ಅಧಿವೇಶನದಲ್ಲಿ ಗ್ರಾಮೀಣ ಪತ್ರಕರ್ತಗೆ ಸೌಕರ್ಯ ಒದಗಿಸುವ ಕುರಿತು ಚರ್ಚೆ: ಶಾಸಕ ಡಾ. ಅಜಯಸಿಂಗ್

ದೇಶದಲ್ಲಿ ಪತ್ರಕರ್ತರ ರಕ್ಷಣೆ ಇಲ್ಲ, ಪತ್ರಿಕಾ ಸಂಸ್ಥೆ ಹಾಗೂ ಪತ್ರಕರ್ತರ ರಕ್ಷಣೆ ಅತ್ಯವಶ್ಯಕವಾಗಿದ್ದು, ಅವರ ಸುರಕ್ಷಿತವಾಗಿ ಕಾಯ್ದೆ ಹೊರತರಬೇಕು. ಓದುಗರ ಸಂಖ್ಯೆ ಕಡಿಮೆ ಆಗುತ್ತಿಲ್ಲ, ಇದಕ್ಕೆ  ಓದುವ ವೇದಿಕೆ ಬೇರೆ ಬೇರೆ ಆಗಿದೆ. ನಿಯಮ ಸರಳೀಕರಣ ಮಾಡಲಿ. = -ಬಾಬುರಾವ ಯಡ್ರಾಮಿ, ಪತ್ರಕರ್ತರ ಸಂಘದ ಜಿಲ್ಲಾಧ್ಯಕ್ಷ, ಕಲಬುರಗಿ.

ಕಲಬುರಗಿ: ಗ್ರಾಮೀಣ ಭಾಗದ ಪತ್ರಕರ್ತರಿಗೆ ಸೌಕರ್ಯ ಒದಗಿಸುವ ಕುರಿತು ಕಾಂಗ್ರೆಸ್‍ನ ಎಲ್ಲ ಶಾಸಕರು ಜತೆಗೂಡಿ ಬೆಳಗಾವಿ ಅಧಿವೇಶನದಲ್ಲಿ ಚರ್ಚಿಸುತ್ತೇನೆ ಎಂದು ವಿಧಾನಸಭೆ ವಿರೋಧ ಪಕ್ಷದ ಮುಖ್ಯ ಸಚೇತಕ ಡಾ. ಅಜಯಸಿಂಗ್ ಹೇಳಿದರು.

ಇಲ್ಲಿನ ಕನ್ನಡ ಭವನದ ಸುವರ್ಣ ಸಭಾಭವನದಲ್ಲಿ ನಡೆದ ಕಲಾ ಚೇತನ ರಾಜ್ಯಮಟ್ಟದ ಕನ್ನಡ ದೈಮಾಸ ಪತ್ರಿಕೆ ಬಿಡುಗಡೆ ಹಾಗೂ ಮಾಧ್ಯಮ ಕ್ಷೇತ್ರದ ಸಾಧಕರಿಗೆ  ಗೌರವ ಸನ್ಮಾನಿಸಿ ಮಾತನಾಡಿದ ಅವರು, ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಪತ್ರಕರ್ತರ ಶ್ರೇಯೋಭಿವೃದ್ಧಿಗಾಗಿ ಹತ್ತಾರು ಯೋಜನೆ ಜಾರಿ ತರಲು ಶ್ರಮಿಸುತ್ತೇವೆ.  ಗ್ರಾಮೀಣ ಪತ್ರಕರ್ತರು ಬಸ್ ಪಾಸ್, ಮಾಸಾಶನ ಕೊಡುವ ಪ್ರಯತ್ನ ಮಾಡುತ್ತೇನೆ ಎಂದರು. ಇದೇವೇಳೆಯಲ್ಲಿ ಕೋಬಾಳ ಅವರ ಕಲಾ ಸಾಧನೆಯನ್ನು ಪ್ರಶಂಸಿಸದರು.

