್ತು ತಂಡ ಭೇಟಿ ನೀಡಿ,ನಂತರ ನಗರದ ಟೈಲರ್ ಮಂಜಿಲನಲ್ಲಿ ಪತ್ರಿಕಾಗೋಷ್ಟಿ ನಡಿಸಿದರು.

ಈ ಸಂದರ್ಭದಲ್ಲಿ ಮಾತನಾಡಿದ ಸುಮತಿಶ್ರೀಯವರು,ಮಹಾರಾಷ್ಟ್ರದಲ್ಲಿ ಸುರಿದ ಮಹಾ ಮಳೆಯಿಂದ ರಾಜ್ಯದ ಉತ್ತರ ಕರ್ನಾಟಕ ಭಾಗದಲ್ಲಿ ಪ್ರವಾಹ ಪರಸ್ಥಿತಿ ಎದುರಾಗಿದೆ,ಇಂತಹ ಸಂದರ್ಭದಲ್ಲಿ ಸರಕಾರ ತನ್ನ ಜವಬ್ದಾರಿ ಮರೆತಿದೆ.ಬೆಳಗಾವಿ ಮತ್ತು ಬಾಗಲಕೋಟೆ ಜಿಲ್ಲೆಗಳಲ್ಲಿನ ಜನರು ನೆರೆಯಿಂದ ನಲುಗಿದ್ದಾರೆ.ಅಲ್ಲದೆ ನಿರಂತರವಾಗಿ ಸುರಿಯುತ್ತಿರುವ ಮಳೆಯಿಂದ ಜನರು ಅಕ್ಷರಶ ನಿರಾಶ್ರಿತಗೊಂಡು ಬದುಕುವುದೆ ಕಷ್ಟವಾಗಿದೆ.ಸರಕಾರ ಸಂಪೂರ್ಣ ವಿಫಲವಾಗಿ ಕೈಚೆಲ್ಲಿ ಕುಳಿತಂತಿದೆ.ಯಾದಗಿರಿ ರಾಯಚೂರು ಜಿಲ್ಲೆಗಳಲ್ಲಿನ ನದಿ ಪಾತ್ರದ ಸಾವಿರಾರು ಎಕರೆ ಜಮೀನು ಹಾನಿಗೀಡಾಗಿದ್ದು ರೈತರು ತೀವ್ರ ಕಷ್ಟ ಹೆದರಿಸುವಂತಾಗಿದೆ.ಇಂತಹ ಸಂದರ್ಭದಲ್ಲಿ ಜನರೊಂದಿಗೆ ಸರಕಾರ ಇರಬೇಕಿತ್ತು,ಆದರೆ ಮುಖ್ಯಮಂತ್ರಿಗಳು ಕೇವಲ ವೈಮಾನಿ ಸಮೀಕ್ಷೆ ಮಾಡಿ ಹೋಗಿದ್ದಾರೆ.ಇಷ್ಟು ಸಾಲದು ಮುಖ್ಯಮಂತ್ರಿಗಳು ಖುದ್ದಾಗಿ ನೆರೆಯ ಸ್ಥಳಗಳಿಗೆ ಭೇಟಿ ನೀಡಿ ಪರಿಶೀಲಸಬೇಕೆಂದು ಒತ್ತಾಯಿಸಿದರು.

