ಆಳಂದ: ಕೈ ಬಿಟ್ಟು ಕಮಲ ಮುಡಿದ ವಿಠ್ಠಲರಾವ ಪಾಟೀಲ, ಶಿವಪ್ಪ ವಾರಿಕ

0
66

ಆಳಂದ: ತಾಲೂಕಿನ ಪ್ರಬಲ ಮುಖಂಡರಾದ ವಿಠ್ಠಲರಾವ ಪಾಟೀಲ, ಶಿವಪ್ಪ ವಾರಿಕ ಖಜೂರಿ ಗುರುವಾರ ಹಲವು ಪ್ರಮುಖ ನಾಯಕರ ಸಮ್ಮುಖದಲ್ಲಿ ಭಾರತೀಯ ಜನತಾ ಪಕ್ಷಕ್ಕೆ ಸೇರ್ಪಡೆಯಾದರು.

ವಿಠ್ಠಲರಾವ ಪಾಟೀಲ ಅವರು ಆಳಂದ ಪುರಸಭೆಯ ಮಾಜಿ ಅಧ್ಯಕ್ಷರಾಗಿದ್ದಾರೆ ಅಲ್ಲದೇ ಮಹಾರಾಷ್ಟ್ರದ ಮಾಜಿ ಸಚಿವ ಬಸವರಾಜ ಪಾಟೀಲ ಮುರುಮ ಅವರ ಸಂಬಂಧಿಯಾಗಿದ್ದಾರೆ. ಆಳಂದ ಪಟ್ಟಣವಲ್ಲದೇ ತಾಲೂಕಿನಾದ್ಯಂತ ಅಪಾರ ಪ್ರಮಾಣದ ಅಭಿಮಾನಿಗಳನ್ನು ಹೊಂದಿದ್ದಾರೆ.

Contact Your\'s Advertisement; 9902492681

ಶಿವಪ್ಪ ವಾರಿಕ ಖಜೂರಿ ಅವರು ತಾ.ಪಂ ಮಾಜಿ ಸದಸ್ಯರಾಗಿದ್ದು ಹಲವು ವರ್ಷಗಳಿಂದ ಮಾಜಿ ಶಾಸಕ ಬಿ ಆರ್ ಪಾಟೀಲ ಜೊತೆ ಗುರುತಿಸಿಕೊಂಡಿದ್ದರು. ಶಾಸಕ ಸುಭಾಷ್ ಆರ್ ಗುತ್ತೇದಾರರ ಜನಪರ ಕಾಳಜಿ ಮೆಚ್ಚಿ ಬಿಜೆಪಿ ಸೇರ್ಪಡೆಯಾಗುತ್ತಿದ್ದೇವೆ ಎಂದು ಹೇಳಿದರು.

ಪಕ್ಷ ಸೇರ್ಪಡೆಯಾದ ನಂತರ ಮಾತನಾಡಿದ ಅವರು, ಆಳಂದ ತಾಲೂಕಿನಲ್ಲಿ ಸುಭಾಷ್ ಆರ್ ಗುತ್ತೇದಾರ ಅವರು ಮಹತ್ತರ ಅಭಿವೃದ್ಧಿ ಕಾರ್ಯಗಳನ್ನು ಕೈಗೊಂಡಿದ್ದಾರೆ ಅಲ್ಲದೇ ಹಿಂದಿಗಿಂತಲೂ ಹೆಚ್ಚಿನ ಪ್ರಮಾಣದ ಅನುದಾನ ತಂದು ತಾಲೂಕಿನ ಮೂಲೆ ಮೂಲೆಯಲ್ಲೂ ಕಾಮಗಾರಿ ಪ್ರಾರಂಭಿಸಿದ್ದಾರೆ ಅವರ ಅಭಿವೃದ್ಧಿ ಕಾರ್ಯಗಳನ್ನು ಮೆಚ್ಚಿ ಬೇಷರತ್ ಆಗಿ ಬಿಜೆಪಿ ಸೇರ್ಪಡೆಯಾಗುತ್ತಿದ್ದೇವೆ ಎಂದು ತಿಳಿಸಿದರು.

ಮುಂದಿನ ದಿನಗಳಲ್ಲಿ ತಾಲೂಕಿನಾದ್ಯಂತ ಸಂಚರಿಸಿ ಬಿಜೆಪಿ ಪಕ್ಷದ ಸಂಘಟನೆ ಮಾಡಿ ಶಾಸಕ ಸುಭಾಷ್ ಆರ್ ಗುತ್ತೇದಾರ ಅವರ ಕೈ ಬಲಪಡಿಸಿ ಅವರನ್ನು ಮತ್ತೊಮ್ಮೆ ಶಾಸಕರನ್ನಾಗಿ ಮಾಡುವ ಮಹತ್ತರ ಜವಾಬ್ದಾರಿ ಹೊತ್ತಿದ್ದೇವೆ ಎಂದು ಹೇಳಿದರು.

ಶಾಸಕ ಸುಭಾಷ್ ಆರ್ ಗುತ್ತೇದಾರ ಅವರನ್ನು ಪಕ್ಷದ ಶಾಲು, ಬಾವುಟ ನೀಡಿ ಪಕ್ಷಕ್ಕೆ ಸ್ವಾಗತಿಸಿದರು.  ಈ ಸಂದರ್ಭದಲ್ಲಿ ಜಿ.ಪಂ ಮಾಜಿ ಉಪಾಧ್ಯಕ್ಷ ಹರ್ಷಾನಂದ ಗುತ್ತೇದಾರ, ಕೆಎಂಎಫ್ ನಿರ್ದೇಶಕ ಸಂತೋಷ ಗುತ್ತೇದಾರ ಸೇರಿದಂತೆ ಅನೇಕರು ಉಪಸ್ಥಿತರಿದ್ದರು.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here