ಕಲಬುರಗಿ: ನಗರದ ಗೋದುತಾಯಿ ನಗರದಲ್ಲಿರುವ ಮದರ್ ತೆರೆಸಾ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಪ್ರಖ್ಯಾತ ಗಣಿತಜ್ಞ ಶ್ರೀನಿವಾಸ ರಾಮಾನುಜನ್ ಅವರ ಜನ್ಮ ದಿನದ ಅಂಗವಾಗಿ ರಾಷ್ಟ್ರೀಯ ಗಣಿತ ದಿನಾಚರಣೆ ಆಯೋಜಿಸಲಾಯಿತು. ಶನಿವಾರ 17, ಹಾಗೂ 18 ರವಿವಾರ ಗಣಿತ ವಸ್ತು ಪ್ರದರ್ಶನ ನಡೆಯಲಿದೆ.
ಕಾರ್ಯಕ್ರಮವನ್ನು ಶಿಕ್ಷಣ ಇಲಾಖೆ ಹಿರಿಯ ಸಹಾಯಕ ನಿರ್ದೇಶಕ ಯುವರಾಜ್ ಗಾಡಿ ಉದ್ಘಾಟಿಸಿ ಮಾತನಾಡುತ್ತಾ ಮಕ್ಕಳು ಸ್ವಯಂ ಪ್ರೇರಣೆಯಿಮದ ಗಣಿತದ ಚಟುವಟಿಕೆಗಳಲ್ಲಿ ಆಸಕ್ತಿಯುತವಾಗಿ ತಮ್ಮನು ತಾವು ತೊಡಗಿಸಿಕೊಂಡಿರುವುದು ಬಹಳ ಸಂತಸದ ವಿಷಯ ಎಂದು ವ್ಯಕ್ತಪಡಿಸಿದರು.
ಮುಖ್ಯಗುರು ಎನ್.ಎಸ್ ಮಠ ಇವರು ಮಾತನಾಡಿ ಪ್ರತಿಯೊಬ್ಬ ವಿದ್ಯಾರ್ಥಿಯಲ್ಲಿ ರಾಮಾನುಜನ್ ಅಡಗಿರುತ್ತಾನೆ ಮಕ್ಕಳ ಪ್ರತಿಭೆಗಳನ್ನು ಹೊರಹಾಕಲು ಈ ಗಣಿತ ವಸ್ತು ಪ್ರದರ್ಶನ ಸೂಕ್ತ ವೇದಿಕೆಯಾಗಿದೆ ಎಂದು ಹೇಳಿದರು.
ಗಣಿತ ಶಿಕ್ಷಕ ವಿಶ್ವನಾಥ ಕಟ್ಟಿಮನಿ ಮಾತನಾಡಿ “ಗಣಿತ ವಿಷಯ ಎಲ್ಲಾ ವಿಷಯಗಳ ತಂದೆ ಎಂದು ಉದಾಹರಣೆಗಳೊಂದಿಗೆ ಮಕ್ಕಳಿಗೆ ಮಾಹಿತಿ ನೀಡಿದರು.
ಗಣಿತ ವಸ್ತು ಪ್ರದರ್ಶನವನ್ನು ವಿಕ್ಷೀಸಲು ಸಾರ್ವಜನಿಕರಿಗೆ ಮುಕ್ತವಾಗಿ ಅವಕಾಶ ಕಲ್ಪಿಸಲಾಗಿದೆ. ಹೀಗಾಗಿ ಅಪಾರ ಸಂಖ್ಯೆಯಲ್ಲಿ ಗಣಿತ ವಸ್ತು ಪ್ರದರ್ಶನವನ್ನು ವಿಕ್ಷೀಸಲು ಮಹಿಳೆಯರು, ಬೇರೆ ಬೇರೆ ಶಾಲೆಯಿಂದ ಮಕ್ಕಳು ಹಾಗೂ ಪೋಷಕರು, ವಿಷಯ ತಜ್ಞರು ಆಗಮಿಸಿ ಮಕ್ಕಳು ಮಾಡಿದ ಮಾಡಲ್ಗಳನ್ನು ನೋಡಿ ಮೂಕ ವಿಸ್ಮಿತರಾಗಿ ಮಕ್ಕಳಲ್ಲಿರುವ ಪ್ರತಿಭೆಗೆ ತುಂಬು ಮನಸ್ಸಿನಿಂದ ಪ್ರಶಂಶಿಸಿದರು.