ಈಗಾಗಲೇ ಅನೇಕ ವರ್ಷಗಳಿಂದ ರೈತರು ಬರಗಾಲದಿಂದ ಸಂಕಷ್ಟ ಹೆದರಿಸಿದ್ದಾರೆ.ಈಗ ನೆರೆ ಮತ್ತಿಷ್ಟು ಸಂಕಷ್ಟಕ್ಕೆ ದೂಡಿದೆ.ಆದ್ದರಿಂದ ಸರಕಾರ ರೈತರ ಪ್ರತಿ ಎಕರೆಗೆ ಇಪ್ಪತ್ತೈದು ಸಾವಿರ ರೂಪಾಯಿಗಳ ಪರಿಹಾರ ನೀಡಬೇಕೆಂದರು. ರೈತ ಸಂಘದ ರಾಜ್ಯ ಪ್ರಧಾನ ಕಾರ್ಯದರ್ಶಿ ಅಣ್ಣಪ್ಪಗೌಡ ದೇಸಾಯಿ ಮಾತನಾಡಿ, ಪ್ರವಾಹದಿಂದ ರೈತರು,ಕಾರ್ಮಿಕರು ಮತ್ತು ಬಡಜನತೆ ತೀವ್ರ ತೊಂದರೆಯಲ್ಲಿದ್ದಾರೆ.ಸರಕಾರ ತೆರೆದಿರುವ ಗಂಜಿ ಕೇಂದ್ರಗಳಲ್ಲಿ ಸರಿಯಾದ ವ್ಯವಸ್ಥೆಯಿಲ್ಲ.ಸರಿಯಾದ ವ್ಯವಸ್ಥೆ ಕಲ್ಪಿಸಬೇಕು,ಅಲ್ಲದೆ ಹಿಂದಿನ ಸರಕಾರ ಘೋಷಿಸಿದ್ದ ರೈತರ ಸಂಪೂರ್ಣ ಸಾಲ ಮನ್ನಾ ಯೋಜನೆಯು ೭೫% ರೈತರ ಸಾಲ ಮನ್ನಾವಾಗಿಲ್ಲ.ಇದರಿಂದ ಕೇವಲ ಸಹಕಾರಿ ಬ್ಯಾಂಕುಗಳಿಗೆ ಮಾತ್ರ ಲಾಭವಾಗಿದೆ.ಆದ್ದರಿಂದ ಸರಕಾರ ಕೂಡಲೆ ರೈತರ ಸಂಪೂರ್ಣ ಸಾಲ ಮನ್ನಾ ಮಾಡುವಂತೆ ಒತ್ತಾಯಿಸಿದರು.

ಸುದ್ದಿಗೋಷ್ಟಿಯಲ್ಲಿ ರೈತ ಮುಖಂಡರಾದ ಅಯ್ಯಣ್ಣ ಹಾಲಬಾವಿ,ವಿಜಯಲಕ್ಷ್ಮೀ ಕುಲಗೋಡು,ಮಲ್ಲಮ್ಮ ಯಮನೂರ,ಕಸ್ತೂರಿ ಹಂಚಿನಾಳ,ಹಣಮಂತ್ರಾಯ ಮಡಿವಾಳ,ಗೋವಿಂದ ಪತ್ತಾರ್,ವೆಂಕಟೇಶಪ್ಪ ಕುಂಬಾರ,ಲಕ್ಷ್ಮೀಕಾಂತ ನಾಯಕ ಸೇರಿದಂತೆ ಅನೇಕರಿದ್ದರು.

emedialine

Recent Posts

ಮಣಿಕಂಠ ರಾಠೋಡ ಆರೋಪ ಸತ್ಯಕ್ಕೆ ದೂರ | ಅಕ್ರಮ‌ವಾಗಿ ಅಕ್ಕಿ ಸಾಗಾಟವಾಗಿಲ್ಲ: ಆಹಾರ ಇಲಾಖೆ ಸ್ಪಷ್ಟನೆ

ಕಲಬುರಗಿ: ಕಳೆದ‌ ಅಕ್ಟೋಬರ್ 2 ರಂದು‌ ನಗರದ ಹೊರವಲಯದ ನಂದೂರ ಕೈಗಾರಿಕಾ ಪ್ರದೇಶದ ದಾಲ್ ಮಿಲ್ ವೊಂದರಲ್ಲಿ ಅಕ್ರಮ ಅಕ್ಕಿ…

