ಜಾರ್ಖಂಡ್ ಸಮ್ಮೇದ-ಶಿಖರ್ಜಿ ಪ್ರವಾಸಿ ತಾಣ ಎಂದು ಘೋಷಿಸಬೇಡಿ

ಸುರಪುರ: ಜಾರ್ಖಂಡ್ ರಾಜ್ಯದ ಗಿರಾಡಿ ಜಿಲ್ಲೆಯ ಜೈನರ ಪವಿತ್ರ ಸ್ಥಳವಾಗಿರುವ ಸಮ್ಮೇದ-ಶಿಖರ್ಜಿಯನ್ನು ಪ್ರವಾಸಿ ತಾಣವನ್ನಾಗಿ ಘೋಷಿಸಬಾರದು ಎಂದು ಇಲ್ಲಿಯ ಕುಂತುನಾಥ ಜೈನ್ ಶ್ವೇತಾಂಬರ ಮೂರ್ತಿ ಪೂಜಾಕ ಸಂಘ ಶೋರಾಪುರದ ಮುಖಂಡರು ಕೇಂದ್ರ ಸರಕಾರಕ್ಕೆ ಆಗ್ರಹಿಸಿದ್ದಾರೆ.

ಈ ಕುರಿತು ರಾಷ್ಟ್ರಪತಿ ಮತ್ತು ಪ್ರಧಾನ ಮಂತ್ರಿಯವರಿಗೆ ಮನವಿ ಮಾಡಿರುವ ಮುಖಂಡರು,ನಮ್ಮ ಜೈನ ಧರ್ಮದ ಪವಿತ್ರ ಸ್ಥಳವಾಗಿರುವ ಜಾರ್ಖಂಡ್ ರಾಜ್ಯದ ಗಿರಾಡಿ ಜಿಲ್ಲೆಯ ಸಮ್ಮೇದ-ಶಿಖರ್ಜಿ ಸ್ಥಳವು ಜೈನ ಧರ್ಮದ 20 ಜನ ತೀರ್ಥಂಕರರ ಮೋಕ್ಷ ಸ್ಥಳವಾಗಿದೆ.ಇದು ನಮ್ಮ ಧರ್ಮದ ಅತ್ಯಂತ ಪವಿತ್ರ ಸ್ಥಳವಾಗಿದ್ದು ಈ ಸ್ಥಳವನ್ನು ಈಗ ಕೇಂದ್ರ ಸರಕಾರ ಪ್ರವಾಸಿ ತಾಣವೆಂದು ಘೋಷಿಸಲು ಮುಂದಾಗಿದ್ದು ಇದನ್ನು ನಾವು ವಿನಮ್ರವಾಗಿ ವಿರೋಧಿಸುತ್ತೇವೆ.

ಸ್ವಾತಂತ್ರ್ಯ ನಂತರದ ಸರಕಾರಗಳು ಅಲ್ಪಸಂಖ್ಯಾತ ಜೈನ ಸಮುದಾಯದ ಜೈನರ ಯಾತ್ರೆಗೆ ಸಂಬಂಧಿಸಿದಂತೆ ಅಭದ್ರತೆಯ ವಾತಾವರಣ ನಿರ್ಮಿಸುತ್ತಿವೆ.ಜೈನರ ಪ್ರತಿರೋಧದ ನಡುವೆಯೂ ಈ ಪವಿತ್ರ ಸ್ಥಳವನ್ನು ಪ್ರವಾಸಿ ತಾಣವೆಂದು ಘೋಷಿಸುವ ಮೂಲಕ ಅಪವಿತ್ರಗೊಳಿಸಲು ಮುಂದಾಗಿವೆ,ಭಾರತ ಸಂವಿಧಾನದ ಪ್ರಕಾರ ಭಾರತದಲ್ಲಿರುವ ಜೈನ ಪುಣ್ಯಕ್ಷೇತ್ರಗಳ ಪಾವಿತ್ರ್ಯವನ್ನು ಕಾಪಾಡುವುದು ಭಾರತ ಸರ್ಕಾರದ ಕರ್ತವ್ಯವಾಗಿದೆ.ಆದ್ದರಿಂದ ಭಾರತ ಸರಕಾರ ನಮ್ಮ ಪವಿತ್ರ ಸ್ಥಳವಾಗಿರುವ ಸಮ್ಮೇದ-ಶಿಖರ್ಜಿ ಸ್ಥಳದ ಬಗ್ಗೆ ಕಾಳಜಿವಹಿಸಬೇಕು ಎಂದು ಮನವಿಯಲ್ಲಿ ಒತ್ತಾಯಿಸಿ ತಹಸೀಲ್ದಾರರ ಮೂಲಕ ಸಲ್ಲಿಸಿದ್ದಾರೆ.

