ಕಲಬುರಗಿ: ನಗರದ ಲಾರಿ ತಂಗುದಾಣ ಪ್ರದೇಶದಲ್ಲಿ ನಿನ್ನೆ ನಗರದ ಎಂ.ಎಸ್.ಕೆ ಮಿಲ್ ನಿವಾಸಿ ರಫಿಕ್(30) ಎಂಬ ಯುವಕನ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ಚೌಕ್ ಠಾಣೆಯ ಪೊಲೀಸರು ಕಾರ್ಯಾಚರಣೆ ನಡೆಸಿ ಮೂವರು ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ ಚೌಕ್ ಪೊಲೀಸ್ ಠಾಣೆಯ ಇನ್ನಪೆಕ್ಟರ್ ಶಕೀಲ್ ಅಹ್ಮದ ಅಂಗಡಿ ಅವರ ನೇತೃತ್ವದ ತಂಡದ ಪಿ.ಎಸ್.ಐ ಶಿವಶಂಕರ ಹಾಗೂ ಸಿಬ್ಬಂದಿ ಅಶೋಕ, ಸಿದ್ರಾಮಯ್ಯ. ನಾಗೇ೦ದ್ರ, ಉಮೇಶ, ರಾಜಕುಮಾರ, ಸೈಯದ್ ತೌಸೀಫ ಹುಸೇನ ರವರನ್ನು ಒಳಗೊಂಡ ವಿಶೇಷ ತಂಡ ಕಾರ್ಯಚರಣೆ ನಡೆಸಿ ಮೂವರು ಆರೋಪಿಗಳನ್ನು ಬಂಧಿಸಿ ಕೊಲೆಗೆ ಬಳಸಿರುವ ಮಾರಕಾಸ್ತ್ರಗಳನ್ನು ವಶಪಡಿಸಿಕೊಂಡಿದ್ದಾರೆ.
ಇಂದು ಬೆಳಿಗ್ಗೆ ಕಪನೂರ ಇ೦ಡಸ್ಟಿಯಲ್ ಎರಿಯಾದ ಹಾಳುಬಿದ್ದ ಮನೆಯೊಂದರಲ್ಲಿ ಆರೋಪಿಗಳು ಅವಿತುಕೊಂಡ ಖಚಿತ ಮಾಹಿತಿ ಪಡೆದು ಆರೋಪಿಗಳ ಬಂಧನಕ್ಕೆ ಜಾಲಾ ಬೀಸಿ, ತಾಜ್ ನಗರ ಮುಸ್ಲೀಂ ಸಂಘದ ನಿವಾಸಿ, ಶೇಖ್ ಬಾಬಾ (ಬ೦ಡಿ ಬಾಬಾ), ಮರಗಮ್ಮ ಗುಡಿ ಹತ್ತಿರ ಬಂಬು ಬಚಾರ ಬಡಾವಣೆಯ, ಅಜಯ ಅಂಬಾದಾಸ ಹಾಗೂ ತಾಜ ನಗರ ಮುಸ್ಲೀಂ ಸಂಘ ಮಹ್ಮದ ಸಿರಾಜ ಅಬ್ದುಲ ಗನಿ ದಮ್ಮೂರವಾಲೆ ಎಂಬ ಮೂವರು ಆರೋಪಿಗಳನ್ನು ಪತ್ತೆ ಹಚ್ಚಿ ವಶಪಡಿಸಿಕೊಂಡಿದ್ದಾರೆ.
ಪ್ರಕರಣದ ಹಿನ್ನೆಲೆ: ಹಣದ ಹಾಗೂ ಕೌಟುಂಬಿಕ ವಿಷಯದಲ್ಲಿ ಗೆಳೆಯನಾದ ರಫೀಕ ಇತನೊಂದಿಗೆ ತಕರಾರು ಆಗಿದ್ದರಿಂದ ಮಾರಕಾಸ್ತ್ರಗಳಿಂದ ಮುಸ್ಲೀಂ ಸಂಘ ಶಬಲೇವಾಲಾ ಬಾಬಾ ದರ್ಗಾದ ಹತ್ತಿರ ಹೊಡೆದು ಕೊಲೆ ಮಾಡಿ ಶವವನ್ನು ತಮ್ಮ ಆಟೋದಲ್ಲಿ ಹಾಕಿಕೊಂಡು ಮಹಾತ್ಮಗಾಂಧಿ ಲಾರಿ ತಂಗುದಾಣದಲ್ಲಿಯ, ನಿರ್ಜನ ಪ್ರದೇಶದಲ್ಲಿ ಶವವನ್ನು ಬಿಸಾಕಿ ಹೋಗಿದ್ದಾರೆಂದು ಪೊಲೀಸ್ ವಿಚಾರಣೆಯಲ್ಲಿ ತಿಳಿಸಿದ್ದಾರೆಂದು ಎಂದು ತಿಳಿದುಬಂದಿದೆ.
ಚೌಕ್ ಪೊಲೀಸರು ಆರೋಪಿಗಳನ್ನು ಬಂಧಿಸಿ, ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ.
ಬೆಂಗಳೂರು: ಜಗತ್ತಿನ ಪ್ರಚಲಿತ ವಿದ್ಯಮಾನಗಳ ಮಾಹಿತಿ ನೀಡುವ ಪತ್ರಕರ್ತರು ಹಗಲುರಾತ್ರಿ ಎನ್ನದೇ ಕಷ್ಟವಾದರೂ ಇಷ್ಟಪಟ್ಟು ವರದಿ ಮಾಡುವ ಮಾಧ್ಯಮ ಮಿತ್ರರಿಗೆ,…
ಕಲಬುರಗಿ: ವೀರಶೈವ ಮಹಾಸಭಾದ ಜಿಲ್ಲಾ ಘಟಕದ ಚುನಾವಣೆಯ ನಾಮಪತ್ರ ಸಲ್ಲಿಕೆಗೆ ಕೊನೆ ದಿನವಾಗರುವ ಇಂದು 2024-2029 ಸಾಲಿನ, ಜಿಲ್ಲಾ ಘಟಕಕ್ಕೆ…
ಕಲಬುರಗಿ: ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ವತಿಯಿಂದ 2024-25ನೇ ಸಾಲಿಗೆ ಈ ಕೆಳಕಂಡ 13 ಫಲಾನುಭವಿ ಆಧಾರಿತ…
ಕಲಬುರಗಿ: ರಾಜ್ಯದ ಕಾರ್ಮಿಕ ಸಚಿವರಾದ ಸಂತೋಷ ಎಸ್. ಲಾಡ್ ಅವರು ಜುಲೈ 5 ರಂದು ಶುಕ್ರವಾರ ಕೈಗೊಳ್ಳಬೇಕಿದ್ದ ಕಲಬುರಗಿ ಜಿಲ್ಲಾ…
ಕರ್ನಾಟಕ ವಿಧಾನಸಭೆ ಅರ್ಜಿಗಳ ಸಮಿತಿಯಿಂದ ಗಾಣಗಾಪುರ ದೇವಸ್ಥಾನ ಅಭಿವೃದ್ಧಿ ಕುರಿತು ಚರ್ಚೆ ಕೇಂದ್ರಕ್ಕೆ ಸಮಿತಿ ನಿಯೋಗ ತೆರಳಲು ನಿರ್ಧಾರ ಕಲಬುರಗಿ;…
ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾ ಚುನಾವಣೆ ಚಿಂಚೋಳಿ: ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭೆಗೆ ಇದೆ 21 ರಂದು…