ಶಾಸಕ ಡಾ.ಅವಿನಾಶ ಜಾಧವ ಭಾರಿ ಬಹುಮತದಿಂದ ಗೆಲುವು ನಿಶ್ಚಿತ; ಕದಂ

ಕಾಳಗಿ: ಮುಂಬರುವ 2023ರ ಕರ್ನಾಟಕ ವಿಧಾನ ಸಭಾ ಚುನಾವಣೆಯಲ್ಲಿ ಬಿಜೆಪಿ ಅಭೂತ ಪೂರ್ವ ಗೆಲುವು ಸಾಧಿಸುವುದರೊಂದಿಗೆ ರಾಜ್ಯದಲ್ಲಿ ಮತ್ತೆ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬರುವುದು ಸೂರ್ಯ-ಚಂದ್ರರಷ್ಠೇ ಸತ್ಯವಾಗಿದ್ದು, ಚಿಂಚೋಳಿ ಶಾಸಕ ಡಾ.ಅವಿನಾಶ ಜಾಧವ ಅವರು, ಅಪಾರ ಅಂತರದ ಮತಗಳಿಂದ ಎರಡನೇ ಬಾರಿ ಗೆಲುವು ಸಾಧಿಸುವುದರೊಂದಿಗೆ ಚಿಂಚೋಳಿ ವಿಧಾನಸಭಾ ಕ್ಷೇತ್ರದಲ್ಲಿ ಇತಿಹಾಸ ಸೃಷ್ಠಿಯಾಗಲಿದೆ ಎಂದು ಕಾಳಗಿ ಬಿಜೆಪಿ ಮಹಾ ಶಕ್ತಿ ಕೇಂದ್ರದ ಅಧ್ಯಕ್ಷ ಪ್ರಶಾಂತ ಕದಂ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಪಟ್ಟಣದ ಪ್ರವಾಸಿ ಮಂದಿರದಲ್ಲಿ ಶುಕ್ರವಾರ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಕ್ಷೇತ್ರದಾಧ್ಯಂತ ಮಾಡಿರುವ ಅಭೂತಪೂರ್ವ ಅಭಿವೃದ್ಧಿ ಕೆಲಸಗಳೆ ಡಾ.ಅವಿನಾಶ ಜಾಧವ ಅವರ ಗೆಲುವಿಗೆ ಶ್ರೀರಕ್ಷೆಯಾಗಲಿದೆ, ಸಕ್ಕರೆ ಕಾರ್ಖಾನೆ ಪ್ರಾರಂಭ, ರೈತರ ಬಹುದಿನದ ಬೇಡಿಕೆಯಾಗಿರುವ ಐನಾಪೂರ ಏತ ನೀರಾವರಿ ಯೋಜನೆ ಅನುಷ್ಠಾನ, ಉತ್ತಮ ರಸ್ತೆಗಳು, ಕಾಳಗಿ ಗ್ರಾಪಂ. ಪಟ್ಟಣ ಪಂಚಾಯತಿಯಾಗಿ ಮೇಲ್ದರ್ಜೆಗೇರಿಸಿದ್ದು, ಪಟ್ಟಣದಲ್ಲಿ ಬೃಹದಾಕಾರದ ಸುಸಜ್ಜಿತ ಬಸ್ ನಿಲ್ದಾಣ, ಕಾಳಗಿ ರೈತರ ನೀರಾವರಿ ಅಭಿವೃದ್ಧಿಪಡಿಸುವುದಕ್ಕಾಗಿ ರೌದ್ರಾವತಿ ನದಿಗೆ ಆರು ಕೋಟಿ ರೂಪಾಯಿಗಳ ವೆಚ್ಚದ ಬ್ರೀಜ್ ಕಂ. ಬ್ಯಾರೇಜ್ ನಿರ್ಮಾಣ, ಪಟ್ಟಣ, ಸಿಸಿ ರಸ್ತೆಗಳ ನಿರ್ಮಾಣ, ರಸ್ತೆ ಅಗಲಿಕರಣ, ವಿವಿಧ ಸಮೂದಾಯಗಳಿಗೆ ಭವನ ನಿರ್ಮಾಣಕ್ಕಾಗಿ ನಿವೇಶನಗಳ ಹಂಚಿಕೆ, ಮಠ-ಮಾನ್ಯಗಳಿಗೆ ಅನುದಾನ, ಸೇರಿದಂತೆ ಶಾಸಕ ಡಾ.ಅವಿನಾಶ ಜಾಧವ ಅವರ ನೂರಾರು ಜನಪರ ಕಾಳಜೀಯ ಯೋಜನೆಗಳು ಐತಿಹಾಕ ಗೆಲುವಿಗೆ ಶ್ರೀರಕ್ಷೆಯಾಗಲಿವೆ ಎಂದು ತಿಳಿಸಿದರು.

ಬಿಜೆಪಿ ಯುವ ನಾಯಕ ರಮೇಶ ಕಿಟ್ಟದ, ರೈತ ಸೇವಾ ಸಹಕಾರ ಸಂಘದ ಅಧ್ಯಕ್ಷ ಸಂತೋಷ ಜಾಧವ, ವೀರಶೈವ ಲಿಂಗಾಯತ ಮುಖಂಡ ವಿಷ್ಣುಕಾಂತ ಪರುತೆ, ಕೇಸು ಚೌವ್ಹಾಣ, ಕಾಳಶೆಟ್ಟಿ ಪಡಶೆಟ್ಟಿ, ತಾಪಂ.ಮಾಜಿ ಸದಸ್ಯ ಭೀಮರಾವ ರಾಠೋಡ, ಶರಣು ಚಂದಾ ಕೋಡದೂರ, ಜಗದೀಶ ಪಾಟೀಲ, ಕೃಷ್ಣ ಸಿಂಗಶೆಟ್ಟಿ, ಶ್ರೀನಿವಾಸ ಗುರುಮಠಕಲ್, ಮಂಜುನಾಥ ಹೆಬ್ಬಾಳ, ಮಹೇಂದ್ರ ಪೂಜಾರಿ, ಸುಂದರ ಡಿ.ಸಾಗರ ಇದ್ದರು.