ಆಡಳಿತ ಮಂಡಳಿಯ ಬಸವರಾಜ ಭೀಮಳ್ಳಿ, ಅಧ್ಯಕ್ಷರು ಹಾಗೂ ಶಾಸಕ ಎಂ.ವಾಯ್. ಪಾಟೀಲ್, ಉಪಾಧ್ಯಕ್ಷರು ಹಾಗೂ ಕಾರ್ಯದರ್ಶಿಗಳಾದ ಶಿವಪುತ್ರಪ್ಪ ಡೆಂಕಿ ಅವರು ಗಣಿತ ವಸ್ತು ಪ್ರದರ್ಶನದಲ್ಲಿ ಭಾಗವಹಿಸಿದ ಎಲ್ಲ ಮಕ್ಕಳಿಗೆ ಶುಭ ಕೋರಿದರು.
ಈ ಸಂದರ್ಭದಲ್ಲಿ ಮುಖ್ಯೋಪಾಧ್ಯಾಯರಾದ ನಾಗೇಂದ್ರ ಎಂ ಬಡಿಗೇರ್, ಶಿಕ್ಷಕರು ಹಾಗೂ ಸಿಬ್ಬಂದಿ ವರ್ಗ ಉಪಸ್ಥಿತರಿದ್ದರು.
ಕಲಬುರಗಿ: ಕಲ್ಯಾಣ ಕರ್ನಾಟಕದ ಶೈಕ್ಷಣಿಕ ಗುಣಮಟ್ಟ ಸುಧಾರಣೆಗಾಗಿ ಕೆ.ಕೆ.ಆರ್.ಡಿ.ಬಿ ಯು ಸಮಿತಿಯೊಂದನ್ನು ರಚಿಸಿ, ಗುರುರಾಜ ಕರ್ಜಗಿ ಅವರನ್ನು ಅಧ್ಯಕ್ಷರನ್ನಾಗಿ ಮಾಡಿರುವ…
ಕಲಬುರಗಿ; ಕನಾ೯ಟಕ ರಾಜ್ಯ ತಳವಾರ ಮಹಾಸಭಾ ಕಲಬುರಗಿ ಜಿಲ್ಲಾಧ್ಯಕ್ಷರಾದ ಚಂದ್ರಕಾಂತ ದಶರಥ ತಳವಾರ ಅವರ ಅಧ್ಯಕ್ಷತೆಯಲ್ಲಿ ಇಂದು ಆನಂದ ನಿಲಯ…
ಕಲಬುರಗಿ; ಜಿಲ್ಲಾಧಿಕಾರಿ ಬಿ. ಫೌಜಿಯಾ ತರನ್ನುಮ್ ಅವರು ಶನಿವಾರ ಶಹಾಬಾದ ರಸ್ತೆಯಲ್ಲಿರುವ ನಂದೂರ-ಕೆಸರಟಗಿ ಮತ್ತು ಹುಮನಾಬಾದ ರಸ್ತೆಯಲ್ಲಿರುವ ಕಪನೂರ ಕೈಗಾರಿಕಾ…
ಶಹಾಬಾದ: ಕರ್ನಾಟಕದ ಬಹುಮತ ಸರಕಾರವನ್ನು ಬೀಳಿಸಲು ಇಲ್ಲಸಲ್ಲದ ಆರೋಪ ಮಾಡುವ ಮೂಲಕ ಸಿಎಂ ರಾಜೀನಾಮೆಗೆ ಒತ್ತಾಯ ಮಡುತ್ತಿರುವ ಬಿಜೆಪಿ ಹಾಗೂ…
ಶಹಾಬಾದ:ಪ್ರತಿ ಮನೆಗೂ ನೀರು ದೊರಿಸಿಕೊಡುವ ಉದ್ದೇಶದಿಂದ ನಡೆಯುವ ಜೆಜೆಎಂ ಕಾಮಗಾರಿ ಗುಣಮಟ್ಟದಿಂದ ಕೂಡಿರಬೇಕೆಂದು ಕಾಂಗ್ರೆಸ್ ಮುಖಂಡ ಮೃತ್ಯುಂಜಯ್ ಹಿರೇಮಠ ಹೇಳಿದರು.…
ಶಹಾಬಾದ :ನಗರದ ಬೌದ್ಧ ವಿಹಾರದಲ್ಲಿ ರವಿವಾರ ಹಮ್ಮಿಕೊಂಡ 68ನೇ ಧಮ್ಮಚಕ್ರ ಪ್ರವರ್ತನಾ ದಿನದ ಅಂಗವಾಗಿ ಕಲಬುರ್ಗಿಯಲ್ಲಿ ಅ.13 ಮತ್ತು 14…