ಬಿಸಿ ಬಿಸಿ ಸುದ್ದಿ

ಗರ್ಭಿಣಿ ಮಹಿಳೆಯರಿಗೆ ಪೌಷ್ಟಿಕ ಆಹಾರ ಕಿಟ್ ವಿತರಣೆ

ಶಹಾಬಾದ :ಗರ್ಭಿಣೀಯರು ಪೌಷ್ಟಿಕ ಆಹಾರ ಸೇವಿಸುವುದರಿಂದ ತಮ್ಮ ಆರೋಗ್ಯ ಮತ್ತು ಮಗುವಿನ ಆರೋಗ್ಯಕರ ಬೆಳವಣಿಗೆಗೆ ಸಹಕಾರಿಯಾಗುತ್ತದೆ ಎಂದು ಮುಗುಳನಾಗಾವನ ಸಿದ್ಧಲಿಂಗ ಶಿವಾಚಾರ್ಯರು ಹೇಳಿದರು.

ಅವರು ಮುಗುಳನಾಗಾವ ಮಠದಲ್ಲಿ ಭಂಕೂರ ಗ್ರಾಮದ ಜ್ಞಾನ ವಿಕಾಸ ಗ್ರಾಮೀಣ ಅಭಿವೃದ್ಧಿ ಸಂಸ್ಥೆ ವತಿಯಿಂದ ಆಯೋಜಿಸಲಾದ ಗರ್ಭಿಣಿಯರಿಗೆ ಪೌಷ್ಟಿಕ ಆಹಾರ ಕಿಟ್ ವಿತರಣಾ ಕಾರ್ಯಕ್ರಮದ ದಿವ್ಯ ಸಾನಿಧ್ಯ ವಹಿಸಿ ಮಾತನಾಡಿದರು.

ಮಾನಸಿಕ ಆರೋಗ್ಯದ ಕಡೆಗೂ ಅತಿ ಹೆಚ್ಚಿನ ಗಮನ ಕೊಡಬೇಕಿದೆ. ಗರ್ಭಿಣಿಯರು ಧನಾತ್ಮಕವಾಗಿ,ಉತ್ತಮ ಆಲೋಚನೆ ಹೊಂದಬೇಕು. ಶಾಂತಿಯಿಂದ ಧ್ಯಾನ,ದೇವರ ಸ್ಮರಣೆ ಹೇಳಿಕೊಂಡಲ್ಲಿ ಜನಿಸುವ ಮಗುವಿನ ಮಾನಸಿಕ ಆರೋಗ್ಯ ಉತ್ತಮವಾಗಿರಲಿದೆ. ತಾಯಿಯ ಮನಸ್ಸು ಚಿಂತೆ,ದುಗುಡ, ದುಃಖ, ಹಿಂಸೆಯಿಂದ ಕೂಡಿದ್ದರೆ ಮಗುವಿನ ಮನಸ್ಥಿತಿಯೂ ಹಾಗೇ ಇರುತ್ತದೆ. ಆದ್ದರಿಂದ ಗರ್ಭಾವಸ್ಥೆಯಲ್ಲಿರುವಾಗ ತಾಯಂದಿರ ವಿಚಾರಧಾರೆ ಉತ್ತಮವಾಗಿರಬೇಕು ಎಂದರು.

