ಸುರಪುರ: ಕೃಷ್ಣಾ ನದಿ ಪ್ರವಾಹದಿಂದ ತಾಲ್ಲೂಕಿನ ವಿವಿಧ ಗ್ರಾಮಗಳ ಜನರು ನಿರಾಶ್ರಿತರಾಗಿ ಗಂಜಿ ಕೇಂದ್ರಗಳಲ್ಲಿ ಆಶ್ರಯ ಪಡೆದಿದ್ದು.ನೆರೆ ಸಂತ್ರಸ್ತರಿಗೆ ಸಂಘಟನೆಗಳಿಂದ ಅಗತ್ಯ ವಸ್ತುಗಳನ್ನು ವಿತರಿಸಲಾಯಿತು.
ಹೆಚ್.ಡಿ.ಕುಮಾರಸ್ವಾಮಿ ಸೇನೆಯಿಂದ ನಗರದ ಎಪಿಎಂಸಿ ಗಂಜಿನಲ್ಲಿ ತೆರೆಯಲಾದ ಗಂಜಿ ಕೇಂದ್ರದಲ್ಲಿ ಆಶ್ರಯ ಪಡೆದ ಶೆಳ್ಳಿಗಿ ಗ್ರಾಮದ ನಿರಾಶ್ರಿತರಿಗೆ ಹಣ್ಣು ಹಾಲು,ಬ್ರೇಡ್ ಮತ್ತಿತರೆ ವಸ್ತುಗಳ ವಿತರಿಸಿದ ಸೇನೆಯ ರಾಜ್ಯಾಧ್ಯಕ್ಷ ವೆಂಕೋಬ ದೊರೆ ಮಾತನಾಡಿ,ಇಂದು ತಾಲ್ಲೂಕಿನ ಅನೇಕ ಗ್ರಾಮಗಳು ನೆರೆಯ ಬರೆಯಿಂದ ನಲುಗುತ್ತಿವೆ.ಅವರೆಲ್ಲ ನಮ್ಮ ಅಣ್ಣ ತಮ್ಮಂದಿರಾಗಿದ್ದು ಎಲ್ಲರು ಅವರ ನೆರವಿಗೆ ನಿಲ್ಲಬೇಕಿದೆ ಎಂದರು.ಈ ಸಂದರ್ಭದಲ್ಲಿ ಉಸ್ತಾದ ವಜಾಹತ್ ಹುಸೇನ,ರಾಮಕೃಷ್ಣಾ,ಅಟೋಚಾಲಕರ ಸಂಘದ ಅಧ್ಯಕ್ಷ ವೆಂಕಟೇಶ,ಭೀಮರಾಯ,ತಿರುಪತಿ,ಮಾನಯ್ಯ ದೊರೆ,ದೇವಪ್ಪ,ಕೃಷ್ಣಾ ಕಕ್ಕೇರಾ ಹಾಗು ಗಂಜಿ ಕೇಂದ್ರದ ನಿರ್ವಾಹಕ ಅಶೋಕ ಸುರಪುರಕರ್ ಇದ್ದರು.
ಅದೇರೀತಿಯಾಗಿ ಗಂಜೀ ಕೇಂದ್ರದಲ್ಲಿ ಆಶ್ರಯ ಪಡೆದಿರುವ ಸಂತ್ರಸ್ತರಿಗೆ ಜಯಕರ್ನಾಟಕ ಸಂಘಟನೆಯ ತಾಲ್ಲೂಕು ಘಟಕದಿಂದ ಅಗತ್ಯ ವಸ್ತುಗಳಾದ ಬಟ್ಟೆ,ಹಾಲು,ಹಣ್ಣು,ಬ್ರೇಡ್ ಮತ್ತು ಹಾಸಿಗಗಳನ್ನು ವಿತರಿಸಲಾಯಿತು.
