ಬಿಸಿ ಬಿಸಿ ಸುದ್ದಿ

ಶಾಲೆ, ಕಾಲೇಜುಗಳ ವಿದ್ಯಾರ್ಥಿಗಳಿಗೆ ಬಸ್ ಸೌಕರ್ಯ ಕಲ್ಪಿಸಲು ಭೀಮ್ ಆರ್ಮಿ ಆಗ್ರಹ

ಜೇವರ್ಗಿ: ಇಲ್ಲಿನ ಜೇವರ್ಗಿ ಬಸ್ ನಿಲ್ದಾಣದಿಂದ ಗುಡೂರ್ ಮಾರ್ಗವಾಗಿ ರಾಜವಾಳ ಗ್ರಾಮಕ್ಕೆ ಹೋಗುವ ಕಲ್ಯಾಣ ಕರ್ನಾಟಕ ಸಾರಿಗೆ ಸಂಸ್ಥೆ ಜೇವರ್ಗಿ ಘಟಕದ ಬಸ್ಸುಗಳು ಕೇವಲ ಆಟಕ್ಕೆ ಉಂಟು ಲೆಕ್ಕಕ್ಕಿಲ್ಲದಂತಾಗಿದೆ. ! ಇವುಗಳ ಸಂಚಾರ ಇದ್ದರೂ ಯಾವುದೇ ಪ್ರಯೋಜನಕ್ಕೆ ಬಾರದಂತೆ ಉಪಯೋಗ ಇಲ್ಲದಂತಾಗಿದೆ. ವಿದ್ಯಾರ್ಥಿಗಳು ಪರದಾಡುವ ಪರಿಸ್ಥಿತಿ ಉಂಟಾಗಿದೆ ಎಂದು ಭೀಮ್ ಆರ್ಮಿ ತಾಲೂಕ ಸಮಿತಿ ಜೇವರ್ಗಿ ಆಕ್ರೋಶ ವ್ಯಕ್ತಪಡಿಸಿದೆ.

ಆದರ್ಶ ಆಂಗ್ಲ ಮಾಧ್ಯಮ ಶಾಲೆ ಸೇರಿದಂತೆ ಗುಡೂರು ಗ್ರಾಮದ ವಿದ್ಯಾರ್ಥಿಗಳು ಹಾಗೂ ಜೇವರ್ಗಿಗೆ ಬರುವ ಶಾಲೆ ಕಾಲೇಜುಗಳ ವಿದ್ಯಾರ್ಥಿಗಳು ಬೆಳಗ್ಗೆ ಹಾಗೂ ಮಧ್ಯಾಹ್ನ ಸಮಯದಲ್ಲಿ ನಿತ್ಯ ಪರದಾಟ ನರಕ ಯಾತನೆಯನ್ನು ಅನುಭವಿಸುತ್ತಿದ್ದಾರೆ. ಈ ಕುರಿತಂತೆ ಸಮಯಕ್ಕೆ ಸರಿಯಾಗಿ ಬಸ್ ಸಂಚಾರವನ್ನು ಆರಂಭಿಸಲು ಜೇವರ್ಗಿ ಘಟಕದ ಸಾರಿಗೆ ಅಧಿಕಾರಿಗಳಿಗೆ ಮನವಿ ಪತ್ರವನ್ನು ಸಲ್ಲಿಸಿದ್ದಾರೆ.