ತಾ. ಪಂ. ಮಾಜಿ ಸದಸ್ಯ ನಾಮದೇವ ರಾಠೋಡ ಮಾತನಾಡಿ,ಗರ್ಭಿಣಿಯರು ಹೆಚ್ಚಿನ ಪೌಷ್ಠಿಕವಾದ ಆಹಾರವನ್ನು ಸೇವಿಸುವ ಮೂಲಕ ಹುಟ್ಟುವ ಮಗುವಿಗೆ ಆಪೌಷ್ಠಿಕತೆ ಹೋಗಲಾಡಿಸಲು ಸಾಧ್ಯವಾಗುವುದು. ವೈಧ್ಯರು ನೀಡಿದ ಔಷಧಿಯನ್ನು ಸಕಾಲದಲ್ಲಿ ತೆಗೆದುಕೊಳ್ಳುವ ಮೂಲಕ ತಮ್ಮ ಆರೋಗ್ಯದ ಕಾಳಜಿಮಾಡುವುದು ಅಗತ್ಯವಾಗಿ ಆಗಬೇಕಿದೆ. ಸೊಪ್ಪು, ತರಕಾರಿ, ಹಣ್ಣು ,ಹೆಸರಕಾಳು ತಿನ್ನುವುದು ರೂಢಿ ಮಾಡಿಕೊಳ್ಳಬೇಕೆಂದು ಹೇಳಿದರು.

ಇದೇ ಸಂದರ್ಭದಲ್ಲಿ ಗರ್ಭಿಣಿ ಮಹಿಳೆಯರಿಗೆ ಉಡಿತುಂಬುವ ಕಾರ್ಯಕ್ರಮ ನೇರವೇರಿಸಲಾಯಿತು. ನಾಮದೇವ ರಾಠೋಡ ಮತ್ತು ಪ್ರಕಾಶ ರಾಠೋಡ ಗರ್ಭಿಣಿ ಮಹಿಳೆಯವರಿಗೆ ಒಟ್ಟು 48 ಕಿಟ್ ನೀಡಿದರು. ಮುಖ್ಯ ಅತಿಥಿಗಳಾಗಿ ರಾಜಶೇಖರ ಪಾಟೀಲ ಅಪ್ಪಾಜಿ, ಗ್ರಾ. ಪಂ. ಅಧ್ಯಕ್ಷ ಮಲ್ಲಮ್ಮ ಸುಬೇದಾರ, ಉಪಾಧ್ಯಕ್ಷೆ ಕಮಲಾಬಾಯಿ ರಾಠೋಡ, ರಮೇಶ ಕಂಠಿ, ಭೀಮರಾವ ವಾಲಿಕಾರ, ಪಿಡಿಒ ಕವಿತಾ ಬುಕ್ಕಿ ವೇದಿಕೆ ಮೇಲೆ ಇದ್ದರು. ಗ್ರಾ. ಪಂ ಸದಸ್ಯರು, ಗುರು ಸಾಹುಕಾರ ಗೋಳಾ, ರೋಹಿತ ಭೋರಿ, ಧನ್ನು ರಾಠೋಡ, ಹೀರಾಸಿಂಗ ರಾಠೋಡ, ಶ್ರೀಮತಿ ಗೋದುಬಾಯಿ ರಾಠೋಡ, ಮಾಲಾಶ್ರೀ ದೊಡ್ಡಮನಿ ಉಪಸ್ಥಿತರಿದ್ದು. ಸಂಸ್ಥೆಯ ವಿರೇಂದ್ರ ರಾಠೋಡ, ಉತ್ತಮ ಚೌಹಾಣ, ನಾಗೇಂದ್ರ ಚೇಂಗಟ ಇದ್ದರು.

ಅಂಗನವಾಡಿ ಶಿಕ್ಷಕಿ ನಾಗಮ್ಮ ಪ್ರಾಸ್ತಾವಿಕ ಮಾತನಾಡಿದರು, ಚಂದು ಜಾಧವ ನಿರೂಪಿಸಿದರು. ಭಗವಂತ ವಂದಿಸಿದರು.

emedialine

Recent Posts

ಜಾನಪದ ಜೀವನ ಮೌಲ್ಯಗಳ ಪ್ರತೀಕ

ಸುರಪುರ; ಜೀವನದ ಮೌಲ್ಯಗಳನ್ನು ಎತ್ತಿ ಹಿಡಿಯುವ ಶಕ್ತಿ ಜಾನಪದ ಸಾಹಿತ್ಯ, ಕಲೆಗೆ ಇದ್ದು, ಜಾನಪದ ಸಾರ್ವಕಾಲಿಕ ಸತ್ಯವಾಗಿದೆ ಎಂದು ಲಕ್ಷ್ಮೀಪುರ…