ಸಂತ್ರಸ್ತರಿಗೆ ನೆರವಾಗಿ ಜಯಕರ್ನಾಟಕ ಸಂಘಟನೆ ತಾಲ್ಲೂಕಾಧ್ಯಕ್ಷ ರವಿ ನಾಯಕ ಮಾತನಾಡಿ,ನೆರೆ ಸಂತ್ರಸ್ತರಿಗೆ ಸಂಘಘಟನೆಯಿಂದ ಇನ್ನೂ ಹೆಚ್ಚಿನ ನೆರವು ನೀಡಲಾಗುವುದು.ಅಲ್ಲದೆ ಅವರಿಗೆ ಸರಕಾರ ಪರಿಹಾರ ನೀಡುವಂತೆ ಒತ್ತಾಯಿಸಲಾಗುವುದು ಎಂದರು.ಈ ಸಂದರ್ಭದಲ್ಲಿ ನಿಂಗಪ್ಪ ನಾಯಕ ಬಿಜಾಸಪುರ,ಶರಣು,ಮಲ್ಲು ಕಬಾಡಗೇರಾ, ಬಸವರಾಜ ಶಖಾಪುರ,ರಾಮದೇವ ನಾಯಕ,ಹಣಮಂತ್ರಾಯ ಮೇಟಿಗೌಡ ಸೇರಿದಂತೆ ಅನೇಕರಿದ್ದರು.
ಕಲಬುರಗಿ: ಕಳೆದ ಅಕ್ಟೋಬರ್ 2 ರಂದು ನಗರದ ಹೊರವಲಯದ ನಂದೂರ ಕೈಗಾರಿಕಾ ಪ್ರದೇಶದ ದಾಲ್ ಮಿಲ್ ವೊಂದರಲ್ಲಿ ಅಕ್ರಮ ಅಕ್ಕಿ…
ಸುರಪುರ: ತಾಲೂಕಿನ ರುಕ್ಮಾಪುರ ಗ್ರಾಮದ ಬಣಗಾರ ಮನೆಯಲ್ಲಿ ಬನ್ನಿಮಹಾಂಕಾಳಿ ನವರಾತ್ರಿ ಉತ್ಸವದ ಅಂಗವಾಗಿ ೪೪ನೇ ವರ್ಷದ ಶ್ರೀ ದೇವಿ ಪಾರಾಯಣ…
ಕಲಬುರಗಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಧ್ವನಿ ಸಂಘ ಜಿಲ್ಲಾಮಟ್ಟದ ಪತ್ರಕರ್ತರ ಸಮಾವೇಶ ಸೆಪ್ಟೆಂಬರ್ 16ರಂದು ಅಫಜಲಪೂರ ಪಟ್ಟಣದಲ್ಲಿ ನಡೆದ ಸಂದರ್ಭದಲ್ಲಿ…
ಕಲಬುರಗಿ; ಕನ್ನಡ ಸಾಹಿತ್ಯ ಕ್ಷೇತ್ರದಲ್ಲಿ ವಿಶಿಷ್ಟ ಖ್ಯಾತಿ ಪಡೆದ ಜಿಲ್ಲೆಯ ಸೇಡಂನ ಮಾತೋಶ್ರೀ ಮಹಾದೇವಮ್ಮ ನಾಗಪ್ಪ ಮುನ್ನೂರ್ ಪ್ರತಿಷ್ಠಾನದ ವತಿಯಿಂದ…
ಚಿಂಚೋಳಿ : ಪ್ರವಾದಿ ಮಹ್ಮದ ಪೈಗಂಬರ್ ಅವರನ್ನು ಅವಮಾನಿಸಿದ ನರಸಿಂಹಾನಂದ ಸರಸ್ವತಿ ಸ್ವಾಮಿಗಳ ವಿರುದ್ಧ ಪ್ರಕರಣ ದಾಖಲಿಸಬೇಕು ಎಂದು ಆಗ್ರಹಿಸಿ…
ಕಲಬುರಗಿ: ಕಲ್ಯಾಣ ಕರ್ನಾಟಕದ ಶೈಕ್ಷಣಿಕ ಗುಣಮಟ್ಟ ಸುಧಾರಣೆಗಾಗಿ ಕೆ.ಕೆ.ಆರ್.ಡಿ.ಬಿ ಯು ಸಮಿತಿಯೊಂದನ್ನು ರಚಿಸಿ, ಗುರುರಾಜ ಕರ್ಜಗಿ ಅವರನ್ನು ಅಧ್ಯಕ್ಷರನ್ನಾಗಿ ಮಾಡಿರುವ…