ಬಿಸಿ ಬಿಸಿ ಸುದ್ದಿ

ಡಿ.ಎಸ್.ಇ.ಆರ್.ಟಿ. ನಿರ್ದೇಶಕರಿಂದ ಶೈಕ್ಷಣಿಕ ಪ್ರಗತಿ ಪರಿಶೀಲನೆ

ಕಲಬುರಗಿ: ಸಾರ್ವಜನಿಕ ಶಿಕ್ಷಣ  ಇಲಾಖೆ, ಜಿಲ್ಲಾ ಶಿಕ್ಷಣ  ಮತ್ತು ತರಬೇತಿ ಸಂಸ್ಥೆ ಇವರ ಸಂಯುಕ್ತ ಆಶ್ರಯದಲ್ಲಿ ರಾಜ್ಯ ಶಿಕ್ಷಣ ಸಂಶೋಧನೆ ಮತ್ತು ತರಬೇತಿ ಇಲಾಖೆ ವತಿಯಿಂದ ಶೈಕ್ಷಣಿಕ ಪ್ರಗತಿ ಪರಿಶೀಲನೆ ಹಮ್ಮಿಕೊಳ್ಳಲಾಯಿತು.

ಮೊದಲನೇ ದಿನ ಡಿ.ಎಸ್.ಇ.ಆರ್.ಟಿ ನಿರ್ದೇಶಕರಾದ  ಶ್ರೀಮತಿ ಸುಮಂಗಲ ಅವರು ಜಿಲ್ಲೆಯಲ್ಲಿ ನಡೆಯುತ್ತಿರುವ ರಾಷ್ಟ್ರೀಯ ಶಿಕ್ಷಣ ನೀತಿ  ಅರಿವು  ಕಾರ್ಯಾಗಾರದಲ್ಲಿ ಭಾಗವಹಿಸಿದರು, ಇಂಗ್ಲೀಷ್ ಶಿಕ್ಷಕರ ತರಬೇತಿಯಲ್ಲಿ ಭಾಗವಹಿಸಿದರು ಹಾಗೂ ಕಲಬುರಗಿ ಜಿಲ್ಲೆಯ ದಕ್ಷಿಣ ವಲಯದ  ಸರಕಾರಿ ಪ್ರೌಢ ಶಾಲೆ  ಹಾಗೂ ಎಸ್.ಬಿ.ಟಿ.  ಸರಕಾರಿ ಕಿರಿಯ ಪ್ರಾಥಮಿಕ  ಶಾಲೆಗಳಿಗೆ ಭೇಟಿ ನೀಡಿ ಮಕ್ಕಳ ಕಲಿಕೆ ಮತ್ತು ಶಿಕ್ಷಕರ ಭಾಗವಹಿಸುವಿಕೆಯನ್ನು ಪರಿಶೀಲಿಸಿದರು.

ಎರಡನೇ ದಿನ ಕಮಲಾಪೂರ ತಾಲೂಕಿನ ಪ್ರಾತ್ಯಾಕ್ಷಿಕ ಪ್ರಾಥಮಿಕ ಶಾಲೆಗೆ ಭೇಟಿ ನೀಡಿ  ನಲಿಕಲಿ ತರಗತಿ ವೀಕ್ಷಣೆ ಮಾಡಿದರು.  ಬಳಿಕ ಡಯಟ್ ಕಮಲಾಪೂರದಲ್ಲಿ ಜಿಲ್ಲೆಯ ಎಲ್ಲಾ ಅನುಷ್ಠಾನ ಅಧಿಕಾರಿಗಳ ಜೊತೆಗೆ ಶೈಕ್ಷಣಿಕ ಪ್ರಗತಿ ಪರಿಶೀಲನೆ ಮಾಡಿ ಶೈಕ್ಷಣಿಕ ಮಾರ್ಗದರ್ಶನ  ಮಾಡಿದರು.