6 hours ago

ಸುರಪುರ:ನೂತನ ಮರಗಮ್ಮ ದೇವಿ ರಜತ ಮೂರ್ತಿ ಪ್ರತಿಷ್ಠಾಪನೆ

ಸುರಪುರ: ತಿಮ್ಮಾಪುರದ ಮುಖ್ಯ ರಸ್ತೆಯಲ್ಲಿ ನಿರ್ಮಾಣವಾದ ನೂತನ ಮರಗಮ್ಮ ದೇವಿಯ ದೇವಸ್ಥಾನ ಲೋಕಾರ್ಪಣೆ , ಮರಗಮ್ಮ ದೇವಿಯ ರಜತ ಮೂರ್ತಿಯ…

6 hours ago

ಜುಲೈ 8 ರಂದು ಕಾಳಗಿಯಲ್ಲಿ ಉಚಿತ ಆರೋಗ್ಯ ತಪಾಸಣೆ ಶಿಬಿರ

ಕಲಬುರಗಿ: ನಗರದ ಪ್ರತಿಷ್ಠಿತ ಸುಬೇದಾರ ಕೇರ್ ಹಾಸ್ಪಿಟಲ್ ವತಿಯಿಂದ ಕಾಳಗಿ ಪಟ್ಟಣದ ಬಸ್ ನಿಲ್ದಾಣದ ಆವರಣದಲ್ಲಿ ಜುಲೈ 8 ರಂದು…

8 hours ago

ವಾಡಿ: “ತಾಯಿ ಹೆಸರಲ್ಲಿ ಒಂದು ಸಸಿ” ಅಭಿಯಾನ

ವಾಡಿ: ಪಟ್ಟಣದ ಬಸ್ ನಿಲ್ದಾಣದ ಹತ್ತಿರದ ಹನುಮಾನ ಮಂದಿರದ ಮುಂಭಾಗದಲ್ಲಿ ಬಿಜೆಪಿ ಮುಖಂಡರು ಸಾರ್ವಜನಿಕರಿಗೆ ಸಸಿಗಳನ್ನು ವಿತರಿಸುವ ಮೂಲಕ"ತಾಯಿ ಹೆಸರಲ್ಲಿ…

8 hours ago

ವಾಡಿ: ಶ್ಯಾಮ್‌ ಪ್ರಸಾದ್ ಮುಖರ್ಜಿ ಜಯಂತಿ, ಬಾಬು ಜಗಜೀವನ್ ರಾಮ್ ಪುಣ್ಯಸ್ಮರಣೆ

ವಾಡಿ: ಪಟ್ಟಣದ ಬಿಜೆಪಿ ಕಛೇರಿಯಲ್ಲಿ ಭಾರತೀಯ ಜನಸಂಘದ ಸಂಸ್ಥಾಪಕರು, ಭಾರತದ ಅಖಂಡತೆ ಹಾಗೂ ಏಕತೆಗಳಿಗಾಗಿ ಶ್ರಮಿಸಿದ ಡಾ. ಶ್ಯಾಮ ಪ್ರಸಾದ್…

8 hours ago

ನಾಳೆ ವಾಡಿಯಲ್ಲಿ ಕವಿಗೋಷ್ಠಿ

ವಾಡಿ: ಸಂಚಲನ ಸಾಹಿತ್ಯ ಮತ್ತು ಸಾಂಸ್ಕøತಿಕ ವೇದಿಕೆ ವತಿಯಿಂದ ಜುಲೈ ಇಂದು ಬೆಳಿಗ್ಗೆ 10:00 ಗಂಟೆಗೆ ಪಟ್ಟಣದ ಡಾ. ಅಂಬೇಡ್ಕರ್…

9 hours ago