ಬಿಸಿ ಬಿಸಿ ಸುದ್ದಿ

ಗೋದುತಾಯಿ ಕಾಲೇಜಿನಲ್ಲಿ ಸ್ಕೂಲ್ ಕ್ಯಾಬ್ ಸೆಪ್ಟಿ ಸಮಿತಿ ಉದ್ಘಾಟನೆ

ಕಲಬುರಗಿ: ವಿದ್ಯಾರ್ಥಿನಿಯರು ಬೇರೆ ಬೇರೆ ಆಸೆಗಳಿಗೆ ಪ್ರೀತಿ ತೋರದೆ ಓದುವುದು ಮತ್ತು ಬರೆಯುವುದಕ್ಕೆ ಪ್ರೀತಿ ತೋರಿಸಬೇಕೆಂದು ಕಲಬುರಗಿ ಜಿಲ್ಲಾ ಅಪರಾಧ ವಿಭಾಗದ ಅಸಿಸ್ಟೆಂಟ್ ಸಬ್ ಇನ್ಸಪೆಕ್ಟರ್ ಶ್ರೀಮತಿ ಯಶೋಧಾ ಕಟಕೆಯವರು ಸಲಹೆ ನೀಡಿದರು.

ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಗೋದುತಾಯಿ ದೊಡ್ಡಪ್ಪ ಅಪ್ಪ ಕಲಾ ಮತ್ತು ವಾಣಿಜ್ಯ ಮಹಿಳಾ ಪದವಿ ಮಹಾವಿದ್ಯಾಲಯದಲ್ಲಿ ಗುರುವಾರ ಹಮ್ಮಿಕೊಂಡ ಸ್ಕೂಲ್ ಕ್ಯಾಬ್ ಸೆಪ್ಟಿ ಸಮಿತಿ ಮತ್ತು ಹೊಸ ವಿದ್ಯಾರ್ಥಿಗಳ ಸ್ವಾಗತ ಸಮಾರಂಭವನ್ನು ಉದ್ಘಾಟಿಸಿ ಮಾತನಾಡಿದರು. ವಿದ್ಯೆ ಗಳಿಸುವುದಕ್ಕೆ, ಸಾಧನೆ ಮಾಡುವುದಕ್ಕೆ ಕನಸ್ಸು ಕಾಣುವ ಬಡತನವಿಲ್ಲ. ವಿದ್ಯಾರ್ಥಿಗಳು ಓದುವ ವಯಸ್ಸಿನಲ್ಲಿ ಮನಸ್ಸಿಟ್ಟು ಓದಿದರೆ, ಮುಂದೆ ಉಜ್ವಲ ಭವಿಷ್ಯ ನಿಮ್ಮದಾಗುತ್ತದೆ. ವಿದ್ಯೆಯು ಹಣಕ್ಕಿಂತ ಮುಖ್ಯವಾಗಿದೆ, ಕಲಿತ ವಿದ್ಯೆ ಯಾರೂ ಕಸಿದುಕೊಳ್ಳಲಾರರು. ಸಮಯವನ್ನು ವ್ಯರ್ಥ ಮಾಡದೆ ಗುರಿ ಸಾಧಿಸುವ ಹಪಾಹಪಿತನ ಇರಬೇಕು. ಸಾಧನೆ ಮಾಡಿ ಸಾಧಕರ ಸಾಲಿನಲ್ಲಿ ನಾನು ಇರಬೇಕು ಮತ್ತು ಜಿಲ್ಲೆಗೆ, ಹೆತ್ತವರಿಗೆ, ಕಲಿಸಿದ ಗುರುಗಳಿಗೆ ಕೀರ್ತಿ ತರಬೇಕೆಂದು ತಿಳಿಸಿದರು.