ಈ  ಸಂದರ್ಭದಲ್ಲಿ ಮಾತನಾಡಿದ ನಿರ್ದೇಶಕರು ಕಲಬುರಗಿ ಜಿಲ್ಲೆಯಲ್ಲಿ ಕಲಿಕಾಚೇತರಿಕೆ ಹಾಗೂ ಇತರೆ ಕಾರ್ಯಕ್ರಮಗಳು ಅತ್ಯಂತ ಅಚ್ಚುಕಟ್ಟಾಗಿ ಅನುಷ್ಠಾನಗೊಳಿಸಬೇಕು. ಶಿಕ್ಷಕರು ತಮ್ಮ ತಮ್ಮ ವೃತ್ತಿಯ ಬಗ್ಗೆ ಗೌರವ ಇಟ್ಟುಕೊಂಡು ಅತ್ಯಂತ ಶ್ರದ್ಧೆಯಿಂದ ಕೆಲಸ ಮಾಡಬೇಕು. ಸರಕಾರಿ ಶಾಲೆಯಲ್ಲಿ ಓದುತ್ತಿರುವ ಬಡಮಕ್ಕಳಿಗೆ  ಸರಿಯಾಗಿ ಓದು ಬರವಣಿಗೆ ಕಲಿಸಿರಿ. ಶಿಕ್ಷಕ ವೃತ್ತಿ ಅತ್ಯಂತ ಪವಿತ್ರವಾದದ್ದು, ನಾವೆಲ್ಲರೂ ಅತ್ಯಂತ ಗೌರವಯುತವಾಗಿ ನಡೆದುಕೊಳ್ಳುವ ಮೂಲಕ  ಮಕ್ಕಳಿಗೆ ಸ್ಪಷ್ಟವಾದ ಓದು ಶುದ್ಧ ಬರವಣಿಗೆ ಸರಳವಾದ ಗಣಿತವನ್ನು ಕಲಿಸಬೇಕು ಅಷ್ಟೆ ಅಲ್ಲದೇ ಇಲಾಖೆಯ ನಿಯಾಮವಳಿಗಳ ಪ್ರಕಾರ ನಾವೆಲ್ಲರೂ ಕೆಲಸ ಮಾಡಬೇಕು ಎಂದು ಮಾರ್ಗದರ್ಶನ ಮಾಡಿದರು.

ಈ ಭೇಟಿಯ ಸಂದರ್ಭದಲ್ಲಿ ಉಪನಿರ್ದೇಶಕರಾದ ಸಕ್ರೆಪ್ಪಗೌಡ ಬಿರಾದಾರ  ಬಸವರಾಜ ಮಾಯಾಚಾರ್ಯ, ಡಯಟ್ ನ ಉಪನ್ಯಾಸಕರು, ಬಿ,ಇ,ಓ, ಬಿ,ಆರ್,ಸಿ ಹಾಗೂ ಸ್ಟರ್  ಸಂಸ್ಥೆಯ ಕೆ.ಎಂ.ವಿಶ್ವನಾಥ ಮರತೂರ ಹಾಜರಿದ್ದರು.

emedialine

Recent Posts

ಕಲಬುರಗಿ ಕೆಬಿಎನ್ ಆಸ್ಪತ್ರೆಯಲ್ಲಿ ವಿಶೇಷ ಉಪನ್ಯಾಸ

ಕಲಬುರಗಿ : ಸ್ಥಳೀಯ ಕೆಬಿಎನ್ ಆಸ್ಪತ್ರೆಯಲ್ಲಿ ಸ್ತ್ರೀ ರೋಗ ವಿಭಾಗದಿಂದ 'ಸ್ತ್ರೀರೋಗ ಶಾಸ್ತ್ರದ ಆಂಕೊಲಾಜಿಯಲ್ಲಿ ರೋಬೋಟಿಕ್ ಶಸ್ತ್ರಚಿಕಿತ್ಸೆಯ' ಪಾತ್ರ ಎಂಬ…

