ಕಲಬುರಗಿ: ಈ ನಾಡು ಕಂಡ ಅಪರೂಪದ ಜ್ಞಾನ ಬಂಡಾರ ಪೆÇ್ರ. ಮಲ್ಲೇಪುರಂ ಜಿ ವೆಂಕಟೇಶ ಅವರಲ್ಲಿದೆ. ತಾವು ಬೆಳೆಯುವುದರ ಮೂಲಕ ತಮ್ಮವರನ್ನು ಅಂದರೆ ಹಿರಿಯರನ್ನು ಕಿರಿಯರನ್ನು ಬೆಳೆಸುವ ಶಕ್ತಿ ಅವರಲ್ಲಿದೆ ಎಂದು ಹಂಪಿ ಕನ್ನಡ ವಿಶ್ವವಿದ್ಯಾಲಯದ ಎಮಿರಿಟಸ್ ಪೆÇ್ರ. ಕರೀಗೌಡ ಬೀಚನಹಳ್ಳಿ ಅಭಿಪ್ರಾಯಪಟ್ಟರು.
ಗುಲಬರ್ಗಾ ವಿಶ್ವವಿದ್ಯಾಲಯದ ಕನ್ನಡ ಅಧ್ಯಯನ ಸಂಸ್ಥೆಯ ಹರಿಹರ ಸಭಾಂಗಣದಲ್ಲಿ ಏರ್ಪಡಿಸಿದ್ದ ಡಾ.ಎಂ.ಬಿ.ಕಟ್ಟಿ ಸಂಪಾದಿತ ಪೆÇ್ರ. ಮಲ್ಲೇಶ್ವರಂ ಪರಿಸ್ಪಂದನಾ ಪುಸ್ತಕ ಲೋಕಾರ್ಪಣೆ ಹಾಗೂ ಓಮನ್ ದೇಶದ ಮಸ್ಕತ್ ನಲ್ಲಿ ನಡೆದ ವಿಶ್ವಕನ್ನಡ ಸಂಸ್ಕøತಿ ಸಮ್ಮೇಳನದ ಸರ್ವಾಧ್ಯಕ್ಷ ಗೌರವಕ್ಕೆ ಪಾತ್ರರಾದ ಪೆÇ್ರ. ಮಲ್ಲೇಪುರಂ ಜಿ ವೆಂಕಟೇಶ ಅವರ ಸನ್ಮಾನ ಸಮಾರಂಭವನ್ನು ಉದ್ದೇಶಿಸಿ ಮಾತನಾಡಿದರು.
ವಿದ್ವಾಂಸನಾಗಬೇಕು ಎಂದರೆ ಓದುವ ಅದಮ್ಯ ಆಸಕ್ತಿ ಇರಬೇಕು. ಶ್ರದ್ಧೆಯಿಂದ ಓದಿದರೆ ವಿದ್ವತ್ ತಾನಾಗೆ ಬರುತ್ತದೆ. ಪ್ರಾಥಮಿಕ ಶಾಲಾ ಶಿಕ್ಷಕರಾಗಿದ್ದ ಮಲ್ಲೇಶ್ವರಂ ಕುಲಪತಿ ಹುದ್ದೆಗೇರಿದ್ದು ಅದ್ಭುತ ಸಾಧನೆ ಎಂದರು.
ಕನ್ನಡ ಅಧ್ಯಯನ ಸಂಸ್ಥೆಯ ನಿರ್ದೇಶಕ ಪೆÇ್ರ. ಎಚ್.ಟಿ ಪೆÇೀತೆ ಮಾತನಾಡಿ ವಿದ್ಯಾರ್ಥಿಗಳಲ್ಲಿ ವಿನಯವು ಮುಖ್ಯವಾಗಬೇಕು. ವಿಶಾಲವಾದ ಮನಸ್ಥಿತಿ ಬೆಳೆಸಿಕೊಳ್ಳುವುದರ ಮೂಲಕ ಸಾಹಿತ್ಯದ ಕೃಷಿಯಲ್ಲಿ ತೊಡಗಬೇಕು ಎಂದರು.
ಪೆÇ್ರ.ಮಲ್ಲೇಶ್ವರಂ ಅವರ ಪರಿಸ್ಪಂದನ ಪುಸ್ತಕದ ಸಂಪಾದಕ ಡಾ.ಎಂ.ಬಿ .ಕಟ್ಟಿ ಮಾತನಾಡಿ ಸಜ್ಜನರ ಸಂಘ ಮಾಡಬೇಕು ಎಂದರೆ ಮಲ್ಲೇಪುರಂ ಅಂತವರ ಸ್ನೇಹವಾಗಬೇಕು. ಗುರುವಿನ ಕೆಲಸ ಮಾಡಬೇಕು ಎಂದರೆ ಸಾಹಿತ್ಯದ ಜ್ಞಾನ ಬಂಡಾರದ ಕೆಲಸ ಎಂದು ತಿಳಿದುಕೊಂಡು ಪುಸ್ತಕ ಬರೆದೆ. ಇಂತಹ ವ್ಯಕ್ತಿಯ ಪುಸ್ತಕ ಸಂಪಾದಕತ್ವ ಸಿಕ್ಕಿದ್ದು ನನಗೆ ಖುಷಿಯ ವಿಚಾರ ಎಂದರು.