ಕಾರ್ಯಕ್ರಮದಲ್ಲಿ ಮಹಾವಿದ್ಯಾಲಯದ ಪ್ರೊ. ಶಾಂತಲಾ ನಿಷ್ಠಿ ಮಾತನಾಡಿದರು. ಪ್ರೊ. ಸಾವಿತ್ರಿ ಜಂಬಲದಿನ್ನಿ, ಡಾ.ಸೀಮಾ ಪಾಟೀಲ, ವಿದ್ಯಾರ್ಥಿನಿ ಸಂಘದ ಅಧ್ಯಕ್ಷರು ಮತ್ತು ಉಪಾಧ್ಯಕ್ಷರು ವೇದಿಕೆ ಮೇಲಿದ್ದರು. ಕಾರ್ಯಕ್ರಮದಲ್ಲಿ ಡಾ.ಸಿದ್ದಮ್ಮ ಗುಡೇದ್, ಡಾ.ಇಂದಿರಾ ಶೆಟಕಾರ, ಡಾ. ಪುಟ್ಟಮಣಿ ದೇವಿದಾಸ, ಈರಣ್ಣ ಸ್ವಾದಿ, ಸಿದ್ದು ಪಾಟೀಲ, ಕೃಪಾಸಾಗರ ಗೊಬ್ಬುರ, ದೀಶಾ ಮೆಹತಾ, ಅನಿತಾ ಗೊಬ್ಬುರ, ಪದ್ಮಜ ಹೆಚ್. ವಿದ್ಯಾ ರೇಶ್ಮಿ, ಅನುಸೂಯ ಬಡಿಗೇರ, ಪ್ರಭಾವತಿ, ವಿನೋದ ಹಲಕಟ್ಟಿ, ಅಶೋಕ ಮೂಲಗೆ, ಅಪ್ಪಾಸಾಬ ಬಿರಾದಾರ, ಪರುತಯ್ಯ ಹಿರೇಮಠ ಮತ್ತು ಮಹಾವಿದ್ಯಾಲಯದ ಎಲ್ಲಾ ವಿದ್ಯಾರ್ಥಿನಿಯರು ಉಪಸ್ಥಿತರಿದ್ದರು. ನಂತರ ವಿದ್ಯಾರ್ಥಿನಿಯರಿಂದ ಸಾಂಸ್ಕೃತಿಕ ಕಾರ್ಯಕ್ರಮಗಳು ಜರುಗಿದವು.

ಪ್ರೊ. ಜಾನಕಿ ಹೊಸೂರ ಪ್ರಾಸ್ತಾವಿಕ ಮಾತನಾಡಿದರು, ಕು. ಐಶ್ವರ್ಯ ವಿ.ಸಿ. ಸ್ವಾಗತಿಸಿದರು. ಕು.ಶಿಲ್ಪ ಟಿ.ಬಿ. ವಂದಿಸಿದರು. ಕು. ಭಾಗ್ಯಶ್ರೀ ಆರ್. ನಿರೂಪಿಸಿದರು. ಪ್ರೊ. ರೇವಯ್ಯ ವಸ್ತ್ರದಮಠ ಮತ್ತು ಸಂಗಡಿಗರು ಪ್ರಾರ್ಥಿಸಿದರು.

emedialine

Recent Posts

ಶ್ರೀಮತಿ ವಿ. ಜಿ  ಕಾಲೇಜಿನ ವಿದ್ಯಾರ್ಥಿನಿಯರಿಂದ ದಾಂಡಿಯಾ ನೃತ್ಯ

ಕಲಬುರಗಿ: ಹೈದ್ರಾಬಾದ ಕರ್ನಾಟಕ ಶಿಕ್ಷಣ ಸಂಸ್ಥೆಯ ಶ್ರೀಮತಿ ವೀರಮ್ಮ ಗಂಗಸಿರಿ ಪದವಿ ಪೂರ್ವ ಮಹಿಳಾ ಮಹಾವಿದ್ಯಾಲಯ ಕಲಬುರಗಿಯಲ್ಲಿ ಪ್ರತಿ ವರ್ಷದಂತೆ…