ಖಜೂರಿಯ ಕೋರಣೇಶ್ವರ ವಿರುಕ್ತ ಮಠದ ಪೀಠಾಧಿಪತಿ  ಮುರುಘೇಂದ್ರ ಕೋರಣೇಶ್ವರ ಶಿವಯೋಗಿ ಸಾನ್ನಿಧ್ಯ ವಹಿಸಿದ್ದರು. ಕೆಕೆಸಿಸಿಐ ಅಧ್ಯಕ್ಷ ಪ್ರಶಾಂತ ಮಾನಕರ್ ಪತ್ರಿಕೆ ಬಿಡುಗಡೆ ಮಾಡುವರು. ದಕ್ಷಿಣ ಬ್ಲಾಕ್ ಕಾಂಗ್ರೆಸ್ ಮುಖಂಡ ನೀಲಕಂಠರಾವ ಮೂಲಗೆ ಅಧ್ಯಕ್ಷತೆ ವಹಿಸಿದ್ದರು.  ಕೆಪಿಎಸ್ ಸಿ ಮಾಜಿ ಸದಸ್ಯೆ ಡಾ. ನಾಗಾಬಾಯಿ ಬುಳ್ಳಾ, ಪತ್ರಕರ್ತರ ಸಂಘದ ಜಿಲ್ಲಾಧ್ಯಕ್ಷ ಬಾಬುರಾವ ಯಡ್ರಾಮಿ, ಮಹಾಜನ್  ಫೌಂಡೇಶನ್ ಅಧ್ಯಕ್ಷ ಶಿವಕಾಂತ ಮಹಾಜನ್,  ವಾರ್ತಾ ಇಲಾಖೆಯ ಉಮಾಶಂಕರ ಚಿನಮಳ್ಳಿ, ಹಿರಿಯ ಕಾಂಗ್ರೆಸ್ ಮುಖಂಡ ಶಿವಶರಣಪ್ಪ ಕೋಬಾಳ, ಉದ್ದಿಮೆದಾರ ಅಂಬಯ್ಯ ಗುತ್ತೇದಾರ, ಜಿಲ್ಲಾ ಗಾಣಿಗ ಸಮಾಜದ ಅಧ್ಯಕ್ಷ ಶರಣು ಬಿಲ್ಲಾಡ, ಕಾಂಗ್ರೆಸ್ ಮುಖಂಡರಾದ ರಾಜಶೇಖರ ಸಿರಿ, ಮಲ್ಲಿಕಾರ್ಜುನ ಸಾಹು, ಸಿದ್ದಲಿಂಗರೆಡ್ಡಿ, ರುಕ್ಕುಂಪಟೇಲ್ ವೇದಿಕೆಯಲ್ಲಿದ್ದರು.

ಇದೇ ವೇಳೆಗೆ ಪತ್ರಕರ್ತರ ಸಂಘದ ಸರ್ವ ಪದಾಧಿಕಾರಿಗಳು , ಮಾಧ್ಯಮ ಮಾನ್ಯತಾ ಸಮಿತಿ ಸದಸ್ಯರು, ಮಾಧ್ಯಮ ಅಕಾಡಮಿ ಸದಸ್ಯರು ಹಾಗೂ ರಾಷ್ಟಿಯ ಕೌನ್ಸಿಲ್ ಸದಸ್ಯರಿಗೆ ಗೌರವಯುತವಾಗಿ ಸನ್ಮಾನಿಸಿದರು. ಯಲ್ಲಾಲಿಂಗ ಕೋಬಾಳ ನಿರೂಪಿಸಿದರು. ಶಿವರುದ್ರಯ್ಯ್ ಗೌಡಗಾಂವ ಪ್ರಾರ್ಥನೆ ಗೀತೆ ಹಾಡಿದರು, ಸುರೇಶ ಬಡಿಗೇರ ಸ್ವಾಗತಿಸಿ, ಪ್ರಾಸ್ತಾವಿಕವಾಗಿ ಮಾತನಾಡಿದರು. ಚೇತನ್ ಬಿ ಕೋಬಾಳ್ ವಂದಿಸಿದರು.

emedialine

Recent Posts

ಎಲೇಕ್ಷನ್’ನಲ್ಲಿ ಗಿಮಿಕ್ ಮಾಡಿ ಮತಪಡೆದುಕೊಳ್ಳುವುದು ಮಾತ್ರ ಗೊತ್ತು; ಮಣಿಕಂಠ

ಎಂ.ಡಿ ಮಶಾಖ ಚಿತ್ತಾಪುರ ಚಿತ್ತಾಪುರ; ಸಚಿವ ಪ್ರಿಯಾಂಕ್ ಖರ್ಗೆ ಅವರಿಗೆ ಎಲೇಕ್ಷನ್ ಬಂದಾಗ ಗಿಮಿಕ್ ಮಾಡಿ ಮತ ಪಡೆದುಕೊಳ್ಳುವುದು ಮಾತ್ರ…

