ಶಹಾಬಾದ: ಕಳೆದ ಹಲವು ದಶಕಗಳಿಂದ ಗ್ರಾಮಲೆಕ್ಕಾಧಿಕಾರಿಗಳಿಂದೇ ಕರೆಯಲ್ಪಡುತ್ತಿದ್ದ ಗ್ರಾಮಲೆಕ್ಕಾಧಿ ಕಾರಿಗಳನ್ನು ಇನ್ನು ಮುಂದೆ ಗ್ರಾಮ ಆಡಳಿತಾಧಿಕಾರಿ ಎಂದು ಸರಕಾರ ಪದನಾಮ ಬದಲಾಯಿಸಿರುವುದು ಸ್ವಾಗತಾರ್ಹವಾಗಿದೆ ಎಂದು ಗ್ರಾಮ Áಡಳಿತ ಅಧಿಕಾರಿಗಳ ಸಂಘದ ಅಧ್ಯಕ್ಷ ಹಣಮಂತರಾವ ಪಾಟೀಲ ತಿಳಿಸಿದರು.
ಪರ್ತಕರ್ತರೊಂದಿಗೆ ಮಾತನಾಡಿ, ಗ್ರಾಮಲೆಕ್ಕಾಧಿಕಾರಿಗಳ ಬಹುದಿನಗಳ ಬೇಡಿಕೆಯನ್ನು ಕಂದಾಯ ಸಚಿವ ಆರ್.ಅಶೋಕ್ ಹಾಗೂ ಸರ್ಕಾರ ಗಣನೆಗೆ ತೆಗೆದುಕೊಂಡು ಇನ್ನು ಮುಂದೆ ಗ್ರಾಮಲೆಕ್ಕಾಧಿಕಾರಿಗಳನ್ನು ಗ್ರಾಮ ಆಡಳಿತಾಧಿಕಾರಿಗಳು ಎಂದು ಬದಲಾಯಿಸಿ ಆದೇಶ ಹೊರಡಿಸಿರುವುದು ಎಲ್ಲಾ ಗ್ರಾಮಲೆಕ್ಕಾಧಿಕಾರಿಗಳಿಗೆ ಸಂತಸ ತಂದಿದೆ ಎಂದರು.
ನಮ್ಮ ಇನ್ನು ಹಲವಾರು ಬೇಡಿಕೆಗಳಿದ್ದು, ಅವುಗಳನ್ನು ಬೆಳಗಾವಿಯಲ್ಲಿ ನಡೆಯುವ ವಿಧಾನಸಭಾ ಅಧಿವೇಷನದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಕಂದಾಯ ಸಚಿವ ಆರ್.ಅಶೋಕ್, ಸರ್ಕಾ ರದ ಮುಖ್ಯ ಕಾರ್ಯದರ್ಶಿಗಳಿಗೆ, ಕಂದಾಯ ಇಲಾಖೆ ಕಾರ್ಯದರ್ಶಿಗಳಿಗೆ ಸಂಘದ ರಾಜ್ಯಾಧ್ಯಕ್ಷರು ಹಾಗೂ ಪದಾಧಿಕಾರಿಗಳ ಮೂಲಕ ಸಲ್ಲಿಸಲಾಗುವುದು ಎಂದರು.
ರಾಜ್ಯದ ಗ್ರಾಮಲೆಕ್ಕಾಧಿಕಾರಿಗಳ ಸಮಸ್ಯೆಗಳ ಮತ್ತು ಬೇಡಿಕೆಗಳ ಈಡೇರಿಕೆಗಾಗಿ ಹಗಲಿರುಳು ಶ್ರಮಿಸುತ್ತಿರುವ ಸಂಘದ ರಾಜ್ಯಾಧ್ಯಕ್ಷ ದೊಡ್ಡಬಸಪ್ಪರೆಡ್ಡಿ ಮತ್ತು ಪದಾಧಿಕಾರಿಗಳಿಗೆ ಶಹಾಬಾದ ತಾಲೂಕು ಗ್ರಾಮ ಆಡಳಿತಾಧಿಕಾರಿಗಳ ಸಂಘದ ಪದಾಧಿಕಾರಿಗಳು ಹಾಗೂ ಗ್ರಾಮಲೆಕ್ಕಾಧಿಕಾರಿಗಳು ಅಭಿನಂದಿಸುವುದಾಗಿ ತಿಳಿಸಿದರು.