ಗುಡೂರು ಎಸ.ಎ ಗ್ರಾಮದ ಮುಖ್ಯ ರಸ್ತೆಯಿಂದ ಗುಡೂರ ಗ್ರಾಮವು ಸುಮಾರು ಒಂದುವರೆ ಕಿಲೋಮೀಟರ್ ಅಂತರದಲ್ಲಿದ್ದು ಪ್ರತಿನಿತ್ಯ ವಿದ್ಯಾರ್ಥಿಗಳು ನಡೆದು ಹೋಗಿ ಬಂದು ಮಾಡಲು ಬಹಳ ತೊಂದರೆ ಆಗುತ್ತದೆ. ಈ ಕುರಿತಂತೆ ಬೆಳಗಿನ ಸಮಯಕ್ಕೆ ಶಾಲೆಗೆ ಬರಲು ಹಾಗೂ ಮಧ್ಯಾಹ್ನ ಮನೆಗಳಿಂದ ಶಾಲೆಗೆ ತೆರಳಲು ಶಾಲಾ ವಿದ್ಯಾರ್ಥಿಗಳಿಗೆ ಅನಾನುಕೂಲವಾಗಿದ್ದು, ಅನೇಕ ಬಾರಿ ವಿದ್ಯಾರ್ಥಿಗಳು ಶಾಲೆಯ ತರಗತಿಗಳನ್ನು ತಪ್ಪಿಸಿಕೊಳ್ಳುವ ಭೀತಿಯಲ್ಲಿದ್ದು ಶಾಲೆಗೆ ಚಕ್ಕರ ಹಾಕುವ ಪರಿಸ್ಥಿತಿ ನಿರ್ಮಾಣವಾಗಿದೆ.

ಸದರಿ ಗ್ರಾಮದ ಮುಖ್ಯ ರಸ್ತೆಯಿಂದ ಊರಿನವರಿಗೆ ಮಧ್ಯಾಹ್ನ ಊಟದ ಸಮಯದಲ್ಲಿ ಹಾಗೂ ಶಾಲಾ ದೀರ್ಘ ವಿರಾಮದ ನಂತರದಲ್ಲಿ ಸರಿಯಾದ ಸಮಯಕ್ಕೆ ಬಸ್ ಸಂಚಾರ ಸೇವೆಯನ್ನು ನೀಡಬೇಕು ಇಲ್ಲವೇ ಹೋರಾಟವನ್ನು ಆರಂಭಿಸಬೇಕಾಗುತ್ತದೆ ಎಂದು
ಬೀಮ ಆರ್ಮಿ ಭಾರತ ಏಕತಾ ಮಷೀನ್ ಕಾರ್ಯಕರ್ತರು ಸಾರಿಗೆ ಇಲಾಖೆ ಮನವಿ ಪತ್ರವನ್ನು ಸಲ್ಲಿಸಿದ್ದಾರೆ.  ಒಂದು ವೇಳೆ ನಿರ್ಲಕ್ಷ ತೋರಿದಲ್ಲಿ ಸಂಘಟನೆ ನೇತೃತ್ವದಲ್ಲಿ ಹೋರಾಟ ನಡೆಸುವುದಾಗಿ ಅವರು ತಿಳಿಸಿದ್ದಾರೆ.

ಭೀಮ್ ಆರ್ಮಿ ಗೌರವ ಅಧ್ಯಕ್ಷರಾದ ಅಬ್ದುಲ್ ಗನಿ, ಪ್ರಧಾನ ಕಾರ್ಯದರ್ಶಿ ಕಿರಣ ದೊಡ್ಡಮನಿ ಗುಡೂರ್, ನಗರ ಘಟಕದ ಅಧ್ಯಕ್ಷರಾದ ಬಸವರಾಜ ಇಂಗಳಗಿ ಉಪಾಧ್ಯಕ್ಷರಾದ ವಿಶ್ವರಾಧ್ಯ ಜಿ.ಗೋಪಾಲ್ಕರ್ ಸಹಕಾರದರ್ಶಿ ಮರಿಯಪ್ಪ ಎಸ್ ಆಂದೋಲ ಸೇರಿದಂತೆ ಖಜಾಂಚಿಗಳಾದ ಬಾಬು ನಾಟಿಕಾರ ಇತರ ಪದಾಧಿಕಾರಿಗಳು ಉಪಸ್ಥಿತರಿದ್ದರು.