6 mins ago

ಶ್ರೀಮತಿ ವಿ. ಜಿ  ಕಾಲೇಜಿನ ವಿದ್ಯಾರ್ಥಿನಿಯರಿಂದ ದಾಂಡಿಯಾ ನೃತ್ಯ

ಕಲಬುರಗಿ: ಹೈದ್ರಾಬಾದ ಕರ್ನಾಟಕ ಶಿಕ್ಷಣ ಸಂಸ್ಥೆಯ ಶ್ರೀಮತಿ ವೀರಮ್ಮ ಗಂಗಸಿರಿ ಪದವಿ ಪೂರ್ವ ಮಹಿಳಾ ಮಹಾವಿದ್ಯಾಲಯ ಕಲಬುರಗಿಯಲ್ಲಿ ಪ್ರತಿ ವರ್ಷದಂತೆ…

4 hours ago

ತೂಕದಲ್ಲಿ ಆಗುವ ವ್ಯತ್ಯಾಸ ಸರಿಪಡಿಸಿ: ಪ್ರತಿ ಟನ್ ಕಬ್ಬಿಗೆ 3500 ಬೆಲೆ ನಿಗದಿ ಪಡಿಸಿ

ಅಫಜಲಪುರ: 2024-25ನೇ ಸಾಲಿನಲ್ಲಿ ಅಫಜಲಪುರ ತಾಲೂಕಿನಲ್ಲಿರುವ ಸಕ್ಕರೆ ಕಾರ್ಖಾನೆಗಳು ರೈತರಿಗೆ ಕನಿಷ್ಠ 3500 ರೂ.ಬೆಲೆ ನಿಗದಿ ಪಡಿಸಿ ಘೋಷಣೆ ಮಾಡಬೇಕು,ಅಲ್ಲದೇ…

9 hours ago

ಕಲಬುರಗಿ: ಯತಿ ನರಸಿಂಹಾನಂದ್ ಬಂಧನಕ್ಕೆ ಆಗ್ರಹಿಸಿ ದಿಢೀರ್ ಪ್ರತಿಭಟನೆ

ಕಲಬುರಗಿ: ಕಾರ್ಯಕ್ರಮ ಒಂದರಲ್ಲಿ ಪ್ರವಾದಿ ಮುಹಮ್ಮದ್ (ಸ.ಅ) ಅವರ ವಿರುದ್ಧ ಅಕ್ರಮಣಕಾರಿ ಮತ್ತು ಪ್ರಚೋದನಕಾರಿ ಹೇಳಿಕೆ ನೀಡಿರುವ ಗಾಜಿಯಾಬಾದ್‌ನ ದಾಸ್ನಾ…

20 hours ago

ದುಶ್ಚಟ ಮುಕ್ತ ಸಮಾಜ ನಿರ್ಮಾಣ ಹಕ್ಕೊತ್ತಾಯ ಪತ್ರ ಜಿಲ್ಲಾಧಿಕಾರಿಗಳಿಗೆ ಮಂಡನೆ

ಕಲಬುರಗಿ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಬಿ.ಸಿ ಟ್ರಸ್ಟ್ ಮತ್ತು ಜಿಲ್ಲಾ ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಸಮಿತಿಯಿಂದ…

22 hours ago

ನೀರಿನ ಬಿಲ್ ಬಡ್ಡಿ ಮನ್ನಾ ಮಾಡಲು ಡಾ.ರಶೀದ್ ಜಿಲ್ಲಾಧಿಕಾರಿಗಳಿಗೆ ಮನವಿ

ಶಹಾಬಾದ: ನಗರಸಭೆ ವ್ಯಾಪ್ತಿಯ ಸಾರ್ವಜನಿಕರ ಕುಡಿಯುವ ನೀರಿನ ಬಿಲ್ ಬಡ್ಡಿ ಮನ್ನಾ ಮಾಡಿ ಅಸಲು ಮಾತ್ರ ಪಾವತಿಸಲು ಅನುಕೂಲ ಮಾಡಿಕೊಡಬೇಕೆಂದು…

22 hours ago

Notice: ob_end_flush(): Failed to send buffer of zlib output compression (0) in /home3/emedixap/public_html/wp-includes/functions.php on line 5420