ಈ ಸಂದರ್ಭದಲ್ಲಿ ಪ್ರಧಾನ ಕಾರ್ಯದರ್ಶಿ ಶ್ರೀಮಂತ.ಎಚ್.ಆರ್, ಖಜಾಂಚಿ ಶಿವಾನಂದ ಹೂಗಾರ,ಉಪಾಧ್ಯಕ್ಷ ಜಾನ್ ಜಾರ್ಜ, ಜಿಲ್ಲಾ ಪರಿಷತ್ ಸದಸ್ಯ ಇಮ್ರಾನ್.ಟಿ. ತಾವರಗೆರೆ, ಗೌರವಾಧ್ಯಕ್ಷ ರೇವಣಸಿದ್ದಪ್ಪ ಪಾಟೀಲ,ಸಂಸ್ಕøತಿ ಮತ್ತು ಕ್ರೀಡಾ ಕಾರ್ಯದರ್ಶಿ ಮಹ್ಮದ್ ಬಿಲಾಲ್, ಮಹಿಳಾ ಪದಾಧಿಕಾರಿ ಪಾರ್ವತಿ ಇತರರು ಇದ್ದರು.
ಕಲಬುರಗಿ; ಕನಾ೯ಟಕ ರಾಜ್ಯ ತಳವಾರ ಮಹಾಸಭಾ ಕಲಬುರಗಿ ಜಿಲ್ಲಾಧ್ಯಕ್ಷರಾದ ಚಂದ್ರಕಾಂತ ದಶರಥ ತಳವಾರ ಅವರ ಅಧ್ಯಕ್ಷತೆಯಲ್ಲಿ ಇಂದು ಆನಂದ ನಿಲಯ…
ಕಲಬುರಗಿ; ಜಿಲ್ಲಾಧಿಕಾರಿ ಬಿ. ಫೌಜಿಯಾ ತರನ್ನುಮ್ ಅವರು ಶನಿವಾರ ಶಹಾಬಾದ ರಸ್ತೆಯಲ್ಲಿರುವ ನಂದೂರ-ಕೆಸರಟಗಿ ಮತ್ತು ಹುಮನಾಬಾದ ರಸ್ತೆಯಲ್ಲಿರುವ ಕಪನೂರ ಕೈಗಾರಿಕಾ…
ಶಹಾಬಾದ: ಕರ್ನಾಟಕದ ಬಹುಮತ ಸರಕಾರವನ್ನು ಬೀಳಿಸಲು ಇಲ್ಲಸಲ್ಲದ ಆರೋಪ ಮಾಡುವ ಮೂಲಕ ಸಿಎಂ ರಾಜೀನಾಮೆಗೆ ಒತ್ತಾಯ ಮಡುತ್ತಿರುವ ಬಿಜೆಪಿ ಹಾಗೂ…
ಶಹಾಬಾದ:ಪ್ರತಿ ಮನೆಗೂ ನೀರು ದೊರಿಸಿಕೊಡುವ ಉದ್ದೇಶದಿಂದ ನಡೆಯುವ ಜೆಜೆಎಂ ಕಾಮಗಾರಿ ಗುಣಮಟ್ಟದಿಂದ ಕೂಡಿರಬೇಕೆಂದು ಕಾಂಗ್ರೆಸ್ ಮುಖಂಡ ಮೃತ್ಯುಂಜಯ್ ಹಿರೇಮಠ ಹೇಳಿದರು.…
ಶಹಾಬಾದ :ನಗರದ ಬೌದ್ಧ ವಿಹಾರದಲ್ಲಿ ರವಿವಾರ ಹಮ್ಮಿಕೊಂಡ 68ನೇ ಧಮ್ಮಚಕ್ರ ಪ್ರವರ್ತನಾ ದಿನದ ಅಂಗವಾಗಿ ಕಲಬುರ್ಗಿಯಲ್ಲಿ ಅ.13 ಮತ್ತು 14…
ಕಲಬುರಗಿ: ಈಶಾನ ಶಿಕ್ಷಕರ ಕ್ಷೇತ್ರದ ವಿಧಾನ ಪರಿಷತ್ ಸದಸ್ಯರಾದ ಶಶಿಲ್ ನಮೋಶಿ ರವರ ನೇತೃತ್ವದಲ್ಲಿ ಹಾಗೂ ಶಾಲಾ ಶಿಕ್ಷಣ ಇಲಾಖೆಯ…