emedialine

Recent Posts

ಜಾನಪದ ಜೀವನ ಮೌಲ್ಯಗಳ ಪ್ರತೀಕ

ಸುರಪುರ; ಜೀವನದ ಮೌಲ್ಯಗಳನ್ನು ಎತ್ತಿ ಹಿಡಿಯುವ ಶಕ್ತಿ ಜಾನಪದ ಸಾಹಿತ್ಯ, ಕಲೆಗೆ ಇದ್ದು, ಜಾನಪದ ಸಾರ್ವಕಾಲಿಕ ಸತ್ಯವಾಗಿದೆ ಎಂದು ಲಕ್ಷ್ಮೀಪುರ…

2 hours ago

ಸುರಪುರ:ನೂತನ ಮರಗಮ್ಮ ದೇವಿ ರಜತ ಮೂರ್ತಿ ಪ್ರತಿಷ್ಠಾಪನೆ

ಸುರಪುರ: ತಿಮ್ಮಾಪುರದ ಮುಖ್ಯ ರಸ್ತೆಯಲ್ಲಿ ನಿರ್ಮಾಣವಾದ ನೂತನ ಮರಗಮ್ಮ ದೇವಿಯ ದೇವಸ್ಥಾನ ಲೋಕಾರ್ಪಣೆ , ಮರಗಮ್ಮ ದೇವಿಯ ರಜತ ಮೂರ್ತಿಯ…

2 hours ago

ಜುಲೈ 8 ರಂದು ಕಾಳಗಿಯಲ್ಲಿ ಉಚಿತ ಆರೋಗ್ಯ ತಪಾಸಣೆ ಶಿಬಿರ

ಕಲಬುರಗಿ: ನಗರದ ಪ್ರತಿಷ್ಠಿತ ಸುಬೇದಾರ ಕೇರ್ ಹಾಸ್ಪಿಟಲ್ ವತಿಯಿಂದ ಕಾಳಗಿ ಪಟ್ಟಣದ ಬಸ್ ನಿಲ್ದಾಣದ ಆವರಣದಲ್ಲಿ ಜುಲೈ 8 ರಂದು…

4 hours ago

ವಾಡಿ: “ತಾಯಿ ಹೆಸರಲ್ಲಿ ಒಂದು ಸಸಿ” ಅಭಿಯಾನ

ವಾಡಿ: ಪಟ್ಟಣದ ಬಸ್ ನಿಲ್ದಾಣದ ಹತ್ತಿರದ ಹನುಮಾನ ಮಂದಿರದ ಮುಂಭಾಗದಲ್ಲಿ ಬಿಜೆಪಿ ಮುಖಂಡರು ಸಾರ್ವಜನಿಕರಿಗೆ ಸಸಿಗಳನ್ನು ವಿತರಿಸುವ ಮೂಲಕ"ತಾಯಿ ಹೆಸರಲ್ಲಿ…

4 hours ago

ವಾಡಿ: ಶ್ಯಾಮ್‌ ಪ್ರಸಾದ್ ಮುಖರ್ಜಿ ಜಯಂತಿ, ಬಾಬು ಜಗಜೀವನ್ ರಾಮ್ ಪುಣ್ಯಸ್ಮರಣೆ

ವಾಡಿ: ಪಟ್ಟಣದ ಬಿಜೆಪಿ ಕಛೇರಿಯಲ್ಲಿ ಭಾರತೀಯ ಜನಸಂಘದ ಸಂಸ್ಥಾಪಕರು, ಭಾರತದ ಅಖಂಡತೆ ಹಾಗೂ ಏಕತೆಗಳಿಗಾಗಿ ಶ್ರಮಿಸಿದ ಡಾ. ಶ್ಯಾಮ ಪ್ರಸಾದ್…

4 hours ago

ನಾಳೆ ವಾಡಿಯಲ್ಲಿ ಕವಿಗೋಷ್ಠಿ

ವಾಡಿ: ಸಂಚಲನ ಸಾಹಿತ್ಯ ಮತ್ತು ಸಾಂಸ್ಕøತಿಕ ವೇದಿಕೆ ವತಿಯಿಂದ ಜುಲೈ ಇಂದು ಬೆಳಿಗ್ಗೆ 10:00 ಗಂಟೆಗೆ ಪಟ್ಟಣದ ಡಾ. ಅಂಬೇಡ್ಕರ್…

5 hours ago