6 hours ago

ರುಕ್ಮಾಪುರ: ಶ್ರೀ ದೇವಿ ಪಾರಾಯಣ ನಾಳೆಯಿಂದ

ಸುರಪುರ: ತಾಲೂಕಿನ ರುಕ್ಮಾಪುರ ಗ್ರಾಮದ ಬಣಗಾರ ಮನೆಯಲ್ಲಿ ಬನ್ನಿಮಹಾಂಕಾಳಿ ನವರಾತ್ರಿ ಉತ್ಸವದ ಅಂಗವಾಗಿ ೪೪ನೇ ವರ್ಷದ ಶ್ರೀ ದೇವಿ ಪಾರಾಯಣ…

9 hours ago

ಶಿಕ್ಷಣ ಕ್ಷೇತ್ರದಲ್ಲಿ ಸಾಧನೆಗೈದ ರಾಜಶೇಖರ್ ತಲಾರಿಗೆ ಮಾಧ್ಯಮ ರತ್ನ ಪ್ರಶಸ್ತಿ

ಕಲಬುರಗಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಧ್ವನಿ ಸಂಘ ಜಿಲ್ಲಾಮಟ್ಟದ ಪತ್ರಕರ್ತರ ಸಮಾವೇಶ ಸೆಪ್ಟೆಂಬರ್ 16ರಂದು ಅಫಜಲಪೂರ ಪಟ್ಟಣದಲ್ಲಿ ನಡೆದ ಸಂದರ್ಭದಲ್ಲಿ…

14 hours ago

24 ನೇ ವರ್ಷದ `ಅಮ್ಮ ಪ್ರಶಸ್ತಿ’ಗೆ ಕೃತಿಗಳ ಆಹ್ವಾನ

ಕಲಬುರಗಿ; ಕನ್ನಡ ಸಾಹಿತ್ಯ ಕ್ಷೇತ್ರದಲ್ಲಿ ವಿಶಿಷ್ಟ ಖ್ಯಾತಿ ಪಡೆದ ಜಿಲ್ಲೆಯ ಸೇಡಂನ ಮಾತೋಶ್ರೀ ಮಹಾದೇವಮ್ಮ ನಾಗಪ್ಪ ಮುನ್ನೂರ್ ಪ್ರತಿಷ್ಠಾನದ ವತಿಯಿಂದ…

14 hours ago

ಚಿಂಚೋಳಿ: ಪ್ರವಾದಿ ಅವಹೇಳನ ಖಂಡಿಸಿ ಪ್ರತಿಭಟನೆ

ಚಿಂಚೋಳಿ : ಪ್ರವಾದಿ ಮಹ್ಮದ ಪೈಗಂಬರ್ ಅವರನ್ನು ಅವಮಾನಿಸಿದ ನರಸಿಂಹಾನಂದ ಸರಸ್ವತಿ ಸ್ವಾಮಿಗಳ ವಿರುದ್ಧ ಪ್ರಕರಣ ದಾಖಲಿಸಬೇಕು ಎಂದು ಆಗ್ರಹಿಸಿ…

16 hours ago

ಗುರುರಾಜ ಕರ್ಜಗಿಯನ್ನು ಶೈಕ್ಷಣಿಕ ಗುಣಮಟ್ಟ ಸುಧಾರಣಾ ಸಮಿತಿಯಿಂದ ಕೈಬಿಡಲು ಎಸ್ಎಫ್ಐ ಆಗ್ರಹ

ಕಲಬುರಗಿ: ಕಲ್ಯಾಣ ಕರ್ನಾಟಕದ ಶೈಕ್ಷಣಿಕ ಗುಣಮಟ್ಟ ಸುಧಾರಣೆಗಾಗಿ ಕೆ.ಕೆ.ಆರ್.ಡಿ.ಬಿ ಯು ಸಮಿತಿಯೊಂದನ್ನು ರಚಿಸಿ, ಗುರುರಾಜ ಕರ್ಜಗಿ ಅವರನ್ನು ಅಧ್ಯಕ್ಷರನ್ನಾಗಿ ಮಾಡಿರುವ…

1 day ago

Notice: ob_end_flush(): Failed to send buffer of zlib output compression (0) in /home3/emedixap/public_html/wp-includes/functions.php on line 5420