28 mins ago

ಆರೋಗ್ಯವಂತ ಸಮಾಜ ನಿರ್ಮಾಣಕ್ಕೆ ವೈದ್ಯರ ಸಲಹೆ ಅವಶ್ಯಕ: ಡಾ.ಪಿ.ಎಸ್.ಶಂಕರ್

ಕಲಬುರಗಿ:  ಸಮಾಜದಲ್ಲಿ ಪ್ರತಿಯೊಬ್ಬರೂ ಆರೋಗ್ಯವಂತರಾಗಿ ಜೀವನ ಸಾಗಿಸಲು ವೈದ್ಯರ ಸಲಹೆ ಮತ್ತು ಉಪಚಾರ ಪಡೆದುಕೊಳ್ಳುವುದು ಅವಶ್ಯಕವಾಗಿದೆ ಎಂದು ಖ್ಯಾತ ವೈದ್ಯಸಂಶೋಧಕ…

31 mins ago

ವಿಕಲಚೇತನರು, ಹಿರಿಯ ನಾಗರಿಕರ ಹೆಸರಲ್ಲಿ ಅಕ್ರಮ: ಕ್ರಮಕ್ಕೆ ಆಗ್ರಹ

ಕಲಬುರಗಿ: ಜಿಲ್ಲೆಯ ವಿಕಲಚೇತನರು ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯಲ್ಲಿ ವ್ಯಾಪಕ ಅಕ್ರಮಗಳು ನಡೆದಿದ್ದು ಈ ಕುರಿತು ಕೂಡಲೇ ತನಿಖೆ…

34 mins ago

ಕಾಳಗಿ; ರಟಕಲ್ ಗ್ರಾಮದಲ್ಲಿ ಬಸವಾದಿ ಶರಣರ ವಚನ ಸಂಗಮಕ್ಕೆ ಅದ್ಧೂರಿ ಚಾಲನೆ

ಕಾಳಗಿ: ಬದುಕು ಹೇಗೆ ನಡೆಸಬೇಕೆಂದು ಹೇಳಿಕೊಟ್ಟ ಬಸವಾದಿ ಶರಣರ ವಚನದಲ್ಲಿ ಅಪಾರ ಶಕ್ತಿ ಇದೆ. 12 ನೇ ಶತಮಾನದಲ್ಲಿ ಮೊದಲ…

2 hours ago

ಕೃಷ್ಣ ಮಂದಿರದಲ್ಲಿ ಪಲಿಮಾರು ಮಠದ ಸಂಸ್ಥಾನ ಪೂಜೆ

ಕಲಬುರಗಿ; ಅಖಿಲ ಭಾರತ ಮಾಧ್ವ ಮಹಾಮಂಡಲ,ಶ್ರೀ ಜಯತೀರ್ಥ ವಿದ್ಯಾರ್ಥಿ ನಿಲಯ, ಶ್ರೀ ಕೃಷ್ಣ ಮಂದಿರ ಹಾಗು ಹನುಮ ಭೀಮ ಮಧ್ವರ…

3 hours ago

ಚಿಂಚೋಳಿ: ವೈದ್ಯಕೀಯ ದ್ರವ ಆಮ್ಲಜನಕ ಸೋರಿಕೆ ಬಗ್ಗೆ ಡಿ.ಎಚ್.ಓ ಸ್ಪಷ್ಟನೆ

ಕಲಬುರಗಿ: ಚಿಂಚೋಳಿ ತಾಲೂಕಾ ಸಾರ್ವಜನಿಕ ಆಸ್ಪತ್ರೆಯಲ್ಲಿ ವೈದ್ಯಕೀಯ ದ್ರವ ಆಮ್ಲಜನಕ ಟ್ಯಾಂಕ್ ಸ್ಪೋಟವಾಗಿದೆ ಎಂದು ಸುಳ್ಳು ಸುದ್ದಿ ಬಿತ್ತರವಾಗುತ್ತಿದ್ದು, ಇದಕ್ಕೆ…

6 hours ago