emedialine

Recent Posts

ಗುರುರಾಜ ಕರ್ಜಗಿಯನ್ನು ಶೈಕ್ಷಣಿಕ ಗುಣಮಟ್ಟ ಸುಧಾರಣಾ ಸಮಿತಿಯಿಂದ ಕೈಬಿಡಲು ಎಸ್ಎಫ್ಐ ಆಗ್ರಹ

ಕಲಬುರಗಿ: ಕಲ್ಯಾಣ ಕರ್ನಾಟಕದ ಶೈಕ್ಷಣಿಕ ಗುಣಮಟ್ಟ ಸುಧಾರಣೆಗಾಗಿ ಕೆ.ಕೆ.ಆರ್.ಡಿ.ಬಿ ಯು ಸಮಿತಿಯೊಂದನ್ನು ರಚಿಸಿ, ಗುರುರಾಜ ಕರ್ಜಗಿ ಅವರನ್ನು ಅಧ್ಯಕ್ಷರನ್ನಾಗಿ ಮಾಡಿರುವ…

3 hours ago

ಕಲಬುರಗಿ; ರಾಜ್ಯ ತಳವಾರ ಮಹಾಸಭಾ ಜಿಲ್ಲಾ ಘಟಕದ ನೂತನ ಪದಾಧಿಕಾರಿಗಳ ಆಯ್ಕೆ

ಕಲಬುರಗಿ; ಕನಾ೯ಟಕ ರಾಜ್ಯ ತಳವಾರ ಮಹಾಸಭಾ ಕಲಬುರಗಿ ಜಿಲ್ಲಾಧ್ಯಕ್ಷರಾದ ಚಂದ್ರಕಾಂತ ದಶರಥ ತಳವಾರ ಅವರ ಅಧ್ಯಕ್ಷತೆಯಲ್ಲಿ ಇಂದು ಆನಂದ ನಿಲಯ…

5 hours ago

ಕೈಗಾರಿಕೆ ಪ್ರದೇಶಗಳಿಗೆ ಭೇಟಿ ನೀಡಿ ಉದ್ಯಮಿಗಳ ಅಹವಾಲು ಆಲಿಸಿದ ಬಿ.ಫೌಜಿಯಾ ತರನ್ನುಮ್

ಕಲಬುರಗಿ; ಜಿಲ್ಲಾಧಿಕಾರಿ ಬಿ. ಫೌಜಿಯಾ ತರನ್ನುಮ್ ಅವರು ಶನಿವಾರ ಶಹಾಬಾದ ರಸ್ತೆಯಲ್ಲಿರುವ ನಂದೂರ-ಕೆಸರಟಗಿ ಮತ್ತು ಹುಮನಾಬಾದ ರಸ್ತೆಯಲ್ಲಿರುವ ಕಪನೂರ ಕೈಗಾರಿಕಾ…

5 hours ago

ಸಿಎಂ ರಾಜೀನಾಮೆ ಕೇಳುತ್ತಿರುವ ಬಿಜೆಪಿ -ಜೆಡಿಎಸ್‍ಗೆ ಯಾವುದೇ ನೈತಿಕತೆಯಿಲ್ಲ

ಶಹಾಬಾದ: ಕರ್ನಾಟಕದ ಬಹುಮತ ಸರಕಾರವನ್ನು ಬೀಳಿಸಲು ಇಲ್ಲಸಲ್ಲದ ಆರೋಪ ಮಾಡುವ ಮೂಲಕ ಸಿಎಂ ರಾಜೀನಾಮೆಗೆ ಒತ್ತಾಯ ಮಡುತ್ತಿರುವ ಬಿಜೆಪಿ ಹಾಗೂ…

5 hours ago

ಜೆಜೆಎಂ ಕಾಮಗಾರಿ ಗುಣಮಟ್ಟದಿಂದ ಕೂಡಿರಲಿ

ಶಹಾಬಾದ:ಪ್ರತಿ ಮನೆಗೂ ನೀರು ದೊರಿಸಿಕೊಡುವ ಉದ್ದೇಶದಿಂದ ನಡೆಯುವ ಜೆಜೆಎಂ ಕಾಮಗಾರಿ ಗುಣಮಟ್ಟದಿಂದ ಕೂಡಿರಬೇಕೆಂದು ಕಾಂಗ್ರೆಸ್ ಮುಖಂಡ ಮೃತ್ಯುಂಜಯ್ ಹಿರೇಮಠ ಹೇಳಿದರು.…

6 hours ago

ಅ.13, 14 ರಂದು ಧಮ್ಮ ಕ್ರಾಂತಿ ಉತ್ಸವ : ಪೂರ್ವಭಾವಿ ಸಭೆ

ಶಹಾಬಾದ :ನಗರದ ಬೌದ್ಧ ವಿಹಾರದಲ್ಲಿ ರವಿವಾರ ಹಮ್ಮಿಕೊಂಡ 68ನೇ ಧಮ್ಮಚಕ್ರ ಪ್ರವರ್ತನಾ ದಿನದ ಅಂಗವಾಗಿ ಕಲಬುರ್ಗಿಯಲ್ಲಿ ಅ.13 ಮತ್ತು 14…

6 hours ago

Notice: ob_end_flush(): Failed to send buffer of zlib output compression (0) in /home3/emedixap/public_html/wp-includes/functions.php on line 5420