ಈ ಸಂದರ್ಭದಲ್ಲಿ ಸಂಘದ ಅಧ್ಯಕ್ಷರಾದ ಮೋನಲಾಲ್ ಹೆಚ್.ಜೈನ್,ರಾಯಚಂದ್ ಡಿ.ಜೈನ್,ಪ್ರಕಾಶಚಂದ್ ಟಿ.ಜೈನ್,ಕಾಂತಿಲಾಲ ಓ.ಜೈನ್,ಧನಪಾಲ್ ಡಿ.ಜೈನ್,ರಮೇಶಕುಮಾರ್ ಎ.ಜೈನ್,ದಿನೇಶ ಕೆ.ಜೈನ್,ಬಾಬುಲಾಲ್ ಎಮ್.ಜೈನ್,ನಿತೇಶ್ ಎ.ಜೈನ್,ಉಜ್ವಲ್ ಎ.ಜೈನ್,ವಿಕ್ರಂ ಡಿ.ಜೈನ್ ಸೇರಿದಂತೆ ಇತರರಿದ್ದರು.

emedialine

Recent Posts

ಗುರುರಾಜ ಕರ್ಜಗಿಯನ್ನು ಶೈಕ್ಷಣಿಕ ಗುಣಮಟ್ಟ ಸುಧಾರಣಾ ಸಮಿತಿಯಿಂದ ಕೈಬಿಡಲು ಎಸ್ಎಫ್ಐ ಆಗ್ರಹ

ಕಲಬುರಗಿ: ಕಲ್ಯಾಣ ಕರ್ನಾಟಕದ ಶೈಕ್ಷಣಿಕ ಗುಣಮಟ್ಟ ಸುಧಾರಣೆಗಾಗಿ ಕೆ.ಕೆ.ಆರ್.ಡಿ.ಬಿ ಯು ಸಮಿತಿಯೊಂದನ್ನು ರಚಿಸಿ, ಗುರುರಾಜ ಕರ್ಜಗಿ ಅವರನ್ನು ಅಧ್ಯಕ್ಷರನ್ನಾಗಿ ಮಾಡಿರುವ…

7 hours ago

ಕಲಬುರಗಿ; ರಾಜ್ಯ ತಳವಾರ ಮಹಾಸಭಾ ಜಿಲ್ಲಾ ಘಟಕದ ನೂತನ ಪದಾಧಿಕಾರಿಗಳ ಆಯ್ಕೆ

ಕಲಬುರಗಿ; ಕನಾ೯ಟಕ ರಾಜ್ಯ ತಳವಾರ ಮಹಾಸಭಾ ಕಲಬುರಗಿ ಜಿಲ್ಲಾಧ್ಯಕ್ಷರಾದ ಚಂದ್ರಕಾಂತ ದಶರಥ ತಳವಾರ ಅವರ ಅಧ್ಯಕ್ಷತೆಯಲ್ಲಿ ಇಂದು ಆನಂದ ನಿಲಯ…

10 hours ago

ಕೈಗಾರಿಕೆ ಪ್ರದೇಶಗಳಿಗೆ ಭೇಟಿ ನೀಡಿ ಉದ್ಯಮಿಗಳ ಅಹವಾಲು ಆಲಿಸಿದ ಬಿ.ಫೌಜಿಯಾ ತರನ್ನುಮ್

ಕಲಬುರಗಿ; ಜಿಲ್ಲಾಧಿಕಾರಿ ಬಿ. ಫೌಜಿಯಾ ತರನ್ನುಮ್ ಅವರು ಶನಿವಾರ ಶಹಾಬಾದ ರಸ್ತೆಯಲ್ಲಿರುವ ನಂದೂರ-ಕೆಸರಟಗಿ ಮತ್ತು ಹುಮನಾಬಾದ ರಸ್ತೆಯಲ್ಲಿರುವ ಕಪನೂರ ಕೈಗಾರಿಕಾ…

10 hours ago

ಸಿಎಂ ರಾಜೀನಾಮೆ ಕೇಳುತ್ತಿರುವ ಬಿಜೆಪಿ -ಜೆಡಿಎಸ್‍ಗೆ ಯಾವುದೇ ನೈತಿಕತೆಯಿಲ್ಲ

ಶಹಾಬಾದ: ಕರ್ನಾಟಕದ ಬಹುಮತ ಸರಕಾರವನ್ನು ಬೀಳಿಸಲು ಇಲ್ಲಸಲ್ಲದ ಆರೋಪ ಮಾಡುವ ಮೂಲಕ ಸಿಎಂ ರಾಜೀನಾಮೆಗೆ ಒತ್ತಾಯ ಮಡುತ್ತಿರುವ ಬಿಜೆಪಿ ಹಾಗೂ…

10 hours ago

ಜೆಜೆಎಂ ಕಾಮಗಾರಿ ಗುಣಮಟ್ಟದಿಂದ ಕೂಡಿರಲಿ

ಶಹಾಬಾದ:ಪ್ರತಿ ಮನೆಗೂ ನೀರು ದೊರಿಸಿಕೊಡುವ ಉದ್ದೇಶದಿಂದ ನಡೆಯುವ ಜೆಜೆಎಂ ಕಾಮಗಾರಿ ಗುಣಮಟ್ಟದಿಂದ ಕೂಡಿರಬೇಕೆಂದು ಕಾಂಗ್ರೆಸ್ ಮುಖಂಡ ಮೃತ್ಯುಂಜಯ್ ಹಿರೇಮಠ ಹೇಳಿದರು.…

10 hours ago

ಅ.13, 14 ರಂದು ಧಮ್ಮ ಕ್ರಾಂತಿ ಉತ್ಸವ : ಪೂರ್ವಭಾವಿ ಸಭೆ

ಶಹಾಬಾದ :ನಗರದ ಬೌದ್ಧ ವಿಹಾರದಲ್ಲಿ ರವಿವಾರ ಹಮ್ಮಿಕೊಂಡ 68ನೇ ಧಮ್ಮಚಕ್ರ ಪ್ರವರ್ತನಾ ದಿನದ ಅಂಗವಾಗಿ ಕಲಬುರ್ಗಿಯಲ್ಲಿ ಅ.13 ಮತ್ತು 14…

10 hours ago

Notice: ob_end_flush(): Failed to send buffer of zlib output compression (0) in /home3/emedixap/public_html/wp-includes/functions.php on line 5420