ಹಂಪಿ ಕನ್ನಡ ವಿವಿ ವಿಶ್ರಾಂತ ಪ್ರಾಧ್ಯಾಪಕ ಡಾ.ಸಿದ್ದಣ್ಣ ಉತ್ನಾಳ ಲೋಕಾರ್ಪಣೆಗೊಂಡ ಪೆÇ್ರ.ಮಲ್ಲೇಪುರಂ ಪರಿಸ್ಪಂದನ ಕೃತಿ ಕುರಿತು ಮಾತನಾಡಿದರು. ಡಾ.ಶ್ರೀಶೈಲ್ ನಾಗರಾಳ ಅವರು ಕಾರ್ಯಕ್ರಮಕ್ಕೆ ಎಲ್ಲರನ್ನೂ ಸ್ವಾಗತಿಸಿ ಪ್ರಾಸ್ತಾವಿಕವಾಗಿ ಮಾತನಾಡಿದರು. ಡಾ.ಸಂತೋಷ ಕುಮಾರ ಕಂಬಾರ ನಿರೂಪಿಸಿ ವಂದಿಸಿದರು.
ಕಲಬುರಗಿ: ಕಲ್ಯಾಣ ಕರ್ನಾಟಕದ ಶೈಕ್ಷಣಿಕ ಗುಣಮಟ್ಟ ಸುಧಾರಣೆಗಾಗಿ ಕೆ.ಕೆ.ಆರ್.ಡಿ.ಬಿ ಯು ಸಮಿತಿಯೊಂದನ್ನು ರಚಿಸಿ, ಗುರುರಾಜ ಕರ್ಜಗಿ ಅವರನ್ನು ಅಧ್ಯಕ್ಷರನ್ನಾಗಿ ಮಾಡಿರುವ…
ಕಲಬುರಗಿ; ಕನಾ೯ಟಕ ರಾಜ್ಯ ತಳವಾರ ಮಹಾಸಭಾ ಕಲಬುರಗಿ ಜಿಲ್ಲಾಧ್ಯಕ್ಷರಾದ ಚಂದ್ರಕಾಂತ ದಶರಥ ತಳವಾರ ಅವರ ಅಧ್ಯಕ್ಷತೆಯಲ್ಲಿ ಇಂದು ಆನಂದ ನಿಲಯ…
ಕಲಬುರಗಿ; ಜಿಲ್ಲಾಧಿಕಾರಿ ಬಿ. ಫೌಜಿಯಾ ತರನ್ನುಮ್ ಅವರು ಶನಿವಾರ ಶಹಾಬಾದ ರಸ್ತೆಯಲ್ಲಿರುವ ನಂದೂರ-ಕೆಸರಟಗಿ ಮತ್ತು ಹುಮನಾಬಾದ ರಸ್ತೆಯಲ್ಲಿರುವ ಕಪನೂರ ಕೈಗಾರಿಕಾ…
ಶಹಾಬಾದ: ಕರ್ನಾಟಕದ ಬಹುಮತ ಸರಕಾರವನ್ನು ಬೀಳಿಸಲು ಇಲ್ಲಸಲ್ಲದ ಆರೋಪ ಮಾಡುವ ಮೂಲಕ ಸಿಎಂ ರಾಜೀನಾಮೆಗೆ ಒತ್ತಾಯ ಮಡುತ್ತಿರುವ ಬಿಜೆಪಿ ಹಾಗೂ…
ಶಹಾಬಾದ:ಪ್ರತಿ ಮನೆಗೂ ನೀರು ದೊರಿಸಿಕೊಡುವ ಉದ್ದೇಶದಿಂದ ನಡೆಯುವ ಜೆಜೆಎಂ ಕಾಮಗಾರಿ ಗುಣಮಟ್ಟದಿಂದ ಕೂಡಿರಬೇಕೆಂದು ಕಾಂಗ್ರೆಸ್ ಮುಖಂಡ ಮೃತ್ಯುಂಜಯ್ ಹಿರೇಮಠ ಹೇಳಿದರು.…
ಶಹಾಬಾದ :ನಗರದ ಬೌದ್ಧ ವಿಹಾರದಲ್ಲಿ ರವಿವಾರ ಹಮ್ಮಿಕೊಂಡ 68ನೇ ಧಮ್ಮಚಕ್ರ ಪ್ರವರ್ತನಾ ದಿನದ ಅಂಗವಾಗಿ ಕಲಬುರ್ಗಿಯಲ್ಲಿ ಅ.13 ಮತ್ತು 14…