1 hour ago

ತೂಕದಲ್ಲಿ ಆಗುವ ವ್ಯತ್ಯಾಸ ಸರಿಪಡಿಸಿ: ಪ್ರತಿ ಟನ್ ಕಬ್ಬಿಗೆ 3500 ಬೆಲೆ ನಿಗದಿ ಪಡಿಸಿ

ಅಫಜಲಪುರ: 2024-25ನೇ ಸಾಲಿನಲ್ಲಿ ಅಫಜಲಪುರ ತಾಲೂಕಿನಲ್ಲಿರುವ ಸಕ್ಕರೆ ಕಾರ್ಖಾನೆಗಳು ರೈತರಿಗೆ ಕನಿಷ್ಠ 3500 ರೂ.ಬೆಲೆ ನಿಗದಿ ಪಡಿಸಿ ಘೋಷಣೆ ಮಾಡಬೇಕು,ಅಲ್ಲದೇ…

7 hours ago

ಕಲಬುರಗಿ: ಯತಿ ನರಸಿಂಹಾನಂದ್ ಬಂಧನಕ್ಕೆ ಆಗ್ರಹಿಸಿ ದಿಢೀರ್ ಪ್ರತಿಭಟನೆ

ಕಲಬುರಗಿ: ಕಾರ್ಯಕ್ರಮ ಒಂದರಲ್ಲಿ ಪ್ರವಾದಿ ಮುಹಮ್ಮದ್ (ಸ.ಅ) ಅವರ ವಿರುದ್ಧ ಅಕ್ರಮಣಕಾರಿ ಮತ್ತು ಪ್ರಚೋದನಕಾರಿ ಹೇಳಿಕೆ ನೀಡಿರುವ ಗಾಜಿಯಾಬಾದ್‌ನ ದಾಸ್ನಾ…

17 hours ago

ದುಶ್ಚಟ ಮುಕ್ತ ಸಮಾಜ ನಿರ್ಮಾಣ ಹಕ್ಕೊತ್ತಾಯ ಪತ್ರ ಜಿಲ್ಲಾಧಿಕಾರಿಗಳಿಗೆ ಮಂಡನೆ

ಕಲಬುರಗಿ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಬಿ.ಸಿ ಟ್ರಸ್ಟ್ ಮತ್ತು ಜಿಲ್ಲಾ ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಸಮಿತಿಯಿಂದ…

19 hours ago

ನೀರಿನ ಬಿಲ್ ಬಡ್ಡಿ ಮನ್ನಾ ಮಾಡಲು ಡಾ.ರಶೀದ್ ಜಿಲ್ಲಾಧಿಕಾರಿಗಳಿಗೆ ಮನವಿ

ಶಹಾಬಾದ: ನಗರಸಭೆ ವ್ಯಾಪ್ತಿಯ ಸಾರ್ವಜನಿಕರ ಕುಡಿಯುವ ನೀರಿನ ಬಿಲ್ ಬಡ್ಡಿ ಮನ್ನಾ ಮಾಡಿ ಅಸಲು ಮಾತ್ರ ಪಾವತಿಸಲು ಅನುಕೂಲ ಮಾಡಿಕೊಡಬೇಕೆಂದು…

19 hours ago

ಕೃಷಿ ಪತ್ತಿನ ಸಹಕಾರ ಸಂಘಗಳು ರೈತರ ಜೀವನಾಡಿ; ಮತ್ತಿಮಡು

ಶಹಾಬಾದ: ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಗಳು ರೈತರ ಜೀವನಾಡಿಯಾಗಿದ್ದು, ಇವುಗಳ ಪ್ರಗತಿಗೆ ಆದ್ಯತೆ ನೀಡುವುದು ಪ್ರತಿಯೊಬ್ಬರ ಜವಾಬ್ದಾರಿ ಎಂದು…

19 hours ago

Notice: ob_end_flush(): Failed to send buffer of zlib output compression (0) in /home3/emedixap/public_html/wp-includes/functions.php on line 5420